12 ನಿಮಿಷದಲ್ಲೊಂದು ಕಾರ್ಯಕ್ರಮ


Team Udayavani, Jun 15, 2018, 6:00 AM IST

bb-28.jpg

ಸಾಮಾನ್ಯವಾಗಿ ಚಿತ್ರಗಳ ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮಗಳೆಂದರೆ ಅದಕ್ಕೆ ಗಂಟೆಗಟ್ಟಲೆ ಸಮಯ ಮೀಸಲಿಡಬೇಕು. ಇನ್ನೂ ಕೆಲ ಚಿತ್ರಗಳ ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮಗಳಂತೂ ಸಾಕೆನಿಸಿದರೂ ವೇದಿಕೆ ಮೇಲೆ ಮಾತು-ಮಂಥನ ಜೋರಾಗಿಯೇ ನಡೆಯುತ್ತಿರುತ್ತೆ. ಆದರೆ, ಕೇವಲ 12 ನಿಮಿಷಗಳಲ್ಲಿ ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮ ಮಾಡಿ ಮುಗಿಸಬಹುದು ಎಂಬುದಕ್ಕೆ ಇತ್ತೀಚೆಗೆ ಹೊಸಬರ “ಸಂಕಷ್ಟಕರ ಗಣಪತಿ’ ಚಿತ್ರ ಸಾಕ್ಷಿಯಾಗಿದ್ದು ವಿಶೇಷ.

ಲಿಖೀತ್‌ ಶೆಟ್ಟಿ ಅಭಿನಯದ “ಸಂಕಷ್ಟಕರ ಗಣಪತಿ’ ಚಿತ್ರದ ಆಡಿಯೋ ಬಿಡುಗಡೆ ಅಷ್ಟು ಬೇಗ ಮುಗಿಯೋಕೆ ಕಾರಣ, ಅಚ್ಚುಕಟ್ಟಾದ ನಿರೂಪಣೆ, ವೇದಿಕೆಯಲ್ಲಿ ನಿರ್ದೇಶಕ, ನಾಯಕ, ನಾಯಕಿ, ಸಂಗೀತ ನಿರ್ದೇಶಕ ಹಾಗೂ ಅತಿಥಿಯಾಗಿ ಆಗಮಿಸಿದ್ದವರು ಪುನೀತ್‌ ರಾಜಕುಮಾರ್‌ ಮತ್ತು ಗುರುಕಿರಣ್‌. ಹೀಗಾಗಿ ಎಲ್ಲರೂ ಒಂದೊಂದು ನಿಮಿಷ ಮಾತಾಡುವ ಹೊತ್ತಿಗೆ ಆಡಿಯೋ ಸಿಡಿ ಬಿಡುಗಡೆ ಕಾರ್ಯಕ್ರಮಕ್ಕೂ ತೆರೆಬಿತ್ತು. ಮೊದಲಿಗೆ ಚಿತ್ರದ ಟ್ರೇಲರ್‌ ತೋರಿಸಲಾಯಿತು. ಅದಾದ ಬಳಿಕ ವೇದಿಕೆಗೆ ಎಲ್ಲರನ್ನೂ ಕರೆಯಲಾಯಿತು. ಮೊದಲಿಗೆ ನಿರ್ದೇಶಕ ಅರ್ಜುನ್‌ ಕುಮಾರ್‌ ಅವರಿಗೆ ಮೈಕ್‌ ಕೊಡಲಾಯಿತು. ಮಾತಿಗಿಳಿದ ನಿರ್ದೇಶಕರು, “ಇದೊಂದು ಹೊಸ ಬಗೆಯ ಚಿತ್ರ. ಈಗಾಗಲೇ ಟ್ರೇಲರ್‌ಗೆ ಒಳ್ಳೆಯ ಮೆಚ್ಚುಗೆ ಸಿಕ್ಕಿದೆ. ಹೊಸ ಕಾನ್ಸೆಪ್ಟ್ ಮೆಚ್ಚಿಕೊಂಡು ನಿರ್ಮಾಪಕರು ಅವಕಾಶ ಕೊಟ್ಟಿದ್ದಾರೆ. ಸಿನಿಮಾ ಕೂಡ ನಿರೀಕ್ಷೆ ಮೀರಿ ಮೂಡಿಬಂದಿದೆ. ಜನರು ಹೇಗೆ ಸ್ವೀಕರಿಸುತ್ತಾರೆ ಎಂಬ ಕುತೂಹಲವಿದೆ. ಪಿಆರ್‌ಕೆ ಆಡಿಯೋ ಸಂಸ್ಥೆ ನಮ್ಮ ಹಾಡುಗಳನ್ನು ಬಿಡುಗಡೆ ಮಾಡಿದೆ. ನಿಶ್ಚಲ್‌ ದಂಬೆಕೋಡಿ, ನಿತಿನ್‌ ಜಯ್‌, ಮದನ್‌ ಬೆಳ್ಳಿಸಾಲು ಸಾಹಿತ್ಯವಿದೆ. ರಘು ದೀಕ್ಷೀತ್‌, ಸಂಚಿತ್‌ ಹೆಗಡೆ, ರಕ್ಷಿತಾರಾವ್‌, ದೀಪಕ್‌ ದೊಡೆರ, ಇಶಾ ಸುಚಿ, ಮೆಹಬೂಬ್‌ ಸಾಬ್‌, ಗುರುಕಿರಣ್‌, ಅನನ್ಯ ಭಟ್‌ ಹಾಡಿದ್ದಾರೆ ಅಂತ ವಿವರ ಕೊಟ್ಟರು ನಿರ್ದೇಶಕರು.ಆಡಿಯೋ ಬಿಡುಗಡೆ ಮಾಡಿದ ಪುನೀತ್‌ ರಾಜಕುಮಾರ್‌, “ಹೊಸಬರೆಲ್ಲಾ ಸೇರಿ ಪ್ರೀತಿಯಿಂದ ಕನಸು ಕಟ್ಟಿಕೊಂಡು ಸಿನಿಮಾ ಮಾಡಿದ್ದಾರೆ. ಹೊಸಬರು ಹೊಸತನದೊಂದಿಗೆ ಬರುತ್ತಿದ್ದಾರೆ. ಅವರ ಹೊಸ ಪ್ರಯೋಗಗಳು ಕ್ಲಿಕ್‌ ಆಗುತ್ತಿವೆ. ಈ ಚಿತ್ರಕ್ಕೆ ದೇವರು ಒಳ್ಳೆಯದನ್ನ ಮಾಡಲಿ, ಅಭಿಮಾನಿ ದೇವರುಗಳು ಇವರ ಸಿನಿಮಾಗೆ ಗೆಲುವು ಕೊಡಲಿ. ನಿರ್ಮಾಪಕರಿಗೆ ಹಾಕಿದ ಹಣ ಹಿಂದಿರುಗಲಿ’ ಅಂದರು ಪುನೀತ್‌.

