ಬೆಂಗಳೂರಿಗೆ ಕಿರೀಟ ಪರ್ವಕಾಲ


Team Udayavani, Mar 23, 2019, 12:30 AM IST

98.jpg

ನಮ್ಮ ಬೆಂಗಳೂರಿಗೆ ವಿಶ್ವವನ್ನೇ ಆಯಾಸ್ಕಾಂತದಂತೆ ಸೆಳೆಯುವ ಶಕ್ತಿ ಇದೆ. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ ಯಾವುದೇ ಆಗಿರಲಿ ನಮ್ಮವರು ನೀಡಿದ ಕೊಡುಗೆ ಅಪಾರ. ಅದರಲ್ಲೂ ಕ್ರೀಡಾ ಕ್ಷೇತ್ರದಲ್ಲಿ ರಾಜ್ಯದ ಅನೇಕ ಸಾಧಕರು ಮಿಂಚಿದ್ದಾರೆ. ಹಲವಾರು ದಾಖಲೆ ಬರೆದು ನಾಡಿನ ಹೆಸರನ್ನು ಪ್ರಪಂಚದ ಉದ್ದಗಲದಲ್ಲೂ ಬೆಳಗಿದ್ದಾರೆ. ಇತಿಹಾಸ ಪುಟಗಳಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಈಗಲೂ ಕೂಡ ಅಂತಹ ಅನೇಕ ಸಾಧನೆ ನಮ್ಮಿಂದ ಹೊರಹೊಮ್ಮುತ್ತಿದೆ. ಅದಕ್ಕೊಂದು ಪ್ರತ್ಯಕ್ಷ ಉದಾಹರಣೆ ಇತ್ತೀಚೆಗೆ ಬೆಂಗಳೂರಿನ ತಂಡಗಳು ವಿಶ್ವವನ್ನೇ ತನ್ನತ್ತ ತಿರುಗಿ ನೋಡುವಂತೆ ಮಾಡಿರುವುದು. 

ಹೌದು… ಪ್ರೊ ಕಬಡ್ಡಿಯಲ್ಲಿ ಬೆಂಗಳೂರು ಬುಲ್ಸ್‌, ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಲೀಗ್‌ (ಪಿಬಿಎಲ್‌)ನಲ್ಲಿ ಬೆಂಗಳೂರು ರ್ಯಾಪ್ಟರ್ ಹಾಗೂ ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಫ‌ುಟ್‌ಬಾಲ್‌ನಲ್ಲಿ ಬೆಂಗಳೂರು ಫ‌ುಟ್‌ಬಾಲ್‌ ಕ್ಲಬ್‌ (ಬಿಎಫ್ಸಿ) ತಂಡಗಳು ಕ್ರಮವಾಗಿ ಚಾಂಪಿಯನ್‌ ಆಗಿ ಮರೆದಿವೆ. ವಿಶೇಷವೆಂದರೆ ಕಳೆದ 1 ವರ್ಷದ ಅವಧಿಯಲ್ಲಿಯೇ ಈ ಮೂರೂ ಪ್ರಶಸ್ತಿಗಳು ಬೆಂಗಳೂರು ತಂಡಗಳಿಗೆ ಒಲಿದು ಬಂದಿವೆ. ಒಂದು ರೀತಿಯಲ್ಲಿ ನೋಡುವುದಾದರೆ ಒಟ್ಟಾರೆ ಎಲ್ಲ ಬೆಳವಣಿಗೆಯನ್ನು ಬೆಂಗಳೂರಿಗೆ ಕಿರೀಟ ಪರ್ವಕಾಲ ಎಂದು ಬಣ್ಣಿಸಿದರೆ ಅತಿಶಯೋಕ್ತಿಯಾಗಲಾರದು. 

