ನೆಲ್ಲಿ ತೀರ್ಥ ಸೋಮನಾಥೇಶ್ವರ 


Team Udayavani, Jan 27, 2018, 4:08 PM IST

199.jpg

ದಕ್ಷಿಣ ಕನ್ನಡ ಜಿಲ್ಲೆ ಹಲವಾರು ವೈಶಿಷ್ಟ್ಯಪೂರ್ಣ ದೇವಾಲಯಗಳ ಜಿಲ್ಲೆಯೆಂದೇ ಪ್ರಸಿದ್ಧಿ ಪಡೆದಿದೆ. ಇಲ್ಲಿನ ಹಲವಾರು ವೈವಿಧ್ಯಮಯ ತಾಣಗಳಲ್ಲಿ ದೇವಾಲಯಗಳನ್ನು ಕಾಣಬಹುದಾಗಿದೆ.  ಅಂತಹ ಹಲವಾರು ಪುರಾತನ ದೇವಾಲಯಗಳ ಸಾಲಿನಲ್ಲಿ ಮಂಗಳೂರು ತಾಲೂಕಿನ ಬಡಗ ಎಕ್ಕಾರು ಗ್ರಾಮದ ‘ನೆಲ್ಲಿತೀರ್ಥ’ ಸೋಮನಾಥೇಶ್ವರ ಗುಹಾ ದೇವಾಲಯವೂ ಒಂದು. ಇಲ್ಲಿ ದೇವರು ಗುಹೆಯೊಳಗೇ ನೆಲೆಗೊಂಡಿದ್ದಾನೆ. ಈ ದೇವಾಲಯವು 600 ವರ್ಷಗಳಷ್ಟು ಹಿಂದಿನವು ಎಂದು ಇಲ್ಲಿನ ಸ್ಥಳ ಪುರಾಣವು ತಿಳಿಸುತ್ತದೆ.  

    ಮಂಗಳೂರಿನಿಂದ ಸುಮಾರು 30ಕಿ.ಮೀ ದೂರದ ಹಚ್ಚ ಹಸುರಿನ ಪ್ರಕೃತಿಯ ಮಡಿಲಲ್ಲಿ ದೇವಾಲಯವಿದೆ.  ಗುಹಾ ದೇವಾಲಯವನ್ನು ಪ್ರತೀ ವರ್ಷ ತುಲಾ ಸಂಕ್ರಮಣದಂದು ತೆರೆಯಲಾಗುತ್ತದೆ. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ, ಅಂದರೆ ಮೇಷ ಸಂಕ್ರಮಣದಂದು ಸಕಲ ವಿಧಿ ವಿಧಾನಗಳೊಂದಿಗೆ ದೇವಾಲಯವನ್ನು ಮುಚ್ಚಲಾಗುತ್ತದೆ. 

 ಸರಿಸುಮಾರು ಇನ್ನೂರರಿಂದ ಇನ್ನೂರೈವತ್ತು ುàಟರ್‌ನಷ್ಟು ಉದ್ದರುವ ಈ ಗುಹೆಯೊಳಗೆ ‘ಜಾಬಾಲಿ ಮಹರ್ಷಿ’ಗಳು ಶ್ರೀದೇವಿಯನ್ನು ಒಲಿಸಿಕೊಳ್ಳಲು ಕಠಿಣ ತಪಸ್ಸನ್ನಾಚರಿಸಿದ್ದರು ಎನ್ನುತ್ತದೆ ಇತಿಹಾಸ. ಈ ಗುಹಾಲಯದೊಳಗಿರುವ ಶಿವಲಿಂಗಕ್ಕೆ ಗುಹೆಯ ಮೇಲಾºಗದಲ್ಲಿ ಕಲ್ಲುಗಳ ಸಂದಿಯಿಂದ ನೆಲ್ಲಿಕಾಯಿ ಗಾತ್ರದಲ್ಲಿ ನಿರಂತರವಾಗಿ ಹನಿ ಹನಿಯಾಗಿ ನೀರು ತೊಟ್ಟಿಕ್ಕುತ್ತದೆ. ಇದನ್ನು ‘ಅಂತರ್ಗಂಗೆ’ ತೀರ್ಥವೆಂದು ಪರಿಗಣಿಸಿ ಈ ಕ್ಷೇತ್ರಕ್ಕೆ ‘ನೆಲ್ಲಿತೀರ್ಥ’ವೆಂಬ ಹೆಸರು ಬಂದಿದೆ. ಇಲ್ಲಿ ತಪಸ್ಸನ್ನಾಚರಿಸುತ್ತಿದ್ದ ಜಾಬಾಲಿ ಮುನಿಗಳ ತಪಸ್ಸಿಗೆ ಮೆಚ್ಚಿದ ದುರ್ಗಾ ಮಾತೆಯು ಪ್ರತ್ಯಕ್ಷಳಾಗಿ ‘ಅರುಣಾಸುರ’ನೆಂಬ ರಾಕ್ಷಸನನ್ನು ಸಂಹಾರ ಮಾಡುವ ಅಭಯವನ್ನು ನೀಡಿದಳಂತೆ. “ದುಂಬಿ’ಯ ರೂಪವನ್ನು ತಾಳಿ ಅಲ್ಲೇ ಸಮೀಪದಲ್ಲಿ ಹರಿಯುತ್ತಿರುವ ‘ನಂದಿನಿ’ ನದಿಯ ತಟದಲ್ಲಿ ಅರುಣಾಸುರನನ್ನು ಸಂಹಾರ ಮಾಡಿ ಅದೇ ಸ್ಥಳದಲ್ಲಿ ದುರ್ಗೆಯು ನೆಲೆನಿಂತಳಂತೆ.  ಈ ಸ್ಥಳವೇ ಶ್ರೀ ಕ್ಷೇತ್ರ ಕಟೀಲು’ ಎಂದು ಪ್ರಸಿದ್ದವಾಗಿದೆ. ಈ ಕ್ಷೇತ್ರವು ನೆಲ್ಲಿತೀರ್ಥ ಗುಹಾ ದೇವಾಲಯದಿಂದ ಅನತಿ ದೂರದಲ್ಲೇ ಇದೆ. 

