“ಲೇಪಾಕ್ಷಿ” ಲೋಕ ಸಂಚಾರ

ಪ್ರತಿ ಕೆತ್ತನೆಯಲ್ಲೂ ಒಂದೊಂದು ಕತೆ

Team Udayavani, Jul 27, 2019, 5:00 AM IST

v-6

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಒಂದು ಚಿಕ್ಕ ಗ್ರಾಮ, ಲೇಪಾಕ್ಷಿ. ವಿಜಯನಗರ ಅರಸರ ಕಾಲದಲ್ಲಿ ಕಟ್ಟಲಾದ, ವೀರಭದ್ರೇಶ್ವರ ದೇಗುಲವು ಶಿಲ್ಪ ಹಾಗೂ ಚಿತ್ರಕಲೆಗಳಿಂದಲೇ ಕಣ್ಮನ ಸೆಳೆಯುತ್ತದೆ. ದಕ್ಷಿಣ ಭಾರತದ ಎಲ್ಲೆಡೆಯಿಂದ ಭಕ್ತರು ಇಲ್ಲಿಗೆ ಆಗಮಿಸಿ, ವಾಸ್ತುಶಿಲ್ಪದ ವಿಸ್ಮಯಕ್ಕೆ ಸಾಕ್ಷಿ ಆಗುತ್ತಾರೆ.

ರಾವಣನು ಸೀತೆಯನ್ನು ಅಪಹರಿಸಿಕೊಂಡು ಈ ಪ್ರದೇಶದಲ್ಲಿ ಹೋಗುತ್ತಿರುವಾಗ ಬೆಟ್ಟದ ಮೇಲೆ ಜಟಾಯು ಪಕ್ಷಿಯು ಅಡ್ಡಿ ಮಾಡುತ್ತದೆ. ರಾವಣನು ಸಿಟ್ಟಿನಿಂದ ಪಕ್ಷಿಯ ರೆಕ್ಕೆಗಳನ್ನು ತುಂಡರಿಸಿ, ಮುಂದೆ ಹೋಗುತ್ತಾನೆ. ಶ್ರೀರಾಮನು ಸೀತಾನ್ವೇಷಣೆ ಮಾಡುತ್ತಾ ಈ ಸ್ಥಳಕ್ಕೆ ಬಂದಾಗ ಜಟಾಯು ಕೆಳಗೆ ಬಿದ್ದಿರುವುದನ್ನು ನೋಡುತ್ತಾನೆ. ನಂತರ ಪಕ್ಷಿಗೆ ಮೋಕ್ಷ ಕೊಟ್ಟು “ಲೇ-ಪಕ್ಷಿ’ ಎಂದು ಹೇಳುತ್ತಾನೆ. “ಲೇ-ಪಕ್ಷಿ’ ಎಂಬ ಪದವೇ ಕಾಲಕ್ರಮೇಣವಾಗಿ ಲೇಪಾಕ್ಷಿ ಆಗಿದೆ. ಲೇಪಾಕ್ಷಿ ಗ್ರಾಮವನ್ನು ಪ್ರವೇಶಿಸಿದ ಕೂಡಲೇ ಬೆಟ್ಟದಲ್ಲಿ, “ಜಟಾಯು ಪಕ್ಷಿ’ಯು ಸ್ವಾಗತಿಸುತ್ತದೆ. ಅಲ್ಲದೆ, ರಸ್ತೆಯ ಬಲಗಡೆಗೆ ಒಂದೇ ಬಂಡೆಯಲ್ಲಿ ಕೆತ್ತನೆ ಮಾಡಿದ ಸುಂದರವಾದ ನಂದಿ ವಿಗ್ರಹ ಸೆಳೆಯುತ್ತದೆ. 15 ಅಡಿಗಳ ಎತ್ತರ, 27 ಅಡಿ ಉದ್ದವಿರುವ ನಂದಿಯು ಎದ್ದು ಬರಲು ಸಜ್ಜಾಗಿರುವಂತೆ ತೋರುತ್ತದೆ. ನಂದಿಯ ಶರೀರ ಭಾಗದಲ್ಲಿ ಅಲಂಕರಿಸಿದ ಗೆಜ್ಜೆಗಳು, ಘಂಟೆಗಳ ಕೆತ್ತನೆಯ ಕುಸುರಿ ಚೆಂದವೋ ಚೆಂದ. ಭಾರತದ ಅತಿ ದೊಡ್ಡ ಏಕಶಿಲಾ ನಂದಿ ವಿಗ್ರಹವಿದು.