ಹಲವು ಸವಾಲು, ಕಷ್ಟನಷ್ಟ ಮೆಟ್ಟಿ ನಿಲ್ಲುವ ಛಲ ಆಟಗಾರರಲ್ಲಿದೆ. ಏನೇ ಬಂದರೂ ಧೈರ್ಯದಿಂದ ಎದುರಿಸುವ ಗುಣದ ಪರಿಣಾಮವಾಗಿಯೇ ಇಂದು ಮೂರೂ ತಂಡಗಳು ಟ್ರೋಫಿ ಎತ್ತಿ ಹಿಡಿದಿವೆ. ತಮ್ಮನ್ನೇ ನಂಬಿರುವ ಫ್ರಾಂಚೈಸಿ, ಅಭಿಮಾನಿಗಳ ಉತ್ಕಟ ಬಯಕೆಯನ್ನು ಕೊನೆಗೂ ಸುಳ್ಳಾಗಿಸದೆ ಬೆಂಗಳೂರು ತಂಡಗಳು ಪ್ರಶಂಸೆಗೆ ಪಾತ್ರವಾಗಿವೆ. ಪ್ರೊ ಕಬಡ್ಡಿಯಲ್ಲಿ ಬೆಂಗಳೂರು ಸಾಗಿದ ದಾರಿ, ಬ್ಯಾಡ್ಮಿಂಟನ್‌ ಲೀಗ್‌ನಲ್ಲಿ ರ್ಯಾಪ್ಟರ್ ಮಾಡಿದ ಜಾದೂ ಹಾಗೂ ಇಂಡಿಯನ್‌ ಸೂಪರ್‌ ಲೀಗ್‌ನಲ್ಲಿ ಚೆಟ್ರಿ ಪಡೆಯ ಇತಿಹಾಸಿಕ ಸಾಧನೆ ಸ್ಮರಿಸುವಂತಹ ಒಂದು ಲೇಖನ ಇದಾಗಿದೆ. 

ಪ್ರೊ ಕಬಡ್ಡಿಯಲ್ಲಿ ಕೊನೆಗೂ ಬುಲ್ಸ್‌ ಕೈ ಹಿಡಿದ ಅದೃಷ್ಟ: 
ಪ್ರೊ ಕಬಡ್ಡಿ 5 ಆವೃತ್ತಿಗಳಾಗಿದ್ದರೂ ರೋಹಿತ್‌ ಕುಮಾರ್‌ ನೇತೃತ್ವದ  ಬೆಂಗಳೂರು ಬುಲ್ಸ್‌ ತಂಡಕ್ಕೆ ಒಮ್ಮೆಯೂ ಟ್ರೋಫಿ ಎತ್ತುವ ಭಾಗ್ಯವೇ ಸಿಕ್ಕಿರಲಿಲ್ಲ. 2014ರ ಮೊದಲ ಆವೃತ್ತಿ ಪ್ರೊ ಕಬಡ್ಡಿ ಕೂಟದಲ್ಲಿ ಬೆಂಗಳೂರು ಬುಲ್ಸ್‌ ನೀರಸ ಪ್ರದರ್ಶನ ನೀಡಿ 4ನೇ ಸ್ಥಾನಕ್ಕೆ ಸಮಾಧಾನಪಟ್ಟುಕೊಂಡಿತ್ತು. 2015ರಲ್ಲಿ ಎರಡನೇ ಆವೃತ್ತಿ ಲೀಗ್‌ನಲ್ಲಿ ಬೆಂಗಳೂರು ತಂಡ ಶ್ರೇಷ್ಠ ನಿರ್ವಹಣೆ ಮೂಲಕ ಫೈನಲ್‌ ತನಕ ತಲುಪಿತ್ತು. ಆದರೆ ಕಪ್‌ ಗೆಲ್ಲುವ ದಾರಿಯಲ್ಲಿ ಎಡವಿ ರನ್ನರ್‌ಅಪ್‌ ಆಗಿತ್ತು.  
2016ರಲ್ಲಿ ಲೀಗ್‌ನ 3ನೇ ಆವೃತ್ತಿಯಲ್ಲಿ ಬೆಂಗಳೂರು ತಂಡ ಯಾರೂ ಊಹಿಸದ ರೀತಿಯಲ್ಲಿ ಕಳಪೆ ಪ್ರದರ್ಶನ ನೀಡಿ 7ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಅದೇ ವರ್ಷ ನಡೆದ ನಾಲ್ಕನೇ ಆವೃತ್ತಿ ಲೀಗ್‌ನಲ್ಲೂ ಬೆಂಗಳೂರು 6ನೇ ಸ್ಥಾನ ಅನುಭವಿಸುವ ಮೂಲಕ ಭಾರೀ ಹಿನ್ನಡೆ ಕಂಡಿತ್ತು. ಇನ್ನು 5ನೇ ಆವೃತ್ತಿಯಲ್ಲೂ ಬೆಂಗಳೂರು ತಂಡದ ಅದೃಷ್ಟ ಬದಲಾಗಲಿಲ್ಲ.  ನಾಲ್ಕನೇ ಸ್ಥಾನ ಅನುಭವಿಸಿ ತಣ್ಣಗಾಯಿತು.
6ನೇ ಆವೃತ್ತಿಯಲ್ಲಿ ಮಾತ್ರ ಬೆಂಗಳೂರು ತಂಡ ಮೈಚಳಿ ಬಿಟ್ಟು ಆಡಿತು. ಪವನ್‌ ಸೆಹ್ರಾವತ್‌ ಪ್ರಚಂಡ ರೈಡಿಂಗ್‌, ನಾಯಕ ರೋಹಿತ್‌ ಕುಮಾರ್‌, ಕಾಶಿಲಿಂಗ್‌ ಅಡಕೆ ಬಿರುಸಿನ ರೈಡಿಂಗ್‌, ಇದೆಲ್ಲದರ ಬಲದಿಂದ ಬೆಂಗಳೂರು ತಂಡ ಯಶಸ್ವಿಯಾಗಿ ಫೈನಲ್‌ಗೆ ಪ್ರವೇಶಿಸಿತ್ತು. ಅಂತಿಮವಾಗಿ ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ ತಂಡವನ್ನೂ ಸೋಲಿಸಿ ಮೊದಲ ಬಾರಿಗೆ ಬೆಂಗಳೂರು ಪ್ರಶಸ್ತಿ ಗೆದ್ದು ಬೀಗಿತು.

