ದೇವರು ಎಂದರೆ ಯಾರು?


Team Udayavani, Sep 1, 2018, 11:55 AM IST

3-aa.jpg

ದೇವರನ್ನು ನೋಡುವ ಶಕ್ತಿಯಾಗಲಿ, ನೈತಿಕಬಲವಾಗಲಿ ಇಂದು ಯಾರಿಗೂ ಇರಲಿಕ್ಕಿಲ್ಲ. ದೇವರು ನಮ್ಮ ನಂಬಿಕೆಯ ರೂಪದಲ್ಲಿದ್ದಾನೆ. ಮೂರ್ತವಾಗಿಯೂ ಇದ್ದಾನೆ; ಅಮೂರ್ತವಾಗಿಯೂ ಇದ್ದಾನೆ. ಕಲ್ಲುಮಣ್ಣಿನಲ್ಲೂ ಇರುವ ದೇವರು ನೋಡಲು ಶುದ್ಧಮನಸ್ಸಿನ ರೀತಿಯಲ್ಲಿದ್ದಾನೆ. ನಿಮ್ಮದು ಶುದ್ಧ ಮನಸ್ಸಾದರೆ ದೇವರ ರೂಪ ಕಾಣುತ್ತದೆ. 

ದೇವರು ಎಂದರೆ ಯಾರು? ಎಂಬ ಪ್ರಶ್ನೆ ಇದಿರಾದರೆ, ದೇವರು ಎಂದರೆ ದೇವರು. ಬೇರೆ ಏನೂ ಅಲ್ಲ ಎಂದು ಸರಳವಾಗಿ ಹೇಳಿಬಿಡಬಹುದು. ದೇವರಿದ್ದಾನೋ ಇಲ್ಲವೋ? ಎಂಬ ಪ್ರಶ್ನೆ ಎಲ್ಲರನ್ನೂ ಹಲವು ಬಾರಿ ಕಾಡುತ್ತದೆ. ಸಂಕಟ ಬಂದಾಗ ವೆಂಕಟರಮಣ ಎಂಬ ಮಾತಿನಂತೆ, ಕಷ್ಟಗಳು ಬಂದಾಗಲೆಲ್ಲ ನಮ್ಮನ್ನು ಕಾಪಾಡಲು ದೇವರು ಇಲ್ಲವೇ? ಎಂದುಕೊಳ್ಳುತ್ತೇವೆ. ಪ್ರಪಂಚದಲ್ಲಿ ಉತ್ತರವೇ ದೊರಕದ ಪ್ರಶ್ನೆಗಳು ಹಲವಾರಿವೆ. ಆದರೆ ಉತ್ತರಬೇಕೆಂದು ಹಟದಿಂದ ಹುಡುಕುತ್ತ ಹೋದರೆ ಕೆಲವು ಪ್ರಶ್ನೆಗಳಿಗಾದರೂ ಉತ್ತರ ಸಿಗುತ್ತದೆ. ಹಾಗಾದರೆ, ಈ ದೇವರು ಎಂದರೆ ಯಾರು? ನಾವು ನಂಬಿ ಕೈಮುಗಿಯುತ್ತಿರುವ ಆ ಶಕ್ತಿ ದೇವರೇ? ಆತ ಎಲ್ಲಿದ್ದಾನೆ? ಹೇಗಿದ್ದಾನೆ? ಏನು ಮಾಡುತ್ತಿದ್ದಾನೆ? ಎಂಬ ಕುತೂಹಲ ಸಹಜವಾಗಿಯೇ ಇರುತ್ತದೆ.

