ಧರ್ಮ ಹೇಳುವ ಶಾಂತಿಯ ಮೂಲ ಯಾವುದು?


Team Udayavani, Aug 4, 2018, 3:25 AM IST

2-aa.jpg

ಜಗತ್ತು ಕಾಲಚಕ್ರದಲ್ಲಿ ಸುತ್ತುತ್ತಲೇ ಇರುತ್ತದೆ. ಅದು ನಿಲ್ಲುವುದನ್ನು ಊಹಿಸುವುದೂ ಭಯಾನಕವೇ. ಏಕೆಂದರೆ, ಹುಟ್ಟುಸಾವಿಗೆ ಕಾರಣವಾಗುವ ಮೂಲಗಳಲ್ಲೊಂದು ಈ ಜಗತ್ತಿನ ಸುತ್ತುವಿಕೆ. ಭೂಮಿ ತಿರುಗುತ್ತಿದ್ದಂತೆ ಕಾಲ ಬದಲಾಗುತ್ತ ಹೋಗುತ್ತದೆ. ಮುಂಜಾನೆ, ಮಧ್ಯಾಹ್ನ, ರಾತ್ರಿ ಮತ್ತೆ ಮುಂಜಾನೆ. ಅಲ್ಲದೆ ಪ್ರತಿ ಕ್ಷಣದಲ್ಲಿಯೂ ಹೊಸ ಅನುಭವಗಳು ಮಾನವನಿಗೆ ದೊರಕುತ್ತಲೇ ಹೋಗುತ್ತವೆ. ಅವುಗಳು ಮನಸ್ಸಿಗೆ ಆನಂದವನ್ನುಂಟು ಮಾಡಬಹುದು ಅಥವಾ ದುಃಖವನ್ನುಂಟು ಮಾಡಬಹುದು. ಆ ಕ್ಷಣ ಒಬ್ಬ ಮನುಷ್ಯನನ್ನು ತೀವ್ರವಾದ ಸಮಸ್ಯೆಯಿಂದ ಹೊರದಬ್ಬಿ ಬಿಡಬಹುದು ಅಥವಾ ನೋವಿನ ಕೂಪಕ್ಕೆ ತಳ್ಳಬಹುದು. ಹಾಗಾಗಿ, ಮನುಷ್ಯ ಇವತ್ತು ಇದ್ದಂತೆ  ನಾಳೆ ಇರುತ್ತಾನೆಂದು ಹೇಳಲಾಗದು. ಇದೇ ಬದುಕು ಎಂದುಕೊಂಡು ತಟಸ್ಥವಾಗಿದ್ದರೂ ಯಾರೂ ನೋವಿನಿಂದ ತಪ್ಪಿಸಿಕೊಂಡವರಿಲ್ಲ. ಅಶಾಂತಿಯಿಂದ ಮರುಗುವವರು, ಕೊರಗುವವರು ಜಗತ್ತಿನ ಮೂಲೆ ಮೂಲೆಯಲ್ಲಿಯೂ ಇ¨ªಾರೆ. 
ಶಾಂತಿಯಿಲ್ಲದ ಬದುಕು ಎಂಬ ಕೊರಗಿನಲ್ಲಿಯೇ ಜೀವಿಸುತ್ತಿದ್ದಾರೆ.

ಶಾಂತಿ ಎಂದರೇನು? ಶಾಂತಿ ಎಂದರೆ ಮನಸ್ಸಿನ ನೆಮ್ಮದಿಯೇ? ಸಂತೋಷವೇ? ಬದುಕಿಗೆ ಬೇಕಾಗುವ ಅಗತ್ಯಗಳ ಪೂರೈಕೆಯೇ? ಆದರೆ ಇವ್ಯಾವುವೂ ಶಾಂತಿಯ ರೂಪವಲ್ಲ. ಶಾಂತಿ ಎಂಬುದು ಮನಸ್ಸಿನ ಸಮಸ್ಥಿತಿ. 

