ಪದ್ಮಪುರಸ್ಕೃತ ಶೇಖರ್‌ ನಾಯ್ಕ್ ಇಂದಿಗೂ ನಿರುದ್ಯೋಗಿ!


Team Udayavani, Feb 4, 2017, 10:16 AM IST

5.jpg

“ಒಂದು ಕಡೆ ಪದ್ಮಶ್ರೀ ಗೌರವ ಬಂದಿರುವ ಖುಷಿ. ಮತ್ತೂಂಡೆದೆ ಹೊಟ್ಟೆ ತುಂಬಿಸಿಕೊಳ್ಳಲು ಒಂದು ಉದ್ಯೋಗವಿಲ್ಲ ಅನ್ನುವ ಬೇಸರ’ ಇದು ಭಾರತ ಅಂಧರ ಕ್ರಿಕೆಟ್‌ ತಂಡದ ಮಾಜಿ ನಾಯಕ ಶೇಖರ್‌ ನಾಯ್ಕ್ ವಿಷಾದದ ನುಡಿ.

ಶೇಖರ್‌ ನಾಯ್ಕ ಮೂಲತಃ ಶಿವಮೊಗ್ಗದವರು. ಇವರಿಗೆ ಬಾಲ್ಯದಲ್ಲಿಯೇ ಅಂಧತ್ವ ಬಂದಿದೆ. ಸ್ವಲ್ಪ ಪ್ರಮಾಣದಲ್ಲಿ ಮಾತ್ರ ಕಣ್ಣುಗಳು ಕಾಣಿಸುತ್ತದೆ. ಶಾಲೆಗೆ ಹೋಗುತ್ತಿರುವಾಗಲೇ ಕ್ರಿಕೆಟ್‌ನಲ್ಲಿ ಆಸಕ್ತಿ ಬೆಳೆಸಿಕೊಂಡು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರ ನಾಯಕತ್ವದಲ್ಲಿ ಭಾರತ ಅಂಧರ ತಂಡ ವಿಶ್ವಕಪ್‌ ಗೆದ್ದಿದೆ. ಈ ಸೇವೆಯನ್ನು ಪರಿಣಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ನೀಡಿ ಗೌರವಿಸಿದೆ. ಆದರೆ ಉದ್ಯೋಗವಿಲ್ಲ ಅನ್ನುವ ನೋವು ಮಾತ್ರ ಶೇಖರ್‌ ಅವರನ್ನು ಬಿಟ್ಟಿಲ್ಲ.

ಕ್ರಿಕೆಟ್‌ನಲ್ಲಿ ಇಷ್ಟು ಸಾಧನೆ ಮಾಡಿದಾಗ್ಯೂ ಸರ್ಕಾರ ತನಗೆ ಒಂದು ಉದ್ಯೋಗ ಕೊಟ್ಟಿಲ್ಲ. ಪದ್ಮಶ್ರೀ ಬಂದಿರುವುದು ನಿಜಕ್ಕೂ ಖುಷಿಯ ಸಂಗತಿ. ಆದರೆ ಪ್ರಶಸ್ತಿಯಿಂದಲೇ ಹೊಟ್ಟೆ ತುಂಬುವುದಿಲ್ಲವಲ್ಲ. ಜೀವನದಲ್ಲಿ ಆರ್ಥಿಕ ಭದ್ರತೆ ಬೇಕು ಅನ್ನುವುದು ಶೇಖರ್‌ ಮಾತು.

ಶೇಖರ್‌ 2012 ರಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಆನಂತರ ರೈಲ್ವೆ, ಬ್ಯಾಂಕಿಂಗ್‌ ಸೇರಿದಂತೆ ಅನೇಕ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆದಿದ್ದಾರೆ. ಆದರೆ ಎಲ್ಲಿಯೂ ಅದೃಷ್ಟ ಕೈಹಿಡಿದಿಲ್ಲ. ನ್ಪೋರ್ಟ್ಸ್ ಕೋಟಾದಲ್ಲಿಯೂ ಅವಕಾಶ ಸಿಕ್ಕಿಲ್ಲ!

ಸದ್ಯ ಪ್ರಾರ್ಥನಮ್‌ ಟ್ರಸ್ಟ್‌ ಫಾರ್‌ ಡಿಸೆಬಲ್‌ ಸಂಸ್ಥೆಯಲ್ಲಿ ನ್ಪೋರ್ಟ್ಸ್ ಕೋ-ಆರ್ಡಿನೇಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲಿ ಸಿಗುವ ಅಲ್ಪಸ್ವಲ್ಪ ಸಂಬಳ ಮತ್ತು ಕ್ರಿಕೆಟ್‌ನಿಂದ ಬಂದ ಸ್ವಲ್ಪ ಆದಾಯದಲ್ಲಿಯೇ ಜೀವನ ಸಾಗಿಸಬೇಕಾಗಿದೆ.

ಶೇಖರ್‌ ಪತ್ನಿ ಗೃಹಿಣಿಯಾಗಿದ್ದು, ಬೇರೆ ಕೆಲಸ ಮಾಡುತ್ತಿಲ್ಲ. ಇಬ್ಬರು ಮಕ್ಕಳಿದ್ದಾರೆ. ಹೀಗಾಗಿ ಸಂಸಾರ ನಿಭಾಯಿಸಲು ಸರಿಯಾದ ಉದ್ಯೋ ಗಬೇಕಿದೆ. ಸರ್ಕಾರ ನನಗೊಂದು ಉದ್ಯೋಗ ನೀಡಿದರೆ ನಿಜಕ್ಕೂ ನನ್ನ ಜೀವನ ಗಟ್ಟಿಯಾಗುತ್ತದೆ ಎಂಬುದೇ ಅವರ ಅಳಲು.

ಶೇಖರ್‌ 2012ರಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಆನಂತರ ರೈಲ್ವೆ, ಬ್ಯಾಂಕಿಂಗ್‌ ಸೇರಿದಂತೆ ಅನೇಕ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆದಿದ್ದಾರೆ. ಆದರೆ ಎಲ್ಲಿಯೂ ಅದೃಷ್ಟ ಕೈಹಿಡಿದಿಲ್ಲ. ನ್ಪೋರ್ಟ್ಸ್ ಕೋಟಾದಲ್ಲಿಯೂ ಅವಕಾಶ ಸಿಕ್ಕಿಲ್ಲ !

ಗೋಪಾಲ್‌ ಯಡಗೆರೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.