ಮಳೆಕೊಡುವ ದೇವರು


Team Udayavani, Jun 22, 2019, 11:09 AM IST

12-BGK-1B

ಬಾಗಲಕೋಟೆ ತಾಲೂಕಿನ ಮುರನಾಳದಲ್ಲಿ ಈ ಮಠವಿದೆ. 1822ರಲ್ಲಿ ಈ ಮಠ ನಿರ್ಮಾಣವಾದ ಇತಿಹಾಸದ ದಾಖಲೆ ಹೇಳುತ್ತದೆ. 1450ರಲ್ಲಿ ಮಳೆಪ್ಪಯ್ಯ ಅಜ್ಜನು ಪವಾಡದಿಂದ ಮಳೆ ತರಿಸಿದ ಉಲ್ಲೇಖವಿದ್ದು, ಅಂದಿನಿಂದ ಈ ಮಠಕ್ಕೆ ಮಳೆಪ್ಪಯ್ಯನ ಮಠ ಮತ್ತು ಮಳೆರಾಜೇಂದ್ರ ಮಠ ಎಂದು ಕರೆಯುವುದು ವಾಡಿಕೆ. ಸದ್ಯ ಶ್ರೀ ಮಳೇರಾಜೇಂದ್ರ ಸ್ವಾಮೀಜಿ ಇದರ ಉತ್ತರಾಧಿಕಾರಿಯಾಗಿದ್ದಾರೆ. ಮುರನಾಳ ಗ್ರಾಮ ಹಾಗೂ ಈ ಮಠ, ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗಿದೆ. ಇದೀಗ ಮುರನಾಳ ಪುನರ್‌ವಸತಿ ಕೇಂದ್ರದಲ್ಲಿ ಹೊಸ ಮಠ ಸ್ಥಾಪಿಸುವ ಕಾರ್ಯ ನಡೆದಿದೆ. ಈ ಮಠದ ವ್ಯಾಪ್ತಿಯಲ್ಲಿ 300ಕ್ಕೂ ಹೆಚ್ಚು ಹಳ್ಳಿಗಳಿದ್ದು, ಎಲ್ಲಾ ಹಳ್ಳಿಯ ರೈತರು, ಜನರು, ಮಳೆ ಬಾರದಿದ್ದರೆ ಈ ಮಠಕ್ಕೆ ಬಂದು, ದವಸ-ಧಾನ್ಯ ನೀಡಿ, ಮಳೆಗಾಗಿ ಪ್ರಾರ್ಥಿಸುತ್ತಾರೆ.

ಬಹುತೇಕ ಎಲ್ಲ ಮಠ, ದೇವಸ್ಥಾನಗಳಲ್ಲಿ ಮೂರ್ತಿ ಪೂಜೆ ನಡೆಯುತ್ತದೆ. ಆದರೆ, ಈ ಮಠದಲ್ಲಿ ಜಲಪೂಜೆ ನಡೆಯುತ್ತದೆ. ಪ್ರತಿವರ್ಷ ಮಾರ್ಚ್‌ನಲ್ಲಿ ನಡೆಯುವ ಜಾತ್ರೆಯ ರಥೋತ್ಸವದ ವೇಳೆ ರಥದಲ್ಲಿ ಬಿಂದಿಗೆ ನೀರು ಇಟ್ಟು, ರಥ ಎಳೆಯಲಾಗುತ್ತದೆ. ಉತ್ತರಕರ್ನಾಟಕದಲ್ಲಿ ಮಳೆ ತರಿಸುವ ಮಠವೆಂದೇ ಈ ಮಳೆಪ್ಪಯ್ಯನ ಮಠ ಪ್ರಸಿದ್ಧವಾಗಿದೆ.

ಭದ್ರಗಿರಿ ಬೆಟ್ಟ
ರಬಕವಿ-ಬನಹಟ್ಟಿ ತಾಲೂಕಿನ ಹಳಿಂಗಳಿ ಬಳಿ ಜೈನ ಸಮುದಾಯದ ಭದ್ರಗಿರಿ ಬೆಟ್ಟವಿವಿದ್ದು, ಇಲ್ಲಿಯೂ ಮಳೆಗಾಗಿ ಪೂಜೆ ನಡೆಸುವ ಸಂಪ್ರದಾಯವಿದೆ. ಜೈನ ಮುನಿಗಳು, ಬೆಟ್ಟದಲ್ಲಿ ಮಳೆಗಾಗಿ ಹಾಗೂ ಸಮಾಜದಲ್ಲಿ ಶಾಂತಿ-ಸೌಹಾರ್ದತೆ ನೆಲೆಸಲೆಂದು ಪೂಜೆ ಮಾಡುತ್ತಾರೆ.

ಒಂಟಿ ಕಾಲಿನ ಭಜನೆ
ಬೀಳಗಿ ಪಟ್ಟಣದ ಕಾಟಕರ ಓಣಿಯಲ್ಲಿ ಇರುವ ಹುಚ್ಚೇಶ್ವರ ಮಠದಲ್ಲಿ ಹುಚ್ಚೇಶ್ವರ ಸ್ವಾಮೀಜಿಯ ಗದ್ದುಗೆ ಇದೆ. ಅದರ ಎದುರು ರೈತರು, ಭಕ್ತರು ಮಳೆಗಾಗಿ 11 ದಿನ, 21 ದಿನ ಹೀಗೆ ಹಲವು ದಿನ ಹರಕೆ ಹೊತ್ತು ಒಂಟಿ ಕಾಲಿನಲ್ಲಿ ನಿಂತು ಭಜನೆ ಮಾಡುತ್ತಾರೆ. ಭೀಕರ ಬರ ಬಿದ್ದಾಗ ಹಲವು ಬಾರಿ ಒಂಟಿ ಕಾಲಿನಲ್ಲಿ ನಿಂತು ಪೂಜೆ ಮಾಡಿದ ಫಲವಾಗಿ ಮಳೆ ಬಂದ ಉದಾಹರಣೆಗಳು ಸಾಕಷ್ಟಿವೆ.

ಶ್ರೀಶೈಲ ಕೆ. ಬಿರಾದಾರ್‌

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.