ಭಾರತ ಕ್ರಿಕೆಟ್‌ನ ಭವಿಷ್ಯದ ಭರವಸೆ ಪೃಥ್ವಿ ಶಾ


Team Udayavani, Jan 27, 2018, 12:23 PM IST

1000.jpg

ಭಾರತ ಕ್ರಿಕೆಟ್‌ ತಂಡದ ಮಾಜಿ  ನಾಯಕ ರಾಹುಲ್‌ ದ್ರಾವಿಡ್‌ ಗರಡಿಯಲ್ಲಿ ಬೆಳೆಯುತ್ತಿರುವ ಮುಂಬೈನ 18ರ ಹರೆಯದ ಕ್ರಿಕೆಟಿಗ ಪೃಥ್ವಿ ಶಾ ಭವಿಷ್ಯದಲ್ಲಿ ಕ್ರಿಕೆಟ್‌ ದೇವರು ಸಚಿನ್‌ ತೆಂಡುಲ್ಕರ್‌ ಹಾಗೂ ರನ್‌ ಮೆಷಿನ್‌ ವಿರಾಟ್‌ ಕೊಹ್ಲಿಗೆ ಸರಿಸಾಟಿಯಾಗಿ ನಿಲ್ಲುವ ಭರವಸೆ ಮೂಡಿಸಿದ್ದಾರೆ. 

ಪ್ರಥಮ ದರ್ಜೆಯ ಎಲ್ಲ ಮಾದರಿಯ ಪಂದ್ಯಗಳಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಶಾ, ಭಾರತ 19 ವರ್ಷದೊಳಗಿನವರ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ವೈಯಕ್ತಿಕವಾಗಿಯೂ ಉತ್ತಮ ಪ್ರದರ್ಶನ ನೀಡುತ್ತಿರುವ ಶಾ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಬ್ಯಾಟ್‌ ಮಾಡಿದ್ದು, ಕ್ರಮವಾಗಿ 94 ಹಾಗೂ 57 ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. 

ಭಾರತ ಕ್ರಿಕೆಟ್‌ನ ಗೋಡೆ ಖ್ಯಾತಿಯ ರಾಹುಲ್‌ ದ್ರಾವಿಡ್‌ ಗರಡಿಯಲ್ಲಿ ಬೆಳೆಯುತ್ತಿರುವ ಯುವ ಕ್ರಿಕೆಟಿಗ ಈಗಾಗಲೇ ಹಲವಾರು ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದಾನೆ. ರಣಜಿ ಟೂರ್ನಿಯಲ್ಲಿ 9 ಪಂದ್ಯಗಳನ್ನಾಡಿರುವ ಶಾ 5 ಶತಕ ಹಾಗೂ 3 ಅರ್ಧ ಶತಕಗಳೊಂದಿಗೆ ಒಟ್ಟು 961 ರನ್‌ ಗಳಿಸಿದ್ದಾರೆ. ಜತೆಗೆ ಪ್ರಥಮ ದರ್ಜೆಯ ಟೆಸ್ಟ್‌, ಏಕದಿನ ಹಾಗೂ ಟಿ20 ಮಾದರಿಗಳಲ್ಲಿಯೂ ಶತಕ ದಾಖಲಿಸಿದ್ದಾರೆ. ಜತೆಗೆ ದುಲೀಪ್‌ ಟ್ರೋಫಿಯಲ್ಲಿ ಇಂಡಿಯಾ ರೆಡ್‌ ಪರ ಶತಕ ದಾಖಲಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಶ್ರೇಯಕ್ಕೆ ಪಾತ್ರವಾಗಿದ್ದು, ಈ ಮೊದಲು ಈ ದಾಖಲೆಯನ್ನು ಸಚಿನ್‌ ಅವರ ಹೆಸರಿನಲ್ಲಿತ್ತು.    

ಒಟ್ಟಾರೆಯಾಗಿ ಶಾ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ತನ್ನ ಪ್ರತಿಭೆ ಅನಾವರಣಗೊಳಿಸುತ್ತಿದ್ದು, ಹಿರಿಯ ಆಟಗಾರರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಪೃಥ್ವಿ ಶಾ ಬ್ಯಾಟಿಂಗ್‌ ಶೈಲಿಯ ಮೇಲೆ ಸಚಿನ್‌ ಪ್ರಭಾವವಿದ್ದು, ವಿರಾಟ್‌ ಕೊಹ್ಲಿಯಂತೆ ವೇಗವಾಗಿ ರನ್‌ ಗಳಿಸುವ ಸಾಮರ್ಥಯವನ್ನು ಹೊಂದಿದ್ದಾರೆ ಎಂದು ಕೆಲ ಹಿರಿಯ ಆಟಗಾರರು ಭವಿಷ್ಯ ನುಡಿದಿದ್ದಾರೆ. 

546 ರನ್‌ ಚಚ್ಚಿದ ವೀರ
14 ವರ್ಷ ವಯಸ್ಸಿದ್ದಾಗಲೇ ಶಾ ತನ್ನ ಪ್ರತಿಭೆಯನ್ನು ವಿಶ್ವಕ್ಕೆ ಪರಿಚಯಿಸಿದ್ದರು. ಮುಂಬೈನ ಹ್ಯಾರೀಸ್‌ ಶೀಲ್ಡ್‌ ಶಾಲೆ ಟೂರ್ನಿಯಲ್ಲಿ 546 ರನ್‌ ಗಳಿಸಿ ಹೊಸ ವಿಶ್ವದಾಖಲೆ ಬರೆದಿದ್ದರು. ಈ ಸಾಧನೆ ಮಾಡಿದ ಅತ್ಯಂತ ಚಿಕ್ಕ ವಯಸ್ಸಿನ ಆಟಗಾರ ಎನಿಸಿಕೊಂಡಿದ್ದರು. ಇದೇ ಟೂರ್ನಿಯಲ್ಲಿ ಸಚಿನ್‌ ಅವರು 326 ರನ್‌ ಹೊಡೆದು ನಾಟೌಟ್‌ ಆಗಿ ಉಳಿದಿದ್ದರು. 

ಪಾದಾರ್ಪಣೆ ಪಂದ್ಯದಲ್ಲಿ ಶತಕ ದಾಖಲೆ
ರಣಜಿ ಟ್ರೋಫಿಯ ಪಾದರ್ಪಣೆಯ ಪಂದ್ಯದಲ್ಲಿಯೇ ಶತಕ ದಾಖಲಿಸಿದ ಸಾಧನೆಯನ್ನು ಪೃಥ್ವಿ ಶಾ ಹೊಂದಿದ್ದು, ಇದಕ್ಕೂ ಮೊದಲು ಬಾಬು ಭಾಯಿ ಪಟೇಲ್‌ ಅವರು ಮುಂಬೈ ಪರವಾಗಿ 1935   -36 ರಲ್ಲಿ ಸಾಧನೆ ಮಾಡಿದ್ದರು. ಆನಂತರದಲ್ಲಿ 1988-89ರಲ್ಲಿ ಸಚಿನ್‌ ಈ ಸಾಧನೆ ಮಾಡಿದ್ದರು.  ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) 11ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಪೃಥ್ವಿ ಶಾ ಕೊಂಡುಕೊಳ್ಳಲು ಫ್ರಾಂಚೈಸಿಗಳು ಮುಗಿಬಿದ್ದಿದ್ದಾರೆ. 

ವೆಂ.ಸುನೀಲ್‌ ಕುಮಾರ್‌

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.