ಯಾವುದನ್ನೂ ಬಯಸದ ಸ್ಥಿತಿ. ಇದ್ದುದರಲ್ಲಿಯೇ ಸಂತೃಪ್ತಿ ಹೊಂದುವ ಸ್ಥಿತಿ. ನಾಳೆಗಾಗಿ ಇಂದಿನ ನೆಮ್ಮದಿಯನ್ನು ಹಾಳು ಮಾಡಿಕೊಳ್ಳದ ಸ್ಥಿತಿ. ಈ ಸ್ಥಿತಿಯನ್ನು ಹೊಂದುವುದು ಸರಳವೆನಿಸಿದರೂ ಪ್ರಸ್ತುತ ಜಗತ್ತಿನಲ್ಲಿ ಅಸಾಧ್ಯದ ಮಾತೇ! ಪ್ರಸ್ತುತ ಜಗತ್ತಿನಲ್ಲಿ ಒಬ್ಬನ ಬೇಕು ಬೇಡಗಳು ಇನ್ನೊಬ್ಬನ ಬೇಕು ಬೇಡಗಳನ್ನು ಅವಲಂಬಿಸಿಕೊಂಡಿರುವುದರಿಂದ ಶಾಂತಿಯನ್ನು ಹೇಗೆ ಕಂಡುಕೊಳ್ಳಬೇಕೆಂಬುದನ್ನು ತಿಳಿಯದ ಸ್ಥಿತಿಯಲ್ಲಿ ನಾವಿದ್ದೇವೆ. ಆದರೆ ಭಗವದ್ಗೀತೆಯಲ್ಲಿ ಕೃಷ್ಣ ಶಾಂತಿಯನ್ನು ಯಾರು ಪಡೆಯಬಲ್ಲರು ಎಂಬುದನ್ನು ಸರಳವಾಗಿ ಹೇಳಿ¨ªಾನೆ. ವಿಹಾಯ ಕಾಮಾನ್‌ ಯಃ ಸರ್ವಾನ್‌ ಪುಮಾಂಶ್ಚರತಿ ನಿಃಸ್ಪೃಹಃ ಣ ನಿರ್ಮಮೋ ನಿರಹಂಕಾರಃ ಶಾಂತಿಮಧಿಗತ್ಛತಿ ಣಣ (ಭಗವದ್ಗೀತೆ ಸಾಂಖ್ಯಯೋಗ ಶ್ಲೋಕ 71)

ಇದು ಕೃಷ್ಣ ಹೇಳಿದ ಶಾಂತಿಯ ಸರಳ ಸೂತ್ರ. ಇಂದ್ರಿಯ ತೃಪ್ತಿಯ ಎಲ್ಲ ಬಯಕೆಗಳನ್ನು ತ್ಯಜಿಸಿ, ಬಯಕೆಗಳಿಂದ ಮುಕ್ತನಾದವನು, ದೊರೆತನ ಅಥವಾ ಒಡೆತನದ ಭಾವವನ್ನು ಬಿಟ್ಟಿರುವವನು ಹಾಗೂ ಅಹಂಕಾರವಿಲ್ಲದವನು ನಿಜವಾದ ಶಾಂತಿಯನ್ನು ಪಡೆಯಬಲ್ಲ. ಮನುಷ್ಯನ ದೌರ್ಬಲ್ಯ ಇರುವುದೇ ಈ ಇಂದ್ರಿಯ ತೃಪ್ತಿಯ ಆಸೆಗಳನ್ನು ಈಡೇರಿಸುವುದರಲ್ಲಿ. ಇಂತಹ ಆಸೆಗಳಿಂದ ಮುಕ್ತನಾಗದ ಹೊರತು ಆತ ನೆಮ್ಮದಿ ಅಥವಾ ಶಾಂತಿಯನ್ನು ಹೊಂದಲು ಸಾಧ್ಯವಿಲ್ಲ. ನಾಲಿಗೆಯ ಚಪಲಕ್ಕೆ, ದೇಹದ ಆರೋಗ್ಯಕ್ಕೆ, ಹಾನಿಕಾರಕವಾದ ಆಹಾರವನ್ನು ಸೇವಿಸಿ, ನಂತರ ಆ ಆಹಾರದಿಂದಲೇ ಆಸ್ಪತ್ರೆಗೆ ಅಲೆಯುವಂತಾಗಿ ತನ್ನ ಜೀವನದ ಶಾಂತಿಯನ್ನೇ ಕಳೆದುಕೊಳ್ಳಬಹುದು. ಇದಕ್ಕೆ ಕಾರಣ ಇಂದ್ರಿಯ ಆಸೆಗಳು. ಮೊದಲು ಅದನ್ನು ನಿಗ್ರಹಿಸಬೇಕು. ಮನುಷ್ಯನ ಇಂದ್ರಿಯಗಳ ಚಪಲಗಳಿಗೆ ಕೊನೆಯೆಂಬುದಿಲ್ಲ. ಹಾಗಾಗಿ, ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡು ಅವನ್ನು ನಿಗ್ರಹಿಸಿದಾಗಲೇ ಶಾಂತಿಯನ್ನು ಪಡೆಯಬಹುದು. ತಾನೇ ಹಿರಿಯ ಅಥವಾ ಒಡೆಯ ಎಂಬ ಭಾವವನ್ನು ಮೊದಲು ತ್ಯಜಿಸಬೇಕು. ಅಶಾಂತಿಯ ಮೂಲ ಆಗರವೇ ಈ ಮಾಲೀಕತ್ವದ ಗುಣ. ಎಲ್ಲವೂ ತನ್ನದು ಎಂದು ಎಲ್ಲರನ್ನೂ ಒಡೆತನದ ಭಾವದಿಂದ ಕಾಣುವವನಿಗೆ ಎಂದಿಗೂ ನೆಮ್ಮದಿಯಿರುವುದಿಲ್ಲ. ಈ ಜಗತ್ತಿನಲ್ಲಿ ತನ್ನದು ಎಂಬುದು ಯಾವುದೂ ಇಲ. ಯಾವುದಕ್ಕೂ ನಾನೂ ಒಡೆಯನಲ್ಲ ಎಂಬುದರ ಜೊತೆಗೆ, ತಾನು ಸೇವಕ ಎಂಬ ಭಾವವಿದ್ದಲ್ಲಿ ಶಾಂತಿಯ ಹಾದಿ ಸುಲಭ.

