ಭಾರತ-ಪಾಕ್‌ ಪಂದ್ಯ: ರಾಹುಲ್‌ ಜತೆ ಅಭಿಮಾನಿಯ ತುಳು ಮಾತು!


Team Udayavani, Jun 22, 2019, 10:26 AM IST

K-L-RahulF2703

ಭಾರತ-ಪಾಕಿಸ್ತಾನ ನಡುವಿನ ಪಂದ್ಯವೆಂದರೆ ಅಲ್ಲೊಂದು ಕುತೂಹಲವಿರುತ್ತದೆ. ಏನಾದರೂ ವಿಶೇಷತೆಗೆ ಸಾಕ್ಷಿಯಾಗಿರುತ್ತದೆ. ಅಂತೆಯೇ ಮ್ಯಾಂಚೆಸ್ಟರ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಅಭಿಮಾನಿಯೊಬ್ಬ ಟೀಂ ಇಂಡಿಯಾದ ತಾರಾ ಆಟಗಾರ ಕೆ.ಎಲ್‌.ರಾಹುಲ್‌ ಜತೆ ತುಳುವಿನಲ್ಲಿ ಸಂಭಾಷಣೆ ನಡೆಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಪಂದ್ಯ ನೋಡಲು ಬಂದ ಮಂಗಳೂರಿನ ಇಬ್ಬರು ಗ್ಯಾಲರಿಯಲ್ಲಿ ಕೂತು ರಾಹುಲ್‌ ಅವರನ್ನು ಉಲ್ಲೇಖೀಸಿ ತುಳುವಿನಲ್ಲೇ ಮಾತನಾಡಿದ್ದಾರೆ. ಮಲೇಷ್ಯಾದಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿರುವ ಮಂಗಳೂರಿನ ಕದ್ರಿಯ ರೋಹನ್‌ ಶೆಟ್ಟಿ ಮತ್ತು ಉರ್ವಾದ ಸುಶಾಂತ್‌ ಅವರು ಕ್ರಿಕೆಟ್‌ ವೀಕ್ಷಣೆಗೆ ಮ್ಯಾಂಚೆಸ್ಟರ್‌ಗೆ ತೆರಳಿದ್ದರು. ಡೀಪ್‌ ಸ್ಕೆ Ìàರ್‌ಲೆಗ್‌ ಸ್ಟಾಂಡ್‌ನ‌ಲ್ಲಿ ಕ್ರಿಕೆಟ್‌ ವೀಕ್ಷಿಸುವಾಗ ಅಲ್ಲೇ ಕೂಗಳತೆ ದೂರದಲ್ಲಿ ರಾಹುಲ್‌ ಅವರು ಕ್ಷೇತ್ರರಕ್ಷಣೆ ಮಾಡುತ್ತಿದ್ದರು. ರಾಹುಲ್‌ ಕೂಡ ಮಂಗಳೂರಿನವರಾದ್ದರಿಂದ ಅವರನ್ನು ಉಲ್ಲೇಖೀಸಿ ತುಳು ಭಾಷೆಯಲ್ಲಿ ಮಾತನಾಡಿದ್ದಾರೆ.

ಎಂಕ್ಲೆಗೆ ಸೆಂಚುರಿ ಬೋಡು (ನಮಗೆ ಶತಕ ಬೇಕು):
ರಾಹುಲ್‌ ಎಂಚ ಉಲ್ಲರ್‌ .. ರಾಹುಲ್‌ ಎಂಕ್ಲೆಗ್‌ ಸೆಂಚುರಿ ಬೋಡು .. ಎಂಕ್ಲ ಕುಡ್ಲಡ್‌ ಬೈದ’ (ರಾಹುಲ್‌ ಹೇಗಿದ್ದೀರಿ, ರಾಹುಲ್‌ ನಮಗೆ ನಿಮ್ಮ ಶತಕ ನೋಡಬೇಕು .. ನಾವು ಮಂಗಳೂರಿನಿಂದ ಬಂದಿದ್ದೇವೆ) ಎಂದು ರೋಹನ್‌ ಶೆಟ್ಟಿ ಅವರು ರಾಹುಲ್‌ ಅವರಿಗೆ ಕೇಳುವಂತೆ ಹೇಳಿದ್ದಾರೆ. ಸುಶಾಂತ್‌ ಅವರು ವೀಡಿಯೊ ಮಾಡಿದ್ದಾರೆ. ಇವರ ಮಾತು ಕೇಳಿದ ರಾಹುಲ್‌ ಇವರತ್ತ ಕೈ ಬೀಸಿದ್ದಾರೆ.

