- Saturday 07 Dec 2019
ಮತ್ತೆ ಭಾರತ ತಂಡದ ಕದ ಬಡಿಯುತ್ತಿರುವ ಕೆ.ಎಲ್.ರಾಹುಲ್
Team Udayavani, Oct 5, 2019, 3:02 AM IST
ಕೆ.ಎಲ್.ರಾಹುಲ್ ಕೆಲವು ವರ್ಷಗಳ ಹಿಂದೆ ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಾಗ ಅವರು ಇಷ್ಟೆಲ್ಲ ಎತ್ತರಕ್ಕೆ ಬೆಳೆಯುತ್ತಾರೆಂದು ಯಾರೂ ಊಹಿಸಿರಲಿಲ್ಲ. ಆರಂಭದಲ್ಲಿ ಭಾರತ ಟೆಸ್ಟ್ ತಂಡದಲ್ಲಿ ಖಾಯಂ ಆರಂಭಿಕರಾಗಿ ಬೆಳೆದ ಅವರು ಅದ್ಭುತ ಬ್ಯಾಟಿಂಗನ್ನೂ ಮಾಡಿದ್ದರು. ಮುಂದೆ ಐಪಿಎಲ್ನಲ್ಲಿ ಆಡಿ ಟಿ20, ಏಕದಿನ ತಂಡಕ್ಕೂ ಸರಿಯಾದ ಬ್ಯಾಟ್ಸ್ಮನ್ ಎನಿಸಿಕೊಂಡರು. ತಂಡದಲ್ಲಿ ಅವರ ಸ್ಥಾನ ಅತ್ಯಂತ ಬಲವಾಗಿತ್ತು.
ಅಷ್ಟರಲ್ಲಿ ಎಡವಟ್ಟಾಯಿತು. ಈ ವರ್ಷ ಮಧ್ಯಭಾಗದಲ್ಲಿ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡರು. ಹಾರ್ದಿಕ್ ಪಾಂಡ್ಯ ನೀಡಿದ ಕೆಲವು ಹೇಳಿಕೆಗಳು ರಾಹುಲ್ರಿಗೆ ಪಜೀತಿ ತಂದೊಡ್ಡಿ ಕೆಲವು ಪಂದ್ಯಗಳ ಮಟ್ಟಿಗೆ ನಿಷೇಧಕ್ಕೊಳಗಾದರು. ಅಂತೂ ಇಂತೂ ಹೊರಬರುವಾಗ ಅವರ ಪರಿಸ್ಥಿತಿ ವಿಕೋಪಕ್ಕೆ ಹೋಯಿತು. ಕಡೆಗೆ ಏಕದಿನ ವಿಶ್ವಕಪ್ಗೆ ಸ್ಥಾನ ಪಡೆದರು. ಅಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಆಗಿ ಮಿಂಚಿದ್ದೂ ಮಾತ್ರವಲ್ಲ, ಹಳೆಯ ನೋವಿನಿಂದ ಹೊರಬಂದರು.
ದುರಾದೃಷ್ಟ, ಮುಂದೆ ಅವರು ವಿಂಡೀಸ್ ಪ್ರವಾಸದಲ್ಲಿ ಮಿಂಚಲೇ ಇಲ್ಲ. ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡರು. ಕಡೆಗೆ ರಾಜ್ಯ ವಿಜಯ್ ಹಜಾರೆ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇಲ್ಲಿ ಮಿಂಚುವುದು ಅವರಿಗೆ ಅನಿವಾರ್ಯ. ಅದನ್ನು ಆಡಿದ ಎರಡನೆ ಪಂದ್ಯದಲ್ಲಿ ಸಾಬೀತುಮಾಡಿದ್ದಾರೆ. 122 ಎಸೆತದಲ್ಲಿ 131 ರನ್ ಚಚ್ಚಿದ್ದಾರೆ. ಅಲ್ಲಿಗೆ ಅವರು ಮತ್ತೆ ರಾಷ್ಟ್ರೀಯ ತಂಡದ ಕದ ಬಡಿಯುತ್ತಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಡಾ.ಕೆ. ಶಿವರಾಮ ಕಾರಂತರ "ಮೂಕಜ್ಜಿಯ ಕನಸುಗಳು' ಈಗ ಸಿನಿಮಾ ತೆರೆಯ ಮೇಲೆ ಎದ್ದುಬಂದಿದ್ದಾಳೆ. ಆ ಚಿತ್ರದಲ್ಲಿ ಆಕೆಯ ಪಾಲಿಗೆ ಧ್ಯಾನಪೀಠವೇ ಆಗಿಹೋಗಿರುವುದು, ಒಂದು...
