ಪುನೀತ್‌ ಇಲ್ಲದ ಮೇಲೆ… ಹೊಸಬರ ಕನಸುಗಳು ಅರ್ಧಕ್ಕೆ ನಿಂತಿವೆ…


Team Udayavani, Nov 5, 2021, 9:44 AM IST

puneeth rajkumar

ಪುನೀತ್‌ ಸರ್‌ಗೊಂದು ಸಿನೆಮಾ ನಿರ್ಮಾಣ ಮಾಡ್ಬೇಕು…

ಅಪ್ಪು ಸರ್‌ ಚಿತ್ರಕ್ಕೆ ಹೀರೋಯಿನ್‌ ಆಗಬೇಕು…

ಪುನೀತ್‌ ಸರ್‌ ಸಿನೆಮಾಕ್ಕೆ ಡೈರೆಕ್ಷನ್‌ ಮಾಡಬೇಕು…

ಪುನೀತ್‌ ಅವ್ರ ಚಿತ್ರಕ್ಕೆ ಸಂಗೀತ ನೀಡಬೇಕು…

ಹೀಗೆ ಪುನೀತ್‌ ರಾಜಕುಮಾರ್‌ ಅವರ ಸುತ್ತ ಅದೆಷ್ಟು ಬೇಕುಗಳಿತ್ತೆಂದರೆ, ಲೆಕ್ಕ ಹಾಕುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಅದಕ್ಕೆ ಕಾರಣ ಪುನೀತ್‌ ರಾಜಕುಮಾರ್‌ ಅವರ ವ್ಯಕ್ತಿತ್ವ. ಆದರೆ ಈಗ ಕನಸುಗಳು ಬತ್ತಿವೆ, ಮನಸಿನ ತುಂಬಾ ಶೂನ್ಯ. ಒಂದು ಸಾವು ಒಂದು ಕುಟುಂಬವನ್ನು ಕಂಗೆಡಿಸಬಹುದು, ಒಂದು ವರ್ಗ, ಬಳಗವನ್ನು ನೋವಿಗೆ ದೂಡಬಹುದು. ಆದರೆ, ಪುನೀತ್‌ ರಾಜಕುಮಾರ್‌ ಅವರ ಅಕಾಲಿಕ ಸಾವು ಇಡೀ ಕರುನಾಡನ್ನು ಕಾಡಿದೆ, ನೋವಿಗೆ ದೂಡಿದೆ. ಈ ಸಾವು ನ್ಯಾಯವೇ? ಎಂದು ಭಗವಂತನನ್ನೇ ಪ್ರಶ್ನಿಸುವಂತೆ ಬೇಸರ ಮನೆ ಮಾಡಿದೆ. ಅದಕ್ಕೆ ಕಾರಣ ಪುನೀತ್‌ ರಾಜಕುಮಾರ್‌ ಇಡೀ ಸಮೂಹಕ್ಕೆ ಕನೆಕ್ಟ್ ಆದ ರೀತಿ.

ಒಬ್ಬ ನಟನಾಗಿ ಪುನೀತ್‌ ಒಂದು ವರ್ಗಕ್ಕೆ ಪ್ರಭಾವ ಬೀರಿದರೆ, ತಮ್ಮ ವ್ಯಕ್ತಿತ್ವದ ಮೂಲಕ ಅವರು ದೊಡ್ಡ ಅಭಿಮಾನಿ, ಸ್ನೇಹ ಬಳಗವನ್ನೇ ಸಂಪಾದಿಸಿದ್ದಾರೆ. ಅದೇ ಕಾರಣದಿಂದ ಪುನೀತ್‌ ಇನ್ನಿಲ್ಲ ಎಂಬ ವಾಸ್ತವ ಸತ್ಯವನ್ನು ಯಾರೊಬ್ಬರಿಗೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪುನೀತ್‌ ರಾಜಕುಮಾರ್‌ ಸ್ಟಾರ್‌ ಆಗಿದ್ದರೂ, ಆ ಸ್ಟಾರ್‌ ಕಿರೀಟವನ್ನು ಅವರು ಯಾವತ್ತೂ ತಲೆಗೇರಿಸಿಕೊಂಡವರಲ್ಲ. ಅದೇ ಕಾರಣದಿಂದ ಎಲ್ಲ ವರ್ಗದ ಆಡಿಯನ್ಸ್‌ ಕೂಡ ಅವರ ಫ್ಯಾನ್‌ ಆಗಿದ್ದರು.

