ರಕುತದೆ ಬರೆದೆನು ಇದ ನಾನು…


Team Udayavani, Feb 15, 2020, 6:08 AM IST

rakutadi

ಸಂಗಮೇಶ ಅವರು ಕಳೆದ 7 ವರ್ಷಗಳಿಂದ ಸ್ವರಕ್ತದಿಂದ ಚಿತ್ರ ಬಿಡಿಸುತ್ತಿದ್ದಾರೆ. ಇದುವರೆಗೆ 300 ಸಾಧಕರ ಚಿತ್ರವನ್ನು ನೆತ್ತರಿನ ಮೂಲಕವೇ ಚಿತ್ರಿಸಿರುವುದು ವಿಶೇಷ…

ಕಲೆ- ಸಾಹಿತ್ಯದ ಗುಣ ರಕ್ತದಿಂದ ಬರುತ್ತೆ ಎನ್ನುವ ಮಾತುಂಟು. ಇದು ಎಷ್ಟು ವಾಸ್ತವವೋ ಗೊತ್ತಿಲ್ಲ. ಆದರೆ, ಇಲ್ಲೊಬ್ಬ ಕಲಾವಿದರಿಗೆ ಕಲೆ ಒಲಿದಿದ್ದು ರಕ್ತದ ಮೂಲಕ. ಇವರು ನೂರಾರು ಸಾಧಕರ ಚಿತ್ರ ಬಿಡಿಸುವುದು ಕೂಡ ತಮ್ಮ ನೆತ್ತರಿನಿಂದಲೇ. ರಬಕವಿ- ಬನಹಟ್ಟಿ ತಾಲೂಕಿನ ಹೊಸೂರ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಡಾ. ಸಂಗಮೇಶ ಬಗಲಿ ಅವರ ರಕ್ತಚಿತ್ರ ಚರಿತ್ರೆ ಈ ಪರಿಯದ್ದು.

ಚಿತ್ರ ಬಿಡಿಸಬೇಕೆಂಬ ಹುಕೀ ಬಂದಾಗ, ಇವರು ಹೋಗುವುದು ಸೀದಾ ವೈದ್ಯರ ಬಳಿ. ವೈದ್ಯರ ಸಲಹೆಯಂತೆ, ಒಂದೆರಡು ಸಿರಿಂಜ್‌ ನಲ್ಲಿ 10 ರಿಂದ 15 ಎಂ.ಎಲ್‌. ರಕ್ತ ತೆಗೆಸಿ ಕೊಳ್ಳುತ್ತಾರೆ. ಆ ರಕ್ತ ಹೆಪ್ಪುಗಟ್ಟದೆ ಇರಲಿ ಯೆಂಬ ಕಾರಣಕ್ಕೆ ಅದಕ್ಕೆ ರಕ್ತ ಪರೀಕ್ಷಾ ಘಟಕದಲ್ಲಿ ಕೊಡುವ “ಇಡಿಟಿಎ’ ಎಂಬ ಲಿಕ್ವಿಡ್‌ ಅನ್ನು ಬೆರೆಸುತ್ತಾರೆ. ಒಂದು ಚಿತ್ರಕ್ಕೆ ಏನಿಲ್ಲವೆಂದರೂ ಕನಿಷ್ಠ 10 ಎಂ.ಎಲ್‌. ರಕ್ತ ಬೇಕು. ಒಟ್ಟಾರೆ, 3 ತಿಂಗಳಲ್ಲಿ ಚಿತ್ರಕ್ಕಾಗಿಯೇ ಇವರು ಮಾಡುವ ರಕ್ತದಾನ ಸುಮಾರು 300 ಎಂ.ಎಲ್‌.ನಷ್ಟು!

ಜಲವರ್ಣ, ತೈಲವರ್ಣ, ಆಕ್ರೆಲಿಕ್‌, ವ್ಯಾಕ್ಸ್‌ ಕಲರನ್ನು ಮಾಧ್ಯಮವನ್ನಾಗಿಸಿ­ಕೊಂಡಿರುವ ಸಂಗಮೇಶ ಅವರಿಗೆ ಚಿಕ್ಕಂದಿಂನಿಂದಲೇ ಚಿತ್ರಕಲೆಯಲ್ಲಿ ಆಸಕ್ತಿ ಇತ್ತು. ಕಳೆದ 7 ವರ್ಷಗಳಿಂದ ಸ್ವರಕ್ತದಿಂದ ಇವರು ಚಿತ್ರ ಬಿಡಿಸುತ್ತಿದ್ದಾರೆ. ಇದುವರೆಗೆ 300 ಸಾಧಕರ ಚಿತ್ರ ಬಿಡಿಸಿದ ಖ್ಯಾತಿ ಇವರದ್ದು.

ಈ ಸಾಧನೆಗಾಗಿ ಇವರಿಗೆ ಅಮೆರಿಕದ ವಿವಿಯೊಂದರಿಂದ ಗೌರವ ಡಾಕ್ಟರೇಟ್‌ ಲಭಿಸಿದೆ. ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್, ಜೀನಿಯಸ್‌ ಬುಕ್‌ ಆಫ್‌ ರೆಕಾರ್ಡ್ಸ್ ನಿಂದ ಮೆಚ್ಚುಗೆ ಸಿಕ್ಕಿದೆ. ಜಮಖಂಡಿಯಲ್ಲಿನ ತಮ್ಮ ಮನೆಯಲ್ಲಿಯೇ ಪುಟ್ಟ ಗ್ಯಾಲರಿ ನಿರ್ಮಿಸಿಕೊಂಡು, ರಕ್ತವರ್ಣಕಲೆಯನ್ನು ತಪಸ್ಸಿನಂತೆ ಆಚರಿಸುತ್ತಿ­ದ್ದಾರೆ. ನವದೆಹಲಿ, ಬೆಂಗ­ ಳೂರು, ರಾಯಚೂರು, ಧಾರವಾಡ, ವಿಜಯಪುರ, ಬಾಗಲಕೋಟೆ ಸೇರಿದಂತೆ 25ಕ್ಕೂ ಹೆಚ್ಚು ಕಡೆಗಳಲ್ಲಿ ರಕ್ತವರ್ಣ ಚಿತ್ರಗಳನ್ನು ಪ್ರದರ್ಶನ ಮಾಡಿದ್ದಾರೆ.

ದೇಶಪ್ರೇಮದ ಕುರಿತು ಕೇವಲ ಮಾತಿನಲ್ಲಿ ಹೇಳುವುದರ ಬದಲು, ರಕ್ತವರ್ಣಚಿತ್ರದಿಂದ ದೇಶಭಕ್ತಿಯನ್ನು ಸಾರುತ್ತಿದ್ದೇನೆ. ದೇಶಕ್ಕಾಗಿ ಪ್ರಾಣ ಕೊಟ್ಟವರಿಗೆ ನನ್ನ ರಕ್ತದ ಒಂದು ಪಾಲು ಹೋಗಲಿ ಎಂದು ಇಂಥ ಸಾಧಕರ ಚಿತ್ರಗಳನ್ನು ಬಿಡಿಸಿದ್ದೇನೆ.
-ಡಾ. ಸಂಗಮೇಶ ಬಗಲಿ

* ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.