ರಾಮಕುಂಜದ ವಾಮನಮೂರ್ತಿ ತ್ರಿವಿಕ್ರಮ ಶಕ್ತಿ


Team Udayavani, Dec 30, 2019, 6:15 AM IST

ramakunjada

ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರನ್ನು ನಾಡಿಗೆ ನೀಡಿದ ಪುಣ್ಯ ಪುಟ್ಟ ಹಳ್ಳಿ ರಾಮಕುಂಜಕ್ಕೆ ಸಲ್ಲಬೇಕು. ಹುಡುಗನಿಗಿನ್ನೂ ಆರು ವರ್ಷ. ಆಟವಾಡುವ ವಯಸ್ಸು. ತಂದೆ- ತಾಯಿ ಮಗನನ್ನು ಉಡುಪಿಗೆ ಕರೆತಂದರು. ಆಗ ಪೇಜಾವರ ಮಠದ ಪರ್ಯಾಯವೇ ನಡೆದಿತ್ತು. ಮಠದ ಸ್ವಾಮೀಜಿ ಕೃಷ್ಣ ಪೂಜೆ ಮಾಡುವುದನ್ನು ಆ ಹುಡುಗ ವೆಂಕಟರಾಮ (ವೆಂಕಟರಮಣ ಎಂದೂ ಕರೆಯಲಾಗುತಿತ್ತು) ಆಸಕ್ತಿ­ಯಿಂದ ಗಮನಿಸಿದ. ಏನೋ ಒಂದು ಅಂತ­ರಂಗದ ಸೆಳೆತ. ತಾನೂ ಹೀಗೆ ಕೃಷ್ಣನನ್ನು ಪೂಜಿಸಬಹುದೆ?

ತಂದೆ-ತಾಯಿ ವೆಂಕಟರಮಣನನ್ನು ಸ್ವಾಮಿಗಳ ಭೇಟಿಗೆ ಕರೆದುಕೊಂಡು ಹೋದರು. ವೆಂಕಟರಾಮ ಭಕ್ತಿಯಿಂದ ಸ್ವಾಮಿಗಳಿಗೆ ನಮಸ್ಕರಿಸಿದ. ಪುಟ್ಟ ಹುಡುಗನ ಮುಗ್ಧ ಮುಖ, ಅಲ್ಲಿ ತುಂಬಿದ ಭಕ್ತಿಭಾವ, ನಡೆಯ ಚುರುಕುತನ ಎಲ್ಲ ಗಮನಿಸಿದ ಸ್ವಾಮಿಗಳಿಗೆ ಏನನ್ನಿಸಿತೋ! ಆಕಸ್ಮಿಕವಾಗಿ ಅವರ ಬಾಯಿಂದ ಹೀಗೊಂದು ಮಾತು ಬಂತು. “ನೀನು ನನ್ನಂತೆ ಸ್ವಾಮಿಯಾಗುತ್ತೀಯಾ?’ ವೆಂಕಟರಾಮ ಉತ್ತರಿಸಿದ. “ಹ್ಞೂ ಆಗುತ್ತೇನೆ.” ಈ ಆಕಸ್ಮಿಕ ಸಂಭಾಷಣೆಗೆ ಒಳಗಿನಿಂದ ಪ್ರೇರಿಸಿದ, ಮೇಲೆ ನಿಂತ ದೇವತೆಗಳು “ತಥಾಸ್ತು’ ಎಂದರು.

ಪರ್ಯಾಯದ ಅವಧಿ ಮುಗಿಯಿತು. ಆಗಣ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಮಾನ್ಯ ತೀರ್ಥರು ಸಂಚಾರಕ್ಕೆ ಹೊರಟರು. ಪಯಣದ ದಾರಿಯಲ್ಲಿ ಹಂಪೆಯನ್ನು ತಲುಪಿದರು. ಅಲ್ಲಿ ಅವರ ನಿರ್ಧಾರ ಗಟ್ಟಿಗೊಂಡಿತು. ಅವರು ವಿಳಂಬ ಮಾಡದೆ ವೆಂಕಟರಾಮನನ್ನು ಕರೆಸಿಕೊಂಡರು. ಬಹುಧಾನ್ಯ ಸಂವತ್ಸರದ ಮಾರ್ಗಶಿರ ಶುದ್ಧ ಪಂಚಮಿಯಂದು (3-12-1938) ವೆಂಕಟರ ಮಣನಿಗೆ ಹಂಪೆಯ ಯಂತ್ರೋದ್ಧಾರ ಮುಖ್ಯ ಪ್ರಾಣನ ಸನ್ನಿಧಿಯಲ್ಲಿ ಆಶ್ರಮ ದೀಕ್ಷೆ ನಡೆಯಿತು.

