ವೇಣು ವಿಸ್ಮಯ


Team Udayavani, Mar 14, 2020, 6:07 AM IST

venu

ಚಾಲುಕ್ಯರು, ಹೊಯ್ಸಳರು ಹೇಗೆ ನೆನಪಿನಲ್ಲಿ ಉಳಿಯುವಂಥ ದೇಗುಲಗಳನ್ನು ಕೆತ್ತಿ ಹೋಗಿದ್ದಾರೋ, ಹಾಗೆಯೇ ಮಾಂಡಲೀಕರು ಮತ್ತು ಪಾಳೇಗಾರರು ಕೂಡ ಕರುನಾಡಿನ ವಾಸ್ತುಶಿಲ್ಪವನ್ನು ಶ್ರೀಮಂತಿಕೆಯ ಅಟ್ಟಕ್ಕೇರಿಸುವಲ್ಲಿ ಶ್ರಮಿಸಿದ್ದಾರೆ. ಚಿಕ್ಕಬಳ್ಳಾಪುರದ ಪಟ್ರೇನಹಳ್ಳಿಯ ವೇಣುಗೋಪಾಲ ಸ್ವಾಮಿ ದೇಗುಲ, ಅಂಥ ವಾಸ್ತುವಿಸ್ಮಯಕ್ಕೆ ಪ್ರಮುಖ ಸಾಕ್ಷಿ.

ಇದು ವಿಜಯನಗರ ಶೈಲಿಯಲ್ಲಿ ನಿರ್ಮಾಣವಾದ ದೇವರ ಗುಡಿ. ಇಲ್ಲಿನ ವಾಸ್ತುಶಿಲ್ಪದ ರಚನೆಯನ್ನು ಗಮನಿಸಿದರೆ, ಹತ್ತಿರದ ಲೇಪಾಕ್ಷಿ ದೇವಾಲಯ ನಿರ್ಮಾಣವಾದ ಕಾಲದಲ್ಲಿ ಇದನ್ನು ನಿರ್ಮಿಸಿರಬಹುದು ಎಂಬ ಊಹೆ ಬಲಗೊಳ್ಳುತ್ತದೆ. ದೇವಾಲಯವು ಗರ್ಭಗುಡಿ, ಅಂತರಾಳ, ನವರಂಗ, ಮುಖಮಂಟಪ ಹಾಗೂ ಪ್ರವೇಶದ್ವಾರ ಹೊಂದಿದ್ದು, ಗರ್ಭಗುಡಿಯಲ್ಲಿ ಸುಂದರವಾದ ವೇಣುಗೋಪಾಲನ ಮೂರ್ತಿ ಇದೆ.

ಮೂರ್ತಿಯ ಅಕ್ಕಪಕ್ಕದಲ್ಲಿ ರುಕ್ಮಿಣಿ ಹಾಗೂ ಸತ್ಯಭಾಮ ಇದ್ದಾರೆ. ವೇಣುಗೋಪಾಲನ ಮೂರ್ತಿ ಶಂಖ ಚಕ್ರಧಾರಿಯಾಗಿದ್ದು, ಕೊಳಲನ್ನು ನುಡಿಸುವಂತೆ ಇದೆ. ಕೆಳಭಾಗದಲ್ಲಿ ಗೋವುಗಳು ಕೊಳಲಿನ ಮಾಧುರ್ಯಕ್ಕೆ ಮನಸೋತು ಆಲಿಸುತ್ತಿರುವ ದೃಶ್ಯ ರೋಮಾಂಚನ. ನವರಂಗದಲ್ಲಿ ನಾಲ್ಕು ಉಬ್ಬು ಶಿಲ್ಪದ ಕೆತ್ತನೆ ಹೊಂದಿರುವ ಕಂಬಗಳಿದ್ದು, ಹಲವು ಪೌರಾಣಿಕ ಉಬ್ಬು ಶಿಲ್ಪಗಳ ಕೆತ್ತನೆ ಇದೆ.

