ರಾಮದುರ್ಗದ ಶ್ರೀ ವೆಂಕಟೇಶ್ವರ ದೇವಸ್ಥಾನ


Team Udayavani, Apr 13, 2019, 6:00 AM IST

i-23

ಬೆಳಗಾವಿ ಜಿಲ್ಲೆಯಲ್ಲಿ ಹಲವಾರು ಪುಣ್ಯ ಕ್ಷೇತ್ರಗಳಿವೆ. ಪ್ರತಿಯೊಂದು ಕ್ಷೇತ್ರವು ತನ್ನದೇ ಆದ ಹಿರಿಮೆಯನ್ನು ಹೊಂದಿದೆ. ತಾಲೂಕಾ ಕೇಂದ್ರವಾದ ರಾಮದುರ್ಗದಲ್ಲೂ ಅಂಥದೊಂದು ಸ್ಥಳವಿದೆ. ಅದೇ ಮಲಪ್ರಭಾ ನದಿಯ ದಡದಲ್ಲಿರುವ ಪುರಾತನ ವೆಂಕಟೇಶ್ವರ ದೇವಾಲಯ. ಈ ಐತಿಹಾಸಿಕ ದೇವಸ್ಥಾನ ರಾಮದುರ್ಗಕ್ಕೆ ಕಳಸಪ್ರಾಯವಾಗಿದೆ.

ನರಗುಂದ ಮತ್ತು ರಾಮದುರ್ಗ ಸಂಸ್ಥಾನಗಳ ಆಡಳಿತ 1742ರಲ್ಲಿ ವಿಭಜನೆಯಾಯಿತು. ಆನಂತರ ಕೊನೆಯ ಅರಸರಾದ ರಾಜಾ ರಾಮರಾವ ವೆಂಕಟರಾವ ಭಾವೆಯವರು ಈ ದೇವಾಲಯ ನಿರ್ಮಿಸಿದರು.

ಕೊಂಕಣಸ್ಥ ಬ್ರಾಹ್ಮಣರಾದ ಭಾವೆ ರಾಜ ಮನೆತನದ ಕುಲದೇವತೆ ಮತ್ತು ರಾಜಲಾಂಛನವು ವೆಂಕಟೇಶ್ವರ ಆಗಿತ್ತು. ರಾಜಾ ರಾಮರಾವ್‌ ಅವರು ವೆಂಕಟೇಶ್ವರ ದೇವರ ಭಕ್ತರಾಗಿದ್ದರಿಂದ ರಾಮನವಮಿಯಂದು ಉಪವಾಸವಿದ್ದು, ಮರುದಿನ ರಾಮನ ಮೂರ್ತಿಗೆ ವೆಂಕಟೇಶ್ವರ ವೇಷಭೂಷಣದಿಂದ ಅಲಂಕರಿಸಿ ವಿಜೃಂಭಣೆಯಿಂದ ರಥೋತ್ಸವವನ್ನು ಪ್ರಾರಂಭಿಸಿ, ತರುವಾಯವೇ ಪ್ರಸಾದ ಸೇವಿಸುತ್ತಿದ್ದರು ಎಂಬುದು ಪ್ರತೀತಿ.

ದೇವಸ್ಥಾನದ ಒಳಭಾಗವು 28 ಕಂಬಗಳನ್ನು ಹೊಂದಿದ ಬೃಹತ್‌ ಪ್ರಾಂಗಣವಾಗಿದೆ. ಇದರ ಸುತ್ತಲೂ ಇರುವ ಕಂಬಗಳು ಆಕರ್ಷಣಿಯವಾಗಿವೆ. ಗರ್ಭಗುಡಿಯ ಹೊರಗಡೆಯಲ್ಲಿರುವ ನವರಂಗವು 12 ಕಂಬಗಳ ಪ್ರಾಂಗಣವನ್ನು ಹೊಂದಿದೆ. ಇದರ ಜೊತೆಗೆ ದತ್ತಾತ್ರೇಯ, ಹನುಮಂತ ಹಾಗೂ ಪಾಂಡುರಂಗ ವಿಠ್ಠಲ ದೇವರ ಮೂರ್ತಿಗಳನ್ನೂ ಕಾಣಬಹುದು. ಈ ಪ್ರಾಂಗಣದಲ್ಲಿ ದಕ್ಷಿಣ, ಉತ್ತರ ಹಾಗೂ ಪಶ್ಚಿಮ ದಿಕ್ಕಿಗೆ ಚಿಕ್ಕ ಬಾಗಿಲುಗಳಿವೆ. ಗರ್ಭಗುಡಿಯಲ್ಲಿರುವ ರಾಮನ ಆಕರ್ಷಕ ವಿಗ್ರಹವು ನಾಲ್ಕು ಕೈಗಳಿಂದ ಕೂಡಿದ್ದು ಶಂಖ, ಚಕ್ರ, ಬಿಲ್ಲು ಬಾಣಗಳನ್ನು ಹೊಂದಿವೆ. ಬಲಗಡೆಗೆ ಕಾಶಿಯಿಂದ ತಂದ ಸಾಲಿಗ್ರಾಮಗಳ ಹಾಗೂ ಮುಂದುಗಡೆಗೆ ಕೃಷ್ಣನ ಮೂರು ವಿಗ್ರಹಗಳು, ಲಕ್ಷ್ಮೀ ವೆಂಕಟೇಶ್ವರ, ವಿಷ್ಣು ಮತ್ತು ಸತ್ಯನಾರಾಯಣ ದೇವರ ಚಿಕ್ಕ ವಿಗ್ರಹಗಳನ್ನು ಕಾಣಬಹುದು. ಗರ್ಭಗುಡಿಯು ಬೃಹತ್‌ ಗೋಪುರವನ್ನು ಹೊಂದಿದೆ. ವೈಕುಂಠ ಏಕಾದಶಿಯಂದು ಇಲ್ಲಿ ವಿಜೃಂಭಣೆಯಿಂದ ಪೂಜೆ ನೆರವೇರುತ್ತದೆ. ಸುತ್ತಮುತ್ತಲ ಗ್ರಾಮಗಳಿಂದ ಬಾಲಾಜಿಯ ದರ್ಶನ ಪಡೆಯಲು ಭಕ್ತರು ಆಗಮಿಸುತ್ತಾರೆ.