ರಾಮಕುಂಜದ ಪುಟ್ಟ ಹಳ್ಳಿಯ ಮುಗ್ಧ ಬಾಲಕ. ಇನ್ನೂ ಏಳರ ಬಾಲಾಪ್ಯದ ಹಸುಳೆ, ಅಧೋಕ್ಷಜ ತೀರ್ಥರ ಸಂಸ್ಥಾನದ ಉತ್ತರಾಧಿಕಾರಿಯಾಗಿ ಪೇಜಾ ವರ ಮಠದ ಪರಂಪರೆಯ 32ನೆಯ ಯತಿಯಾಗಿ, ಆಚಾರ್ಯ ಮಧ್ವರ ವೇದಾಂತ ಪೀಠವನ್ನೇರಿದ. ವೆಂಕಟರಾಮ “ವಿಶ್ವೇಶತೀರ್ಥ’ರಾದರು. ಈ ಸಂದರ್ಭದಲ್ಲೇ ಇನ್ನೊಂದು ದೈವೀ ಘಟನೆ ನಡೆಯಿತು. ಆಗ ಭಂಡಾರಕೇರಿ ಮಠಾಧೀಶರಾಗಿದ್ದ ಶ್ರೀ ವಿದ್ಯಾಮಾನ್ಯತೀರ್ಥರು ಉಡುಪಿಗೆ ಚಿತ್ತೈಸಿದರು.

ಶ್ರೀಪಾದರು ಮಾಧ್ವ ಯತಿಗಳಲ್ಲೇ ಅಗ್ರಮಾನ್ಯ ಪಂಡಿತರೆಂದು ಖ್ಯಾತರಾದವರು. ಸ್ವತಃ ಹಿರಿಯ ಸಾಧಕರು. ಈ ಬಾಲ ಯತಿ ಅವರ ಕಣ್ಣಿಗೆ ಬಿದ್ದರು. ಈ ಪುಟ್ಟ ಯತಿಯ ಚುರುಕು ಬುದ್ಧಿಯ ಚಾಕಚಕ್ಯ ಹಿರಿಯ ಯತಿಯ ಮನ ಸೆಳೆಯಿತು. 1943ರ ಫೆಬ್ರವರಿ ತಿಂಗಳು ಶ್ರೀ ವಿದ್ಯಾಮಾನ್ಯ ತೀರ್ಥರು ಭಂಡಾರಕೇರಿಯಲ್ಲಿ ಶ್ರೀ ಮಧ್ವರಾದ್ಧಾಂತ ಸಂವರ್ಧಿನೀ ಸಭೆಯನ್ನು ಸ್ಥಾಪಿಸಿದರು. ವಿದ್ವಾಂಸರ ಮೇಳವೇ ಭಂಡಾರಕೇರಿಗೆ ಧಾವಿಸಿತು. ಆ ಬಾರಿಯ ಮಧ್ವನವಮಿಯ ವಿದ್ವತ್‌ ಸಭೆಯ ಅಧ್ಯಕ್ಷತೆಯನ್ನು 12ರ ಬಾಲಯತಿ ಶ್ರೀ ವಿಶ್ವೇಶತೀರ್ಥರಿಗೆ ಒಪ್ಪಿಸಿದರು.

ಈ ವಾಮನಮೂರ್ತಿಯ ವಿದ್ಯೆಯ ತ್ರಿವಿಕ್ರಮಾವ ತಾರವನ್ನು ಅವರು ಅಂದೇ ಗುರುತಿಸಿದ್ದರು.ಹೀಗೆ ಬೆಸೆದ ಬಾಂಧವ್ಯ ಮತ್ತಷ್ಟು ಗಟ್ಟಿಗೊಂಡು ಇಬ್ಬರು ಮಹಾನ್‌ ಯತಿಗಳನ್ನು ಇನ್ನಷ್ಟು ಹತ್ತಿರಕ್ಕೆ ತಂದು ಬೆಸೆಯಿತು. ಶ್ರೀ ವಿಶ್ವೇಶತೀರ್ಥರು ಶ್ರೀ ವಿದ್ಯಾಮಾನ್ಯತೀರ್ಥರಲ್ಲಿಯೇ ವ್ಯಾಸಂಗಕ್ಕೆ ನಿಂತರು. ಭಂಡಾರಕೇರಿಯ ಗುರುಕುಲ ವಾಸ ಅವರ ಏಕಾಂತ ಚಿಂತನೆಗೆ, ಬ್ರಹ್ಮಚರ್ಯದ ಪಾಲನೆಗೆ ಮತ್ತು ಆಳವಾದ ಅಧ್ಯಯನಕ್ಕೆ ಉತ್ತಮ ವಾತಾವರಣವನ್ನು ಒದಗಿಸಿತು. ಮಾಧ್ವ ವಿದ್ವಾಂಸರಲ್ಲೇ ಅಗ್ರ ಮಾನ್ಯರಾಗಿದ್ದ ವಿದ್ಯಾ ಮಾನ್ಯತೀರ್ಥರ ಮಾರ್ಗ­ದರ್ಶ­ನ­ದಲ್ಲಿ ಶ್ರೀ ಅಧ್ಯಯನ ಸಾಗಿತು.

