ವಿದ್ಯೆಗೆ ವಿನಯವೇ ಭೂಷಣ

ಕಾಳಿದಾಸ ಮತ್ತು ಅಹಂಕಾರ

Team Udayavani, Jun 22, 2019, 3:11 PM IST

kalidasa-the-great-poet

ಅಹಂಕಾರವೆಂಬುದು ತಲೆಗೇರಿದರೆ ಸಜ್ಜನರೂ ದುರ್ಜನರಾಗಿ ಬದಲಾಗುತ್ತಾರೆ. ‘ಅಹಂ’ ಎಂಬುದು ಜೊತೆಯಾದರೆ, ಆನಂತರದಲ್ಲಿ ನಾನು ಹೇಳಿದ್ದೇ ಸರಿ ಎಂಬ ಮನೋಭಾವ ಮನುಷ್ಯನ ಜೊತೆಯಾಗುತ್ತದೆ. ಎಂಥ ಮೇಧಾವಿಯೇ ಆಗಿರಲಿ: ಅಹಮಿಕೆಯನ್ನು ದೂರವಿಟ್ಟಾಗ ಮಾತ್ರ ಬೆಳೆಯಲು, ನೆಮ್ಮದಿಯಿಂದ ಬದುಕಲು ಸಾಧ್ಯ. ಇಲ್ಲವಾದರೆ, ಪತನದ ಹಾದಿ ಜೊತೆಯಾಯಿತು ಎಂದೇ ಊಹಿಸಬೇಕಾಗುತ್ತದೆ.

‘ಅಹಂ’ ಎಂಬ ಅಮಲು ಎಲ್ಲರಿಗೂ ತಾಗುವುದುಂಟು. ಕೆಲವರು, ಅದರ ಜಾಲಕ್ಕೆ ಬೀಳದೆ ತಪ್ಪಿಸಿಕೊಳ್ಳುವುದೂ ಉಂಟು. ಅಹಮಿಕೆಯಿಂದ ದೂರವಿರಬೇಕು ಎಂಬುದನ್ನು ಉದಾಹರಿಸಲು ಮಹಾಕವಿ ಕಾಳಿದಾಸನ ಒಂದು ಕಥೆಯನ್ನು ಹಲವರು ಹೇಳುವುದುಂಟು. ಅದು ಇಲ್ಲಿದೆ:

ಕವಿ ಕಾಳಿದಾಸನಿಗೆ ತಾನು ಜ್ಞಾನಿಯೆಂಬ ಹೆಮ್ಮೆ ಕೊಂಚ ಹೆಚ್ಚೇ ಇತ್ತು. ಒಂದು ಬಾರಿ ಪರ್ಯಟನೆ ಮಾಡುತ್ತ ಒಂದು ಊರಿನ ಬಳಿ ಬಂದಾಗ ಬಹಳ ಬಾಯಾರಿಕೆ ಆಯಿತು. ಊರ ಹೊರಗಿನ ಬಾವಿಯ ಬಳಿ ಒಬ್ಬ ವೃದ್ಧೆ ನೀರು ಸೇದುತ್ತಿದ್ದಳು. ಕಾಳಿದಾಸ ಸ್ತ್ರೀಯ ಬಳಿ ಹೋಗಿ- ‘ತಾಯೇ, ನನ್ನ ದಾಹ ಅಡಗಿಸಲು ಕೊಂಚ ನೀರು ಕೊಡುವ ಕೃಪೆ ಮಾಡುವಿರಾ?’ ಎಂದು ಕೇಳಿದ.

ವೃದ್ಧೆ ನನಗೆ ನಿನ್ನ ಪರಿಚಯವಿಲ್ಲವಲ್ಲ ಮಗೂ, ನೀನು ನಿನ್ನ ಪರಿಚಯ ಹೇಳು, ನಾನು ನೀರು ಕೊಡುತ್ತೇನೆ-ಎಂದಳು.