ಪುನೀತ್‌ ರಾಜಕುಮಾರ್‌ ಅವರ ಸಾವು ಸಾಕಷ್ಟು ಹೊಸ ಪ್ರತಿಭೆಗಳ ಕನಸು ಕಸಿದಿದೆ. ಪುನೀತ್‌ ಅವರಿಗಾಗಿಯೇ ಕಥೆ ಬರೆಯಲು ಹಾತೊರೆಯುತ್ತಿದ್ದ, ಅದೆಷ್ಟೋ ಕಥೆಗಾರರ ಕಥೆಗಳು ಅರ್ಧಕ್ಕೆ ನಿಂತಿವೆ, ಹಾಡುಗಳ ಸಾಲುಗಳು ಮುಂದಕ್ಕೆ ಹೋಗುತ್ತಿಲ್ಲ… ರಾಜಕುಮಾರ ಇಲ್ಲದ ಮೇಲೆ ಏನು ಬರೆಯಲಿ.. ಎಂಬ ಭಾವ ಬರಹಗಾರರಲ್ಲಿ ಒಬ್ಬ ಸ್ಟಾರ್‌ ನಟ ಎಲ್ಲ ವರ್ಗಕ್ಕೂ ಇಷ್ಟೆಲ್ಲಾ ಹತ್ತಿರವಾಗಲು ಸಾಧ್ಯವೇ ಎಂದು ನೀವು ಕೇಳಬಹುದು. ಆದರೆ ಅದು ಸಾಧ್ಯ ಎಂದು ತೋರಿಸಿಕೊಟ್ಟವರು ಪುನೀತ್‌ ರಾಜಕುಮಾರ್‌.

ಒಂದೊಳ್ಳೆಯ ಕಥೆ ಇದೆ ಎಂದು ಗೊತ್ತಾದರೆ, ಆ ಕಥೆಗಾರರನ್ನು, ನಿರ್ದೇಶಕರನ್ನ ನೇರವಾಗಿ ಕರೆಸಿ ಮಾತನಾಡುತ್ತಿದ್ದ ಗುಣ ಅಪ್ಪು ಅವರದಾಗಿತ್ತು. ಕಥೆ ತನಗೆ ಇಷ್ಟವಾದರೆ ತನ್ನ ಸಿನೆಮಾ ಮಾಡಲು ಸಿದ್ಧವಾಗಿದ್ದ ನಿರ್ಮಾಪಕರಿಗೆ ಹೀಗೊಂದು ಕಥೆ ಇದೆ ಎಂದು ಸೂಚಿಸಿ, ಹೊಸ ನಿರ್ದೇಶಕರಿಗೆ ದಾರಿದೀಪ ಆಗುತ್ತಿದ್ದವರು ಪುನೀತ್‌.

ಇನ್ನು ತಮ್ಮ ಕನಸಿನ “ಪಿಆರ್‌ ಕೆ’ ಬ್ಯಾನರ್‌ ನಲ್ಲು ಹೊಸಬರಿಗೆ ಅವಕಾಶ ನೀಡುವ ಕನಸು ಅವರದಾಗಿತ್ತು. ತಮ್ಮದೇ ಬ್ಯಾನರ್‌ನಲ್ಲಿ ಈಗಾಗಲೇ ಒಂದಷ್ಟು ಸದಭಿರುಚಿ ಸಿನಿಮಾಗಳನ್ನು ನಿರ್ಮಿಸಿ, ಅದೆಷ್ಟೋ ಹೊಸಬರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು. ಸ್ಟಾರ್‌ ನಟ ಆಗಿಯೂ, ಯಾವುದೇ ಬಿಲ್ಡಪ್‌ ಗಳಿಲ್ಲದ ಸರಳ ಸುಂದರ ಕಥೆಗಳನ್ನು ನಿರ್ಮಾಣ ಮಾಡುತ್ತಾ, ಅದನ್ನು ಮನೆ ಮನೆಗೆ ತಲುಪಿಸಿ ಖುಷಿ ಪಟ್ಟವರು ಪುನೀತ್‌. ಆದರೆ ಈಗ ಅಪ್ಪು ಇಲ್ಲದ ಮೇಲೆ, ಅದೆಲ್ಲವೂ ಅರ್ಧಕ್ಕೆ ನಿಂತಿದೆ.

