ಮೊದಲ ಗುರಿಯೇ ಕೊನೆಯದೂ ಆಗಿದೆ!


Team Udayavani, May 25, 2021, 3:06 PM IST

ಮೊದಲ ಗುರಿಯೇ ಕೊನೆಯದೂ ಆಗಿದೆ!

ನಮ್ಮಲ್ಲಿ ಹೆಚ್ಚಿನವರಿಗೆ ಇಚ್ಛಾಶಕ್ತಿಯ ಕೊರತೆ. ಅಂದರೆ ಅವರಿಗೆಲ್ಲಾ ಬದುಕಿನಲ್ಲಿ ಸೆಟ್ಲ ಆಗಬೇಕು ಅನ್ನುವ ಆಸೆ ಇರುತ್ತದೆ. ಆದರೆ ಭವಿಷ್ಯದಲ್ಲಿ ತಾವು ಏನಾಗಬೇಕು? ಎಂಬ ವಿಷಯದಲ್ಲಿ ಖಚಿತತೆ ಇರುವುದಿಲ್ಲ. ಒಂದೊಳ್ಳೆಯಕೆಲಸ ಹಿಡಿದು ಲೈಫ್‌ನಲ್ಲಿ ಸೆಟ್ಲ್ ಆದ್ರೆ ಸಾಕು; ಆಮೇಲೆ ಹೇಗೋ ಬದುಕಿದರಾಯ್ತು. ಹುಟ್ಟಿಸಿದ ದೇವರು ಹುಲ್ಲು ಮೇಯಿಸೋದಿಲ್ಲ

ಅಲ್ಲವಾ?- ಅಂದುಬಿಡುವ ಜನರೇ ಜಾಸ್ತಿ. ಉಹೂಂ, ಹಾಗಾಗಬಾರದು. ಭವಿಷ್ಯದಲ್ಲಿ ಏನಾಗಬೇಕು ಎಂಬ ವಿಷಯದಲ್ಲಿ ನಮಗೆ ಒಂದು ಸ್ಪಷ್ಟತೆ ಇರಬೇಕು. ನಾನು ಭವಿಷ್ಯದಲ್ಲಿ ಶಿಕ್ಷಕ ನಾಗಬೇಕು, ಇಂಜಿನಿಯರ್‌ ಆಗಬೇಕು, ಅಧಿಕಾರಿಯಾಗಬೇಕು, ಸೈನಿಕನಾಗಬೇಕು, ವೈದ್ಯನಾಗ ಬೇಕು, ವರ್ತಕನಾಗಬೇಕು… ಹೀಗೆ. ಇಂಥದೊಂದು ಪ್ಲಾನ್‌ ಇಲ್ಲದೇ ಬದುಕಿದಾಗ, ಪಾಲಿಗೆ ಬಂದದ್ದೇ ಪಂಚಾಮೃತ ಎಂದು ಬಾಳಬೇಕಾಗುತ್ತದೆ.

ನೆಪೋಲಿಯನ್‌ನ ಹೆಸರು ಎಲ್ಲರಿಗೂ ಗೊತ್ತು. ಅವನನ್ನು ಕುರಿತು ಹೀಗೊಂದು ಕಥೆಯಿದೆ: ಆಗಿನ್ನೂ ನೆಪೋಲಿಯನ್‌ ಬಾಲಕ. ಮಿಲಿಟರಿ ಶಿಕ್ಷಣ ಪಡೆಯುತ್ತಿದ್ದ. ಆ ಶಾಲೆಗೆ ದೇಶದ ಸೇನಾಧಿಪತಿ ಬಂದರು. ಅವರನ್ನು ಸ್ವಾಗತಿಸಲು ವಿದ್ಯಾರ್ಥಿಗಳು ಸಾಲಾಗಿನಿಂತಿದ್ದರು. “”ಮುಂದೆ ನೀನು ಏನಾಗಲು ಬಯಸುತ್ತೀ?” ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರಿಗೂ ಹಾಕಿದರು ಸೇನಾಧಿಪತಿ. ನಾನು ಸೈನಿಕನಾಗಬಯಸುವೆ, ಜನರಲ್‌ ಆಗಬಯಸುವೆ, ಕ್ಯಾಪ್ಟನ್‌ ಆಗ ಬಯಸುವೆ… ಎಂದೆಲ್ಲಾ ವಿದ್ಯಾರ್ಥಿಗಳು ಉತ್ತರ ಕೊಟ್ಟರು. ಆಗ ಸೇನಾಧಿಪತಿಗಳು-ಅಕಸ್ಮಾತ್‌  ನೀವುಅಂದು ಕೊಂಡದ್ದುಆಗದೇ ಹೋದರೆ?- ಎಂದು ಮರು ಪ್ರಶ್ನೆ ಹಾಕುತ್ತಿದ್ದರು. ಆಗ ವಿದ್ಯಾರ್ಥಿಗಳು- “ಅಂದುಕೊಂಡಂತೆ ಆಗದಿದ್ದರೆ ಎರಡನೇ ಆಯ್ಕೆ ಯಾವುದಿದೆಯೋ ಅದರತ್ತ ಹೊರಳುತ್ತೇವೆ’ ಎನ್ನುತ್ತಿದ್ದರು. ನೆಪೋಲಿಯನ್‌ನ ಸರದಿ ಬಂತು. ಸೇನಾಧಿಪತಿಗಳು ಅವನಿಗೂ ಪ್ರಶ್ನೆ ಕೇಳಿದರು. ಆಗ ನೆಪೋಲಿಯನ್‌- “ಈ ಯೂರೋಪ್‌ ಖಂಡದ ದೊರೆಯಾಗಬೇಕು ಎಂಬುದೇ ನನ್ನ ಮಹದಾಸೆ’ ಎಂದ.

“ಅಕಸ್ಮಾತ್‌ ನೀನು ಅಂದುಕೊಂಡಂತೆ ಆಗದಿದ್ದರೆ”- ಸೇನಾಧಿಪತಿಯ ಮರುಪ್ರಶ್ನೆ. ಆಗ ನೆಪೋಲಿಯನ್‌ ಹೇಳುತ್ತಾನೆ: “ಇಲ್ಲ, ನಾನು ಅಂದು ಕೊಂಡಿದ್ದನ್ನು ಸಾಧಿಸಿಯೇ ತೀರುತ್ತೇನೆ. ಯೂರೋಪ್‌ ಖಂಡದ ದೊರೆಯಾಗಬೇಕು ಅನ್ನುವುದೇ ನನ್ನ ಮೊದಲ ಗುರಿ, ಕೊನೆಯ ಗುರಿ ಕೂಡ ಅದೇ!’

***

ಮುಂದೆ ನೆಪೋಲಿಯನ್‌ ಅಂದುಕೊಂಡಿದ್ದನ್ನು ಸಾಧಿಸಿದ. ಅದೇ ಕಾರಣಕ್ಕೆ ಹಲವರಿಗೆ ಮಾದರಿಯೂ ಆದ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

adline castelino

ವಿಶ್ವ ಸುಂದರಿ ಸುಮರಾಶಿಯಲ್ಲಿ ಕನ್ನಡದ ಕುವರಿ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.