ಭಕ್ತರ ಕಷ್ಟ ಕಳೆಯುವ ಶೂಲದ ಆಂಜನೇಯ


Team Udayavani, Apr 20, 2019, 6:32 PM IST

Bahu-Hanuma-726

ಉದ್ದಾನ ವೀರಭದ್ರಸ್ವಾಮಿಗಳು ಈ ಆಂಜನೇಯನಿಗೆ ಲಿಂಗಧಾರಣೆ ಮಾಡಿದ್ದು, ಕೊರಳಿನಲ್ಲಿ ರುದ್ರಾಕ್ಷಿ ಮಾಲೆ ಇರುವುದು ಒಂದು ವಿಶೇಷ. ಸೊಂಟದಲ್ಲಿ ಕತ್ತಿ ಇರುವುದು ಇನ್ನೊಂದು ವಿಶೇಷ. ಕತ್ತಿ ಇಟ್ಟುಕೊಂಡಿರುವ ಹನುಮನ ಮೂರ್ತಿ ಇರುವುದು ಬಹಳ ವಿರಳವೆಂದೇ ಹೇಳಬೇಕು.

ಸಪ್ತ ಚಿರಂಜೀವಿಗಳಲ್ಲಿ ಒಬ್ಬನಾದ ಹನುಮಂತನ ನೆನೆದರೆ ಯಾವ ಕಷ್ಟ ಕಾರ್ಪಣ್ಯಗಳೂ ಕಾಡದು ಎಂದು ನಂಬಿರುವ ಕೋಟ್ಯಾನುಕೋಟಿ ಭಕ್ತರು ಇಂದೂ ಇದ್ದಾರೆ. ಹೀಗಾಗಿ, ಆಂಜನೇಯ ದೇಶದ ನಾನಾ ಕಡೆ ನಾನಾ ಹೆಸರುಗಳಿಂದ ನೆಲೆ ನಿಂತು ಭಕ್ತರನ್ನು ಪೊರೆಯುತ್ತಿದ್ದಾನೆ. ಅಂಥವುಗಳ ಪೈಕಿ ತುಮಕೂರಿನ ಗೂಳೂರಿನ ಬಳಿಯಿರುವ ಸುಮಾರು ಐನೂರು ವರ್ಷಗಳಷ್ಟು ಹಳೆಯದೆಂದು ಹೇಳಲಾಗುವ ಶೂಲದ ಆಂಜನೇಯ ದೇಗುಲವೂ ಒಂದು. ಗೂಳೂರು, ಗಣೇಶನಿಗೂ ಪ್ರಸಿದ್ದಿ, ಇದರ ಜೊತೆಗೆ ಹತ್ತಿರದಲ್ಲೇ ಇರುವ ಈ ದೇಗುಲವು ಸಹ ಹೆಸರುವಾಸಿಯಾಗಿದೆ. ಸಾವಿರಾರು ಭಕ್ತರು ಇಲ್ಲಿಗೆ ಬಂದು ತಮ್ಮ ಜೀವನದಲ್ಲಿ ಒಳಿತನ್ನು ಕಂಡಿದ್ದಾರೆ.

ಈ ದೇವಾಲಯದಲ್ಲಿರುವ ಆಂಜನೇಯ ಮೂರ್ತಿ­ಯನ್ನು ಶ್ರೀ ವ್ಯಾಸರಾಯರು ಪ್ರತಿಷ್ಠಾಪಿಸಿದ್ದಾರೆ ಎಂದು ನಂಬಲಾಗಿದೆ. ಆಂಜನೇಯನ ಹಿಂದೆ ಶೂಲ ಎನ್ನುವ ಹೆಸರು ಏಕೆ ಬಂತು ಅನ್ನೋದರ ಹಿಂದೆ ರೋಚಕ ಕಥೆಯೇ ಇದೆ. ಹಿಂದೆ ಇಲ್ಲಿ ದಟ್ಟವಾದ ಕಾಡು ಇತ್ತಂತೆ. ತಪ್ಪು ಮಾಡಿದವರಿಗೆ ಇಲ್ಲಿ ಶೂಲಕ್ಕೆ ಹಾಕುತ್ತಿದ್ದರಂತೆ. ಘೋರ ಅಪರಾಧವನ್ನು ಮಾಡಿದವರಿಗೆ ಇಲ್ಲಿ ಮರಣ­ದಂಡನೆಯನ್ನು ವಿಧಿಸುತ್ತಿದ್ದರಂತೆ. ಹೀಗೆ ಸತ್ತವರು ಪ್ರೇತಾತ್ಮಗಳಾಗಿ, ಓಡಾಡುವ ಜನರನ್ನು ಕಾಡುತ್ತಿದ್ದರು.


