ಒಗ್ಗಟ್ಟಿಲ್ಲದೇ ಬಲವಿಲ್ಲ!


Team Udayavani, Mar 31, 2018, 11:45 AM IST

55.jpg

ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಸಂದರ್ಭದಲ್ಲಿ ಪ್ರಬಲ ತಂಡಗಳನ್ನೆಲ್ಲ ಸೋಲಿಸಿ ಮೆರೆದಾಡಿದ್ದ ಭಾರತದ ಮಹಿಳಾ ಆಟಗಾರ್ತಿಯರು, ಇದೀಗ ಫಾರ್ಮ್ ಕಳೆದುಕೊಂಡಿದ್ದಾರೆ. ಪರಿಣಾಮವಾಗಿ, ಮೇಲಿಂದ ಮೇಲೆ ಪಂದ್ಯಗಳನ್ನು ಸೋಲುತ್ತಿದ್ದಾರೆ…   

ಸತತ ಗೆಲುವಿನ ನಾಗಲೋಟದಿಂದ ಮಹಿಳಾ ಕ್ರಿಕೆಟ್‌ ಲೋಕದಲ್ಲಿ ಮಿಂಚು ಹರಿಸಿದ್ದ‌ ಭಾರತ ತಂಡ ಮೊನ್ನೆ ಮೊನ್ನೆಯವರೆಗೂ ತನಗೆ ಸಾಟಿಯೇ ಇಲ್ಲ ಎನ್ನುವಂತೆ ಭರ್ಜರಿ ಪ್ರದರ್ಶನ ನೀಡುತ್ತಿತ್ತು. ಆದರೆ ತಂಡಕ್ಕೀಗ ಸಂಘಟಿತ ಪ್ರದರ್ಶನದ ಕೊರತೆ ಎದುರಾಗಿದೆ. ಈ ಫ‌ಲವೇ ಸತತ ಸೋಲಿನ ಸರಮಾಲೆ ಜತೆಯಾಗಿದೆ.

ಕ್ರಿಕೆಟ್‌ ಜಗತ್ತಿನಲ್ಲಿ ಬಲಿಷ್ಠ ತಂಡಗಳಿಗೆ ಸಡ್ಡು ಹೊಡೆದು ಪ್ರಬಲ ತಂಡವಾಗಿ ರೂಪುಗೊಳ್ಳುತ್ತಿದ್ದ ಭಾರತದ ಮಹಿಳೆಯರು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಹೋದಾಗ ಸರಣಿಯನ್ನು 3-1ರಿಂದ ಕೈ ವಶ ಮಾಡಿಕೊಂಡಿದ್ದರು. ಆದರೆ, ನಂತರ ಆರಂಭವಾಗಿರುವ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ಜೊತೆಗಿನ ತ್ರಿಕೋನ ಟಿ20 ಸರಣಿಯಲ್ಲಿ ಸತತ ಸೋಲುಗಳಿಂದ ಕಂಗಾಲಾಗಿದ್ದಾರೆ.

ಆಸ್ಟ್ರೇಲಿಯಾ, ಇಂಗ್ಲೆಂಡ್‌, ದಕ್ಷಿಣ ಆಫ್ರಿಕಾ….ತಂಡಗಳನ್ನು ಇತ್ತೀಚಿನ ವರ್ಷಗಳಲ್ಲಿ ತನ್ನ ಮುಂದೆ ಮಂಡಿಯೂರುವಂತೆ ಮಾಡಿದ ಭಾರತದ ನಾರಿಯರು ಸ್ಥಿರ ಪ್ರದರ್ಶನ ನೀಡುವಲ್ಲಿ ಪುನಃ ಪುನಃ ಎಡವುತ್ತಿದ್ದಾರೆ. ನಿರೀಕ್ಷೆಯಂತೆ ಮೂಡಿ ಬರದ ಸಂಘಟಿತ ಆಟ. ಅಗ್ರ ಪಂಕ್ತಿಯ ಆಟಗಾರ್ತಿಯರಿಂದ ಉತ್ತಮ ಪ್ರದರ್ಶನ ಬಂದರೂ ಅದನ್ನು ಗೆಲುವಾಗಿ ಪರಿವರ್ತಿಸುವಲ್ಲಿ ಉಳಿದವರು ಯಶಸ್ಸು ಪಡೆಯದೇ ಇರುವುದು ತಲೆ ನೋವಾಗಿ ಪರಿಣಮಿಸಿದೆ.