ದೇವರು ಎಂದರೆ ಯಾರು?
ದೇವರೆಂದರೆ ಪ್ರಕೃತಿಯಲ್ಲಿನ ಅಮೂರ್ತ ಶಕ್ತಿ. ಅದೊಂದು ಕ್ರಿಯೆಯ ಪ್ರೇರಕ. ಕ್ರಿಯೆಗೆ ಕಾರಣ. ಪ್ರಕೃತಿಸಹಜವಾದದ್ದು ನಡೆಯುವುದಕ್ಕೂ ಒಂದು ಶಕ್ತಿ ಸಂಚಲನದ ಅವಶ್ಯಕತೆಯಿದೆ. ಆ ಶಕ್ತಿಯನ್ನೇ ದೇವರು ಎನ್ನುತ್ತೇವೆ. ನದಿಯ ನೀರು ಸೆಳೆದೊಯ್ಯುತ್ತಿರುವಾಗ ಆತನಿಗೊಂದು ಬಂಡೆ ಆಸರೆಯಾಗುತ್ತದೆ. ಅದೇ ದೇವರು. ಅಂದರೆ, ಜಗದ ಆಗುಹೋಗುಗಳಿಗೆ ಕಾರಣವಾಗುವ ಶಕ್ತಿಯೇ ದೇವರು. ಮನುಷ್ಯನಿಗೆ ಬುದ್ಧಿ ಎಲ್ಲಿಂದ ಬಂತೆಂದು ಕೇಳಿದರೆ ಅದಕ್ಕೆ ಕಾರಣ ದೇವರು. ಮನುಷ್ಯ ಕೆಟ್ಟಬುದ್ಧಿಯನ್ನು ಹೋಂದಲು ಕಾರಣವೇನೇಂದು ಕೇಳಿದರೆ ಅದಕ್ಕೆ ಕಾರಣ ದೇವರನ್ನು ನಂಬದಿರುವುದು.

ದೇವರು ಎಲ್ಲಿದ್ದಾನೆ?
ದೇವರು ಎಲ್ಲಾ ಕಡೆಯೂ ಇದ್ದಾನೆ. ಅಣುಅಣುವಿನಿಂದ ಹಿಡಿದು ಎಲ್ಲಾ ವಸ್ತು, ಪ್ರಾಣಿಪಕ್ಷಿಗಳಲ್ಲೂ ದೇವರಿದ್ದಾನೆ. ನಿರ್ವಾತದಲ್ಲೂ ದೇವರಿದ್ದಾನೆ. ಪ್ರತಿ ಉಸಿರಿಗೆ ನಾವು ತೆಗೆದುಕೊಳ್ಳುವ ಗಾಳಿಯಲ್ಲಿಯೂ ದೇವರಿದ್ದಾನೆ. ದೇವರಿಲ್ಲದ ಜಾಗವೇ ಇಲ್ಲ. ಶುದ್ಧವಾದ ನಂಬಿಕೆಯೂ ದೇವರ ಪ್ರತಿರೂಪವೇ. ನಾವು ದೇವರು ಇಲ್ಲಿ ಇಲ್ಲ ಎಂದುಕೊಂಡಲ್ಲೆಲ್ಲಾ ದೇವರು ಇದ್ದಾನೆ!

ದೇವರು ಏನು ಮಾಡುತ್ತಿದ್ದಾನೆ?
ಈ ಪ್ರಶ್ನೆಗೆ ನಮ್ಮ ಸುತ್ತಲೂ ಒಮ್ಮೆ ಕಣ್ಣರಳಿಸಿ ನೋಡಿದರೆ ಉತ್ತರ ಸಿಗುತ್ತದೆ. ಹನಿಮಳೆಗೆ ಇಳೆಯಲ್ಲಿ ಹಸಿರು ಚಿಗುರುತ್ತಿವೆ. ಅತೀ ಸೂಕ್ಷ್ಮ ಜೀವಿಯಿಂದ ಹಿಡಿದು ಆನೆಯಂತಹ ದೊಡ್ಡ ಗಾತ್ರದ ಪ್ರಾಣಿಗಳು ಹುಟ್ಟುತ್ತಲೇ ಇವೆ, ಮರದಿಂದ ಬಿದ್ದ ಹಣ್ಣು ಬೀಜದಿಂದ ಬೇರ್ಪಟ್ಟರೂ, ಆ ಬೀಜ ಇನ್ನೆಲ್ಲೋ  ನಿಧಾನವಾಗಿ ಚಿಗುರೊಡೆಯುತ್ತಿದೆ. ಅದೆಷ್ಟೂ ಗಿಡ, ಮರ, ಹಣ್ಣು ಬೇರುಗಳು ಔಷಧೀಯ ಶಕ್ತಿ ಹೊಂದಿವೆ. ಸಮುದ್ರ ಇನ್ನೂ ಬತ್ತಿಲ್ಲ, ಮಳೆಯ ಹನಿಗೆ ಕಾಡುಗಳು ಬೆಳೆದಿವೆ, ಕಾಡುಪ್ರಾಣಿಗಳು ಇನ್ನೂ ಜೀವಂತವಾಗಿವೆ. ಸೂಯೊìದಯಾಸ್ತಗಳಾಗಿವೆ. ಮಗುವಾಗಿಲ್ಲ, ಇನ್ನು ಮಗುವಾಗುವುದೇ ಇಲ್ಲ ಎಂದು ಬೇಸತ್ತ ದಂಪತಿಗಳಿಗೆ ಮಕ್ಕಳಾಗಿವೆ. ಒಂದೊಂದು ಹೂವು ಒಂದೊಂದು ಪರಿಮಳ, ಒಂದೊಂದು ಹಣ್ಣಿಗೂ ಒಂದೊಂದು ರುಚಿ. ಪ್ರಕೃತಿಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಲೇ ಇದೆ ಎಂದಾದರೆ ಇದನ್ನೆಲ್ಲ ದೇವರೇ ಮಾಡುತ್ತಿದ್ದಾನೆ ಎಂದರ್ಥ. ದೇವರಿಲ್ಲ ಎಂದುಕೊಂಡು ದೇವರ ನೆರಳಿನÇÉೇ ಬದುಕುತ್ತಿರುವುವರೂ ಇದ್ದಾರೆ.