ಗುಹೆಯನ್ನು ಪ್ರವೇಶಿಸುವ ಮೊದಲು ದೇವಾಲಯದ ಸಮೀಪದಲ್ಲೇ ನೈಸರ್ಗಿಕವಾದ ‘ನಾಗಪ್ಪನ ಕೆರೆ’ಇದೆ. ಭಕ್ತರು ಇಲ್ಲಿ ಸ್ನಾನ ಮಾಡಿಯೇ ಗುಹೆಯೊಳಗೆ ಸಾಗಬೇಕೆಂಬ ನಂಬಿಕೆ ಚಾಲ್ತಿಯಲ್ಲಿದೆ. ನೆಲ್ಲಿತೀರ್ಥ ಗುಹಾ ದೇವಾಲಯವು ವರ್ಷದ ಆರು ತಿಂಗಳುಗಳ ಕಾಲ ಸಂಪೂರ್ಣ ಮುಚ್ಚಿದ ಸ್ಥಿತಿಯಲ್ಲೇ ಇರುವುದರಿಂದ ಈ ಅವಧಿಯಲ್ಲಿ ಯಾವುದೇ ಪೂಜೆಗಳು ನಡೆಯುವುದಿಲ್ಲ. 

 ಭಗವಾನ್‌ ಈಶ್ವರ (ಶ್ರೀ ಸೋಮನಾಥೇಶ್ವರ) ಈ ದೇವಾಲಯದ ಮುಖ್ಯ ದೇವರಾಗಿದ್ದು, ಪಕ್ಕದಲ್ಲಿ ‘ಮಹಾಗಣಪತಿ’ ಮತ್ತು ‘ಜಾಬಾಲಿ ಮಹರ್ಷಿ’ಯ ಗುಡಿಗಳು ಇವೆ.  ಇದರ ಜೊತೆಯಲ್ಲಿ ದೇವಾಲಯದ ಪಕ್ಕದಲ್ಲೇ ಪ್ರಮುಖ ದೈವಗಳಾದ ಪಿಲಿಚಾಮುಂಡಿ (ಪಿಲಿ ಎಂದರೆ ಹುಲಿ), ರಕ್ತೇಶ್ವರಿ, ಧೂಮಾವತಿ ಮತ್ತು ಕ್ಷೇತ್ರಪಾಲಕರ ದೇವಾಲಯವಿದೆ.  ಈ ದೇವಾಲಯದ ಆಡಳಿತವು ತುಳುನಾಡಿನ ಪ್ರಮುಖ ಮನೆತನಗಳಲ್ಲೊಂದಾದ ‘ಚೌಟ’ ಮನೆತನದ ಸುಪರ್ದಿಯಲ್ಲಿದೆ. 

    ಈ ಪವಿತ್ರ ಸ್ಥಳವು ಬಜ್ಪೆ ವಿಮಾನ ನಿಲ್ದಾಣಕ್ಕೆ ಅತ್ಯಂತ ಸನಿಹದಲ್ಲಿದೆ. ಮಂಗಳೂರಿನಿಂದ ಮೂಡಬಿದರೆ ರಸ್ತೆಯಲ್ಲಿ ಚಲಿಸುತ್ತಾ ಎಡಪದನಲ್ಲಿ ಎಡಗಡೆ ತಿರುಗಿ 8 ಕಿ.ಮೀ.ಸಾಗಿಯೂ ಈ ದೇವಾಲಯವನ್ನು ತಲುಪಬಹುದು. ಅದೇ ರೀತಿ ಬಜ್ಪೆಯಿಂದ ಕತ್ತಲ್‌ಸರ್‌ ರಸ್ತೆಯ ಮೂಲಕವೂ ಇಲ್ಲಿಗೆ ಬರಬಹುದು. 

ಸಂತೋಷ್‌ ರಾವ್‌ ಪೆರ್ಮುಡ 

ಟಾಪ್ ನ್ಯೂಸ್

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.