ಒಮ್ಮೆ ಇದೇ ಮಾರ್ಗವಾಗಿ ಪ್ರಯಾಣ ಬೆಳೆಸಿದ್ದ ವ್ಯಾಸರಾಜರು, ತಮ್ಮ ದಿವ್ಯ ದೃಷ್ಟಿಯಿಂದ ಎಲ್ಲವನ್ನೂ ಅರಿತು ಒಂದು ಒಳ್ಳೆಯ ಮುಹೂರ್ತದಲ್ಲಿ ಈ ಆಂಜನೇಯನ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೂಲಕ ದುಷ್ಟ ಶಕ್ತಿಗಳಿಂದ ಜನರಿಗೆ ಮುಕ್ತಿ ನೀಡಿದರು ಎನ್ನುವ ಐತಿಹ್ಯವಿದೆ. ಈ ಜಾಗದಲ್ಲಿ ತಪ್ಪು ಮಾಡಿದವರನ್ನು ಶೂಲಕ್ಕೆ ಹಾಕುತ್ತಿದ್ದ ಕಾರಣ, ಇಲ್ಲಿರುವ ದೇವರಿಗೆ ಶೂಲದ ಆಂಜನೇಯ ಎಂಬ ಹೆಸರು ಬಂದಿದೆಯಂತೆ.

ವಿಶಿಷ್ಟವಾಗಿದೆ ಮೂರ್ತಿ
ಸುಮಾರು ಆರು ಆಡಿ ಎತ್ತರವಿರುವ ಇಲ್ಲಿನ ಮೂರ್ತಿ ಅಭಯ ಹಸ್ತವಿರುವ ಬಲಗೈಯನ್ನು ಮೇಲಿತ್ತಿದ್ದು, ತಲೆಯ ಬಲಭಾಗದಲ್ಲಿ ಚಕ್ರ, ಎಡಭಾಗದಲ್ಲಿ ಶಂಖವಿದೆ. ಉದ್ದಾನ ವೀರಭದ್ರಸ್ವಾಮಿಗಳು ಈ ಆಂಜನೇಯನಿಗೆ ಲಿಂಗಧಾರಣೆ ಮಾಡಿದ್ದು, ಕೊರಳಿನಲ್ಲಿ ರುದ್ರಾಕ್ಷಿ ಮಾಲೆ ಇರುವುದು ಒಂದು ವಿಶೇಷ. ಇದರ ಜೊತೆಗೆ ಸೊಂಟದಲ್ಲಿ ಕತ್ತಿ ಇರುವುದು ಇನ್ನೊಂದು ವಿಶೇಷ. ಕತ್ತಿ ಇಟ್ಟುಕೊಂಡಿರುವ ಹನುಮನ ಮೂರ್ತಿ ಇರುವುದು ಬಹಳ ವಿರಳವೆಂದೇ ಹೇಳಬೇಕು. ಇಷ್ಟೇ ಅಲ್ಲದೇ ಕಾಲಿನ ಬಳಿ ಭೂತರಾಜರು ಇದ್ದು, ಇವರಿಗೆ ಇಲ್ಲಿ ಬಲಿ ಕೊಡುವ ಸಾಂಪ್ರದಾಯವೂ ಇದೆ.