ಅಹಂಕಾರ ಎಂಬ ಪೊರೆ

 ಅಹಂಕಾರವನ್ನು ತೊರೆದವನು ಶಾಂತಿಯನ್ನು ಹೊಂದಬಲ್ಲ. ಅಹಂನಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂಬುದು ಸತ್ಯವಾದ ಮಾತು. ಹಮ್ಮನ್ನು ಬಿಟ್ಟರೆ ನೆಮ್ಮದಿ ಕಣ್ಣಿಗೆ ಕಾಣುತ್ತದೆ. ಅಹಂಕಾರವೆಂಬುದು ಕಣ್ಣಿಗೆ ಕಟ್ಟಿದ ಪೊರೆಯಂತೆ. ಆತನಿಗೆ ಯಾವುದೂ ಸ್ಪಷ್ಟವಾಗಿ ಗೋಚರಿಸುವುದಿಲ್ಲ, ಆದರೆ ತಾನು ನೋಡಿದ್ದೇ ಸತ್ಯ ಎಂಬ ಭ್ರಮೆಯಲ್ಲಿ ತನ್ನ ಮನಶ್ಯಾಂತಿ ಯ ಜೊತೆಗೆ ಇತರರ ಶಾಂತಿಯನ್ನೂ ಕೆಡಿಸಲು ಕಾರಣವಾಗುತ್ತಾನೆ. ಹಾಗಾಗಿ, ಎಲ್ಲಾ 
ಬಯಕೆಗಳನ್ನೂ ಒಡೆತನದ ಭಾವವನ್ನೂ ದರ್ಪವನ್ನೂ ತೊರೆದಾಗ ಮಾತ್ರ ಶಾಂತಿ ಸಿಗುತ್ತದೆಂಬುದನ್ನು ಧರ್ಮ ಹೇಳುತ್ತದೆ.

ಶಾಂತಿಯ ಮೂಲ: ಧರ್ಮವನ್ನು ಧರ್ಮದ ರೀತಿಯಲ್ಲಿಯೇ ಅನುಸರಿಸಿ ಆಚರಿಸಿದರೆ ಶಾಂತಿಯನ್ನು ಅರಸಿಕೊಂಡು ಎಲ್ಲಿಗೂ ಹೋಗಬೇಕಾಗಿಲ್ಲ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.