ಭಾರತ ಮಹಿಳಾ ಹಾಕಿ ದಿಗ್ವಿಜಯ

ರಾಣಿ ಪಡೆ ಯಾರಿಗೂ ಕಮ್ಮಿ ಇಲ್ಲ, ಒಲಿಂಪಿಕ್ಸ್‌ನತ್ತ ಭಾರತದ ಗುರಿ

Team Udayavani, Jun 29, 2019, 10:00 AM IST

HOKEY-2

ಭಾರತ ಮಹಿಳಾ ಹಾಕಿ ಕ್ಷೇತ್ರದಲ್ಲಿ ಹೊಸ ಶಕೆಯೊಂದು ಉದಯವಾಗಿದೆ. ಅಂತಾರಾಷ್ಟ್ರೀಯ ಹಾಕಿ ಕೂಟಗಳಲ್ಲಿ ಪುರುಷರ ತಂಡದಷ್ಟು ಸಾಧನೆಯನ್ನು ಭಾರತ ಮಹಿಳಾ ತಂಡ ಮಾಡಿಲ್ಲವಾದರೂ ಎಫ್ಐಎಚ್‌ ಮಹಿಳಾ ಹಾಕಿ ಸೀರೀಸ್‌ನಲ್ಲಿ ಪ್ರಶಸ್ತಿ ಗೆದ್ದ ಮೇಲೆ ರಾಣಿ ರಾಂಪಾಲ್‌ ಪಡೆ “ನಾವು ಯಾರಿಗೂ ಕಮ್ಮಿ ಇಲ್ಲ’ ಎನ್ನುವುದನ್ನು ಸಾರಿದೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಮಹಿಳಾ ತಂಡವು ಪದಕ ಗೆದ್ದು ತರುವ ಸಾಮರ್ಥ್ಯ ಹೊಂದಿದೆ. ಗುರ್ಜಿತ್‌ ಕೌರ್‌ ರಂತಹ ತಾರಾ ಆಟಗಾರರು, ರಾಣಿ ರಾಂಪಾಲ್‌ರಂತಹ ಶ್ರೇಷ್ಠ ನಾಯಕಿಯ ಬಲ ತಂಡಕ್ಕಿದೆ. ಇನ್ನಷ್ಟು ತರಬೇತಿ, ಕೋಚ್‌, ಕಠಿಣ ಶ್ರಮವಹಿಸಿದ್ದೇ ಆದರೆ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಸ್ವರ್ಣದ ನಗು ಚೆಲ್ಲುವುದರಲ್ಲಿ ಅನುಮಾನವೇ ಇಲ್ಲ.

ಭಾರತ ಸಂಭ್ರಮ: ಜಪಾನ್‌ ಪ್ರವಾಸಕ್ಕೂ ಮೊದಲು ಎಫ್ಐಎಚ್‌ ಮಹಿಳಾ ಹಾಕಿ ಸೀರೀಸ್‌ ಫೈನಲ್ಸ್‌ನಲ್ಲಿ ಭಾರತ ಗೆಲ್ಲುತ್ತದೆ ಎಂದು ಯಾರು ಊಹಿಸಿರಲಿಕ್ಕಿಲ್ಲ. ಎಲ್ಲ ಸಂದೇಹಗಳಿಗೂ ಭಾರತ ಆಟಗಾರ್ತಿಯರು ಉತ್ತರ ನೀಡಿದರು. ಎಲ್ಲ ಸವಾಲನ್ನು ಮೆಟ್ಟಿನಿಂತು ಕೂಟದ ಅಂತಿಮ ಹಂತಕ್ಕೆ ಪ್ರವೇಶಿಸಿಯೇ ಬಿಟ್ಟರು. ಆದರೆ ಫೈನಲ್‌ ಗೆಲ್ಲುವುದು ರಾಣಿ ರಾಂಪಾಲ್‌ ಪಡೆಗೆ ಅಷ್ಟೊಂದು ಸುಲಭದ ವಿಷಯವಾಗಿರಲಿಲ್ಲ. ಏಕೆಂದರೆ ಎದುರಾಳಿ ಆತಿಥೇಯ ಜಪಾನ್‌ ತಂಡ. ತವರಲ್ಲಿ ಆ ತಂಡವನ್ನು ಸೋಲಿಸುವುದು ಅಷ್ಟು ಸುಲಭದ ಮಾತಾಗಿರಲಿಲ್ಲ. ಆದರೆ ಗುರ್ಜಿತ್‌ ಕೌರ್‌ ಬುಲೆಟ್‌ ವೇಗದಲ್ಲಿ ಸಿಡಿಸಿದ ಎರಡು ಗೋಲಿನ ನೆರವಿನಿಂದ ಭಾರತೀಯರು ಎಲ್ಲ ಸವಾಲನ್ನು ಮೆಟ್ಟಿನಿಂತು ಕೆಚ್ಚೆದೆಯ ಪ್ರದರ್ಶನ ನೀಡಿದರು. ಭಾರತ ಕಪ್‌ ಗೆಲ್ಲುವುದರಲ್ಲಿ ಮುಂಚೂಣಿಯ ಪಾತ್ರವಹಿಸಿದರು. ರಾಣಿ ರಾಂಪಾಲ್‌ ಕೂಡ ಒಂದು ಗೋಲು ಬಾರಿಸಿ ತಂಡದ ಗೆಲುವಿಗೆ ಕಾರಣರಾದರು. ಒಟ್ಟಿನಲ್ಲಿ ಭಾರತೀಯರ ಸಂಭ್ರಮ ಮುಗಿಲು ಮುಟ್ಟಿತ್ತು. ಎಲ್ಲ ಕಡೆಯಿಂದ ಭಾರತೀಯ ಆಟಗಾರ್ತಿಯರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂತು. ಸ್ವತಃ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ “ಇದು ನಮ್ಮ ಹುಡುಗಿಯರ ಸ್ಪಿರಿಟ್‌’ ಎಂದು ಟ್ವೀಟರ್‌ ಮೂಲಕ ಖುಷಿ ವ್ಯಕ್ತಪಡಿಸಿದ್ದರು.

