ವಿಶ್ವವೆಲ್ಲವೂ ಮುನಿದು ನಿಂತರೂ ಸೋಲನೊಲ್ಲೆವು..


Team Udayavani, Nov 9, 2019, 5:04 AM IST

vishvavellavu

ಕ್ರಿಕೆಟಿಗರ ಇತ್ತೀಚಿನ ಫಾರ್ಮ್, ಭಾರತದಲ್ಲಿ ಆಡಿದ ಅನುಭವ, ಭಾರತೀಯ ಉಪಖಂಡದಲ್ಲಿ ಇವರ ಸಾಧನೆಯನ್ನೆಲ್ಲ ಅವಲೋಕಿಸಿ ವಿಶ್ವ ಇಲೆವೆನ್‌ ಒಂದನ್ನು ರಚಿಸಲಾಗಿದೆ. ಇಲ್ಲಿ ಆರಂಭಿಕರಾಗಿ ಆಯ್ಕೆಯಾದವರು ಶ್ರೀಲಂಕಾದ ದಿಮುತ್‌ ಕರುಣರತ್ನೆ ಮತ್ತು ನ್ಯೂಜಿಲೆಂಡಿನ ಟಾಮ್‌ ಲ್ಯಾಥಂ. ಇವರಲ್ಲಿ ಲ್ಯಾಥಂ ವಿಕೆಟ್‌ ಕೀಪರ್‌ ಕೂಡ ಆಗಿದ್ದಾರೆ. ಹಾಗೆಯೇ ಡೇವಿಡ್‌ ವಾರ್ನರ್‌, ಅಜರ್‌ ಅಲಿ, ತಮಿಮ್‌ ಇಕ್ಬಾಲ್‌, ಡೀನ್‌ ಎಲ್ಗರ್‌ ಇತರ ಆರಂಭಿಕ ಆಯ್ಕೆಗಳಾಗಿವೆ.

ಭಾರತವೀಗ ತವರಿನಲ್ಲಿ ಸತತ 11 ಟೆಸ್ಟ್‌ ಸರಣಿ ಗೆದ್ದು ವಿಶ್ವದಾಖಲೆ ನಿರ್ಮಿಸಿರುವುದು ಇತಿಹಾಸ. ಜಿಂಬಾಬ್ವೆ, ಅಫ್ಘಾನಿಸ್ತಾನಂಥ ಸಾಮಾನ್ಯ ತಂಡಗಳಿರಲಿ, ಬಲಿಷ್ಠ ಪಡೆಯೆಂದೇ ಗುರುತಿಸಲ್ಪಡುತ್ತಿದ್ದ ದಕ್ಷಿಣ ಆಫ್ರಿಕಾ ಕೂಡ ಮೊನ್ನೆ ವೈಟ್‌ವಾಷ್‌ ಅನುಭವಿಸಿಕೊಂಡು ತವರಿಗೆ ಮರಳಿತು. ಭಾರತವನ್ನು ಅವರದೇ ಅಂಗಳದಲ್ಲಿ ಮಣಿಸುವುದು, ಸರಣಿ ಗೆಲ್ಲುವುದು ಸುಲಭವಲ್ಲ ಎಂಬುದು ಮತ್ತೂಮ್ಮೆ ಸಾಬೀತಾ­ಯಿತು. ಭಾರತ ­ಕೊನೆಯ ಸಲ ತವರಿನಲ್ಲಿ ಟೆಸ್ಟ್‌ ಸರಣಿ ಸೋತದ್ದು 2012-­13ರಷ್ಟು ಹಿಂದೆ, ಇಂಗ್ಲೆಂಡ್‌ ವಿರುದ್ಧ. ಅನಂತರ ಆಡಿದ ಎಲ್ಲ 11 ಟೆಸ್ಟ್‌ ಸರಣಿಗಳಲ್ಲೂ ಭಾರತ ತಂಡ ಜಯಭೇರಿ ಮೊಳಗಿಸಿದೆ.

