ಜನ ಮೆಚ್ಚಿದ ಖನನ

Khanan kannad movie

Team Udayavani, May 24, 2019, 6:00 AM IST

q-24

“ನಾನು ಏನು ಅಂದುಕೊಂಡಿದ್ದೆನೋ ಹಾಗೇ ಆಗಿದೆ…’
– ಹೀಗೆ ಹೇಳಿ ಹಾಗೊಂದು ಸ್ಮೈಲ್‌ ಕೊಟ್ಟರು ನಿರ್ಮಾಪಕ ಶ್ರೀನಿವಾಸ್‌. ಅವರು ಹೀಗೆ ಹೇಳಿದ್ದು ತಮ್ಮ ನಿರ್ಮಾಣದ “ಖನನ’ ಚಿತ್ರಕ್ಕೆ ಸಿಕ್ಕ ಮೆಚ್ಚುಗೆ ಬಗ್ಗೆ. ಹೌದು, ಹೊಸಬರೇ ಸೇರಿ ಮಾಡಿದ ಈ ಚಿತ್ರಕ್ಕೆ ಎಲ್ಲೆಡೆಯಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಚಿತ್ರ ನೋಡಿದ ಪ್ರೇಕ್ಷಕರು, ಹೊಸಬರ ಪ್ರಯತ್ನದ ಬಗ್ಗೆ ಮಾತನಾಡುತ್ತಿದ್ದಾರೆ. ದಿನ ಕಳೆದಂತೆ ಪ್ರೇಕ್ಷಕರ ಸಂಖ್ಯೆಯೂ ಹೆಚ್ಚುತ್ತಿದೆ. ಆ ಕುರಿತು ಹೇಳಿಕೊಳ್ಳಲೆಂದೇ, ಚಿತ್ರತಂಡ ಮಾಧ್ಯಮ ಎದುರು ಬಂದಿತ್ತು. ಮೊದಲು ಮಾತಿಗಿಳಿದ ನಿರ್ಮಾಪಕ ಶ್ರೀನಿವಾಸ್‌, “ಈ ಚಿತ್ರ ನೋಡಿದವರೆಲ್ಲರಿಗೂ ಇಷ್ಟವಾಗಿದೆ. ನನ್ನ ಪುತ್ರ ಆರ್ಯವರ್ಧನ್‌ ನಟನೆಯಲ್ಲಿ ಸಾಬೀತುಪಡಿಸಿದ್ದಾರೆ. ನಮಗೆ ಪ್ರೇಕ್ಷಕರೇ ದೊಡ್ಡ ಸ್ಟಾರ್. ಚಿತ್ರ ನೋಡಿ ಅವರು ಕೊಟ್ಟ ಸ್ಟಾರ್‌ನಿಂದ ಚಿತ್ರಕ್ಕೆ ಇನ್ನಷ್ಟು ಬಲ ಸಿಕ್ಕಂತಾಗಿದೆ. “ಖನನ’ 50 ಪ್ಲಸ್‌ ದಿನದ ಸಂಭ್ರಮದಲ್ಲೂ ಭೇಟಿಯಾಗ್ತಿàವಿ. ಇದೇ ಪ್ರೋತ್ಸಾಹ ಸಿಕ್ಕರೆ ಶತದಿನದ ಸಂಭ್ರಮ ಆಚರಿಸಲಿದೆ’ ಎಂದರು ಶ್ರೀನಿವಾಸ್‌.

ನಾಯಕ ಆರ್ಯವರ್ಧನ್‌ ಅವರಿಗೆ ಸಿಕ್ಕಾಪಟ್ಟೆ ಖುಷಿಯಾಗಿದೆಯಂತೆ. ಆ ಖುಷಿಗೆ ಕಾರಣ, “ಖನನ’ ಚಿತ್ರಕ್ಕೆ ಸಿಗುತ್ತಿರುವ ಪ್ರೋತ್ಸಾಹ. ಜನರು ಆಶೀರ್ವದಿಸಿದ್ದಾರೆ. ಹೀಗಾಗಿ ನನಗೂ ಅನ್ನ ತಿನ್ನುವ ಭಾಗ್ಯ ದೊರೆತಿದೆ. ಎಲ್ಲರ ಶ್ರಮಕ್ಕೆ ಸಿಕ್ಕಂತಹ ಫ‌ಲವಿದೆ. ತೆರೆಯ ಹಿಂದೆ, ಮುಂದೆ ಕೆಲಸ ಮಾಡಿದ ಪ್ರತಿಯೊಬ್ಬರಿಗೂ ಈ ಯಶಸ್ಸು ಸಿಗಬೇಕು. ಮುಂದಿನ ದಿನಗಳಲ್ಲೂ ನನ್ನ ಸಿನಿಮಾದಲ್ಲಿ ಒಳ್ಳೆಯ ಸಂದೇಶ ಇರಲಿದೆ. ಈ ಚಿತ್ರದಲ್ಲಿ ಮನುಷ್ಯನ ಬದುಕಲ್ಲಿ ಪ್ರೀತಿ, ನಂಬಿಕೆ, ವಿಶ್ವಾಸ ಎಷ್ಟು ಮುಖ್ಯ ಎಂಬುದನ್ನು ಹೇಳಿದ್ದೇವೆ. ಆ ವಿಷಯವೇ ಜನರನ್ನು ಆಕರ್ಷಿಸಿದೆ. ಆರ್ಯವರ್ಧನ್‌ನನ್ನು ಈಗ ಗುರುತಿಸಿದ್ದೀರಿ. ಮುಂದೆ ಬೆಳೆಸಿ, ಹರಸಬೇಕು’ ಎಂದರು ಅವರು.

