2 ವರ್ಷದಲ್ಲಿ 5 ಚಿನ್ನ ಗೆದ್ದ ಸ್ಕೇಟಿಂಗ್‌ ಪೋರ!


Team Udayavani, Apr 14, 2018, 11:17 AM IST

1-aasas.jpg

ವ್ಯಾಯಾಮಕ್ಕೆಂದು ಸ್ಕೇಟಿಂಗ್‌ ಅಭ್ಯಾಸ ಆರಂಭಿಸಿದ ನಾಲ್ಕು ವರ್ಷದ ಪೋರ ಕೇವಲ ಎರಡೇ ವರ್ಷದಲ್ಲಿ 5 ಚಿನ್ನದ ಪದಕ ಕೊರಳಿಗೇರಿಸಿಕೊಳ್ಳುವ ಮೂಲಕ ಕ್ರೀಡಾಲೋಕದಲ್ಲಿ ಭರವಸೆಯ ಬೆಳಕಾಗುತ್ತಿದ್ದಾನೆ. ಯುಕೆಜಿ ವಿದ್ಯಾರ್ಥಿಯೊಬ್ಬನ ಈ ಕಿರು ಅವಧಿಯ ಹಿರಿ ಸಾಧನೆ ಬೆರಗಾಗಿಸುವಂತಿದೆ.

ಕುಂದಾಪುರದ ಯೆರುಕೋಣೆಯ ಅರುಣ್‌ ಕುಮಾರ್‌ ಶೆಟ್ಟಿ ಮತ್ತು ಶಮಿತಾ ಎ.ಶೆಟ್ಟಿ ಅವರ ಪುತ್ರ ತಕ್ಷಕ್‌ ಎ. ಶೆಟ್ಟಿ ರಾಜ್ಯಮಟ್ಟದಲ್ಲಿ ಪದಕಗಳ ಸರಣಿ ಹಾರವಾಗಿಸುತ್ತಿದ್ದಾನೆ. 2012ರಲ್ಲಿ ಜನಿಸಿದ ತಕ್ಷಕ್‌ ಮಂಗಳೂರಿನ ಹನಿಕೋಂ ಮಾಂಟೆಸರಿ ಶಾಲೆಯ ವಿದ್ಯಾರ್ಥಿ. 1ನೇ ತರಗತಿಗೆ ಲೂರ್ಡ್ಸ್‌ ಸೆಂಟ್ರಲ್‌ ಶಾಲೆಗೆ ಸೇರ್ಪಡೆಯಾಗಿದ್ದಾನೆ.

ಐದರ ಎಳೆ ವಯಸ್ಸಿನಲ್ಲಿಯೇ ತಕ್ಷಕ್‌ಗೆ ಸ್ಕೇಟಿಂಗ್‌ನಲ್ಲಿ ಸಾಲು ಸಾಲು ಚಿನ್ನ ಸಿಕ್ಕಿದ್ದರೂ “ಇಂತಹ ಸಾಧನೆ ಮಾಡಬೇಕೆಂದು’ ಅಂದುಕೊಂಡು ಶುರು ಮಾಡಿದ್ದಲ್ಲ. ವೃತ್ತಿಯಲ್ಲಿ ಸಿವಿಲ್‌ ಎಂಜಿನಿಯರ್‌ ಆದ ಅರುಣ್‌ ಅವರು ಮಂಗಳೂರಿನಲ್ಲಿ ಕನಕಾ ಇನ್‌ಫ್ರಾಸ್ಟ್ರಕ್ಷರ್‌ ಸಂಸ್ಥೆ ನಡೆಸುತ್ತಿದ್ದಾರೆ. ಮಗನಿಗೆ “ವ್ಯಾಯಾಮ ಆಗಲಿ’ ಎಂದು 2016ರ ಮೇ ತಿಂಗಳಲ್ಲಿ ಮಂಗಳೂರಿನ ಹೈ ಫ್ಲೈಯರ್ಸ್‌ ಸ್ಕೇಟಿಂಗ್‌ ಕ್ಲಬ್‌ಗ ಸೇರಿಸಿದರು. ಅಲ್ಲಿ ಮೋಹನ್‌ದಾಸ್‌ ಕೆ. ಹಾಗೂ ಜಯರಾಜ್‌ ಮಾರ್ಗದರ್ಶನ ನೀಡಿದರು. ಬಾಲಕ ಸ್ಕೇಟಿಂಗ್‌ನ ಪಟ್ಟುಗಳನ್ನು ಕಲಿಯುತ್ತಾ ಬೆಳೆದ. ಅವನ ಆಸಕ್ತಿ ನೋಡಿದ ತರಬೇತಿದಾರರು ಅವನ ಕ್ರೀಡಾಸ್ಫೂರ್ತಿಗೆ ಇನ್ನಷ್ಟು ಪ್ರೋತ್ಸಾಹ, ನಿಖರ ತರಬೇತಿ ನೀಡಿ ಸ್ಪರ್ಧೆಗೆ ಅಣಿ ಮಾಡಿದರು.