ಬದಲಾದ ರ್ಯಾಪ್ಟರ್ಗೆ ಪಿಬಿಎಲ್‌ ಪ್ರಶಸ್ತಿ: ಈಗಿನ ಪಿಬಿಎಲ್‌ ಕೂಟದ ಮೊದಲನೇ ಆವೃತ್ತಿಯ ಆರಂಭದಲ್ಲಿ ಬೆಂಗಳೂರು ರ್ಯಾಪ್ಟರ್ ತಂಡದ ಹೆಸರು ಬಂಗಾ ಬೀಟ್ಸ್‌ ಎಂದಿತ್ತು. ಬಳಿಕ ಬೆಂಗಳೂರು ಟಾಪ್‌ಗ್ನ್ಸ್‌ ಎಂದೂ ಬದಲಾಯಿಸಲಾಗಿತ್ತು. ಇದೀಗ ಬದಲಾದ ಕಾಲದಲ್ಲಿ, ಹೊಸತನದ ಚಿಗುರಿನಲ್ಲಿ ಬೆಂಗಳೂರು ರ್ಯಾಪ್ಟರ್ ಎಂದು ಹೆಸರಿಡಲಾಗಿದೆ. 2013ರಲ್ಲಿ ನಡೆದಿದ್ದ ಮೊದಲ ಲೀಗ್‌ನಲ್ಲಿ ಬೆಂಗಳೂರು ತಂಡ ಹೀನಾಯ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿಯೇ ಕೊನೆಯ ಸ್ಥಾನ ಪಡೆದಿತ್ತು.  2017ರಲ್ಲೂ ಬ್ಯಾಡ್ಮಿಂಟನ್‌ ಲೀಗ್‌ 2ನೇ ಆವೃತ್ತಿಯಲ್ಲಿ ಬೆಂಗಳೂರು ತಂಡ ಮತ್ತೆ ಸೋತು ಮುಖಭಂಗ ಅನುಭವಿಸಿತ್ತು. 