ಪುನೀತ್‌ ಇದ್ದಿದೆ ಹಾಗೆ.. ತನಗೆ ಇಷ್ಟವಾದರೆ ಅದು ಹೊಸಬರು, ಅವ್ರಿಗೆ ಯಾಕೆ ನಾನು ಮಣೆ ಹಾಕಬೇಕು ಎಂದು ಯಾವತ್ತೂ ಯೋಚಿಸಿದವರಲ್ಲ. ಪುನೀತ್‌ ಅವರ ಈ ಗುಣದಿಂದಲೇ ಇವತ್ತು ಅವರ ಸಿನಿಮಾಗಳ ಮೂಲಕ ಸಿನಿಮಾರಂಗಕ್ಕೆ ಬಂದ ಅದೆಷ್ಟೋ ಮಂದಿ ಚಿತ್ರರಂಗದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ಸಿನೆಮಾ ಎಂದರೆ ಕೇವಲ ಮನರಂಜನೆಯಲ್ಲ ಜೊತೆಗೊಂದು ಸಂದೇಶವು ಬೇಕೆಂದು ನಂಬಿದ್ದಕ್ಕೆ ಸಾಕ್ಷಿಯಾಗಿ ಇವತ್ತು ಅವ್ರ ಸಿನೆಮಾಗಳು ನಮ್ಮ ಮುಂದಿದೆ.

ಸ್ಯಾಂಡಲ್‌ವುಡ್‌ನ‌ಲ್ಲಿ ಮಂಕಾದ ದೀಪಾವಳಿ ಸಂಭ್ರಮ: ಪ್ರತಿವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿಗಳ ಸೌಂಡ್‌ ಗಿಂತಲೂ ಸ್ಯಾಂಡಲ್‌ವುಡ್‌ನ‌ಲ್ಲಿ ಹೊಸ ಸಿನಿಮಾಗಳ ಸೌಂಡೇ ಜೋರಾಗಿರುತ್ತಿತ್ತು. ಆದರೆ ಈ ದೀಪಾವಳಿಗೆ ಚಂದನವನದಲ್ಲಿ ಅಂಥ ಯಾವುದೇ ಸಂಭ್ರಮ, ಸಡಗರವಿಲ್ಲ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಿಲೀಸ್‌ಗೆ ರೆಡಿಯಾಗಿದ್ದ ಹಲವು ಸಿನಿಮಾಗಳು ಒಂದಷ್ಟು ಕಾಲ ತಮ್ಮ ಬಿಡುಗಡೆಯನ್ನು ಮುಂದಕ್ಕೆ ಹಾಕಿಕೊಂಡಿವೆ. ಉಳಿದಂತೆ ಹಬ್ಬದ ಸಂದರ್ಭದಲ್ಲಿ ತಮ್ಮ ಹಾಡು, ಟೀಸರ್‌, ಟ್ರೇಲರ್‌ಗಳನ್ನು ಬಿಡುಗಡೆ ಮಾಡಿ ಸಂಭ್ರಮಿಸಬೇಕು ಎಂಬ ಯೋಚನೆಯಲ್ಲಿದ್ದ ಅನೇಕ ಸಿನಿಮಾ ತಂಡಗಳು, ಪುನೀತ್‌ ನಿಧನದಿಂದ ಆ ಸಂಭ್ರಮ, ಸಡಗರವನ್ನು ಕಳೆದುಕೊಂಡಿವೆ. ಒಟ್ಟಾರೆ ದೀಪಾವಳಿಯ ಸಂದರ್ಭದಲ್ಲಿ ಚಂದನವನದ ನಂದಾದೀಪ ಆರಿ ಹೋದ ಭಾವ ಎಲ್ಲರನ್ನೂ ಆವರಿಸಿದೆ

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.