ಆಗ ಕಾಳಿದಾಸ ತನ್ನ ಪರಿಚಯ ನೀಡಲು ಪ್ರಾರಂಭಿಸಿದ.
ಕಾಳಿದಾಸ – ನಾನೊಬ್ಬ ಪ್ರವಾಸಿ.
ವೃದ್ಧೆ- ಲೋಕದಲ್ಲಿ ಪ್ರವಾಸಿಗರು ಇಬ್ಬರೇ. ಒಬ್ಬ ಸೂರ್ಯ, ಮತ್ತೂಬ್ಬ ಚಂದ್ರ. ಇಬ್ಬರೂ ಹಗಲು ರಾತ್ರಿಗಳನ್ನು ನಡೆಸುತ್ತಿ¨ªಾರೆ.
ಕಾಳಿದಾಸ- ನಾನೊಬ್ಬ ಅತಿಥಿ, ಈಗ ನೀರು ಸಿಗುವುದೇ?
ವೃದ್ಧೆ – ಲೋಕದಲ್ಲಿ ಅತಿಥಿಗಳೂ ಇಬ್ಬರೇ. ಒಂದು ಧನ, ಮತ್ತೂಂದು ಯೌವ್ವನ. ಇಬ್ಬರೂ ಬಂದು ಹೊರಟು ಹೋಗುತ್ತಾರೆ, ನಿಲ್ಲುವುದಿಲ್ಲ. ನಿಜ ಹೇಳು, ನೀನು ಯಾರು?
ಕಾಳಿದಾಸ- ನಾನು ಸಹನಶೀಲ. ಈಗಲಾದರೂ ನೀರು ದೊರೆಯುತ್ತದೆಯೇ?
ವೃದ್ಧೆ- ಲೋಕದಲ್ಲಿ ಸಹನಶೀಲರೂ ಇಬ್ಬರೇ!! ಒಂದು ಭೂಮಿ, ಮತ್ತೂಂದು ವೃಕ್ಷ. ಭೂಮಿ, ಪುಣ್ಯವಂತರೊಡನೆ ಪಾಪಿಷ್ಟರನ್ನೂ ಸಹಿಸುತ್ತದೆ. ಹಾಗೆಯೇ, ಮರವು ಕಲ್ಲೆಸೆದರೂ ಸಿಹಿಯಾದ ಹಣ್ಣನ್ನೇ ಕೊಡುತ್ತದೆ.
ಈಗ ಕಾಳಿದಾಸ ಹತಾಶನಾಗತೊಡಗಿದ.
ಕಾಳಿದಾಸ- ನಾನೊಬ್ಬ ಹಠಮಾರಿ.
ವೃದ್ಧೆ- ಇಲ್ಲ, ನೀನು ಹಠಮಾರಿ ಆಗಲು ಹೇಗೆ ಸಾದ್ಯ? ಲೋಕದಲ್ಲಿ ಹಠಮಾರಿಗಳೂ ಇಬ್ಬರೇ…ಒಂದು ಉಗುರು, ಇನ್ನೊಂದು ಕೂದಲು. ಎಷ್ಟು ಬಾರಿ, ಕತ್ತರಿಸಿದರೂ ಅವು ಮತ್ತೆ ಮತ್ತೆ ಬೆಳೆಯುತ್ತವೆ.
ಕಾಳಿದಾಸನಿಗೀಗ ಬೇಸರವಾಗತೊಡಗಿತು. ಅವನು ಸಿಡಿಮಿಡಿಯಿಂದ ಹೇಳಿದ: ನಾನೊಬ್ಬ ಮೂರ್ಖ!!
ವೃದ್ಧೆ – ಆದು ಹೇಗೆ ಸಾಧ್ಯ? ಲೋಕದಲ್ಲಿ ಮೂರ್ಖರೂ ಸಹ ಇಬ್ಬರೇ!! ಒಬ್ಬ ರಾಜ. ಯೋಗ್ಯತೆ ಇಲ್ಲದಿದ್ದರೂ ಅವನು ಎಲ್ಲರ ಮೇಲೂ ಆಳ್ವಿಕೆ ಮಾಡುತ್ತ ದರ್ಬಾರು ಮಾಡುತ್ತಾನೆ.
ಇನ್ನೊಬ್ಬ ಆ ರಾಜನ ಆಸ್ಥಾನ ಪಂಡಿತ. ಆತ ರಾಜನನ್ನು ಓಲೈಸುವುದಕ್ಕಾಗಿ, ಸುಳ್ಳು ಕಥೆಗಳನ್ನು ನಿಜವೆಂದು ಬಿಂಬಿಸುತ್ತಾನೆ..!
ಈಗ ಕಾಳಿದಾಸ ಏನೂ ಹೇಳುವ ಮನಸ್ಥಿತಿಯಲ್ಲಿ ಉಳಿದಿರಲಿಲ್ಲ. ಆ ವೃದ್ಧ ಸ್ತ್ರೀಯ ಕಾಲಿಗೆ ಬಿದ್ದು ನೀರಿಗಾಗಿ ಬೇಡತೊಡಗಿದ.
ಆಗ “ಏಳು ಮಗೂ…’ ಎಂಬ ಧ್ವನಿ ಕೇಳಿಸಿತು. ಕಾಳಿದಾಸ ತಲೆ ಎತ್ತಿ ನೋಡಿದ. ಅಲ್ಲಿ ವೃದ್ಧೆಯ ಜಾಗದಲ್ಲಿ ಸಾಕ್ಷಾತ್‌ ಸರಸ್ವತಿ ದೇವಿ ನಿಂತಿದ್ದಳು. ಕಾಳಿದಾಸ ಆಕೆಗೆ ಭಯ ಭಕ್ತಿಯಿಂದ ನಮಿಸಿದ. ಆಗ ದೇವಿ ಹೇಳಿದಳು:
ವಿದ್ಯೆಯಿಂದ ಜ್ಞಾನ ಸಂಪಾದನೆಯಾಗುತ್ತದೆ, ಗರ್ವವಲ್ಲ. ಅಹಂಕಾರವಲ್ಲ..! ನಿನ್ನ ವಿದ್ಯೆಗೆ ದೊರೆತ ಮಾನ ಸನ್ಮಾನಗಳನ್ನೇ ನೀನು ಸರ್ವಸ್ವವೆಂದು ಭಾವಿಸಿದೆ. ಅಹಮಿಕೆಯೆಂಬುದು ಎಂಥವರನ್ನೂ ಹಾದಿ ತಪ್ಪಿಸುತ್ತದೆ ಮಗೂ. ಅದು ನಿನ್ನೊಳಗೆ ಮನೆ ಮಾಡುವ ಮೊದಲೇ ನಿನ್ನ ಕಣ್ಣು ತೆರೆಸುವುದು ಅವಶ್ಯಕವಾಗಿತ್ತು.
ಕಾಳಿದಾಸನಿಗೆ ತನ್ನ ತಪ್ಪಿನ ಅರಿವಾಯಿತು. ಕ್ಷಮೆ ಯಾಚಿಸಿ, ದಾಹ ತಣಿಸಿಕೊಂಡು ತನ್ನ ಮುಂದಿನ ದಾರಿ ಹಿಡಿದು ಸಾಗಿದ.
ನೀತಿ: ವಿದ್ಯಾ ದಧಾತಿ ವಿನಯಮ್‌.
(ವಿದ್ಯೆಗೆ ವಿನಯವೇ ಭೂಷಣ)

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.