-
ಭಾರತದ ಮೊದಲನೇ ಕರಡಿ ಧಾಮದ ಖ್ಯಾತಿ, ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ದರೋಜಿ ಕರಡಿ ಧಾಮದ್ದು. ಈ ಧಾಮಕ್ಕೀಗ ಭರ್ತಿ 25 ವರ್ಷ. ಕರಡಿ- ಮಾನವರ ಸಂಘರ್ಷ ತಡೆಯುವ...
-
ಕನ್ನಡ ದೃಶ್ಯ ಜಗತ್ತನ್ನು ಕಲಾತ್ಮಕವಾಗಿ ಶ್ರೀಮಂತಗೊಳಿಸಿದ ಕೆಲವೇ ಕೆಲವು ನಿರ್ದೇಶಕರ ಪೈಕಿ ಗಿರೀಶ್ ಕಾಸರವಳ್ಳಿ ಕೂಡ ಒಬ್ಬರು. ಚೊಚ್ಚಲ ನಿರ್ದೇಶನ, "ಘಟಶ್ರಾದ್ಧ'...
-
ರಘುರಾಮನು ವನರಾಮನಾಗಿ ಆರಾಮದಿಂದ ಇದ್ದ ಸ್ಥಳವೇ ಚಿತ್ರಕೂಟ. ರಾಮ, ಲಕ್ಷ¾ಣ, ಸೀತೆಯರ ಚಿತ್ತಾಪಹಾರ ಮಾಡಿದ್ದ ಚಿತ್ರಕೂಟವು ಪ್ರವಾಸಿಗರ ಚಿತ್ತವನ್ನೂ ಅಪಹರಿಸುವಷ್ಟು...
-
ಸದ್ಗುರು ಕ್ಷೇತ್ರಗಳ ಸಾಲಿನಲ್ಲಿ ವರದಪುರದ ಶ್ರೀಧರಾಶ್ರಮ, ಭಕ್ತರ ಜನಮಾನಸದಲ್ಲಿ ಹೆಸರು ಮಾಡಿರುವ ತಾಣ. ಸುಂದರ ಬೆಟ್ಟದ ತಪ್ಪಲಿನಲ್ಲಿ, ಮಲೆನಾಡಿನ ಹಸಿರಿನ ತಂಪಿನಲ್ಲಿರುವ...
ಹೊಸ ಸೇರ್ಪಡೆ
-
ಚಿತ್ರದುರ್ಗ: ಭಗವದ್ಗೀತೆ ಜಗತ್ತಿನ ಸರ್ವಶ್ರೇಷ್ಠ ಗ್ರಂಥ ಎಂದು ಹೇಳುತ್ತಾ ಕುಳಿತರೆ ಆಗದು. ಅದರಲ್ಲಿರುವ ಮೌಲ್ಯಗಳನ್ನು ಅನುಸರಿಸಬೇಕು ಎಂದು ಭಗವದ್ಗೀತಾ ಅಭಿಯಾನ...
-
ಚಿಕ್ಕಮಗಳೂರು: ಮಲೆನಾಡಿನ ಹೇಮಾವತಿ ಲಕ್ಷಾಂತರ ಜನರ ಜೀವನದಿಯಾಗಿದ್ದು, ಮೂಡಿಗೆರೆ ತಾಲೂಕಿನ ಜಾವಳಿಯಲ್ಲಿ ಹುಟ್ಟಿ ಬಣಕಲ್ ಮೂಡಿಗೆರೆಯಿಂದ ಹರಿದು ಹಾಸನ ಜಿಲ್ಲೆಯ...
-
ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಗ್ರಾಪಂನಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಚುನಾಯಿತ ಸದಸ್ಯರು ರಾಜೀನಾಮೆಗೆ ಮುಂದಾದ ಘಟನೆ ನಡೆದಿದೆ. ಗ್ರಾಪಂ ಅಧ್ಯಕ್ಷೆ...
-
ಮಂಗಳೂರು: ಒಬ್ಬ ಮಹಿಳೆಯನ್ನ ಒಂದು ವಸ್ತುವಿಗೆ ಹೋಲಿಕೆ ಮಾಡಿದ್ದಾರೆ. ಬಿಜೆಪಿಗರ ಮನಸ್ಥಿತಿ ನೋಡಿ, ಹೇಳಿದ್ರೆ ಮಹಿಳೆಯರು, ಮಾತೆಯರು ಅಂತ ಮಾತನಾಡ್ತಾರೆ. ಒಬ್ಬ...
-
ಲಕ್ನೋ: ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಂದ ಜೀವನ್ಮರಣ ಹೋರಾಟ ನಡೆಸಿ ಕೊನೆಯುಸಿರೆಳೆದಿದ್ದ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮನೆಗೆ ಶನಿವಾರ ಸಂಜೆ...