2017-18ರಲ್ಲಿ ನಡೆದ ಪಿಬಿಎಲ್‌ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್‌ ತಂಡ ಫೈನಲ್‌ ತನಕ ಪ್ರವೇಶಿಸಿತ್ತು. ಆದರೆ ಅಲ್ಲಿ 4-3 ಅಂಕಗಳ ಅಂತರದಿಂದ ಹೈದರಾಬಾದ್‌ ಹಂಟರ್ ವಿರುದ್ಧ ಸೋತು ರನ್ನರ್‌ಅಪ್‌ ಆಗಿದ್ದನ್ನು ಸ್ಮರಿಸಬಹುದು. 2018-19ರ ಪಿಬಿಎಲ್‌ 4ನೇ ಆವೃತ್ತಿಯಲ್ಲಿ ಬೆಂಗಳೂರು ತಂಡ ತನ್ನ ಹೆಸರಿನ ಮುಂದೆ ಇದ್ದ ಬ್ಲಾಸ್ಟರ್ಸ್‌ ಕೈಬಿಟ್ಟು ಬೆಂಗಳೂರು ರ್ಯಾಪ್ಟರ್ ಎಂದು ಸೇರಿಸಿಕೊಂಡು ತಂಡವನ್ನು ಕಣಕ್ಕೆ ಇಳಿಸಲಾಯಿತು. ಲೀಗ್‌ ಹಂತದಲ್ಲಿ ಭರ್ಜರಿಯಾಗಿ ಸಿಡಿದ ರ್ಯಾಪ್ಟರ್ ಯಶಸ್ವಿಯಾಗಿ ಸೆಮಿಫೈನಲ್‌ಗ‌ೂ ನೆಗೆಯಿತು. ಸೆಮೀಸ್‌ನಲ್ಲಿ ಅವಧ್‌ ವಾರಿಯರ್ ತಂಡವನ್ನು 4-2 ಅಂತರದಿಂದ ಬೆಂಗಳೂರು ರ್ಯಾಪ್ಟರ್ ಸೋಲಿಸಿ ಮೊದಲ ಸಲ ಪಿಬಿಎಲ್‌ ಕಿರೀಟ ಮುಡಿಗೇರಿಸಿಕೊಂಡಿತು. 

ಐಎಸ್‌ಎಲ್‌ನಲ್ಲೂ “ನಮೆªà ಹವಾ’: 2017-18ರಿಂದ ಇಂಡಿಯನ್‌ ಸೂಪರ್‌ ಲೀಗ್‌ಗೆ ಬೆಂಗಳೂರು ಎಫ್ಸಿ ಕಾಲಿಟ್ಟಿತ್ತು. ಆಗ ಐಎಸ್‌ಎಲ್‌ ನಾಲ್ಕನೇ ಆವೃತ್ತಿಯಾಗಿತ್ತು. ಬಿಎಫ್ಸಿ ತಂಡ ಕಾಲಿಡುತ್ತಿದ್ದಂತೆ ತನ್ನ ಪರಾಕ್ರಮ ಮೆರೆಯಿತು. ಲೀಗ್‌ನಲ್ಲಿ ಅಬ್ಬರಿಸಿತು. ಗೆಲುವುಗಳನ್ನೇ ಮೆಟ್ಟಿಲಾಗಿಸಿಕೊಂಡು ಫೈನಲ್‌ಗೆ ಹೆಜ್ಜೆ ಹಾಕಿತು. ಆದರೆ ತನ್ನ ಮೊದಲ ಆವೃತ್ತಿಯ ಫೈನಲ್‌ನಲ್ಲಿ ಚೆನ್ನೈಯನ್‌ ತಂಡದ ವಿರುದ್ಧ ಆತಿಥೇಯ ಬಿಎಫ್ಸಿ 3-2 ಗೋಲುಗಳ ರೋಚಕ ಕಾಳಗದಲ್ಲಿ ಸೋತು ರನ್ನರ್‌ಅಪ್‌ ಆಗಿತ್ತು. ತವರಿನಲ್ಲಾದ ಈ ಸೋಲು ಅಕ್ಷರಶಃ ನಾಯಕ ಸುನಿಲ್‌ ಚೆಟ್ರಿ ಪಡೆಯನ್ನು ಭಾರೀ ನಿರಾಶೆಗೆ ದೂಡಿತ್ತು. 2018-19ರಲ್ಲಿ ಬೆಂಗಳೂರು ಎಫ್ಸಿ ಮತ್ತೂಮ್ಮೆ ಫೈನಲ್‌ ಪ್ರವೇಶಿಸಿತು. ಹೆಚ್ಚುವರಿ ಅವಧಿ ತನಕ ಸಾಗಿದ್ದ ರೋಚಕ ಪಂದ್ಯದಲ್ಲಿ 1-0 ಅಂತರದಿಂದ ಗೋವಾವನ್ನು ಸೋಲಿಸಿ ಮೊದಲ ಬಾರಿಗೆ ಐಎಸ್‌ಎಲ್‌ ಟ್ರೋಫಿಯನ್ನು ಬೆಂಗಳೂರು ಎಫ್ಸಿ ತನ್ನದಾಗಿಸಿಕೊಂಡಿದೆ. 

