ಸನ್ಮಾರ್ಗ ತೋರುವ ಶಕ್ತಿಯೇ ಗುರು?


Team Udayavani, Aug 18, 2018, 12:13 PM IST

233.jpg

ಗುರುವಿಗೆ ತನ್ನ ಶಿಷ್ಯನ ಮೇಲೆ ಪ್ರೀತಿ ತೋರುವಾಗ ಯಾವುದೇ ಸ್ವಾರ್ಥವಿರದೆ ಆ ಮಗುವಿನ ಶ್ರೇಯಸ್ಸಿಗೋಸ್ಕರ ಪ್ರೀತಿಂದಲೇ ಜ್ಞಾನವನ್ನು ಧಾರೆಯೆರೆಯುತ್ತಾನೆ. ಆದುದರಿಂದಲೇ ಕಣ್ಣಿಗೆ ಕಾಣುವ ದೇವರೆಂದರೆ ಗುರು.

ಈ ಕಲಿಯುಗದಲ್ಲಿ ದೇವರನ್ನು ಕಂಡವರಿಲ್ಲ. ದೇವರಿದ್ದಾನೆಂಬ ಅರಿವು ಬದುಕಿನ ದಾರಿಯನ್ನು ನಿರ್ಮಿಸಿದೆ ಮತ್ತು ಆ ಅರಿವಿನ ಮೂಲ ಶಕ್ತಿಯೂ ದೇವರೇ ಆಗಿರುವುದರಿಂದ ದೇವರನ್ನು ಎಲ್ಲರೂ ಕಂಡಿದ್ದಾರೆ. ಇಲ್ಲ, ನಾನು ದೇವರನ್ನು ನೋಡಲೇ ಇಲ್ಲ ಎನ್ನುವುದು ನಮ್ಮ ಆಲೋಚನೆಯ ಸಂಕೀರ್ಣ ಸ್ವರೂಪ. ಕಣ್ಣಿಗೆ ಕಾಣುವ ದೇವರು ನಮ್ಮೆದುರಿಗೆ ಓಡಾಡುತ್ತಿದ್ದಾನೆಂದರೆ ಆಶ್ಚರ್ಯವೂ ಅಲ್ಲ; ಉತ್ಪ್ರೇಕ್ಷೆಯೂ ಅಲ್ಲ. ಹಾಗಾದರೆ ಆ ದೇವರು, ಅಂದರೆ-ಕಣ್ಣಿಗೆ ಕಾಣುವ ದೇವರು ಯಾರು?

ದೇವರು ಎಂದರೆ ಅದೊಂದು ಅತಿಮಾನುಷ ಶಕ್ತಿ. ಮನುಷ್ಯನನ್ನು ಮೀರಿದ್ದು. ಕಣ್ಣಿಗೆ ಕಾಣದ್ದು ಎಲ್ಲ ಕ್ರಿಯೆಗಳಿಗೆ ಮೂಲ ಕಾರಣವಾದದ್ದನ್ನು ನಾನು ದೇವರು ಎಂದು ಕೊಳ್ಳುತ್ತೇನೆ. ನನ್ನ ಪ್ರಕಾರ ವಿಜ್ಞಾನ ಎಷ್ಟೇ ಮುಂದುವರಿದು ಜಗತ್ತಿನ ಆಗುಹೋಗುಗಳಿಗೆ ವೈಜ್ಞಾನಿಕ ಕ್ರಿಯೆ, ಕಾರಣಗಳನ್ನು ನೀಡಿದರೂ ಆ ಕಾರಣವನ್ನು ಹುಡುಕುವ ಶಕ್ತಿ ಅಥವಾ ಬುದ್ಧಿಯನ್ನು ಕೊಟ್ಟಿದ್ದಾದರೂ ಯಾರೆಂದರೆ ಅದು ದೇವರೇ ಎಂಬುದು ನನ್ನ ಬಲವಾದ ನಂಬಿಕೆ. ಆದರೆ ಅದು ನಮ್ಮ ಕಣ್ಣಿಗೆ ಕಾಣುತ್ತಿಲ್ಲ. ಜಗತ್ತಿನಲ್ಲಿರುವ ಎಲ್ಲ ಶಕ್ತಿಗಳೂ ಕಾಣಲೇ ಬೇಕೆಂದೇನಿಲ್ಲವಲ್ಲ. ಇದು ಕಾಣದ ದೇವರು ಮತ್ತು ಕೈ ಬಿಡದ ದೇವರ ಬಗೆಗಿನ ಮಾತು. ಈ ಕಲಿಯುಗದಲ್ಲಿ ಕಣ್ಣಿಗೆ ಕಾಣುವ ದೇವರು ಇದ್ದಾನೆ ಅದರಿಂದಾಗಿಯೇ ಇವತ್ತಿಗೂ ಜಗತ್ತಿನಲ್ಲಿ ಕೆಲವಷ್ಟು ನೀತಿನಿಯಮಗಳು ಪಾಲಿಸಲ್ಪಡುತ್ತಿವೆ.

