ಜನಮೇಜಯನ “ಕಾಂತೇಶ’


Team Udayavani, Mar 7, 2020, 6:08 AM IST

janumajaya

ಕದರಮಂಡಲಗಿಯಲ್ಲಿರುವ ಪ್ರಾಣದೇವರ ಮೂರ್ತಿಯನ್ನು ದ್ವಾಪರಯುಗದಲ್ಲಿ ಜನಮೇಜಯ ಪ್ರತಿಷ್ಠಾಪಿಸಿದ ಎಂಬ ಪ್ರತೀತಿ ಇದೆ…

ಸರ್ವಧರ್ಮ ಸಮನ್ವಯ ಕ್ಷೇತ್ರ ಎಂದೇ ಖ್ಯಾತವಾದ ಕದರಮಂಡಲಗಿಯು, ಕಾಂತೇಶನೆಂದೇ ಪೂಜೆಗೊಳ್ಳುವ ಆಂಜನೇಯ ಸ್ವಾಮಿಯ ನೆಲೆವೀಡು. ಇಲ್ಲಿರುವ ಪ್ರಾಣದೇವರ ಮೂರ್ತಿಯನ್ನು ದ್ವಾಪರಯುಗದಲ್ಲಿ ಜನಮೇಜಯ ಪ್ರತಿಷ್ಠಾಪಿಸಿದ ಎಂಬ ಪ್ರತೀತಿ ಇದೆ. ಜೊತೆಗೆ ದಾಸಶ್ರೇಷ್ಠರಾದ ಕನಕದಾಸರು ಇಲ್ಲಿ ನೆಲೆಸಿ, “ಮೋಹನ ತರಂಗಿಣಿ’ ಎಂಬ ಕಾವ್ಯವನ್ನು ರಚಿಸಿ, ಕ್ಷೇತ್ರದ ಪಾವಿತ್ರತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂಬುದಕ್ಕೆ, ಇಲ್ಲಿ ಸಂಗ್ರಹಿಸಿಟ್ಟಿರುವ “ಮೋಹನ ತರಂಗಿಣಿ’ಯ ಹಸ್ತಪ್ರತಿ ಸಾಕ್ಷಿಯಾಗಿದೆ.

ಭವ್ಯ ದೇಗುಲ: ಇಲ್ಲಿದ್ದ ಕಾಂತೇಶನ ಶಿಥಿಲವಾಗಿದ್ದ ಗುಡಿಯನ್ನು ಎಂಜಿನಿಯರ್‌ ಐ.ಎಚ್‌. ಕೆಂಚರೆಡ್ಡಿಯವರು ಜೀರ್ಣೋದ್ಧಾರ ಮಾಡಿದ್ದಾರೆ. ಭವ್ಯ ದೇಗುಲ ಕಣ್ಮನ ಸೆಳೆಯುತ್ತದೆ. 8 ಅಂತಸ್ತಿನ ಭವ್ಯ ಹಾಗೂ ಸುಂದರವಾದ 101 ಅಡಿಗಳ ಗೋಪುರವನ್ನೂ ನಿರ್ಮಿಸಲಾಗಿದೆ. ಸುಂದರ ಪುಷ್ಕರಣಿ ಇದೆ. ದೇಗುಲದ ಸುತ್ತಲೂ ಎತ್ತರವಾದ ಆವರಣಗೋಡೆ ಇದೆ. ಈ ಗೋಡೆಯ ಮೇಲೆ ಅಶೋಕವನದಲ್ಲಿನ ಸೀತೆ, ಶ್ರೀರಾಮ ಹಾಗೂ ಆಂಜನೇಯರ ಆಲಿಂಗನ ಸೇರಿದಂತೆ ಹಲವು ಗಾರೆಯ ಶಿಲ್ಪಗಳನ್ನು ಅಳವಡಿಸಲಾಗಿದೆ.

ಕನಕದಾಸರ ಗುಡಿ: ಕಾಂತೇಶ ದೇಗುಲದ ಆವರಣದಲ್ಲಿ ಕನಕದಾಸರ ಗುಡಿ, ರಾಘವೇಂದ್ರ ಸ್ವಾಮಿ ಮಠ ಇವೆ. ಇಲ್ಲಿನ ಲಕ್ಷ್ಮಿನಾರಾಯಣ ದೇವಸ್ಥಾನಕ್ಕೆ “ಕನಕದಾಸರ ಗುಡಿ’ ಎಂದು ಕರೆಯುತ್ತಾರೆ. ಕನಕದಾಸರು ಹುಟ್ಟಿದ್ದು ಬಾಡ ಗ್ರಾಮದಲ್ಲಿ. ಅವರು ಕಾಗಿನೆಲೆಗೆ ಬಂದು ನೆಲೆಸಿದರು. ಅವರು ತಿರುಪತಿ ವೆಂಕಟೇಶನ ದರ್ಶನ ಪಡೆಯಲು ಆಗಾಗ ತಿರುಪತಿಗೆ ಹೋಗುತ್ತಿದ್ದರು. ಆಗ ಕದರಮಂಡಲಗಿ ಕಾಂತೇಶನ ದರ್ಶನ ಪಡೆದು ಲಕ್ಷಿ¾ನಾರಾಯಣನ ಗುಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರಂತೆ.

ನೇರ ದೃಷ್ಟಿಯ ಹನುಮ: ಗರ್ಭಗೃಹದ ಒಳಗೆ ಎದುರು ಮುಖದ ಸಾಲಿಗ್ರಾಮ ಶಿಲೆಯ ಕಾಂತೇಶನ ಸುಂದರ ಮೂರ್ತಿ ಇದೆ. ಈ ದೇವರ ಕಣ್ಣುಗಳನ್ನು ಸೂರ್ಯ ಸಾಲಿಗ್ರಾಮದಿಂದ ಮಾಡಲಾಗಿದ್ದು, ಆಂಜನೇಯ ನೇರವಾಗಿ ಎದುರು ನಿಂತ ಭಕ್ತರನ್ನೇ ನೋಡುತ್ತಿರುವಂತೆ ಭಾಸವಾಗುತ್ತದೆ. ಕಾಂತೇಶನ ಸನ್ನಿಧಾನದ ಪಕ್ಕದಲ್ಲಿಯೇ ಹನುಮನ ಪಾದುಕೆಗಳ ಗುಡಿಯೂ ಇದೆ.  ಈ ದೇಗುಲದಲ್ಲಿ ಪ್ರತಿದಿನ ಮಧ್ಯಾಹ್ನ 12- 3 ಗಂಟೆಯವರಿಗೆ ಭೋಜನ ವ್ಯವಸ್ಥೆ ಇದೆ.

ದರುಶನಕೆ ದಾರಿ…: ರಾಣೆಬೆನ್ನೂರಿನಿಂದ 12 ಕಿ.ಮೀ. ದೂರದಲ್ಲಿ ಕದರ ಮಂಡಲಗಿ ಕ್ಷೇತ್ರವಿದೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಕಿ.ಮೀ. ಸಾಗಿ, ಬಳಿಕ ಬ್ಯಾಡಗಿ- ಕಾಗಿನೆಲೆ ರಸ್ತೆಯಲ್ಲಿ 9 ಕಿ.ಮೀ. ಕ್ರಮಿಸಿದರೆ ಕಾಂತೇಶನ ಸನ್ನಿಧಿ ಸಿಗುತ್ತದೆ.

* ಲಕ್ಷ್ಮಿಕಾಂತ್‌ ಎಲ್‌.ವಿ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.