ತರಬೇತಿ ಆರಂಭವಾಗಿ 6 ತಿಂಗಳಲ್ಲಿ ಪಣಂಬೂರಿನಲ್ಲಿ ನಡೆದ ಬೀಚ್‌ ಫೆಸ್ಟಿವಲ್‌ನಲ್ಲಿ ತೃತೀಯ ಸ್ಥಾನ ಪಡೆದ ತಕ್ಷಕ್‌, 2017ರ ಫೆಬ್ರವರಿಯಲ್ಲಿ ನಡೆದ ಪ್ರಸಿಡೆನ್ಸಿ ಇಂಟರ್‌ ಸ್ಕೂಲ್‌ ಕಾಂಪಿಟಿಷನ್‌ನಲ್ಲಿ ಮೊದಲ ಚಿನ್ನದ ಪದಕ ಪಡೆದ. ಅದೇ ವರ್ಷ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಒಳಾಂಗಣ ರಾಷೀóಯ ರೋಲರ್‌ ಸ್ಪೀಡ್‌ ಸ್ಕೇಟಿಂಗ್‌ ಸ್ಪರ್ಧೆಯಲ್ಲಿ 2 ಕಂಚಿನ ಪದಕ ಪಡೆದ. ಆಗಸ್ಟ್‌ನಲ್ಲಿ ರೋಲರ್‌ ರಿಲೇ ಸ್ಕೇಟಿಂಗ್‌ ಫೆಡರೇಶನ್‌ ಆಫ್ ಇಂಡಿಯಾದವರು ಗೋವಾದಲ್ಲಿ ನಡೆಸಿದ ಚಾಂಪಿಯನ್‌ಶಿಪ್‌ನಲ್ಲಿ 2 ಚಿನ್ನ, 1 ಕಂಚಿನ ಪದಕ ಪಡೆದ. ಬಳಿಕ ಮಂಗಳೂರಿನಲ್ಲಿ ನಡೆದ ಸ್ಪೀಡ್‌ ರೋಲರ್‌ ಸ್ಕೇಟಿಂಗ್‌ನಲ್ಲಿ 2 ಚಿನ್ನದ ಪದಕ ಹಾಗೂ ಚಾಂಪಿಯನ್‌ ಟ್ರೋಫಿ ಬಾಚಿಕೊಂಡ. ನವಂಬರ್‌ನಲ್ಲಿ ಮಂಗಳೂರಿನ ಡೋರಿಸ್‌ ಸ್ಟೇಟ್ಸ್‌ ಸಿಟಿಯಲ್ಲಿ ನಡೆದ 33ನೇ ಮುಕ್ತ ರಾಜ್ಯಮಟ್ಟದ ಸ್ಪೀಡ್‌ ರೋಲರ್‌ ಸ್ಕೇಟಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ 1 ರಜತ, 1 ಕಂಚಿನ ಪದಕ ಪಡೆದ ತಕ್ಷಕ್‌ 2018ರ ಫೆ.24ರಂದು ಮಂಗಳೂರಿನ ನೀರುಮಾರ್ಗದಲ್ಲಿ ನಡೆದ ಪ್ರಸಿಡೆನ್ಸಿ ಇಂಟರ್‌ ಸ್ಕೂಲ್‌ ಸ್ಪರ್ಧೆಯಲ್ಲಿ ರಜತ ಪದಕ ಪಡೆದಿದ್ದಾನೆ.

“ನನಗಿಂತ ಹೆಚ್ಚಾಗಿ ಅವನ ಅಮ್ಮನ ಬೆಂಬಲ ಇದೆ. ಮಗನ ಆಸಕ್ತಿಯನ್ನು ನಾನೂ ಪೋಷಿಸುತ್ತಾ ಬಂದಿದ್ದೇನೆ. ರಾಜ್ಯಮಟ್ಟದಲ್ಲಿ ವಿಜಯಿಯಾದರೂ 8 ವರ್ಷ ಪ್ರಾಯ ಆಗುವ ತನಕ ಆತನಿಗೆ ರಾಷ್ಟ್ರಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಅವಕಾಶ ಇಲ್ಲ. ಆತನನ್ನು ರಾಷ್ಟ್ರಮಟ್ಟದ ಆಟಗಾರನಾಗಿಸಬೇಕು ಎಂಬ ಹಂಬಲ ಇದೆ’

 ಅರುಣ್‌ ಶೆಟ್ಟಿ, ತಕ್ಷಕ್‌ನ ತಂದೆ

 ಲಕ್ಷ್ಮೀ  ಮಚ್ಚಿನ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.