ಈ ಅವಧಿಯಲ್ಲಿ ಆಡಿದ 32 ಟೆಸ್ಟ್‌ ಪಂದ್ಯಗಳಲ್ಲಿ 26 ಗೆಲುವು ಕಂಡಿದೆ. 5 ಡ್ರಾ ಆಗಿದೆ. ಒಂದರಲ್ಲಷ್ಟೇ ಸೋತಿದೆ. ಈ 26ರಲ್ಲಿ 10 ಗೆಲುವು ಇನಿಂಗ್ಸ್‌ ಅಂತರದ್ದಾಗಿದೆ. 150 ಪ್ಲಸ್‌ ರನ್‌ ಅಂತರದಲ್ಲಿ 7 ಗೆಲುವು ಸಾಧಿಸಿದೆ. 8 ಪ್ಲಸ್‌ ವಿಕೆಟ್‌ ಅಂತರದ 4 ಜಯ ಒಲಿದಿದೆ. ಇದು ತವರಿನಲ್ಲಿ ಭಾರತದ ಟೆಸ್ಟ್‌ ಪ್ರಭುತ್ವಕ್ಕೆ ಸಾಕ್ಷಿ. ಇಂಗ್ಲೆಂಡ್‌, ಆಸ್ಟ್ರೇಲಿಯ, ನ್ಯೂಜಿಲೆಂಡ್‌, ವೆಸ್ಟ್‌ಇಂಡೀಸ್‌, ಶ್ರೀಲಂಕಾ, ಬಾಂಗ್ಲಾದೇಶ… ಎಲ್ಲ ತಂಡಗಳೂ ಭಾರತದ ಕೈಯಲ್ಲಿ ಹೊಡೆತ ತಿಂದೇ ಹೋಗಿವೆ. ಹಾಗಾದರೆ ಭಾರತವನ್ನು ಮಣಿಸುವ ಸಾಮರ್ಥ್ಯ ಹೊಂದಿರುವ ತಂಡವಾದರೂ ಯಾವುದು? ಬಹುಶಃ ಇದಕ್ಕೆ ಉತ್ತರವಿಲ್ಲ.

ವಿಶ್ವ ಇಲೆವೆನ್‌ ಪರಿಕಲ್ಪನೆ: ವಿಶ್ವದ ಎಲ್ಲ ತಂಡಗಳಿಗೂ ಭಾರತದಲ್ಲಿ ಗೆಲುವು ಮರೀಚಿಕೆಯಾಗಿರುವ ಈ ಹೊತ್ತಿನಲ್ಲಿ ಕ್ರಿಕೆಟ್‌ ವೆಬ್‌ಸೈಟ್‌ ಒಂದು ವಿಭಿನ್ನ ರೀತಿಯಲ್ಲಿ ಆಲೋಚಿಸಿದೆ. ಹೊಸ ಯೋಜನೆ­ಯೊಂದನ್ನು ರೂಪಿಸಿದೆ. ಆದರೆ ಇದು ಕೇವಲ ಕಾಲ್ಪನಿಕ. ವಿಶ್ವದ ಎಲ್ಲ ಟೆಸ್ಟ್‌ ತಂಡಗಳ ಸರ್ವಶ್ರೇಷ್ಠ ಆಟಗಾರರ ತಂಡ­ವೊಂದನ್ನು ರಚಿಸಿ ಭಾರತದಲ್ಲಿ ಆಡಿಸಿದರಷ್ಟೇ, ಅದಕ್ಕೆ ಗೆಲುವು ಒಲಿಯಬಹುದು ಎಂಬುದೊಂದು ಇಲ್ಲಿನ ಲೆಕ್ಕಾಚಾರ. ಹಾಗಾದರೆ ಈ ಆಟಗಾರರ ಪಡೆ ಹೇಗಿರಬಹುದು? ಇಲ್ಲಿ ಯಾರೆಲ್ಲ ಸ್ಥಾನ ಸಂಪಾದಿಸಬಹುದು? ಕುತೂಹಲ ಸಹಜ.

ಕ್ರಿಕೆಟಿಗರ ಇತ್ತೀಚಿನ ಫಾರ್ಮ್, ಭಾರತದಲ್ಲಿ ಆಡಿದ ಅನುಭವ, ಭಾರತೀಯ ಉಪಖಂಡದಲ್ಲಿ ಇವರ ಸಾಧನೆಯನ್ನೆಲ್ಲ ಅವಲೋಕಿಸಿ ವಿಶ್ವ ಇಲೆವೆನ್‌ ಒಂದನ್ನು ರಚಿಸಲಾಗಿದೆ. ಇಲ್ಲಿ ಆರಂಭಿಕರಾಗಿ ಆಯ್ಕೆಯಾದವರು ಶ್ರೀಲಂಕಾದ ದಿಮುತ್‌ ಕರುಣರತ್ನೆ ಮತ್ತು ನ್ಯೂಜಿಲೆಂಡಿನ ಟಾಮ್‌ ಲ್ಯಾಥಂ. ಇವರಲ್ಲಿ ಲ್ಯಾಥಂ ವಿಕೆಟ್‌ ಕೀಪರ್‌ ಕೂಡ ಆಗಿದ್ದಾರೆ. ಹಾಗೆಯೇ ಡೇವಿಡ್‌ ವಾರ್ನರ್‌, ಅಜರ್‌ ಅಲಿ, ತಮಿಮ್‌ ಇಕ್ಬಾಲ್‌, ಡೀನ್‌ ಎಲ್ಗರ್‌ ಇತರ ಆರಂಭಿಕ ಆಯ್ಕೆಗಳಾಗಿವೆ.

