ಹೀಗೊಂದು ವಿಚಿತ್ರ ಪ್ರೇಮಕಥೆ!


Team Udayavani, Jul 2, 2017, 4:10 PM IST

5555.jpg

ರ್ಯಾಪ್‌ ಸಿಂಗರ್‌ ಆಗಿ, ವಿಡಿಯೋ ಆಲ್ಬಂಗಳ ಮೂಲಕವೇ ಚಿತ್ರರಂಗದಲ್ಲಿ ಗುರುತಿಸಿಕೊಂಡು ಬಂದ ಚಂದನ್‌ ಶೆಟ್ಟಿ ಗಾಯಕರಾಗಿಯೂ ಬೇಡಿಕೆಯಲ್ಲಿದ್ದಾರೆ. ಇಂತಿಪ್ಪ ಚಂದನ್‌ ಶೆಟ್ಟಿ ಈಗ ಹೀರೋ ಆಗುತ್ತಿದ್ದಾರೆ. ಈಗಾಗಲೇ ಅವರು ನಾಯಕರಾಗಿರುವ ಚಿತ್ರಕ್ಕೆ ಮುಹೂರ್ತ ಕೂಡಾ ನಡೆದಿದೆ. ಅದು “ವಿಚಿತ್ರ ಪ್ರೇಮಕಥೆ’. ರವಿವರ್ಮ ಈ ಚಿತ್ರದ ನಿರ್ದೇಶಕರು. ಈ ಹಿಂದೆ “ಸಂಗಮ’, “ಜೈ ಭಜರಂಗಬಲಿ’ ಸಿನಿಮಾಗಳನ್ನು ನಿರ್ದೇಶಿಸಿದ್ದ ರವಿವರ್ಮ ಈಗ “ವಿಚಿತ್ರ ಪ್ರೇಮಕಥೆ’ ಮಾಡಲು ಹೊರಟಿದ್ದಾರೆ.

ಟೈಟಲ್‌ ಕೇಳಿದಾಗ ಇದೊಂದು ಲವ್‌ಸ್ಟೋರಿ ಎಂದು ಗೊತ್ತಾಗುತ್ತದೆ. ಆದರೆ ವಿಚಿತ್ರವಾಗಿ ಏನಿದೆ, ಎಂದು ನೀವು ಕೇಳಬಹುದು. ಇಲ್ಲಿ ನೀವು “ವಿ’ಯನ್ನು ಬಿಟ್ಟರೆ “ಚಿತ್ರ ಪ್ರೇಮಕಥೆ’ ಎಂದು ಓದಿಕೊಳ್ಳಬಹುದು. ಅದಕ್ಕೆ ಕಾರಣ ಇದು ಚಿತ್ರಕಲೆಗಾರರ ಸುತ್ತ ನಡೆಯುವ ಕಥೆ. ಹಾಗಾಗಿಯೇ ಚಿತ್ರಕ್ಕೆ “ಕುಂಚ ಕಹಾನಿ’ ಎಂಬ ಟ್ಯಾಗ್‌ ಲೈನ್‌ ಇದೆ. ಚಿತ್ರಕಲೆಯನ್ನು ಕಲಿತಿರುವ ನಾಯಕನ ಹಿನ್ನೆಲೆಯ ಲವ್‌ಸ್ಟೋರಿಯಾಗಿದ್ದರಿಂದ ಆ ಟೈಟಲ್‌ ಇಡಲಾಗಿದೆಯಂತೆ.

ಇದೊಂದು ಪಕ್ಕಾ ರೊಮ್ಯಾಂಟಿಕ್‌ ಲವ್‌ಸ್ಟೋರಿಯಾಗಿದ್ದು, ನಾನಾ ಶೇಡ್‌ಗಳಲ್ಲಿ ಸಾಗುತ್ತದೆಯಂತೆ. ಅಂದಹಾಗೆ, ಈ ಚಿತ್ರವನ್ನು ಗುಬ್ಬಿ ವೀರಣ್ಣನವರ ಮೊಮ್ಮಗ ಭರತ್‌ಕುಮಾರ್‌  ನಿರ್ಮಿಸುತ್ತಿದ್ದಾರೆ. ಗುಬ್ಬಿ ವೀರಣ್ಣ ಪ್ರೊಡಕ್ಷನ್ಸ್‌ನಡಿ ಈ ಸಿನಿಮಾ ತಯಾರಾಗುತ್ತಿದೆ. ಚಿತ್ರದಲ್ಲಿ ಚಂದನ್‌ ಶೆಟ್ಟಿಗೆ ನಾಯಕಿಯಾಗಿ ನಿಶ್ಚಿಕಾ ನಾಯ್ಡು ನಟಿಸುತ್ತಿದ್ದಾರೆ. ನಿಶ್ವಿ‌ಕಾಗೆ ಇದು ಕನ್ನಡದಲ್ಲಿ ಎರಡನೇ ಸಿನಿಮಾ. ಈಗಾಗಲೇ ಅನೀಶ್‌ ತೇಜೇಶ್ವರ್‌ ನಾಯಕರಾಗಿರುವ “ವಾಸು’ ಚಿತ್ರದಲ್ಲೂ ನಿಶ್ವಿ‌ಕಾ ನಾಯಕಿಯಾಗಿದ್ದಾರೆ.

ಚಿತ್ರಕ್ಕೆ ಆರ್‌.ಪಿ.ಪಟ್ನಾಯಕ್‌ ಅವರ ಸಂಗೀತ, ವಿನಾಯಕರಾಮ್‌ ಕಲಗಾರು ಸಂಭಾಷಣೆ ಚಿತ್ರಕ್ಕಿದೆ. ಈಗಾಗಲೇ ಗುಬ್ಬಿಯಲ್ಲಿ ಚಿತ್ರಕ್ಕೆ ಮುಹೂರ್ತ ನಡೆದಿದ್ದು, ಗುಬ್ಬಿ, ತುಮಕೂರು, ಬೆಂಗಳೂರು, ಮೂಡಿಗೆರೆ ಸೇರಿದಂತೆ ನಾನಾ ಕಡೆಗಳಲ್ಲಿ ಮೂರು ಶೆಡ್ನೂಲ್‌ನಲ್ಲಿ ಚಿತ್ರೀಕರಣ ನಡೆಯಲಿದೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.