ಒಲಿಂಪಿಕ್ಸ್‌ ಗೆಲ್ಲುವ ಗುರಿ: ಭಾರತೀಯ ಆಟಗಾರ್ತಿಯರು ಎಫ್ಐಎಚ್‌ ಮಹಿಳಾ ಹಾಕಿ ಸೀರೀಸ್‌ ಫೈನಲ್ಸ್‌ ಗೆಲ್ಲುವ ಮೂಲಕ ಮುಂಬರುವ ಒಲಿಂಪಿಕ್ಸ್‌ ಅರ್ಹತಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆಯಬಹುದು.

ಭಾರತ ಮಹಿಳಾ ತಂಡ ಇದುವರೆಗೆ ಒಟ್ಟು 2 ಸಲ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡಿದೆ. 1980ರಲ್ಲಿ ಮೊದಲ ಬಾರಿಗೆ ಮಾಸ್ಕೋದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಆ ಬಳಿಕ 2016ರಲ್ಲಿ ಭಾರತ ರಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡು 12ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಅಂ.ರಾ ಕೂಟದಲ್ಲಿ ಭಾರತ ಗೆದ್ದ ಪದಕ
ಭಾರತ ಮಹಿಳಾ ತಂಡ ಇದುವರೆಗೆ ಹಲವಾರು ಅಂತಾರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸಿದೆ. ಮೊದಲನೆಯದಾಗಿ ಕಾಮನ್ವೆಲ್ತ್‌ ಗೇಮ್ಸ್‌ ಕೂಟವನ್ನು ಗಮನಿಸುವುದಾದರೆ ಭಾರತ ಈ ಪ್ರತಿಷ್ಠಿತ ಕೂಟದಲ್ಲಿ ಎರಡು ಸಲ ಮಾತ್ರ ಪದಕ ಗೆದ್ದಿದೆ. 1998ರಲ್ಲಿ ಭಾರತ ಮೊದಲ ಬಾರಿಗೆ ಕಾಮನ್ವೆಲ್ತ್‌ ಕೂಟದಲ್ಲಿ ಪಾಲ್ಗೊಂಡಿತ್ತು. ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. 2002ರಲ್ಲಿ ಇಂಗ್ಲೆಂಡ್‌ನ‌ಲ್ಲಿ ನಡೆದಿದ್ದ ಕೂಟದಲ್ಲಿ ಭಾಗವಹಿಸಿದ್ದ ಭಾರತೀಯರು ಮೊದಲ ಸಲ ಚಿನ್ನದ ಪದಕ ಗೆದ್ದಿದ್ದರು. ಆ ಬಳಿಕ 2006 ಆಸ್ಟ್ರೇಲಿಯದಲ್ಲಿ ನಡೆದ ಕೂಟದಲ್ಲಿ ಭಾರತೀಯರು ಬೆಳ್ಳಿ ಪದಕ ಗೆದ್ದುಕೊಂಡಿದ್ದರು. 2010, 2014 ಹಾಗೂ 2018ರಲ್ಲಿ ಭಾರತ ಫೈನಲ್‌ ತಲುಪಲು ಸಾಧ್ಯವಾಗಿಲ್ಲ. ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 1982ರಲ್ಲಿ ಚಿನ್ನದ ಪದಕ ಗೆದ್ದಿತ್ತು. 1986ರಲ್ಲಿ ಕಂಚು, 1998ರಲ್ಲಿ ಬೆಳ್ಳಿ, 2006ರಲ್ಲಿ ಕಂಚು, 2014ರಲ್ಲಿ ಕಂಚು ಹಾಗೂ 2018ರಲ್ಲಿ ಬೆಳ್ಳಿ ಪದಕವನ್ನು ಗೆದ್ದುಕೊಂಡಿತ್ತು. ವಿಶ್ವ ಲೀಗ್‌ ಹಾಗೂ ವಿಶ್ವಕಪ್‌ ಹಾಕಿ ಕೂಟಗಳಲ್ಲಿ ಇದುವರೆಗೆ ಭಾರತೀಯ ಮಹಿಳಾ ತಂಡಕ್ಕೆ ಒಂದು ಸಲವೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಇದನ್ನು ಗಂಭೀರವಾಗಿ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಶ್ರೇಷ್ಠ ನಿರ್ವಹಣೆ ನೀಡುವ ಹೊಣೆಗಾರಿಕೆ ಭಾರತೀಯ ತಂಡದ ಆಟಗಾರ್ತಿಯರ ಮೇಲಿದೆ ಎನ್ನುವುದನ್ನು ಗಮನದಲ್ಲಿಡಬೇಕಾಗಿದೆ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.