ಕಣ್ಣಿಗೆ ಕಾಣುವ ದೇವರೆಂದರೆ ಗುರು. ಅರಿವಿನ ಅಕ್ಷರವನ್ನು ಮನಸ್ಸಿನೊಳಗೆ ತುಂಬುವ ಗುರುವೇ ದೇವರು. ದೇವರನ್ನು ಕಾಣಲು ಬೇಕಾಗುವ ಪರಿಕರವನ್ನು ಒದಗಿಸಿಕೊಡುವ ಅಥವಾ ಸನ್ಮಾರ್ಗವನ್ನು ತೋರಿಕೊಡುವ ಮಹಾನ್‌ ಕಾರ್ಯ ಮಾಡುವ ಜೀವಂತ ವಿಶೇಷ ಶಕ್ತಿಯೆಂದರೆ ಗುರು. ಇದರಿಂದಾಗಿಯೇ 

ಗುರುಬ್ರಹ್ಮ ಗುರುರ್ವಿಷ್ಣು ಗುರುದೇವೋ ಮಹೇಶ್ವರಃ | ಗುರು ಸಾಕ್ಷಾತ್‌  ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ || ಎಂದು ನಮಸ್ಕರಿಸುತ್ತೇವೆ. ಇದು ಗುರುವೇ ಸರ್ವಸ್ವ ಎಂದು ಸಾರುವ ಸಂಸ್ಕೃತದ ಶ್ಲೋಕ.

ನಾವು ದೇವರನ್ನು ಸೇರಲು ಬಯಸುತ್ತೇವೆ.  ದೇವರು ಇರುವಂಥ ದಾರಿಯನ್ನು ತೋರಿಸಿ ಕೈಹಿಡಿದು ನಡೆಸುವವನು ಗುರು. ಹೊರ ಜಗತ್ತಿನ ಮುಖವನ್ನು ಪರಿಚಯಿಸುತ್ತ ಜೊತೆಗೆ ಲೋಕಕ್ಕೆ ನಮ್ಮನ್ನು ಅನಾವರಣ ಮಾಡುವವನೇ ಗುರು. ಶಿಶುತನ ಎಂಬುದು ಒಂದು ಆಕೃತಿ ರಚನೆಗೆ ತಯಾರಿಸಿಟ್ಟ ಜೇಡಿಮಣ್ಣಿನಂತೆ. ಅದಕ್ಕೆ ಸ್ಪಷ್ಟ ಆಕಾರ ಕೊಡಲು ಅಪ್ಪ-ಅಮ್ಮನ ಪರಿಶ್ರಮವಿದ್ದರೂ ಅದರ ಪರಿಪೂರ್ಣತೆಗೆ ಗುರುವಿನ ಮೊರೆ ಹೋಗಲೇ ಬೇಕು.

