ಸಮಿತ್‌ ತಂದೆಗೆ ತಕ್ಕ ಮಗ


Team Udayavani, Feb 22, 2020, 6:01 AM IST

samith-varada-tare

ಅಪ್ಪ ಒಳ್ಳೆಯ ಕ್ರಿಕೆಟ್‌ ಸಾಧಕನಾಗಿದ್ದರೂ ಮಕ್ಕಳು ಕ್ರಿಕೆಟ್‌ ಜೀವನದಲ್ಲಿ ಶೂನ್ಯರಾಗಿರುವ ಅನೇಕ ಉದಾಹರಣೆಗಳಿವೆ. ಆದರೆ ಕ್ರಿಕೆಟ್‌ ದಿಗ್ಗಜ ರಾಹುಲ್‌ ದ್ರಾವಿಡ್‌ ವಿಷಯದಲ್ಲಿ ಮಾತ್ರ ಇದು ಸುಳ್ಳಾಗಲಿದೆ ಎನ್ನುವ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ರಾಹುಲ್‌ ದ್ರಾವಿಡ್‌ ಪುತ್ರ ಸಮಿತ್‌ ದ್ರಾವಿಡ್‌, ಎಳೆವೆಯಲ್ಲೇ “ತಂದೆಗೆ ತಕ್ಕ ಮಗ’ ಎನ್ನುವುದನ್ನು ಸಾಧಿಸಿ ತೋರಿಸಿದ್ದಾರೆ. ಭವಿಷ್ಯದಲ್ಲಿ ಭಾರತ ಹಿರಿಯರ ತಂಡದ ಪರ ಆಡಿ ಅಪ್ಪನ ಕನಸನ್ನು ನನಸಾಗಿಸುವ ಗುರಿ ಹೊಂದಿದ್ದಾರೆ.

ಸದ್ಯ ಸಮಿತ್‌ ಕಠಿಣ ತರಬೇತಿ ಪಡೆಯುತ್ತಿದ್ದಾರೆ. ಇದಕ್ಕೆ ಪ್ರತಿಫ‌ಲ ಎನ್ನುವಂತೆ ಸಮಿತ್‌ ಕಳೆದ ಎರಡು ತಿಂಗಳಲ್ಲಿ ಶಾಲಾ ಕೂಟದಲ್ಲಿ ಸತತ ಎರಡನೇ ದ್ವಿಶತಕ ಬಾರಿಸಿ ಗಮನ ಸೆಳೆದಿದ್ದಾರೆ. 14 ವಯೋಮಿತಿಯೊಳಗಿನ ಬಿಟಿಆರ್‌ ಶೀಲ್ಡ್‌ ಕೂಟದಲ್ಲಿ ತಮ್ಮ ಶಾಲೆ ಮಲ್ಯ ಅದಿತಿ ಅಂತಾರಾಷ್ಟ್ರೀಯ ಶಾಲಾ ತಂಡವನ್ನು ಪ್ರತಿನಿಧಿಸಿರುವ ಸಮಿತ್‌, ಶ್ರೀಕುಮಾರನ್‌ ಶಾಲೆ ವಿರುದ್ಧ 204 ರನ್‌ ಬಾರಿಸಿದ್ದಾರೆ. ಇವರ ಬ್ಯಾಟಿಂಗ್‌ನಲ್ಲಿ ಒಟ್ಟಾರೆ 33 ಬೌಂಡರಿ ಒಳಗೊಂಡಿತ್ತು.

ಇವರ ಸಾಹಸದಿಂದ ಮಲ್ಯ ಅದಿತಿ ಅಂತಾರಾಷ್ಟ್ರೀಯ ಶಾಲಾ ತಂಡ 3 ವಿಕೆಟ್‌ಗೆ 377 ರನ್‌ ಪೇರಿಸಿತ್ತು. ಈ ಗುರಿ ಬೆನ್ನಟ್ಟಿದ ಕುಮಾರನ್‌ ಶಾಲಾ ತಂಡ 110 ರನ್‌ಗೆ ಆಲೌಟಾಗಿ ಒಟ್ಟಾರೆ 267 ರನ್‌ಗಳಿಂದ ಸೋಲು ಅನುಭವಿಸಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಮಿತ್‌ ವೈಸ್‌ ಪ್ರಸಿಡೆಂಟ್‌ ಇಲೆವೆನ್‌ ತಂಡದ ಪರ 14 ವಯೋಮಿತಿ ಅಂತರ್‌ ವಲಯ ಕ್ರಿಕೆಟ್‌ ಕೂಟದಲ್ಲಿ ಧಾರವಾಡ ತಂಡದ ವಿರುದ್ಧ 201 ರನ್‌ ಸಿಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಒಟ್ಟಾರೆ ಸಮಿತ್‌ ಶ್ರೇಷ್ಠ ಕ್ರಿಕೆಟಿಗನಾಗಿ ರೂಪುಗೊಳ್ಳುವ ಹಾದಿಯಲ್ಲಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.