ತೆಗ್ಗಿ ಗ್ರಾಮಸ್ಥರ ಪಕ್ಷಿ ಪ್ರೇಮಕ್ಕೆ ಕೈ ಮುಗಿ!


Team Udayavani, Nov 18, 2017, 3:05 AM IST

001.jpg

ಮಾನವ ಸಂಘ ಜೀವಿ ಹಾಗೂ ಸಮಾಜಜೀವಿ. ಪ್ರಾಚೀನ ಕಾಲದಿಂದಲೂ ಮಾನವನಿಗೂ, ಪಕ್ಷಿಗಳಿಗೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ ಕಾಲದಿಂದಲೂ ಸಂದೇಶ ರವಾನಿಸಲು ಪಾರಿವಾಳಗಳನ್ನು ಉಪಯೋಗಿಸುತ್ತಿದ್ದರು ಎಂಬುದು ಹಲವು ಉಲ್ಲೇಖದಿಂದ ತಿಳಿದು ಬರುತ್ತದೆ. ಈಗ ಅರಣ್ಯ ಸಂಪತ್ತು ಕಡಿಮೆಯಾಗುತ್ತಿರುವುದರಿಂದ ಪಕ್ಷಿ$, ಪ್ರಾಣಿ ಸಂಕುಲಗಳ ಸಂಖ್ಯೆ ಕೂಡ ಕಡಿಮೆಯಾಗುತ್ತಿವೆ. ಈ ಮಾತಿಗೆ ಅಪವಾದವೆಂಬಂತೆ ಇಲ್ಲೊಂದು ಪುಟ್ಟ ಗ್ರಾಮವಿದೆ. ಇಲ್ಲಿ ಇಡೀ ಊರಿನ ಗ್ರಾಮಸ್ಥರೇ ಪಾರಿವಾಳಗಳನ್ನು ಸಾಕಿ ಪಕ್ಷಿ$ ಪ್ರೇಮ
 ಮೆರೆದಿದ್ದಾರೆ.

  ಅದುವೇ ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ತೆಗ್ಗಿ ಗ್ರಾಮ. ಇಲ್ಲಿ 2000 ಜನಸಂಖ್ಯೆ ಇದೆ.  ಎಲ್ಲಾ ವರ್ಗದವರೂ ಇದ್ದಾರೆ. ಈ ಊರಿನ ಮಧ್ಯದಲ್ಲಿ ಮಾರುತೇಶ್ವರ(ಆಂಜನೇಯ) ದೇವಸ್ಥಾನವಿದೆ. ಇದನ್ನು ಸಂಪೂರ್ಣ ಕಲ್ಲಿನಲ್ಲೇ ನಿರ್ಮಿಸಲಾಗಿದೆ.  ಇದರ ಮೇಲ್ಭಾಗದಲ್ಲಿ  ಸಾವಿರಾರು ಪಾರಿವಾಳಗಳು ವಾಸವಾಗಿವೆ. ಇವುಗಳ ವಾಸಕ್ಕಾಗಿ ಚಿಕ್ಕ ಚಿಕ್ಕ ಮನೆ(ಗೂಡು) ನಿರ್ಮಿಸಿ ಪಾರಿವಾಳಗಳ ವಾಸಕ್ಕೆ ಅನುಕೂಲ ಮಾಡಿ ಕೊಡಲಾಗಿದೆ.  ಇದನ್ನೆಲ್ಲಾ ಮಾಡಿದ್ದು ಗ್ರಾಮಸ್ಥರು ಅನ್ನೋದು ವಿಶೇಷ. 

ರಾತ್ರಿ ಸಮಯದಲ್ಲಿ ಪಾರಿವಾಳಗಳು ವಾಸ್ತವ್ಯ ಮಾಡಿ, ಹಗಲು ಹೊತ್ತಿನಲ್ಲಿ ಆಹಾರದ ಸಲುವಾಗಿ ಬೇರೆ ಕಡೆ ಹೋಗಿ ಪುನಃ ರಾತ್ರಿ ತಮ್ಮ ವಾಸಸ್ಥಳಕ್ಕೆ ಬರುತ್ತವೆ. ಇವುಗಳಿಗೆ ಊರ ಗ್ರಾಮಸ್ಥರೇ ಆಹಾರದ ವ್ಯವಸ್ಥೆ ಮಾಡುತ್ತಿದ್ದಾರೆ. ಇದಕ್ಕೆ ಊರ ಎಲ್ಲ ಹಿರಿಯರು, ಯುವಕರು ಕಾರ್ಯ ನಿರ್ವಹಿಸುತ್ತಾರೆ. 

 ಬೇರೆ ಊರಿನವರು ಪಾರ್ಶ್ವವಾಯು ರೋಗಕ್ಕೆ ಮದ್ದಿಗಾಗಿ ಪಾರಿವಾಳಗಳನ್ನು ಹಿಡಿದೊಯ್ಯಲು ಬಂದರೆ ತಡೆಯುತ್ತಾರೆ. ಎಲ್ಲರೂ ಭದ್ರತಾ ಕಾವಲುಗಾರರಂತೆ ನಿಗಾ ವಹಿಸುತ್ತಾರೆ. ಊರ ದೇವಾಲಯದ ಪಕ್ಕದಲ್ಲೇ ಬಾವಿ ಇದೆ. ಈ ಬಾವಿಯಲ್ಲಿ ಬೇಸಿಗೆಯಲ್ಲೂ ನೀರು ಇರುವುದರಿಂದ ಪಾರಿವಾಳಗಳಿಗೆ ನೀರಿನ ಸಮಸ್ಯೆ ಇಲ್ಲ. ಬಾವಿಯಲ್ಲಿ ಪಾರಿವಾಳಗಳು ಇರಲು, ನಿಲ್ಲಲು ವ್ಯವಸ್ಥೆ ಮಾಡಲಾಗಿದೆ. ಈ ಬಾವಿಗೆ ತಂತಿ ಬೇಲಿ ನಿರ್ಮಿಸಿರುವುದರಿಂದ ಪಾರಿವಾಳಗಳನ್ನು ಬೆಕ್ಕು ಮತ್ತು ಇತರ ಪ್ರಾಣಿಗಳಿಂದ ರಕ್ಷಿಸಲೂ ಸಹಕಾರಿಯಾಗಿದೆ. ಅಪರೂಪದ ಪಾರಿವಾಳ ಸಂಕುಲ ವೀಕ್ಷಿಸಲು ಸುತ್ತಮುತ್ತಲಿನ ಜನರು ದೂರದ ಊರಿನಿಂದ ತಂಡ ತಂಡವಾಗಿ ಬಂದು ಹೋಗುತ್ತಾರೆ. 

ಎಚ್‌.ಆರ್‌.ಕಡಿವಾಲ

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.