ಬೃಹತ್‌ ಶಿಲೆಗಳಿಂದ ಕೂಡಿದ ವೀರಭದ್ರೇಶ್ವರ ದೇಗುಲದ ಹೆಬ್ಟಾಗಿಲೂ ಅಷ್ಟೇ ಅದ್ಭುತ. ಇದನ್ನು ಪ್ರವೇಶಿಸಿದಾಗ ಸಿಗುವ ನಾಟ್ಯಮಂಟಪವು 70 ಸ್ತಂಬಗಳಿಂದ ಕೂಡಿದೆ. ಮಂಟಪದ ನಡುವೆ ಮೇಲ್ಭಾಗದ 12 ಕಲ್ಲುಗಳಲ್ಲಿ ನೂರು ಪತ್ರದ ಕಮಲವನ್ನು ಕೆತ್ತಿದ್ದಾರೆ. ಅಲ್ಲದೆ, ಮಂಟಪದಲ್ಲಿನ 12 ಕಂಬಗಳಲ್ಲಿ ದತ್ತಾತ್ರೇಯ, ಶಿವ, ಪಾರ್ವತಿ, ಸೂರ್ಯ, ತುಂಬರ, ರಿಠೇಶ್ವರ, ನಂದಿಬ್ರಹ್ಮ, ನಟರಾಜ, ಚಂದ್ರ, ಸನಾತನಾದಿ ವಿದ್ವಾಂಸರು ವಿವಿಧ ಸಂಗೀತ, ವಾದ್ಯಗಳಿಂದ ನಿಂತಿರುವಂತೆ ಕೆತ್ತಿದ್ದಾರೆ. ಒಂದು ಕಂಬದಲ್ಲಿ ಭಿಕ್ಷಾಟನೆ ಮಾಡುವ ಶಿವನ ಶಿಲ್ಪವನ್ನು ಕಾಣಬಹುದು.

ವೀರಭದ್ರಸ್ವಾಮಿಯ ಗರ್ಭಗುಡಿ ಮೇಲ್ಭಾಗದ ಬೃಹತ್‌ ವರ್ಣಚಿತ್ರಗಳ ಅಂದ ಬಣ್ಣನೆಗೆ ನಿಲುಕದ್ದು. ವಿಷ್ಣುವಿನ ಆಲಯದ ಮೇಲ್ಭಾಗದಲ್ಲೂ ದಶಾವತಾರದ ವರ್ಣಚಿತ್ರಗಳನ್ನು ನೋಡಬಹುದು. ದೇವಸ್ಥಾನದ ಹಿಂದುಗಡೆ, ಒಂದು ದೊಡ್ಡ ಬಂಡೆಯ ಮೇಲೆ, ಏಳು ತಲೆಗಳ ನಾಗಲಿಂಗವು ಸರ್ಪದಿಂದ ಸುತ್ತುವರಿದು, ಮಧ್ಯಭಾಗದಲ್ಲಿ ಶಿವಲಿಂಗವು ಇರುವುದರಿಂದ ಯಾತ್ರಿಕರನ್ನು ಆಕರ್ಷಿಸುತ್ತದೆ.

ರೂಪ ಕೊಟ್ಟ ರೂಪಣ್ಣ
ಈ ಸುಂದರ ದೇಗುಲವನ್ನು ವಿಜಯನಗರದ ಅಚ್ಯುತರಾಯರ ಕಾಲದಲ್ಲಿ ಪೆನುಗೊಂಡ ಸಂಸ್ಥಾನದಲ್ಲಿ ಕೋಶಾಧಿಕಾರಿಯಾಗಿದ್ದ ರೂಪಣ್ಣನು ನಿರ್ಮಿಸಿದನೆಂದು ಪ್ರತೀತಿ. ಇಲ್ಲಿ ಶ್ರೀ ವೀರಭದ್ರನಿಗೆ ನಿತ್ಯ ಪೂಜೆಗಳು ನಡೆಯುತ್ತವೆ. ಶಿವರಾತ್ರಿ ಪೂಜೆಯಂತೂ ಬಹಳ ಪ್ರಸಿದ್ಧ.

ದರುಶನಕೆ ದಾರಿ…
ಬೆಂಗಳೂರಿನಿಂದ ಕೇವಲ 120 ಕಿ.ಮೀ. ದೂರದಲ್ಲಿದೆ. ಹಿಂದುಪುರ ರೈಲ್ವೆ ಸ್ಟೇಷನ್ನಿಂದ 10 ಕಿ.ಮೀ. ದೂರದಲ್ಲಿದೆ.

– ಸುರೇಶ ಗುದಗನ‌ವರ

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.