ವಿಲಿಯಮ್ಸನ್‌ ನಾಯಕ: ಮಧ್ಯಮ ಕ್ರಮಾಂಕದ ಹುರಿಯಾಳುಗಳೆಂದರೆ ಕೇನ್‌ ವಿಲಿಯಮ್ಸನ್‌, ಸ್ಟೀವನ್‌ ಸ್ಮಿತ್‌ ಮತ್ತು ಜೋ ರೂಟ್‌. ಇವರಲ್ಲಿ ವಿಲಿಯಮ್ಸನ್‌ಗೆ ನಾಯಕತ್ವ ನೀಡಲಾಗಿದೆ. ಮಧ್ಯಮಕ್ರಮಾಂಕದ ಬದಲಿ ಕ್ರಿಕೆಟಿಗರನ್ನಾಗಿ ಮುಶ್ಫಿಕರ್‌ ರಹೀಂ, ಬಾಬರ್‌ ಆಜಂ ಅವರನ್ನು ಗುರುತಿಸಲಾಗಿದೆ. ಪರಿಪೂರ್ಣ ಆಲ್‌ರೌಂಡರ್‌ಗಳಾಗಿ ಕಣಕ್ಕಿಳಿಯಲು ಬೆನ್‌ ಸ್ಟೋಕ್ಸ್‌, ಶಕಿಬ್‌ ಅಲ್‌ ಹಸನ್‌ ಅವರಿಗಿಂತ ಉತ್ತಮ ಆಯ್ಕೆ ಇಲ್ಲ. ಸ್ಟ್ರೈಕ್‌ ಬೌಲರ್‌ಗಳಿಗೆ ಬಹಳಷ್ಟು ಆಯ್ಕೆಗಳಿವೆ.

ಆದರೆ ಪ್ಯಾಟ್‌ ಕಮಿನ್ಸ್‌ ಮತ್ತು ಜೋಫ್ರಾ ಆರ್ಚರ್‌ ಅವರಿಗೆ ಮೊದಲ ಆದ್ಯತೆ ನೀಡಲಾಗಿದೆ. ಸ್ಪರ್ಧೆಯಲ್ಲಿರುವ ಉಳಿದವರೆಂದರೆ ಮಿಚೆಲ್‌ ಸ್ಟಾರ್ಕ್‌, ಜೋಶ್‌ ಹೇಜಲ್‌ವುಡ್‌, ಕ್ಯಾಗಿಸೊ ರಬಾಡ, ಜೇಸನ್‌ ಹೋಲ್ಡರ್‌. ಭಾರತದ್ದು ತಿರುವುಪಡೆಯುವ ಅಂಕಣ ಆಗಿರುವುದರಿಂದ ಸ್ಪಿನ್ನರ್‌ಗಳ ಆಯ್ಕೆಯಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ. ಇಲ್ಲಿ ಅವಕಾಶ ಪಡೆದವರು ನಥನ್‌ ಲಿಯೋನ್‌ ಮತ್ತು ರಶೀದ್‌ ಖಾನ್‌. ಮೀಸಲು ಸ್ಪಿನ್ನರ್‌ ಆಗಿರುವವರು ಯಾಸಿರ್‌ ಶಾ. ಮನಸ್ಸಿದ್ದರೆ ಈ ವಿಶ್ವ ಇಲೆವೆನ್‌ ಭಾರತದಲ್ಲಿ ಟೆಸ್ಟ್‌ ಆಡಲು ಬರಲಿ, ಅವರನ್ನೂ ಬಗ್ಗುಬಡಿಯುತ್ತೇವೆ ಎಂದು ಕೊಹ್ಲಿ ತಂಡ ಸವಾಲೆಸೆದರೆ ಅಚ್ಚರಿ ಇಲ್ಲ!

ವಿಶ್ವ ಟೆಸ್ಟ್‌ 11ರ ಬಳಗ: ದಿಮುತ್‌ ಕರುಣರತ್ನೆ, ಟಾಮ್‌ ಲ್ಯಾಥಂ (ವಿ.ಕೀ.), ಕೇನ್‌ ವಿಲಿಯಮ್ಸನ್‌ (ನಾಯಕ), ಸ್ಟೀವನ್‌ ಸ್ಮಿತ್‌, ಜೋ ರೂಟ್‌, ಬೆನ್‌ ಸ್ಟೋಕ್ಸ್‌, ಶಕಿಬ್‌ ಅಲ್‌ ಹಸನ್‌, ಪ್ಯಾಟ್‌ ಕಮಿನ್ಸ್‌, ಜೋಪ್ರಾ ಆರ್ಚರ್‌, ನಥನ್‌ ಲಿಯೋನ್‌, ರಶೀದ್‌ ಖಾನ್‌.

* ಎಚ್‌.ಪ್ರೇಮಾನಂದ ಕಾಮತ್‌

ಟಾಪ್ ನ್ಯೂಸ್

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.