ಕಂಬಗಳ ಮೇಲಿನ ಕಮಲ ಶೈಲಿಯ ಭೋದಿಗೆಗಳು, ವಿಜಯನಗರ ಶಿಲ್ಪಶೈಲಿಗೆ ಅತ್ಯಂತ ಸಮೀಪದ ಹೋಲಿಕೆಯಿದೆ. ಮುಖಮಂಟಪದಲ್ಲಿನ ನಾಲ್ಕು ಕಂಬಗಳು ಸಂಯುಕ್ತ ಶೈಲಿಯಲ್ಲಿವೆ. ಮಂಟಪದಲ್ಲಿ ಸುಮಾರು 20 ಕಂಬಗಳಿದ್ದು, ಸುಂದರ ಪ್ರಾಣಿ-ಪಕ್ಷಿಗಳ, ದೇವತೆಗಳ ಉಬ್ಬು ಶಿಲ್ಪ ಕೆತ್ತನೆ ಇದೆ.

ಇಲ್ಲಿರುವ ಭುವನೇಶ್ವರಿ ಶಿಲ್ಪ ಸರಳವಾಗಿದ್ದರೂ ಅದರಲ್ಲಿನ ಕೆಳಭಾಗದ ಪಟ್ಟಿಗಳಲ್ಲಿ ರಾಮ ಮತ್ತು ಕೃಷ್ಣನ ಲೀಲೆಗಳಿಗೆ ಸಂಬಂಧಿಸಿದ ಸುಂದರ ಮೂರ್ತಿಗಳನ್ನು 12 ಭಾಗಗಳಲ್ಲಿ ಕೆತ್ತಲಾಗಿದೆ. ರಾಮ- ಸೀತಾ ಕಲ್ಯಾಣ, ಕೃಷ್ಣನ ಲೀಲೆಗಳ ಕಥೆಗಳನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸಲಾಗಿದೆ. ಪ್ರವೇಶದ್ವಾರದ ಆಕರ್ಷಣೆಯೂ ಅಷ್ಟೇ ಚೆಂದ. ಇದರ ಇಕ್ಕೆಲಗಳಲ್ಲಿ ಶಿಲಾಬಾಲಿಕೆಯರ ಚಿತ್ರಣವಿದೆ.

ಇದು ಸಮೀಪದ ನಂದಿ ಹಾಗೂ ರಂಗಸ್ಥಳದ ಮೂಲ ಪ್ರವೇಶ ದ್ವಾರವನ್ನು ಹೋಲುವುದರಿಂದ, ಈ ದೇಗುಲದ ನಿರ್ಮಾಣ ಕಾಲವು ಇದಕ್ಕೆ ಹೊಂದಿಕೊಂಡಿರಬಹುದು. ದೇವಾಲಯದ ಪ್ರಾಂಗಣ ವಿಶಾಲವಾಗಿದ್ದು, ನಂದಿಯಂತೆ ಮಂಟಪಗಳನ್ನು ನಿರ್ಮಿಸಲಾಗಿದ್ದು, ಅದು ಅಪೂರ್ಣವಾಗಿದೆ. ಪಟ್ರೇನಹಳ್ಳಿಯ ದೇವಸ್ಥಾನ ವಾಸ್ತುಶಿಲ್ಪಕ್ಕೆ ವಿಶಿಷ್ಟ ಮಾದರಿಯೇ ಆದರೂ, ಪ್ರವಾಸಿಗರಿಂದ ದೂರ ಉಳಿದಿರುವುದು ಅಚ್ಚರಿಯೇ ಸರಿ.

ದರುಶನಕೆ ದಾರಿ…: ಚಿಕ್ಕಬಳ್ಳಾಪುರದಿಂದ ಶಿಡ್ಲಘಟ್ಟ ದಾರಿಯಲ್ಲಿ ಸುಮಾರು 3 ಕಿ.ಮೀ. ದೂರದಲ್ಲಿರುವ ಈ ದೇವಾಲಯ, ಹೆದ್ದಾರಿ ಬದಿಯಲ್ಲಿಯೇ ಇದ್ದು, ಸುಲಭವಾಗಿ ತಲುಪಬಹುದು.

* ಶ್ರೀನಿವಾಸ ಮೂರ್ತಿ ಎನ್‌.ಎಸ್‌.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.