ಹಳೇ ಬ್ಯಾಟು ಹಳೇ ಚೆಂಡು


Team Udayavani, Feb 1, 2020, 6:01 AM IST

haaalebaaat

ಅಪ್ಪ-ಅಮ್ಮನಿಗೆ ನಮಸ್ಕಾರ ಮಾಡಿ…
ಟೆಸ್ಟ್‌, ಏಕದಿನ ಅಥವಾ ಟಿ20… ಈ ಯಾವುದೇ ಮಾದರಿಯ ಪಂದ್ಯಗಳನ್ನು ಆಡುವ ಮೊದಲು ಎಲ್ಲ ಆಟಗಾರರೂ ಒಂದು ಅಥವಾ ಎರಡುದಿನ ಅಭ್ಯಾಸ ಮಾಡುತ್ತಾರೆ. ಈ ಸಂದರ್ಭದಲ್ಲಿ , ಹೆಸರಾಂತ ಆಟಗಾರರಿಗೆ ಬೌಲಿಂಗ್‌ ಮಾಡಲು, ಮೈದಾನದ ಅಂಚಿಗೆ ಬಿದ್ದ ಚೆಂಡನ್ನು ಹಿಡಿಯಲು ರಣಜಿ ಕ್ರಿಕೆಟ್‌ನಂತಹ ಕೂಟಗಳಲ್ಲಿ ಪಾಲ್ಗೊಂಡ ಕಿರಿಯರಿಗೆ ಅವಕಾಶ ಸಿಗುತ್ತದೆ. ನೆಟ್‌ ಅಭ್ಯಾಸ ಎಂದು ಕರೆಸಿಕೊಳ್ಳುವ ಈ ಆಟದ ಸಂದರ್ಭದಲ್ಲಿ ಆಟಗಾರರನ್ನು ಮಾತನಾಡಿಸುವ, ಅವರೊಂದಿಗೆ ಚಿತ್ರ ತೆಗೆಸಿಕೊಳ್ಳುವ ಅದೃಷ್ಟವೂ ಕೆಲವರಿಗೆ ಸಿಗುತ್ತದೆ. ಅಂಥದೇ ಒಂದು ಸಂದರ್ಭ. 2010ರ ಐಪಿಎಲ್‌ ಪಂದ್ಯಾವಳಿ ಸಂದರ್ಭದಲ್ಲಿ ಮುಂಬೈನ ಬಾಂದ್ರಾ ಕುರ್ಲಾ ಮೈದಾನದಲ್ಲಿ ನೆಟ್‌ ಅಭ್ಯಾಸ ನಡೆದಿತ್ತು.

ಅಲ್ಲಿದ್ದ ಸಚಿನ್‌ ತೆಂಡುಲ್ಕರ್‌ ಅವರ ಹಸ್ತಾಕ್ಷರ ಪಡೆಯಲು, ಅವರ ಕೈಕುಲುಕಿ ಸಂಭ್ರಮಿಸಲು ಸಾಕಷ್ಟು ಮಕ್ಕಳು ಸೇರಿದ್ದರು. ಕಡೆಗೊಮ್ಮೆ ಅಭ್ಯಾಸ ಮುಗಿಯುತ್ತಿದ್ದಂತೆಯೇ, ಮಕ್ಕಳೆಲ್ಲ ತೆಂಡುಲ್ಕರ್‌ರನ್ನು ಸುತ್ತುವರಿದರು. ಕೆಲವರು ಹಸ್ತಾಕ್ಷರ ಪಡೆದರು. ಈ ಮಧ್ಯೆಯೇ, ತೆಂಡುಲ್ಕರ್‌ ಬಗ್ಗೆ ಅಪಾರ ಅಭಿಮಾನ ಹೊಂದಿದ್ದ ಬಾಲಕನೊಬ್ಬ ಅವರ ಕಾಲಿಗೆ ಬೀಳಲು ಮುಂದಾದ. ತಕ್ಷಣ ಆತನನ್ನು ತಡೆದ ತೆಂಡುಲ್ಕರ್‌ ಹೇಳಿದ್ದು: “ಹಾಗೆಲ್ಲ, ಯಾರ ಕಾಲಿಗೂ ಬೀಳಬಾರದು. ಕಾಲಿಗೆ ಬೀಳಲೇಬೇಕು ಅಂದರೆ, ಮನೆಗೆ ಹೋಗಿ, ಅಲ್ಲಿರುವ ತಾಯಿತಂದೆಯ ಕಾಲು ಮುಟ್ಟಿ ನಮಸ್ಕರಿಸಿ. ಹೆತ್ತವರಿಗಿಂತ ದೊಡ್ಡವರು, ಅವರಿಗಿಂತ ಶ್ರೇಷ್ಠರು ಈ ಜಗತ್ತಿನಲ್ಲಿ ಯಾರೂ ಇಲ್ಲ…’