ಐಪಿಎಲ್‌ ಒಂದು ಗೆದ್ರೆ ನಾವೇ ಶೂರರು!
ಪ್ರೊ ಕಬಡ್ಡಿ, ಪಿಬಿಎಲ್‌, ಐಎಸ್‌ಎಲ್‌ ಮೂರು ಪ್ರತಿಷ್ಠಿತ ಲೀಗ್‌ ಗೆದ್ದಿರುವ ನಮಗೆ ಇನ್ನೂ ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) ಟಿ20 ಟ್ರೋಫಿ ಗೆದ್ದಿಲ್ಲ ಅನ್ನುವ ನೋವಿದೆ. ಹನ್ನೊಂದು ವರ್ಷಗಳಾದರೂ ಐಪಿಎಲ್‌ ಟ್ರೋಫಿ ನಮಗೆ ಮರೀಚಿಕೆ ಆಗಿಯೇ ಉಳಿದಿದೆ.  ಈ ಸಲ ಕಪ್‌ ನಮೆªà..ನಮೆªà ಅಂತ ಅಂದುಕೊಂಡರೂ ಪ್ರತಿ ಸಲವೂ ಆರ್‌ಸಿಬಿ (ರಾಯಲ್‌ ಚಾಲೆಂಜರ್ ಬೆಂಗಳೂರು) ಮುಗ್ಗರಿಸುವುದು ಮುಗಿಯುತ್ತಿಲ್ಲ. ಅಭಿಮಾನಿಗಳು ಹಿಡಿಶಾಪ ಹಾಕಿಕೊಂಡು ಮನೆ ಕಡೆ ನಡೆಯುವುದು ನಿಲ್ಲುತ್ತಿಲ್ಲ. ಈ ಸಲ 12ನೇ ಆವೃತ್ತಿಯಲ್ಲಿ ಆರ್‌ಸಿಬಿಗೆ ಮೊದಲ ಸಲ ಕಪ್‌ ಗೆಲ್ಲುವ ಅವಕಾಶ ಇದೆ. ಕೋಟ್ಯಂತರ ಅಭಿಮಾನಿಗಳ ಆಸೆಯನ್ನು ಪೂರೈಸುವ ಜವಾಬ್ದಾರಿ ವಿರಾಟ್‌ ಕೊಹ್ಲಿ ನೇತೃತ್ವದ ಆರ್‌ಸಿಬಿಯದ್ದಾಗಿದೆ.

ಆರ್‌ಸಿಬಿ ಪಡೆದ ಸ್ಥಾನಗಳು ಹೀಗಿವೆ: 2008-7ನೇ ಸ್ಥಾನ, 2009 ರನ್ನರ್‌ಅಪ್‌, 2010 ಪ್ಲೇಆಫ್, 2011 ರನ್ನರ್‌ಅಪ್‌, 2012 ಐದನೇ ಸ್ಥಾನ, 2013 ಐದನೇ ಸ್ಥಾನ, 2014 ಏಳನೇ ಸ್ಥಾನ, 2015 ಪ್ಲೇಆಫ್, 2016 ರನ್ನರ್‌ಅಪ್‌, 2017 ಎಂಟನೇ ಸ್ಥಾನ ಹಾಗೂ 2018 ಆರನೇ ಸ್ಥಾನ. 

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.