ಕುಕ್ಕೆ ಸುಬ್ಬಪ್ಪನ ಭಕ್ತಿ ಭೋಜನ

ನಾಗ ಸನ್ನಿಧಾನದ ಅನ್ನದಾನ ಮಹಿಮೆ

Team Udayavani, Aug 3, 2019, 5:32 AM IST

z-7

ಕುಕ್ಕೆ ಸುಬ್ರಹ್ಮಣ್ಯ, ಮಲೆನಾಡಿನ ಮಡಿಲಲ್ಲಿರುವ ಸುಪ್ರಸಿದ್ಧ ಪುಣ್ಯ ಕ್ಷೇತ್ರ. ಶ್ರೀ ಸುಬ್ಬಪ್ಪ ಸ್ವಾಮಿಯು ನೆಲೆನಿಂತಿರುವ ಈ ಪವಿತ್ರ ತಾಣದಲ್ಲಿ ನಿತ್ಯದ ಎರಡು ಹೊತ್ತಿನ ಅನ್ನಸಂತರ್ಪಣೆಯೇ ಒಂದು ವಿಶೇಷ. ಸಾತ್ವಿಕ, ಭಕ್ತಿಪೂರ್ಣ ಮತ್ತು ಅತ್ಯಂತ ಶಿಸ್ತಿನ ಭೋಜನ ವಾತಾವರಣವನ್ನು ಇಲ್ಲಿ ಕಾಣಬಹುದು…

ಪರಶುರಾಮ ಸೃಷ್ಟಿಯ ಸಪ್ತ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವೂ ಪುರಾಣ, ಇತಿಹಾಸ ಕಾಲದಿಂದಲೂ ನಾಗಾರಾಧನೆಗೆ ಪ್ರಸಿದ್ಧಿ. ವಾಸುಕೀ ಸನ್ನಿಹಿತ ಶ್ರೀ ಸುಬ್ರಹ್ಮಣ್ಯ ದೇವರು ಭಕ್ತಾಭೀಷ್ಟ ಪ್ರದಾಯಕನಾಗಿ ಶ್ರೀ ಕ್ಷೇತ್ರದ ಅಧಿದೇವತೆಯಾಗಿ ನೆಲೆಸಿರುತ್ತಾನೆ. ಇಲ್ಲಿನ ಅನ್ನದಾನಕ್ಕೆ ದೈವಿಕ ಮಹತ್ವವಿದೆ.

ಕುಕ್ಕೆ ಕ್ಷೇತ್ರದಲ್ಲಿ ಪ್ರತಿದಿನ 20,000ಕ್ಕೂ ಹೆಚ್ಚಿನ ಭಕ್ತರು ರಾತ್ರಿ ಮತ್ತು ಮಧ್ಯಾಹ್ನ ಭೋಜನ ಸವಿಯುತ್ತಾರೆ. ಭಾನುವಾರ, ರಜಾದಿನಗಳು ಹಾಗೂ ನವರಾತ್ರಿ ಪರ್ವ ದಿನಗಳಲ್ಲಿ, ಈ ಸಂಖ್ಯೆ 30- 40 ಸಾವಿರ ದಾಟುತ್ತದೆ. ವಾರ್ಷಿಕ ಚಂಪಾಷಷ್ಠಿ, ಕಿರುಷಷ್ಠಿ ಸಂದರ್ಭದಲ್ಲಂತೂ ಲಕ್ಷಾಂತರ ಭಕ್ತರು ಭೋಜನ ಪ್ರಸಾದ ಸವಿಯುತ್ತಾರೆ.

ಯಂತ್ರಗಳ ಮೋಡಿ
ಅನ್ನ ಸಿದ್ಧಪಡಿಸಲು ಸೋಲಾರ್‌ ಚಾಲಿತ ಆಧುನಿಕ ಶೈಲಿಯ ಹವಾನಿಯಂತ್ರಿತ ವ್ಯವಸ್ಥೆ ಇದೆ. 15,000 ಮಂದಿಗೆ ಅಡುಗೆ ಸಿದ್ಧಪಡಿಸುವ ಸಾಮರ್ಥ್ಯರುವ 3 ದೊಡ್ಡ ಗಾತ್ರದ ಬಾಯ್ಲರ್‌ಗಳಿವೆ. ಅನ್ನ, ಪಾಯಸ, ಸಾಂಬಾರು ತಯಾರಿಕೆಗೆ ಇದು ಬಳಕೆಯಾಗುತ್ತದೆ. ಗ್ಯಾಸ್‌ ಸಿಲಿಂಡರ್‌ನಲ್ಲಿ ಅಡುಗೆ ತಯಾರಾಗುತ್ತದೆ.

