ಚಂದನವನಕ್ಕೆ ತೊಂಬತ್ತು; ನಡೆದುಬಂದ ಹಾದಿಯಲ್ಲಿ ನೆನಪುಗಳ ಮೆರವಣಿಗೆ


Team Udayavani, Feb 9, 2024, 3:19 PM IST

ಚಂದನವನಕ್ಕೆ ತೊಂಬತ್ತು; ನಡೆದುಬಂದ ಹಾದಿಯಲ್ಲಿ ನೆನಪುಗಳ ಮೆರವಣಿಗೆ

ಯಾವುದೇ ಒಂದು ಚಿತ್ರರಂಗ ಗಟ್ಟಿಯಾಗಿ ನೆಲೆನಿಂತು ತನ್ನ ತನ ಪ್ರದರ್ಶಿಸಬೇಕಾದರೆ ಅಲ್ಲೊಂದು ಇಚ್ಛಾಶಕ್ತಿ ಕೆಲಸ ಮಾಡಬೇಕಾಗುತ್ತದೆ. ಜೊತೆಗೆ ಗುರಿ ಮುಟ್ಟುವ ಛಲ ಬೇಕಾಗುತ್ತದೆ. ಇವತ್ತು ಕನ್ನಡ ಚಿತ್ರರಂಗ ಹಲವು ಅಡೆತಡೆಗಳನ್ನು ದಾಟಿ 90ನೇ ವರ್ಷಕ್ಕೆ ಬಂದು ನಿಂತಿದೆ. ಒಂದು ಸೃಜನಶೀಲ ಕ್ಷೇತ್ರ 90 ವರ್ಷ ಪೂರೈಸುವುದು ಸುಲಭದ ಮಾತಲ್ಲ. ಆ ನಿಟ್ಟಿನಲ್ಲಿ ಕನ್ನಡ ಚಿತ್ರರಂಗ ನಡೆದುಬಂದ ಹಾದಿ ಸ್ತುತ್ಯರ್ಹ.

1934ರಲ್ಲಿ ತೆರೆಕಂಡ “ಸತಿ ಸುಲೋಚನಾ’ ಸಿನಿಮಾದಿಂದ ಆರಂಭವಾದ ಚಂದನವನದ ಸಿನಿಯಾನ ಇವತ್ತು ಇಡೀ ದೇಶವೇ ತಿರುಗಿ ನೋಡುವಂತಾಗಿದೆ ಎಂದರೆ ಇದರ ಹಿಂದೆ ಇಡೀ ಚಿತ್ರರಂಗದ ಶ್ರಮವಿದೆ, ಹಿರಿಯರ ಮಾರ್ಗದರ್ಶನವಿದೆ. ಅನೇಕ ಹಿರಿಯರು ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಚಿತ್ರರಂಗ ದೊಡ್ಡ ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಸಿದೆ. ನಿರ್ಮಾಪಕರು, ವಿತರಕರು, ಪ್ರದರ್ಶಕರು, ಕಲಾವಿದರು, ತಂತ್ರಜ್ಞರು ಹೀಗೆ ಚಿತ್ರರಂಗವನ್ನು ನಂಬಿಕೊಂಡವರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಅವರೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು 90 ವರ್ಷದ ಸಂಭ್ರಮವನ್ನು ದೊಡ್ಡಮಟ್ಟದಲ್ಲಿ ಮಟ್ಟದಲ್ಲಿ ಮಾಡಬೇಕಿದೆ.

ಸೋಲು-ಗೆಲುವು, ನೋವು-ನಲಿವುಗಳೊಂದಿಗೆ 90ರ ಹೊಸ್ತಿಲಿನಲ್ಲಿ ಬಂದು ನಿಂತ ಕನ್ನಡ ಚಿತ್ರರಂಗದ ಹಾದಿಯನ್ನು ಮೆಲುಕು ಹಾಕುವ, ಸಂಭ್ರಮಿಸುವ ಕಾರ್ಯ ಆಗಲೇಬೇಕು. ಕನ್ನಡ ಚಿತ್ರರಂಗ 75 ವರ್ಷ ಪೂರೈಸಿದಾಗ ಅಮೃತ ಮಹೋತ್ಸವದಂತಹ ಕಾರ್ಯಕ್ರಮ ಆಯೋಜಿಸಿ ಇಡೀ ಚಿತ್ರರಂಗಕ್ಕೆ ಹೊಸ ಉತ್ಸಾಹ ತುಂಬಲಾಗಿತ್ತು. ಈಗ ಇಡೀ ಚಿತ್ರರಂಗ ಮತ್ತೆ ಒಂದಾಗಬೇಕಿದೆ. 90 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗ ಮಾತೃ ಸಂಸ್ಥೆಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತವಾಗಬೇಕಿದೆ. ಒಂದು ಅರ್ಥಪೂರ್ಣ ಕಾರ್ಯಕ್ರಮದ ಮೂಲಕ ಕನ್ನಡ ಚಿತ್ರರಂಗ ತನ್ನ ಸಾಮರ್ಥ್ಯ, ನಡೆದು ಬಂದ ಹಾದಿಯ ಜೊತೆಗೆ ಒಗ್ಗಟ್ಟಿನ ಪ್ರದರ್ಶನ ಮಾಡಲು ಇದು ಸಕಾಲ.