ರೋಹನ್‌ ಶೆಟ್ಟಿ ಅವರು ಉದಯವಾಣಿ’ ಜೊತೆ ಮಾತನಾಡಿ, ನಾನು ಮತ್ತು ನನ್ನ ಸ್ನೇಹಿತ ವಿಶ್ವಕಪ್‌ ಕ್ರಿಕೆಟ್‌ನ ಭಾರತ ತಂಡವಾಡಿದ ಕಳೆದ ಮೂರು ಪಂದ್ಯಕ್ಕೂ ಆಗಮಿಸಿದ್ದೆವು. ಪಾಕ್‌ ವಿರುದ್ಧದ ಪಂದ್ಯಕ್ಕೆ ಕೆಲವು ತಿಂಗಳ ಹಿಂದೆಯೇ ಟಿಕೆಟ್‌ ಬುಕ್‌ ಮಾಡಿದ್ದೆವು. ರಾಹುಲ್‌ ಅವರು ನಾವು ಕುಳಿತ ಗ್ಯಾಲರಿ ಪಕ್ಕದಲ್ಲಿಯೇ ಕ್ಷೇತ್ರರಕ್ಷಣೆಯಲ್ಲಿದ್ದರು. ಹೀಗಾಗಿ ತುಳು ಭಾಷೆಯಲ್ಲೇ ಮಾತನಾಡಿದೆವು’ ಎಂದರು.

ರಾಹುಲ್‌ ಅವರ ಬಾಲ್ಯದ ಕ್ರಿಕೆಟ್‌ ಕೋಚ್‌ ಜಯರಾಜ್‌ ಅವರು ಉದಯವಾಣಿ’ಗೆ ಪ್ರತಿಕ್ರಿಯಿಸಿ, ರಾಹುಲ್‌ಗೆ ಬಾಲ್ಯದಲ್ಲಿಯೇ ಕ್ರಿಕೆಟ್‌ ಎಂದರೆ ಆಸಕ್ತಿ. ನೆಹರೂ ಮೈದಾನದಲ್ಲಿ ಕ್ರಿಕೆಟ್‌ ಕಲಿಯುವ ವೇಳೆ ತನ್ನ ಸಹಪಾಠಿಗಳೊಂದಿಗೆ ತುಳು ಭಾಷೆಯಲ್ಲೇ ಹಾಸ್ಯ ಚಟಾಕಿ ಹಾರಿಸುತ್ತಿದ್ದರು’ ಎಂದು ನೆನಪಿಸಿದರು.

ರಾಹುಲ್‌ ತುಳು ಭಾಷೆಯನ್ನು ಸರಾಗವಾಗಿ ಮಾತನಾಡುತ್ತಾನೆ. ಅವನಿಗೆ ಮಂಗಳೂರು ಮೂಲದ ಅನೇಕ ಸ್ನೇಹಿತರಿದ್ದಾರೆ. ಅವರ ಜತೆ ಬೆರೆತು ತುಳು ಭಾಷೆಯಲ್ಲೇ ಮಾತನಾಡುತ್ತಾನೆ. ಮಂಗಳೂರಿಗ ಎಂಬ ಹೆಮ್ಮೆ ಅವನಿಗಿದೆ’

– ರಾಜೇಶ್ವರಿ, ಕೆ.ಎಲ್‌. ರಾಹುಲ್‌ ತಾಯಿ

ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.