ನಿರ್ದೇಶಕ ರಾಧ ಅವರಿಗೆ ಮೊದಲ ದಿನ ತುಂಬಾನೇ ಭಯ ಇತ್ತಂತೆ. ಎರಡೂವರೆ ವರ್ಷ ಪಟ್ಟ ಕಷ್ಟಕ್ಕೆ ಈಗ ಫ‌ಲ ಸಿಕ್ಕಿದೆ. “ಖನನ’ ಚಿತ್ರ ನೋಡಿದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಆಗ ಪಟ್ಟ ಕಷ್ಟಗಳು ಈಗ ಮಾಯವಾಗಿವೆ. ಹೊಸಬರ ಚಿತ್ರಕ್ಕೆ ಮೊದಲು ಬೆಂಬಲ, ಪ್ರೋತ್ಸಾಹ ಬೇಕು. ಸಿನಿಮಾ ನೋಡಿ, ಮೆಚ್ಚುಗೆ ವ್ಯಕ್ತಪಡಿಸಿದರೆ, ಅದೇ ಅವರಿಗೆ ಆನೆಬಲ ಇದ್ದಂತೆ. ಮಾಧ್ಯಮ ಕೊಟ್ಟ ಬೆಂಬಲ, ಜನರು ತೋರಿದ ಪ್ರೊತ್ಸಾಹದಿಂದ ಚಿತ್ರಕ್ಕೆ ಒಳ್ಳೆಯ ಮಾತುಗಳು ಕೇಳಿಬರುತ್ತಿವೆ. ಆರಂಭದಲ್ಲಿ ನಿರ್ಮಾಪಕರು ಸಿನಿಮಾ ಚೆನ್ನಾಗಿ ಮಾಡಿ, ಗೆಲ್ಲಿಸಿಕೊಡಬೇಕು ಎಂದಿದ್ದರು. ಅವರು ನಂಬಿಕೆ ಇಟ್ಟು ಕೊಟ್ಟ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡು, ಅವರ ಮಾತು ಉಳಿಸಿಕೊಂಡ ಖುಷಿ ನನಗಿದೆ. ಮುಂದೆ ಯಶಸ್ಸಿನ ಸಂಭ್ರಮದಲ್ಲೂ ಭೇಟಿಯಾಗಿ ಇನ್ನಷ್ಟು ಖುಷಿಯ ವಿಷಯ ಹಂಚಿಕೊಳ್ಳುತ್ತೇನೆ’ ಎಂದರು ರಾಧ.

ಚಿತ್ರದಲ್ಲಿ ನೆಗೆಟಿವ್‌ ಶೇಡ್‌ ಪಾತ್ರ ಮಾಡಿದ್ದ ನಟ ಯುವ ಕಿಶೋರ್‌ ಅವರಿಗೆ, “ಖನನ’ ಗುರುತಿಸಿಕೊಳ್ಳುವಂತೆ ಮಾಡಿದೆಯಂತೆ. ಎಲ್ಲೇ ಹೋದರು ಜನರು ಮಾತನಾಡಿಸುತ್ತಿದ್ದಾರೆ. ಹೊಸಬನನ್ನು ನಂಬಿ ನಿರ್ದೇಶಕರು ಅವಕಾಶ ಕೊಟ್ಟಿದ್ದಾರೆ. ನಿರ್ಮಾಪಕರು ಪ್ರೋತ್ಸಾಹ ಕೊಟ್ಟಿದ್ದಾರೆ. ಅವರನ್ನು ಎಂದಿಗೂ ಮರೆಯುವುದಿಲ್ಲ. ಒಳ್ಳೆಯ ಸಿನಿಮಾ ಬಂದರೆ, ಜನರು ಖಂಡಿತ ಕೈ ಬಿಡುವುದಿಲ್ಲ ಎಂಬುದಕ್ಕೆ “ಖನನ’ ಸಾಕ್ಷಿ’ ಎಂದರು ಯುವ ಕಿಶೋರ್‌.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.