ಮನು ಭಾಕರ್‌ ಈಗ ಶೂಟಿಂಗ್‌ ರಾಣಿ


Team Udayavani, Mar 31, 2018, 11:41 AM IST

5.jpg

“ಪದಕ ಗೆಲ್ಲುವೆನೆಂಬ ವಿಶ್ವಾಸ ನನಗೆ ಖಂಡಿತ ಇರಲಿಲ್ಲ. ಆದರೆ, ನನ್ನ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಲು ಪಣತೊಟ್ಟಿದ್ದೆ. ಆ ಪರಿಶ್ರಮದ ಫ‌ಲವೆಂಬಂತೆ ಚಿನ್ನದ ಪದಕ ಒಲಿದಿರುವುದು ಸಂತಸ ತಂದಿದೆ’ ಇತ್ತೀಚೆಗೆ ಮೆಕ್ಸಿಕೋದಲ್ಲಿ ನಡೆದ ಶೂಟಿಂಗ್‌ ವಿಶ್ವಕಪ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮನು ಭಾಕರ್‌ ಅವರ ಮನದಾಳದ ಮಾತು ಇದು. ಹರ್ಯಾಣ ಮೂಲದ ಮನುಗೆ ಈಗ 16 ವರ್ಷ. ಈಕೆ ಶೂಟಿಂಗ್‌ ವಿಶ್ವಕಪ್‌ನಲ್ಲಿ ಪದಕ ಗೆದ್ದ ಭಾರತದ ಅತ್ಯಂತ ಕಿರಿಯ ಶೂಟರ್‌ ಮತ್ತು ವಿಶ್ವದ 3ನೇ ಕಿರಿಯ ಶೂಟರ್‌.

ನಾನಾ ಕ್ರೀಡೆಯಲ್ಲಿ ಮನು
ಮನು ಅವರ ತಂದೆ ಒಬ್ಬ ಎಂಜಿನಿಯರ್‌. ಮಗಳನ್ನು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುವಾಗಿ ಮಾಡಬೇಕು ಎಂದು ಅವರು ಪಣ ತೊಟ್ಟಿದ್ದರು. ಮಗಳಿಗೆ ಇಷ್ಟ ಇರುವ ಎಲ್ಲಾ ಕ್ರೀಡೆಯಲ್ಲೂ ತೊಡಗಲು ಪ್ರೇರೇಪಿಸಿದರು. ಪರಿಣಾಮ ಬಾಕ್ಸಿಂಗ್‌, ಕರಾಟೆ, ಟೆನಿಸ್‌, ಸ್ಕೇಟಿಂಗ್‌… ಹೀಗೆ ನಾನಾ ಕ್ರೀಡೆಯಲ್ಲಿ ಮನು ತೊಡಗಿದ್ದರು. ಸ್ಕೇಟಿಂಗ್‌, ಬಾಕ್ಸಿಂಗ್‌, ಕರಾಟೆಯಲ್ಲಿ ಈಕೆ ರಾಷ್ಟ್ರೀಯ ಪದಕ ಗೆದ್ದಿದ್ದಾರೆ.

2 ವರ್ಷದಲ್ಲಿಯೇ ಚಿನ್ನದ ಬೇಟೆ
9ನೇ ತರಗತಿಯಲ್ಲಿದ್ದಾಗ ಶೂಟರ್‌ ಆಗಬೇಕೆಂದು ಮನು ಕನಸು ಕಂಡರು. ತನ್ನ ಬಯಕೆಯನ್ನು ತಂದೆಯಲ್ಲಿ ಹೇಳಿಕೊಂಡರು. ಶೂಟಿಂಗ್‌ ಅಕಾಡೆಮಿಗೆ ಸೇರಿ ಸತತ ಅಭ್ಯಾಸದಲ್ಲಿ ತೊಡಗಿಸಿಕೊಂಡರು. ಇತರೆ ಕ್ರೀಡೆಗಳತ್ತ ದೃಷ್ಟಿ ಹರಿಸುವುದನ್ನು ಕಡಿಮೆ ಮಾಡಿದ್ದರು. ಬಹುಪಾಲು ಸಮಯವನ್ನು ಶೂಟಿಂಗ್‌ ಅಕಾಡೆಮಿಯಲ್ಲಿಯೇ ಕಳೆಯುತ್ತಿದ್ದರು. ಶೂಟಿಂಗ್‌ ಮೇಲಿರುವ ಆಕೆಯ ಪ್ರೀತಿಗೆ, ಶ್ರದ್ಧೆಯಿಂದ ನಡೆಸಿದ ಅಭ್ಯಾಸಕ್ಕೆ 2017ರಲ್ಲಿಯೇ ಫ‌ಲಸಿಕ್ಕಿತು. ಅಂದರೆ, ಅಭ್ಯಾಸ ಅರಂಭಿಸಿದ ಒಂದೇ ವರ್ಷದಲ್ಲಿ ರಾಷ್ಟ್ರೀಯ ಪದಕ ಲಭಿಸಿತು. 2017ರಲ್ಲಿ ಕೇರಳದಲ್ಲಿ ನಡೆದ ರಾಷ್ಟ್ರೀಯ ಗೇಮ್ಸ್‌ನಲ್ಲಿ ಮನು ಚಿನ್ನದ ಪದಕ ಗೆದ್ದರು. ಹೀನಾ ಸಿಧು ಹೆಸರಲ್ಲಿದ್ದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡರು. 

ಹೀಗೆ, ಅಲ್ಪ ಅವಧಿಯಲ್ಲಿ ಗುರಿ ಸಾಧಿಸುತ್ತಾ ಸಾಗಿದ ಮನು 2017ರಲ್ಲಿ ನಡೆದ ಏಷ್ಯನ್‌ ಜೂನಿಯರ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದರು. 

ವಿಶ್ವಕಪ್‌ ಪದಕ
11ನೇ ತರಗತಿಯ ವಿದ್ಯಾರ್ಥಿಯಾಗಿರುವ 16 ವರ್ಷದ ಮನು, ಮೆಕ್ಸಿಕೋದಲ್ಲಿ ನಡೆದ ವಿಶ್ವಕಪ್‌ ಶೂಟಿಂಗ್‌ ಟೂರ್ನಿಯ 10 ಮೀ. ಏರ್‌ ಪಿಸ್ತೂಲ್‌ನಲ್ಲಿ ನಿಖರ ಗುರಿ ಇಡುವ ಮೂಲಕ ಚಿನ್ನ ಗೆದ್ದರು. ತಂಡ ವಿಭಾಗದಲ್ಲಿಯೂ ಚಿನ್ನದ ಬೇಟೆಯಾಡಿ ಇತಿಹಾಸ ನಿರ್ಮಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.