ದುಷ್ಟ ಶಕ್ತಿಗಳಿಗೆ ಭಯ

ಕೆಟ್ಟಗಾಳಿ ಸೋಂಕು, ಭೂತ ಪಿಶಾಚಿಗಳ ಕಾಟ, ಮಾಟ ಮಂತ್ರಗಳ ಪ್ರಯೋಗದಿಂದ ನರಳುವವರು ಈ ದೇಗುಲಕ್ಕೆ ಬಂದು ಸೇವೆ ಮಾಡಿದರೆ ಅವುಗಳಿಂದ ಮುಕ್ತಿ ಸಿಗುತ್ತದೆ ಎಂದು ಪ್ರತೀತಿ ಇದೆ. ಹಾಗಾಗಿ, ಹುಣ್ಣಿಮೆ ಅಮಾವಾಸ್ಯೆಗಳಂದು ವಿಶೇಷ ಪೂಜೆ ಇರುತ್ತದೆ. ದುಷ್ಟ ಶಕ್ತಿಗಳಿಂದ ಮುಕ್ತಿ ಪಡೆಯಲು ಇಲ್ಲಿ ಬಂದು ಪೂಜೆ ಮಾಡುತ್ತಾರೆ. ಅಭಿಷೇಕ ಮಾಡಿದ ನೀರನ್ನು ಹಾಕಿ ಪ್ರೋಕ್ಷಣೆ ಮಾಡಿಕೊಂಡು, ದೇಗುಲವನ್ನು ಮೂರು ಸುತ್ತು ಹಾಕಿದರೆ ದುಷ್ಟ ಶಕ್ತಿಗಳು ಬಿಟ್ಟು ಹೋಗುತ್ತವೆ ಎಂಬ ನಂಬಿಕೆ ಇದೆ.

ಜಮೀನು, ಮನೆ ಖರೀದಿ, ವಿದ್ಯಾಭ್ಯಾಸ, ನಾಮಕರಣ, ಮದುವೆ-ಮುಂಜಿ ಕೆಲಸಕ್ಕಾಗಿ ಇಲ್ಲಿ ಬಂದು ಪ್ರಸಾದ ಕೇಳುವವರಿದ್ದಾರೆ. ಪ್ರಸಾದವಾದರೆ ಮಾತ್ರ ಮುಂದುವರೆಯುವ ಪರಿಪಾಠ ಇಲ್ಲಿ ಮೊದಲಿನಿಂದಲೂ ಇದೆ. ಹಾಗಾಗಿ, ರಾಜ್ಯದ ಮೂಲೆ ಮೂಲೆಗಳಿಂದ ಭಕ್ತಾದಿಗಳು ಇಲ್ಲಿಗೆ ಆಗಮಿಸುತ್ತಾರೆ.


ಇಲ್ಲಿ ಬಂದು ಭಕ್ತಿಯಿಂದ ಬೇಡಿದರೆ ಮನಸ್ಸಿನಲ್ಲಿ ಅಂದುಕೊಂಡ ಕೆಲಸ ಆಗೇ ಆಗುತ್ತದೆ ಎನ್ನುವ ನಂಬಿಕೆ ಇದೆ. ತಿರುಪತಿಗೆ ಹೋಗಿ ಬರುವ ಭಕ್ತರು ಈ ದೇವಸ್ಥಾನಕ್ಕೆ ಬಂದು ತೀರ್ಥ ಒಡೆಯುವ ಸಂಪ್ರದಾಯವಿದೆ. ರಾಮನವಮಿ, ಹನುಮಜಯಂತಿ, ಭೀಮನ ಅಮವಾಸ್ಯೆ ಹಾಗೂ ಹುಣ್ಣಿಮೆಯಂದು ಇಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಅತ್ಯಂತ ಚಿಕ್ಕದಾದ ಗರ್ಭಗುಡಿ ಇದ್ದು ಒಳಗಿರುವ ಆರಡಿ ಹನುಮನ ಮೂರ್ತಿಯೊಂದಿಗೆ ಇಬ್ಬರು ನಿಲ್ಲಲು ಮಾತ್ರ ಸ್ಥಳಾವಕಾಶವಿದೆ.

ಮಾರ್ಗ: ತುಮಕೂರಿನಿಂದ ಕುಣಿಗಲ್‌ಗೆ ಹೋಗುವ ಮಾರ್ಗದಲ್ಲಿ 12 ಕಿ.ಮೀ. ಸಾಗಿದರೆ ಪ್ರಸಿದ್ಧ ಗೂಳೂರಿನ ಬಳಿ ಶೂಲದ ಆಂಜನೇಯನ ದರ್ಶನ ಪಡೆದು ಪುನೀತರಾಗಬಹುದು.

— ಪ್ರಕಾಶ್‌.ಕೆ.ನಾಡಿಗ್‌

ಟಾಪ್ ನ್ಯೂಸ್

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.