ನೀವು ಬರೆದ್ರೇ ಚೆನ್ನಾಗಿರುತ್ತೆ ಸರ್‌…
ಮಿಸ್ಟರ್‌ ಡಿಪೆಂಡೆಬಲ್‌ ಅನಿಸಿಕೊಂಡಾತ ರಾಹುಲ್‌ ದ್ರಾವಿಡ್‌. ಖ್ಯಾತಿಯ ಶಿಖರವೇರಿದ ನಂತರವೂ ತನ್ನ ವಿನಯದ ಮಾತುಗಳಿಂದಲೇ ಎಲ್ಲರಿಗೂ ಇಷ್ಟವಾದದ್ದು ದ್ರಾವಿಡ್‌ ಅವರ ಹೆಚ್ಚುಗಾರಿಕೆ. ಅವರ ಸರಳತೆ, ಸೌಜನ್ಯಕ್ಕೆ ಸಾಕ್ಷಿಯಾಗುವ ಪ್ರಸಂಗವೊಂದು ಹೀಗಿದೆ: ದ್ರಾವಿಡ್‌ ಓದಿದ್ದು ಬೆಂಗಳೂರಿನ ಸೇಂಟ್‌ ಜೋಸೆಫ್ ಶಾಲೆ, ಕಾಲೇಜಿನಲ್ಲಿ. ಚಿಕ್ಕಂದಿನಿಂದಲೂ ಅವರಿಗೆ ಕ್ರಿಕೆಟ್‌ನಲ್ಲಿ ಆಸಕ್ತಿಯಿತ್ತು. ಶಾಲೆ-ಕಾಲೇಜಿನಲ್ಲಿದ್ದಾಗ, ಕ್ರಿಕೆಟ್‌ನಲ್ಲಿ ಗೆದ್ದಾಗಲೆಲ್ಲ ಒಂದು ಚಿತ್ರ ಮತ್ತು ವರದಿಯೊಂದಿಗೆ ಇಂಡಿಯನ್‌ ಎಕ್ಸ್‌ಪ್ರೆಸ್‌ ಕಚೇರಿಗೆ ಹೋಗುತ್ತಿದ್ದರು ದ್ರಾವಿಡ್‌. ಅಲ್ಲಿದ್ದ ಹಿರಿಯ ಕ್ರೀಡಾ ವರದಿಗಾರ ವೇದಂ ಜೈಶಂಕರ್‌ ಅವರ ಎದುರು ನಿಂತು-“ಸರ್‌, ನಿನ್ನೆ ಟೂರ್ನಮೆಂಟ್‌ ಇತ್ತು. ನಾವೇ ಗೆದ್ದಿದ್ದು. ದಯವಿಟ್ಟು ಈ ಸುದ್ದಿಯನ್ನು ನಾಳಿನ ಪತ್ರಿಕೆಯಲ್ಲಿ ಪ್ರಕಟಿಸಿ’ ಎನ್ನುತ್ತಿದ್ದರು. ವೇದಂ, “ಆಯ್ತಪ್ಪ ಹಾಕ್ತೇನೆ. ಆದ್ರೆ ಒಂದು ಷರತ್ತು.

ಎಲ್ಲ ಪಂದ್ಯಗಳಲ್ಲೂ ನೀನು ಚೆನ್ನಾಗಿ ಆಡಬೇಕು’ ಎನ್ನುತ್ತಿದ್ದ­ರಂತೆ. ಆನಂತರದಲ್ಲಿ ಪದೇಪದೇ ಕ್ರೀಡಾಸುದ್ದಿ­ಯೊಂದಿಗೆ ದ್ರಾವಿಡ್‌, ಎಕ್ಸ್‌ ಪ್ರಸ್‌ ಬಿಲ್ಡಿಂಗಿನ ಮೆಟ್ಟಿಲೇರು­ವುದು, ವೇದಂ ಜೈಶಂಕರ್‌ ಅವರ ಮೆಚ್ಚುಗೆಗೆ ಪಾತ್ರನಾಗು­ವುದು ಮಾಮೂಲಾ­ಯಿತು. ಹೀಗೇ ಹತ್ತುವರ್ಷ ಕಳೆದಾಗ, ದ್ರಾವಿಡ್‌ ಕ್ರಿಕೆಟ್‌ ಅಂಗಳದ ದಂತಕಥೆ ಅನ್ನಿಸಿಕೊಂಡರು. ದಾಖಲೆಗಳ ವೀರನಾದರು. ದ ವಾಲ್‌ ಅನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಆಗಲೇ ಅವರ ಬದುಕಿನ ಕಥೆ ಬರೆಯಲು ಕ್ರೀಡಾಪತ್ರಕರ್ತರು ಸಾಲುಗಟ್ಟಿ ನಿಂತರು. ನಿಮ್ಮ ಕಥೆ ಬರೆಯಲು ಅವಕಾಶ ಕೊಡಿ ಸರ್‌ ಎಂದು ಕೇಳಿಕೊಂಡರು. ಆಗ ದ್ರಾವಿಡ್‌ ಏನು ಮಾಡಿದರು ಗೊತ್ತೇ? ಸೀದಾ ವೇದಂ ಜೈಶಂಕರ್‌ ಬಳಿಗೆ ಬಂದು, ಸರ್‌ ನನ್ನನ್ನು ತುಂಬಾ ಹತ್ತಿರದಿಂದ ಕಂಡಿರುವುದು ನೀವೇ. ನನ್ನ ಕಥೆಯನ್ನು ನೀವೇ ಬರೆಯಿರಿ, ಆಗ ಮಾತ್ರ ಅದು ಚೆನ್ನಾಗಿರುತ್ತೆ ಅಂದರು! ವೇದಂ ಬರೆದಿರುವ ಪುಸ್ತಕ, ನಾಲ್ಕು ಭಾಷೆಗಳಿಗೆ ಅನುವಾದವಾಗಿದೆ!

ಟಾಪ್ ನ್ಯೂಸ್

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.