ದೇವರು ಹೇಗಿದ್ದಾನೆ?
ದೇವರನ್ನು ನೋಡುವ ಶಕ್ತಿಯಾಗಲಿ, ನೈತಿಕಬಲವಾಗಲಿ ಇಂದು ಯಾರಿಗೂ ಇರಲಿಕ್ಕಿಲ್ಲ. ದೇವರು ನಮ್ಮ ನಂಬಿಕೆಯ ರೂಪದಲ್ಲಿದ್ದಾನೆ. ಮೂರ್ತವಾಗಿಯೂ ಇದ್ದಾನೆ; ಅಮೂರ್ತವಾಗಿಯೂ ಇದ್ದಾನೆ. ಕಲ್ಲುಮಣ್ಣಿನಲ್ಲೂ ಇರುವ ದೇವರು ನೋಡಲು ಶುದ್ಧಮನಸ್ಸಿನ ರೀತಿಯಲ್ಲಿದ್ದಾನೆ. ನಿಮ್ಮದು ಶುದ್ಧ ಮನಸ್ಸಾದರೆ ದೇವರ ರೂಪ ಕಾಣುತ್ತದೆ. ದೇವರು ಯಾರು? ಎಂಬುದು ಅನಂತವಾದ ಉತ್ತರಗಳುಳ್ಳ ಪ್ರಶ್ನೆಯಾಗಿಬಿಡುತ್ತದೆ. ದೇವರು ಎಂಬುದು ಕಲ್ಪನೆಯಲ್ಲ, ನಂಬಿಕೆ. ಈ ನಂಬಿಕೆ ಎಂಬುದೇ ಶಕ್ತಿ. ಈ ನಂಬಿಕೆಗೆ ನಾವು ಕೊಟ್ಟಿದ್ದೇ ರೂಪ. ನಾನು ಎಂಬುವವನು ಸತ್ಯದಿಂದ, ಧರ್ಮದಿಂದ ಎಲ್ಲವೂ ನೀನು ಎಂಬಂತೆ ಬದುಕುವುದೇ ದೇವರು. ಹಾಗಾಗಿ ದೇವರಿಗೆ ನಿರ್ಧಿಷ್ಟ ಆಕಾರವಿಲ್ಲ. ದೇವರ ಶಕ್ತಿ:ದೇವರು ಎಂಬ ಶಕ್ತಿಯನ್ನು ಸುಮ್ಮನೆ ನಂಬುತ್ತ ಕೇವಲ ಒಳ್ಳೆಯದನ್ನೇ ಆಚರಿಸುತ್ತ ಹೋದರೆ ಭೂಲೋಕವೇ ದೇವಲೋಕವಾದೀತು.

ವಿಷ್ಣು ಭಟ್ಟ ಹೊಸ್ಮನೆ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.