ಭೋಜನ ಶಾಲೆ ಹೇಗಿದೆ?
ದೇಗುಲದ ಆವರಣದಲ್ಲಿಯೇ, ಸುಸಜ್ಜಿತ ಷಣ್ಮುಖ ಭೋಜನಾ ಶಾಲೆಯಿದೆ. ಮೇಲಿನ ಮಹಡಿಯಲ್ಲೂ ಭೋಜನ ವಿತರಣೆ ವ್ಯವಸ್ಥೆಯಿದೆ. ಒಂದು ಸಲಕ್ಕೆ 15 ಸಾವಿರ ಮಂದಿ ಕುಳಿತು ಊಟ ಮಾಡುತ್ತಾರೆ. ಸರ್ಪಸಂಸ್ಕಾರ ಸೇವೆ ನಡೆಸುವ ಭಕ್ತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಇದೆ.

ರಾಮ- ಲಕ್ಷ್ಮಣರ ಕೊಪ್ಪರಿಗೆ
ಚಂಪಾಷಷ್ಠಿ ವೇಳೆ ಇಲ್ಲಿರುವ “ರಾಮ-ಲಕ್ಷ್ಮಣ’ ಎಂಬ ಹೆಸರಿನ ಜೋಡಿ ಅನ್ನದ ಕೊಪ್ಪರಿಗೆ ಮಹತ್ವ ಪಡೆದುಕೊಳ್ಳುತ್ತದೆ. ಈ ಜೋಡಿ ಅನ್ನಕೊಪ್ಪರಿಗೆಗೆ ವಿಶೇಷ ಪೂಜೆ ಸಂದ ಬಳಿಕ, ದೇಗುಲದ ಒಳಾಂಗಣದ ಎರಡು ಒಲೆಗಳ ಮೇಲೆ ಅದನ್ನು ಏರಿಸಲಾಗುತ್ತದೆ. ಕೊಪ್ಪರಿಗೆಯಲ್ಲಿ ಸಿದ್ಧವಾದ ಅನ್ನ ಪ್ರಸಾದವನ್ನು ಭಕ್ತರಿಗೆ ವಿತರಿಸಲಾಗುತ್ತದೆ.

ಊಟದ ಸಮಯ
– ಮಧ್ಯಾಹ್ನ 11.30ರಿಂದ 3 ಗಂಟೆ ತನಕ
– ರಾತ್ರಿ 7.30ರಿಂದ 9.30
ಏಕಾದಶಿಗೆ ಉಪಹಾರ
ಏಕಾದಶಿ ದಿನಗಳಲ್ಲಿ ಊಟವಿರುವುದಿಲ್ಲ; ಉಪಾಹಾರ ವ್ಯವಸ್ಥೆ ಇರುತ್ತದೆ. ಆಗೆಲ್ಲಾ ಉಪ್ಪಿಟ್ಟು, ಅವಲಕ್ಕಿ, ಮೊಸರು ವಿತರಿಸಲಾಗುತ್ತದೆ.

ಭಕ್ಷ್ಯ ಸಮಾಚಾರ
– ನಿತ್ಯವೂ ಅನ್ನ- ತಿಳಿಸಾರು, ಸಾಂಬಾರು, ಚಟ್ನಿ, ಗಟ್ಟಿ ಪಲ್ಯ, ಪಾಯಸ, ಮಜ್ಜಿಗೆ
– ಕುಂಬಳಕಾಯಿ, ಚೀನಿಕಾಯಿ, ಟೊಮೇಟೊ, ಸೌತೆಕಾಯಿ, ಆಲೂಗಡ್ಡೆ, ಕೊತ್ತಂಬರಿ ಸೊಪ್ಪು… ಇಲ್ಲಿ ಹೆಚ್ಚು ಬಳಕೆಯಾಗುವ ತರಕಾರಿ.