“ರಿತ್ವಿಕ್‌ ಮುರಳೀಧರ್‌ ಅವರಿಗೆ ಇದು ಮೊದಲ ಚಿತ್ರ. ಒಳ್ಳೆಯ ಸಂಗೀತ, ಹಾಡು ಕೊಟ್ಟಿದ್ದಾರೆ. ನನಗೆ ಇದುವರೆಗೆ ಫಾಸ್ಟ್‌ ಸಾಂಗ್‌ ಅಥವಾ ವೆಸ್ಟ್ರನ್‌ ಶೈಲಿಯ ಹಾಡು ಸಿಗುತ್ತಿದ್ದವು. ಇಲ್ಲಿ ಪ್ಯಾಥೋ ಹಾಡು ಹಾಡುವ ಅವಕಾಶ ಸಿಕ್ಕಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಹರಸಿದರು ಗುರುಕಿರಣ್‌.

ನಾಯಕ ಲಿಖೀತ್‌ ಶೆಟ್ಟಿಗೆ ಒಳ್ಳೆಯ ಪ್ರಯತ್ನ ಮಾಡಿರುವ ಖುಷಿ. “ಕನಸು ನನಸಾಗಿದೆ. ಈ ನಮ್ಮ ಹೊಸ ಪ್ರಯತ್ನಕ್ಕೆ ಎಲ್ಲರೂ ಸಹಕರಿಸಿ’ ಅಂತ ಮನವಿ ಇಟ್ಟರೆ, ನಾಯಕಿ ಶ್ರುತಿ ಮೊದಲ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಕಂಡು ಖುಷಿಗೊಂಡಿದ್ದಾರಂತೆ. ಇನ್ನು ಈ ವೇಳೆ ಸಂಗೀತ ನಿರ್ದೇಶಕ ರಿತ್ವಿಕ್‌ ಮುರಳೀಧರ್‌, ನಿರ್ಮಾಪಕರಾದ ರಾಜೇಶ್‌ ಬಾಬು, ಫೈಜಾನ್‌ ಖಾನ್‌, ಜೋಡಿದಾರ್‌, ಹೇಮಂತ್‌ ಕುಮಾರ್‌, ಪ್ರಮೋದ್‌ ನಿಂಬಾಳ್ಕರ್‌, ಚೆಲುವರಾಜ್‌ ನಾಯ್ಡು ಸೇರಿದಂತೆ ಚಿತ್ರತಂಡ ಹಾಜರಿತ್ತು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.