ದೇವಾಲಯದ ಇನ್ನೊಂದು ವೈಶಿಷ್ಟ್ಯವೆಂದರೆ, ರಾಜರ ಕಾಲದಿಂದಲೂ ಇಂದಿನವರೆಗೂ ವೆಂಕಟೇಶ್ವರ ಪೂಜೆಯನ್ನು ಮಾಡುವ (ಬಾವಾಜಿ) ಅರ್ಚಕರು ಕಾಶಿಯವರಾಗಿ¨ªಾರೆ. ಈಗಿರುವ ಅರ್ಚಕ ಶ್ರೀಲಲ್ಲೂರಾಮದಾಸ ಮಹಾರಾಜರು ಹದಿನೈದನೆಯವರಾಗಿದ್ದಾರೆ. ದೇವಸ್ಥಾನದಲ್ಲಿ ಪ್ರತಿ ಶುಕ್ರವಾರ ಸಾಯಂಕಾಲ ಪಲ್ಲಕ್ಕಿ ಉತ್ಸವ ನಡೆಯುತ್ತದೆ. ಪ್ರತಿ ಹುಣ್ಣಿಮೆಯಂದೂ ಸತ್ಯನಾರಾಯಣ ಪೂಜೆಯನ್ನು ಏರ್ಪಡಿಸಲಾಗುತ್ತದೆ. ವೆಂಕಟೇಶ್ವರ ದೇವಸ್ಥಾನದ ಪಕ್ಕದಲ್ಲಿಯೇ ಗೋವುಗಳಿಗಾಗಿ ಕೊಟ್ಟಿಗೆಯೂ ಇದೆ. ಮೈಸೂರಿನಲ್ಲಿ ನಡೆಯುವಂತೆ ಇಲ್ಲೂ ಕೂಡ ದಸರಾ ಕಾರ್ಯಕ್ರಮಗಳು ನಡೆಯುತ್ತವೆ. ಆದರೆ ಅಲ್ಲಿ ಅಕ್ಟೋಬರ್‌ನಲ್ಲಿ ನಡೆದರೆ, ಇಲ್ಲಿ ಏಪ್ರಿಲ್‌ನಲ್ಲಿ ದಸರೆ.

ಈ ಬಾರಿ ಏಪ್ರಿಲ… 14 ರಂದು ರಥೋತ್ಸವ ನಡೆಯಲಿದೆ. ವೆಂಕಟೇಶ್ವರ ದೇವಸ್ಥಾನದಿಂದ ಎಡಕ್ಕೆ ಏರುಮುಖವಾಗಿ ಕಲ್ಲಿನ ತೇರನ್ನು ಹಣಮಂತ ದೇವಸ್ಥಾನದ ವರೆಗೆ ತಂದು ಮತ್ತೆ ಒಂದು ಗಂಟೆಗಳ ಕಾಲ ಸನ್ನೆ ಗೋಲುಗಳ ಮೂಲಕ ಇಳಿಜಾರಿನಲ್ಲಿಯೇ ಪೂರ್ಣ ಪ್ರಮಾಣದಲ್ಲಿ ತಿರುಗಿಸಿ ಯಥಾ ಸ್ಥಿತಿಯಲ್ಲಿ ತಂದು ನಿಲ್ಲಿಸುತ್ತಾರೆ. ಈ ರೀತಿ ತೇರನ್ನು ತಿರುಗಿಸುವ ಕಾರ್ಯದಲ್ಲಿ ವಡ್ಡರ ಕೋಮಿನ ಪ್ರಯತ್ನ ಹಾಗೂ ಭಕ್ತಿಯ ಸೇವೆ ಮೆಚ್ಚುವಂತಹದು. ಈ ವಿಶೇಷ ರಥೋತ್ಸವ ನೋಡಲು ದೂರದೂರಿನಿಂದ ಭಕ್ತರು ಆಗಮಿಸುತ್ತಾರೆ. ನವರಾತ್ರಿ ಉತ್ಸವದ ಪ್ರತಿದಿನ ಸಂಜೆ ಭಕ್ತಿ ಸಂಗೀತ, ಭಜನೆ, ಮುಂತಾದ ವೈವಿದ್ಯಮಯ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.

ಸುರೇಶ ಗುದಗನವರ

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.