ಇದು “ತುಂಗಾರತಿ’!


Team Udayavani, Nov 16, 2019, 4:13 AM IST

idu-tungarati

ತುಂಗಾರತಿ ನೆರವೇರುವ ಈ ದೃಶ್ಯ ಕಣ್ಣಿಗೊಂದು ಹಬ್ಬ. ಇನ್ನೇನು ಕರ್ಪೂರಕ್ಕೆ ದೀಪ ಸ್ಪರ್ಶಿಸಿ, ಆರತಿ ಬೆಳಗಿತು ಎನ್ನುವ ಹೊತ್ತಿಗೆ ತುಂಗೆಯಲ್ಲಿರುವ ಮೀನುಗಳು, ಹೊಂಬಣ್ಣದಿಂದ ಕಂಗೊಳಿಸುತ್ತವೆ…

“ಗಂಗಾ ಸ್ನಾನಂ, ತುಂಗಾ ಪಾನಂ’ ಎನ್ನುವ ಸಾಲು, ಕನ್ನಡಿಗರಿಗೆ ಒಂದು ಪುಳಕ. ನಮ್ಮದೇ ನಾಡಿನ ತುಂಗೆಯು ಹೋಲಿಕೆಯಲ್ಲಿ ಗಂಗೆಯ ಪಕ್ಕದಲ್ಲಿ ನಿಲ್ಲುತ್ತಾಳೆಂಬುದೇ ಮಹತ್ತರ ಹೆಮ್ಮೆ. ಕಾಶಿಯಲ್ಲಿ ಗಂಗೆಗೆ ನಿತ್ಯವೂ “ಗಂಗಾರತಿ’ಯ ಮೂಲಕ ಭಕ್ತಿ ನಮನಗಳನ್ನು ಸಲ್ಲಿಸುವುದು, ಒಂದು ಅಪೂರ್ವ ದೃಶ್ಯ. ಅದರಂತೆ, ದಕ್ಷಿಣದಲ್ಲೂ ತುಂಗಾ ನದಿಗೆ ಆರತಿ ಬೆಳಗುವುದು ಅನೇಕರಿಗೆ ತಿಳಿದಿಲ್ಲ. ಈ ಚೆಲುವಿಗೆ ಸಾಕ್ಷಿ ಬರೆಯುವುದು, ಶೃಂಗೇರಿಯ ಶಾರದಾ ಸನ್ನಿಧಾನದ ತುಂಗಾ ತೀರ.

ಕಾರ್ತೀಕ ಹುಣ್ಣಿಮೆಯ ಚುಮುಚುಮು ಚಳಿ. ಅಂದು ನಡೆಯುವ ಲಕ್ಷದೀಪೋತ್ಸವದ ವೇಳೆ, ಆಗಸದ ಚಂದಿರನ ಬೆಳಕನ್ನು ಸೋಲಿಸಲು ತುಂಗಾ ತೀರ ಸಜ್ಜಾಗಿರುತ್ತದೆ. ಲಕ್ಷ ಲಕ್ಷ ಹಣತೆಗಳ ಬೆಳಕಿನಲ್ಲಿ ತುಂಗಾ ನದಿಯಲ್ಲಿ ತೆಪ್ಪೋತ್ಸವ ನಡೆಯುತ್ತದೆ. ತೆಪ್ಪವು ತುಂಗೆಯೊಡಲಲ್ಲಿ ಹಾಗೆ ತೇಲುತ್ತಿರಲು, ಇತ್ತ ದಡದಲ್ಲಿ ಅರ್ಚಕವೃಂದ ತುಂಗೆಗೆ ಆರತಿಯನ್ನು ಬೆಳಗುತ್ತಿರುತ್ತಾರೆ.

ತುಂಗಾರತಿ ನೆರವೇರುವ ಈ ದೃಶ್ಯ ಕಣ್ಣಿಗೊಂದು ಹಬ್ಬ. ಇನ್ನೇನು ಕರ್ಪೂರಕ್ಕೆ ದೀಪ ಸ್ಪರ್ಶಿಸಿ, ಆರತಿ ಬೆಳಗಿತು ಎನ್ನುವ ಹೊತ್ತಿಗೆ ತುಂಗೆಯಲ್ಲಿರುವ ಮೀನುಗಳು, ಹೊಂಬಣ್ಣದಿಂದ ಕಂಗೊಳಿಸುತ್ತವೆ. ಮೇಲೆದ್ದು ಕುಣಿಯುತ್ತಾ, ತಮ್ಮದೇ ಸಂಗೀತ ಸೃಷ್ಟಿಸುತ್ತವೆ. ಅವುಗಳ ಚಲನೆಯೂ ಒಂದು ಸಂಭ್ರಮ. ಶ್ರೀ ಮಠದ ಸದ್ವಿದ್ಯ ಸಂಜೀವಿನಿ ಪಾಠಶಾಲೆಯ ವಿದ್ಯಾರ್ಥಿಗಳು, ಪುರೋಹಿತರು ವೇದಘೋಷವನ್ನು ಮೊಳಗಿಸುತ್ತಾ, ಇಡೀ ವಾತಾವರಣವನ್ನು ಸ್ವರ್ಗವನ್ನಾಗಿಸುತ್ತಾರೆ.

ಕಳೆದ ಎರಡು ವರ್ಷಗಳಿಂದ ತುಂಗೆಗೆ ಆರತಿ ಸಮರ್ಪಿಸುವ ಆಚರಣೆ ಅತ್ಯಂತ ಜನಪ್ರಿಯತೆ ಪಡೆಯುತ್ತಿದೆ. ಲಕ್ಷದೀಪೋತ್ಸವ ವೇಳೆ ನಡೆಯುವ ಈ ಆರತಿಯನ್ನು ವೀಕ್ಷಿಸಲು ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಭಕ್ತಾದಿಗಳು ಆಗಮಿಸುವುದು ವಿಶೇಷ. ಜಗದ್ಗುರುಗಳ ಉಪಸ್ಥಿತಿಯಲ್ಲಿ ತೆಪ್ಪೋತ್ಸವದಲ್ಲಿ ಪಂಚ ದೇವರುಗಳಿಗೆ ಮಂಗಳಾರತಿ ನಡೆದ ನಂತರ ಜಗದ್ಗುರುಗಳು ತೆಪ್ಪದಲ್ಲಿ ಪಯಣಿಸಿ, ತುಂಗೆಯ ಮತ್ತೂಂದು ದಡದ ಕುಟೀರದಲ್ಲಿ ಆಸೀನರಾಗುತ್ತಾರೆ. ಅಲ್ಲಿಂದಲೇ ತೆಪ್ಪೋತ್ಸವ, ತುಂಗಾರತಿಯನ್ನು ವೀಕ್ಷಿಸುತ್ತಾರೆ. ಇತ್ತೀಚೆಗೆ ನಡೆದ ಲಕ್ಷದೀಪೋತ್ಸವದಲ್ಲಿ ಇವೆಲ್ಲ ದೃಶ್ಯಸಂಭ್ರಮಗಳಿದ್ದವು.

* ರಮೇಶ್‌ ಕುರುವಾನ್ನೆ

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.