ಎಂಟು ವರ್ಷಗಳ ಅವಿಚ್ಛಿನ್ನ ಅಧ್ಯಯನ, ವಿದ್ಯಾಮಾನ್ಯತೀರ್ಥರು ತನ್ನೆಲ್ಲ ಅರಿವನ್ನು ಇವರಿಗೆ ಧಾರೆಯೆರೆದರು. ವಿಶ್ವೇಶತೀರ್ಥರು ವಿದ್ಯೆಯ ಪರ್ವತವೇ ಆದರು. ಬಹಳ ಜನಕ್ಕೆ ತಿಳಿದಿಲ್ಲ; ಶಾಸ್ತ್ರ ಪಾಂಡಿತ್ಯದಲ್ಲಿ ವಿಶ್ವೇಶತೀರ್ಥರ ಸಮಕ್ಕೆ ನಿಲ್ಲಬಲ್ಲ ಪೀಠಾಧಿಪತಿ ಇಡಿಯ ದೇಶದಲ್ಲಿ ಇನ್ನೊಬ್ಬನಿಲ್ಲ. (ಪೇಜಾವರ ಶ್ರೀಗಳಿಗೆ 80 ತುಂಬಿದ ಸಂದರ್ಭ ಬನ್ನಂಜೆ ಗೋವಿಂದಾಚಾರ್ಯರು ನಮ್ಮ ಸೋದರ ಪತ್ರಿಕೆ ತರಂಗಕ್ಕೆ ಬರೆದ ಲೇಖನದ ಆಯ್ದ ಭಾಗ.)

ನನ್ನ ದಾರಿ ಅದಲ್ಲ…: ಒಮ್ಮೆ ಶ್ರೀಪಾದರ ಶಿಷ್ಯರು ಅವರನ್ನು ಒತ್ತಾಯಿಸಿದರು. “ತಾವು ವೇದಾಂತ ಗ್ರಂಥಗಳಿಗೆ ಸಂಸ್ಕೃತದಲ್ಲಿ ಟೀಕೆ ಬರೆಯಬೇಕು’. ಶಿಷ್ಯರ ಕೇಳಿಕೆ ತಪ್ಪಲ್ಲ. ಸಂಸ್ಕೃತದಲ್ಲಿರುವ ವೇದಾಂತ ಗ್ರಂಥಗಳಿಗೆ ಸಂಸ್ಕೃತದಲ್ಲೇ ಟೀಕೆ ಬರೆಯಬಲ್ಲ ಅಗಾಧ ಪಾಂಡಿತ್ಯವಿರುವ ಏಕ ಮಾತ್ರ ಪೀಠಾಧಿಪತಿ ಪೇಜಾವರ ಶ್ರೀಪಾದರು. ಆದರೆ ಅದಕ್ಕೆ ಶ್ರೀಪಾದರು ನೀಡಿದ ಉತ್ತರ ಕಣ್ಣು ತೆರೆಸುವಂಥದು: “ನನ್ನ ಮೇಲೆ ಇಂಥ ಒತ್ತಡ ತರಬೇಡಿ. ನಾನು ಏನು ಮಾಡಬೇಕು ಎನ್ನುವುದು ನನಗೆ ಗೊತ್ತು. ನನ್ನ ಜೀವನದ ಗುರಿ ನನ್ನ ಕಣ್ಣ ಮುಂದಿದೆ. ಅದು ಸಮಾಜದಲ್ಲಿ ನೊಂದವರ ಸೇವೆಯೇ ಹೊರತು ಗ್ರಂಥ ರಚನೆಯಲ್ಲ’.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ve-46

ರಾಜಕಾರಣ- ಭ್ರಷ್ಟಾಚಾರ- ಸ್ವರ್ಗ- ಪರಿಸರ- ಪುಣ್ಯ…

ve-44

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ

ve-47

ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…

bg-68

ಪೇಜಾವರ ಶ್ರೀ ಬದುಕಿನ ಸಾರ

kolar-tdy-1

ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.