ವಿಶ್ವವಿಜೇತೆ ಸಿಂಧುಗೆ ವಿಶ್ರಾಂತಿ ಅಗತ್ಯ


Team Udayavani, Nov 2, 2019, 4:03 AM IST

varada-tare

ಈ ವಾರದ ತಾರೆಯಾಗಿ ಗುರ್ತಿಸಿಕೊಂಡಿದ್ದು ಪಿ.ವಿ.ಸಿಂಧು. ಇದಕ್ಕೆ ಕಾರಣ ಆಕೆಯ ಸಾಧನೆಯಲ್ಲ, ಕಳಪೆ ಸಾಧನೆ. ಒಂದೆರಡು ತಿಂಗಳ ಹಿಂದೆ ಬ್ಯಾಡ್ಮಿಂಟನ್‌ ವಿಶ್ವಕಪ್‌ ಗೆದ್ದು, ಇಡೀ ದೇಶದಲ್ಲಿ ಸುದ್ದಿಯಾಗಿದ್ದ ಸಿಂಧು, ಅಲ್ಲಿಂದೀಚೆಗೆ ಆಡಿದ ಕೂಟದಲ್ಲೆಲ್ಲ ಸೋಲುತ್ತಿದ್ದಾರೆ. ಅವರ ವಿಶ್ವಕಪ್‌ ಗೆಲುವು ಹಾಗಾದರೆ ಸುಳ್ಳೇ ಎನ್ನುವ ಮಟ್ಟಿಗೆ ಗೊಂದಲವುಂಟಾಗಿದೆ. ಇತ್ತೀಚೆಗೆ ಫ್ರೆಂಚ್‌ ಓಪನ್‌ನ ಎಂಟರಘಟ್ಟದ ಹೋರಾಟದಲ್ಲಿ ದೀರ್ಘ‌ಕಾಲ ಹೋರಾಡಿಯೂ, ಸಿಂಧು ಸೋತಿದ್ದಾರೆ.

ಅವರು ಹೀಗೇಕೆ ವಿಫ‌ಲವಾಗುತ್ತಿದ್ದಾರೆ ಎನ್ನುವುದೇ ಅರ್ಥವಾಗದ ಪ್ರಶ್ನೆ. ಸಿಂಧು ಭಾರತೀಯ ಬ್ಯಾಡ್ಮಿಂಟನ್‌ ಇತಿಹಾಸದಲ್ಲಿ ಯಾರೂ ಮಾಡಿರದ ಸಾಧನೆ ಮಾಡಿದ್ದಾರೆ. ವಿಶ್ವಕಪ್‌ನಲ್ಲಿ 2 ಬೆಳ್ಳಿ, 2 ಕಂಚು, ಒಮ್ಮೆ ಚಿನ್ನ ಗೆದ್ದಿದ್ದಾರೆ. ಬಿಡಬ್ಲ್ಯುಎಫ್ ವಿಶ್ವ ಟೂರ್‌ ಪ್ರಶಸ್ತಿ ಗೆದ್ದ ದೇಶದ ಏಕೈಕ ಕ್ರೀಡಾಪಟು. ಒಲಿಂಪಿಕ್ಸ್‌ನಲ್ಲೂ ಬೆಳ್ಳಿ ಗೆದ್ದಿದ್ದಾರೆ. ಇಷ್ಟೆಲ್ಲ ಸಾಧನೆ ಮಾಡಿರುವ ಅವರು ಸಣ್ಣಮಟ್ಟದ ಕೂಟದಲ್ಲಿ ಮಾತ್ರ ಸತತವಾಗಿ ಕೈಚೆಲ್ಲುತ್ತಿದ್ದಾರೆ.

ಇದೇಕೆ ಹೀಗೆ? ಈ ಕೂಟಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲವೇ? ಅಥವಾ ಗೆಲ್ಲುವ ಶಕ್ತಿಯನ್ನು ಕಳೆದುಕೊಂಡಿದ್ದಾರೆಯೇ? ನಿರಂತರವಾದ ಆಟ ಅವರನ್ನು ಸುಸ್ತುಗೊಳಿಸಿದೆಯೇ? ಸದ್ಯದ ಸ್ಥಿತಿ ನೋಡಿದರೆ ಸಿಂಧು ವಿಶ್ರಾಂತಿ ತೆಗೆದುಕೊಳ್ಳುವುದೇ ಉತ್ತಮ. ಬ್ಯಾಡ್ಮಿಂಟನ್‌ ವಿಶ್ವಕಪ್‌ನಲ್ಲಿ ಚಿನ್ನ ಗೆಲ್ಲುವುದು ಭಾರತೀಯರ ಕನಸಾಗಿತ್ತು. ಮೊದಲಬಾರಿಗೆ ವಿಶ್ವಕಪ್‌ ಫೈನಲ್‌ಗೇರಿದ್ದು ಸೈನಾ ನೆಹ್ವಾಲ್‌. ಅವರು ಅಲ್ಲಿ ಸೋತು ಬೆಳ್ಳಿ ಪದಕ ಪಡೆದರು.

ಅಲ್ಲಿಂದ ಸೈನಾಗೆ ಅಂತಹದೊಂದು ಸಾಧನೆ ಸಾಧ್ಯವಾಗಲೇ ಇಲ್ಲ. ಸಿಂಧು ಮಾತ್ರ 2 ಬಾರಿ ಫೈನಲ್‌ಗೇರಿ ಸೋತಿದ್ದರು. ಅದೂ ಅದ್ಭುತ ಹೋರಾಟದ ನಂತರ. ಪದೇಪದೆ ಫೈನಲ್‌ನಲ್ಲೇ ಅವರು ಸೋಲುವುದನ್ನು ನೋಡಿದಾಗ, ಇದೇನೋ ಮಾನಸಿಕ ಸಮಸ್ಯೆ ಎಂದು ಭಾವಿಸಿದವರೇ ಹೆಚ್ಚು. ಆದರೆ ಸಿಂಧು ಹೋರಾಟ ನಿಲ್ಲಿಸಲಿಲ್ಲ, ಈ ಬಾರಿ ತಮ್ಮ ಹಿಂದಿನ ತಪ್ಪುಗಳನ್ನೆಲ್ಲ ತಿದ್ದಿಕೊಂಡು ಫೈನಲ್‌ಗೇರಿ, ಸುಲಭವಾಗಿ ವಿಶ್ವಕಪ್‌ ಗೆದ್ದೇ ಬಿಟ್ಟರು.

ಎದುರಾಳಿಗೆ ಸಣ್ಣ ಅವಕಾಶವನ್ನೂ ಕೊಡದೇ, ಅಧಿಕಾರಯುತವಾಗಿ ಗೆದ್ದರು. ಆಗ ಸಿಂಧು ಮತ್ತೆ ವೈಭವದ ದಿನಗಳಿಗೆ ಮರಳಿದರು ಎಂದು ಎಲ್ಲರೂ ಖುಷಿಪಟ್ಟರು. ಆಗಿದ್ದೇ ಬೇರೆ. ಅಲ್ಲಿಂದೀಚೆಗೆ ಅವರು ಗೆಲ್ಲಲೇ ಇಲ್ಲ. ಈ ಸೋಲುಗಳನ್ನು ಸಹಿಸಿಕೊಳ್ಳುವುದು ಸಿಂಧುವಿನಷ್ಟೇ ಅಭಿಮಾನಿಗಳಿಗೂ ಕಷ್ಟ ತಾನೇ?

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.