ಚಿತ್ರರಂಗದ ಹಬ್ಬವಾಗಲಿ

ಪ್ರತಿ ಶುಕ್ರವಾರ ಸಿನಿಮಾ ಬಿಡುಗಡೆಯಾದಾಗ ಆಯಾ ತಂಡಗಳು ಸಂಭ್ರಮಿಸುತ್ತವೆ. ಆದರೆ, ಇಡೀ ಚಿತ್ರರಂಗ ಒಟ್ಟಾದರೆ ಅದೊಂದು ಹಬ್ಬವಾಗುವುದರಲ್ಲಿ ಎರಡು ಮಾತಿಲ್ಲ. ಚಿತ್ರರಂಗದ ಕಾರ್ಯಕ್ರಮ ಎಂದರೆ ಎಲ್ಲಾ ವಿಭಾಗಗಳು ತಮ್ಮ ವೈಯಕ್ತಿಕ ಮನಸ್ತಾಪ, ಹಿತಾಸಕ್ತಿಗಳನ್ನು ಬದಿಗಿಟ್ಟು “ನಮ್ಮ ಮನೆ ಕಾರ್ಯಕ್ರಮ’ ಎಂದು ಭಾಗವಹಿಸುವುದರಲ್ಲಿ ಎರಡು ಮಾತಿಲ್ಲ. ಆದರೆ, ಇದಕ್ಕೊಂದು ಸೂಕ್ತವಾದ ವೇದಿಕೆ ಬೇಕಷ್ಟೇ. ಈ ಕಾರ್ಯವನ್ನು ವಾಣಿಜ್ಯ ಮಂಡಳಿ ಹಾಗೂ ಚಿತ್ರರಂಗದ ಇತರ ಅಂಗ ಸಂಸ್ಥೆಗಳು ಸೇರಿ ಮಾಡಬೇಕಿದೆ. ಚಿತ್ರರಂಗದ ಎಲ್ಲಾ ವಿಭಾಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋದಲ್ಲಿ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ದಾಖಲಾಗುವ ಕಾರ್ಯಕ್ರಮವಾಗುವು ದರಲ್ಲಿ ಎರಡು ಮಾತಿಲ್ಲ.

ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಮಿಂಚು

ಕನ್ನಡ ಚಿತ್ರರಂಗ ಸದ್ಯ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಒಂದು ಸಮಯದಲ್ಲಿ ಸ್ಯಾಂಡಲ್‌ವುಡ್‌ ಬಗ್ಗೆ ಅಸಡ್ಡೆಯಿಂದ ಮಾತನಾಡುತ್ತಿದ್ದ ಪರಭಾಷಾ ಮಂದಿ ಇವತ್ತು ಕನ್ನಡ ಚಿತ್ರರಂಗದ ಮೇಲೆ ಒಂದು ಕಣ್ಣಿಟ್ಟಿದ್ದಾರೆ. ಕನ್ನಡದಲ್ಲಿ ಒಳ್ಳೆಯ ಸಿನಿಮಾಗಳು ತಯಾರಾಗುತ್ತಿವೆ ಎಂಬ ಮಾತು ಜೋರಾಗಿಯೇ ಕೇಳಿಬರುತ್ತಿವೆ. ಇವೆಲ್ಲವೂ 90ನೇ ವರ್ಷದ ಕಾರ್ಯಕ್ರಮವನ್ನು ಸುಂದರವನ್ನಾಗಿಸಲು ಸಹಕಾರಿಯಾಗಲಿದೆ. ಎಲ್ಲಾ ಭಾಷೆಯ ನಟ-ನಟಿಯರು, ನಿರ್ದೇಶಕರು, ತಂತಜ್ಞರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮಾಡುವ ಜವಾಬ್ದಾರಿ ಕೂಡಾ ಮಂಡಳಿ ಮೇಲಿದೆ. ಈ ನಿಟ್ಟಿನಲ್ಲಿ ಮಂಡಳಿ ರೂಪುರೇಷೆ ಸಿದ್ಧಪಡಿಸಬೇಕಿದೆ. ಜೊತೆಗೆ ಸರ್ಕಾರ ಹಾಗೂ ಇತರ ಸಂಘ-ಸಂಸ್ಥೆಗಳ ಸಹಕಾರವನ್ನು ಪಡೆದು ಮುಂದುವರೆದಲ್ಲಿ 90ನೇ ವರ್ಷದ ಕಾರ್ಯಕ್ರಮ ಮತ್ತಷ್ಟು ಅರ್ಥಪೂರ್ಣವಾಗಲಿದೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.