ಮೂಡದ ಉತ್ತಮ ಜೊತೆಯಾಟ

ಭಾರೀ ನಿರೀಕ್ಷೆಯೊಂದಿಗೆ ತ್ರಿಕೋನ ಟೂರ್ನಿಗೆ ಎಂಟ್ರಿ ಕೊಟ್ಟ ಭಾರತದ ಆಟಗಾರ್ತಿಯರು ಹುಮ್ಮಸ್ಸಿನಿಂದಲೇ ಅಖಾಡಕ್ಕೆ ಧುಮುಕಿದರು. ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನವನ್ನೇ ನೀಡಿದ ಭಾರತ ತಂಡಕ್ಕೆ ಹೇಳಿಕೊಳ್ಳುವಂಥ ಜೊತೆಯಾಟಗಳು ಮೂಡಿ ಬರಲೇ ಇಲ್ಲ. ಪ್ರಮುಖ ಆಟಗಾರ್ತಿಯರಾದ ಮಿಥಾಲಿ ರಾಜ್‌, ಸ್ಮತಿ ಮಂದನಾ, ರೋಡಿಗ್ರಸ್‌, ಅನುಜಾ ಪಟೇಲ್‌ ಮಾತ್ರ ಸಿಡಿದರು. ಆದರೆ ಒಂದು ಪಂದ್ಯದಲ್ಲಿ ಒಬ್ಬರು ಹೋರಾಟ ನಡೆಸಿದರೆ ಇವರಿಗೆ ಸಾಥ್‌ ನೀಡಬೇಕಿದ್ದವರೇ ಕೈಕೊಡುತ್ತಿದ್ದರು. ಪರಿಣಾಮ, ಹೆಚ್ಚಿನ ಪಂದ್ಯಗಳನ್ನು ಸೋಲುವುದು ಸಾಮಾನ್ಯ ಸಂಗತಿ ಆಗಿಹೋಯಿತು!

ಮೊನಚು ಕಳೆದುಕೊಂದ ಬೌಲರ್‌ಗಳು
ಭಾರತ ಮಹಿಳಾ ತಂಡ ಪ್ರಬಲ ಬೌಲಿಂಗ್‌ ವಿಭಾಗವನ್ನು ಹೊಂದಿದೆ. ಆಸ್ಟ್ರೇಲಿಯಾ, ಇಂಗ್ಲೆಂಡ್‌ ನಂತರ ಭಾರತೀಯ ತಂಡ ಬೌಲರ್‌ಗಳದ್ದೇ ವಿಶ್ವ ಕ್ರಿಕೆಟ್‌ನಲ್ಲಿ ಪಾರುಪತ್ಯ. ಹಿರಿಯ ಆಟಗಾರ್ತಿ ಜೂಲನ್‌ ಗೋಸ್ವಾಮಿ ಭಾರತ ತಂಡದ ಅವಿಭಾಜ್ಯ ಅಂಗ. ಆದರೆ, ಈ ಟೂರ್ನಿಯಲ್ಲಿ ಜೂಲನ್‌ ಸೇರಿದಂತೆ ವಸ್ತ್ರಾಕರ್‌, ಅನುಜಾ ಪಟೇಲ್‌, ದೀಪ್ತಿ ಶರ್ಮಾ, ಪೂನಮ್‌, ರಾಧಾ ಪ್ರಬಲ ದಾಳಿ ಸಂಘಟಿಸುವಲ್ಲಿ, ವಿಕೆಟ್‌ ಪಡೆಯುವಲ್ಲಿ  ವಿಫ‌ಲವಾದರು. ಬೌಲಿಂಗ್‌ ಮೊನಚು ಕಳೆದುಕೊಂಡ ಭಾರತೀಯ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ಆಟಗಾರ್ತಿಯರು ಭರ್ಜರಿ ಬ್ಯಾಟಿಂಗ್‌ನಿಂದ ಒತ್ತಡ ಹೇರುವಲ್ಲಿ ಯಶಸ್ವಿಯಾದರು.

ಸರಣಿ ಸೋಲಿನ ಸುರುಳಿಯಲ್ಲಿ ಸಿಲುಕಿಕೊಂಡಿರುವ ಮಹಿಳಾ ತಂಡಕ್ಕೀಗ ಆತ್ಮವಿಶ್ವಾಸದ ಅವಶ್ಯಕತೆ ಇದೆ. ಮುಂದೆ ನಡೆಯುವ ಮಹಿಳಾ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಇದೇ ರೀತಿ ಸಂಘಟಿತ ಪ್ರದರ್ಶನದ ಕೊರತೆ ಎದುರಾದರೆ ಭಾರಿ ಬೆಲೆ ತೆರಬೇಕಾಗುತ್ತದೆ. ಆಗಿರುವ ತಪ್ಪುಗಳನ್ನು ತಿದ್ದಿಕೊಂಡು ಪುಟಿದೇಳುವ ಮೂಲಕ ಮುಂಬರುವ ಪಂದ್ಯಗಳಲ್ಲಿ ಉತ್ತಮ ಸಂಘಟಿತ ಪ್ರದರ್ಶನ ನೀಡುವಂತಾಗಲಿ ಎಂಬುದೇ ಹಾರೈಕೆ.

ದೇವಲಾಪುರ ಮಹದೇವಸ್ವಾಮಿ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.