ಏಕೆಂದರೆ, ಮಮತೆಯ ಕಣ್ಣುಗಳು ಕೆಲವೊಮ್ಮೆ ತಂದೆತಾಯಿಯರನ್ನು ಬಂಧಿಸಿಬಿಡುವ ಅವಕಾಶ ಹೆಚ್ಚಿರುವುದರಿಂದ ಮಗು ತಪ್ಪುದಾರಿ ಹಿಡಿಯಲು ಕಾರಣವಾಗಬಹುದು. ಆದರೆ ಗುರುವಿಗೆ ಮಗುವಿನ ಮೇಲೆ ಪ್ರೀತಿಯಿದ್ದರೂ ಆತ ಶಿಕ್ಷಿಸಿಯಾದರೂ ತಪ್ಪನ್ನು ತಿದ್ದಿ ಸರಿದಾರಿಗೆ ತರಬಲ್ಲ. ಇಂದು ಜಗತ್ತಿನಲ್ಲಿ ಮಹತ್ತರ ಸಾಧನೆಯನ್ನು ಮಾಡಿದವರ ಹಿಂದೆ ಗುರಗಳ ಮಾರ್ಗದರ್ಶನ ಮತ್ತು ಶಕ್ತಿ ಎಂಬುದು ಸರ್ವಸಮ್ಮತವಾದುದು.

ಇನ್ನು ನಿಸ್ವಾರ್ಥ ಪ್ರೀತಿಯನ್ನು ಯಾರು ಕೊಡುತ್ತಾರೆಂದು ಕೇಳಿದರೆ ಅದಕ್ಕೂ ಉತ್ತರ ಗುರು. ಮಿತ್ರರು, ಬಂಧುಗಳು ಕೊಡುವ ಪ್ರೀತಿಯಲ್ಲಿ ಮುಂದೆಲ್ಲೋ  ನಮಗೆ ಸಹಾಯಕ್ಕಾಗಬಹುದೆಂಬ ಸ್ವಾರ್ಥವಿರುತ್ತದೆ. ತಂದೆ ತಾಯಿಯರಲ್ಲೂ, ತಮ್ಮ ಮುದಿತನದಲ್ಲಿ ನಮ್ಮನ್ನು ಮಕ್ಕಳು ನೋಡುತ್ತಾರೆಂಬ ಅರಿವಿಲ್ಲದ ಸ್ವಾರ್ಥ ಇದ್ದೇ ಇರುತ್ತದಂತೆ. ಆದರೆ, ಗುರುವಿಗೆ ತನ್ನ ಶಿಷ್ಯನ ಮೇಲೆ ಪ್ರೀತಿ ತೋರುವಾಗ ಯಾವುದೇ ಸ್ವಾರ್ಥವಿರದೆ ಆ ಮಗುವಿನ ಶ್ರೇಯಸ್ಸಿಗೋಸ್ಕರ ಪ್ರೀತಿಂದಲೇ ಜ್ಞಾನವನ್ನು ಧಾರೆಯೆರೆಯುತ್ತಾನೆ. ಆದುದರಿಂದಲೇ ಕಣ್ಣಿಗೆ ಕಾಣುವ ದೇವರೆಂದರೆ ಗುರು.

ಗುರು ಶಕ್ತಿ: ಅಜ್ಞಾನದ ಅಂಧಕಾರದಿಂದ ಸುಜ್ಞಾನದ ಬೆಳಕಿನೆಡೆಗೆ ಒಯ್ಯುವ ನಿಸ್ವಾರ್ಥ ಪ್ರೀತಿಯ ಪೂಜ್ಯನೀಯ ಶಕ್ತಿ. ಅಂತಹ ಗುರುವಿಗೆ ಸಾಷ್ಟಾಂಗ ವಂದನೆ.

ವಿಷ್ಣು ಭಟ್ಟ ಹೊಸ್ಮನೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.