ಎಲೆ ಊಟ ವಿಶೇಷ
ಬಾಳೆಎಲೆ ಮತ್ತು ಪತ್ರಾವಳಿ ಎಲೆಯಲ್ಲಿ ನಿತ್ಯವೂ ಊಟ. ಡಿಶ್‌ವಾಟರ್‌ ವ್ಯವಸ್ಥೆ ಇತ್ತೀಚೆಗೆ ಸಿದ್ಧಗೊಂಡಿದ್ದು, ಶೀಘ್ರವೇ ಬಟ್ಟಲು ಊಟ ಕಾರ್ಯಾರಂಭ ಆಗಲಿದೆ.

ಸಂಖ್ಯಾ ಸೋಜಿಗ
20- ನಿಮಿಷದಲ್ಲಿ ಅಡುಗೆ ರೆಡಿ
20- ಕ್ವಿಂಟಲ್‌ ಅಕ್ಕಿ ನಿತ್ಯ ಬಳಕೆ
1200- ಲೀಟರ್‌ ಸಾಂಬಾರು
600- ತೆಂಗಿನಕಾಯಿಂದ ಚಟ್ನಿ
500- 600- ಕ್ವಿಂಟಲ್‌ ತರಕಾರಿ ನಿತ್ಯ ಅವಶ್ಯ
2000- ವಿದ್ಯಾರ್ಥಿಗಳಿಗೆ ಇಲ್ಲಿಂದಲೇ ಬಿಸಿಯೂಟ
7- ಬಾಣಸಿಗರಿಂದ ಅಡುಗೆ ತಯಾರಿ
15- ಸಿಬ್ಬಂದಿಯಿಂದ ಪಾಕಶಾಲೆ ಪರಿಸರ ಸ್ವತ್ಛತೆ
250- ಲೀಟರ್‌ ಹಾಲು ನಿತ್ಯ ಬಳಕೆ
250- ಲೀಟರ್‌ ಮೊಸರು ಬಳಕೆ
48- ಸಿಬ್ಬಂದಿ ಊಟ ಬಡಿಸಲು…
20,000- ಭಕ್ತರಿಗೆ ನಿತ್ಯ ಅನ್ನಪ್ರಸಾದ
70,00,000- ಭಕ್ತರು ಕಳೆದವರ್ಷ ಭೋಜನ ಸವಿದವರು

ಕಳೆದ 14 ವರ್ಷದಿಂದ ಶುಚಿ- ರುಚಿಯಾದ ಅಡುಗೆ ತಯಾರಿ ನಡೆಸುತ್ತಿದ್ದೇವೆ. ಅನ್ನದಾನ ಮಾಡಿದಷ್ಟೇ ಪುಣ್ಯ, ಈ ಸೇವೆಯಿಂದ ದೊರಕಿದ ಸಂತೃಪ್ತಿ ನಮಗೆ ದಕ್ಕುತ್ತಿದೆ.
– ಪಿ. ಗೋವಿಂದ ಭಟ್‌, ಹಿರಿಯ ಬಾಣಸಿಗ

ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಎಷ್ಟೇ ಪ್ರಮಾಣದಲ್ಲಿ ಇದ್ದರೂ, ಎಂದೂ ಅವರಿಗೆ ಭೋಜನ ಪ್ರಸಾದಕ್ಕೆ ಕೊರತೆ ಆಗಿಲ್ಲ. ಇದು ದೇವರ ಮಹಿಮೆ. ಅಷ್ಟೊಂದು ಅಚ್ಚುಕಟ್ಟಾಗಿ ಇಲ್ಲಿ ವ್ಯವಸ್ಥೆ ಮಾಡಲಾಗಿದೆ.
– ನಿತ್ಯಾನಂದ ಮುಂಡೋಡಿ, ಅಧ್ಯಕ್ಷ, ವ್ಯವಸ್ಥಾಪನ ಸಮಿತಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.