ಎಂ.ಆರ್‌.ಪಿಗೆ ಶರಣ್ ಸಾಥ್

ಜವಾಬ್ದಾರಿ ವ್ಯಕ್ತಿಯ ಹಾಸ್ಯ ಚಿತ್ರ

Team Udayavani, Feb 28, 2020, 4:11 AM IST

ego-32

ಸುಮಾರು 18 ವರ್ಷಗಳ ಹಿಂದೆ ಕನ್ನಡದಲ್ಲಿ “ಫ್ರೆಂಡ್ಸ್‌’ ಎನ್ನುವ ಮ್ಯೂಸಿಕಲ್‌ ಹಿಟ್‌ ಚಿತ್ರ ತೆರೆಗೆ ಬಂದಿದ್ದು, ನಿಮಗೆ ನೆನಪಿರಬಹುದು. ಎಂ.ಡಿ ಶ್ರೀಧರ್‌ ನಿರ್ದೇಶನದ ಈ ಚಿತ್ರದಲ್ಲಿ ವಾಸು, ಮಾಸ್ಟರ್‌ ಆನಂದ್‌, ಶರಣ್‌, ಹರಿದಾಸ್‌ ಹೀಗೆ ಹಲವು ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ನಂತರದ ದಿನಗಳಲ್ಲಿ “ಫ್ರೆಂಡ್ಸ್‌’ ಚಿತ್ರದಲ್ಲಿ ಅಭಿನಯಿಸಿದ್ದ ವಾಸು, ಮಾಸ್ಟರ್‌ ಆನಂದ್‌, ಶರಣ್‌ ನಾಯಕ ನಟರಾಗಿ ಬೆಳ್ಳಿತೆರೆಯಲ್ಲಿ ಗುರುತಿಸಿಕೊಂಡರು. ಈಗ ಆ ಚಿತ್ರದಲ್ಲಿ ಅಭಿನಯಿಸಿದ್ದ ಮತ್ತೂಬ್ಬ ನಟ ಹರಿ ಕೂಡ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ. ಅಂದಹಾಗೆ, ಆ ಚಿತ್ರದ ಹೆಸರು “ಎಂ.ಆರ್‌.ಪಿ’, “ಮೋಸ್ಟ್‌ ರೆಸ್ಪಾನ್ಸಬಲ್‌ ಪರ್ಸನ್‌’ ಎಂಬ ಟ್ಯಾಗ್‌ ಲೈನ್‌ ಇರುವ ಈ ಚಿತ್ರದಲ್ಲಿ ಹರಿ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದು, ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಅದ್ಧೂರಿಯಾಗಿ ಹೊರಬಂದಿದೆ.

ನಟ ಶರಣ್‌, ನಿರ್ದೇಶಕ ದಿನಕರ್‌ ತೂಗುದೀಪ “ಎಂ.ಆರ್‌.ಪಿ’ ಚಿತ್ರದ ಟ್ರೇಲರ್‌ ಬಿಡುಗಡೆಗೊಳಿಸಿದರು. ಚಿತ್ರ ಸಾಹಿತಿ ಕವಿರಾಜ್‌ ಮೊದಲಾದವರು ಸಮಾರಂಭದಲ್ಲಿ ಹಾಜರಿದ್ದು ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ವೇಳೆ ಮಾತನಾಡಿದ ನಟ ಶರಣ್‌, “ಈ ಚಿತ್ರದಲ್ಲಿ ಅಭಿನಯಿಸುತ್ತಿರುವ ಹರಿ ಮತ್ತು ನನ್ನ ಗೆಳೆತನ ತುಂಬ ಹಳೆಯದು. ನಾವಿಬ್ಬರೂ ಒಟ್ಟಿಗೆ ಚಿತ್ರಗಳಲ್ಲಿ ಅಭಿನಯಿಸಿದ್ದೇವೆ. ನಾವು ಜೊತೆಯಾಗಿ ಅಭಿನಯಿಸಿದ್ದ ಬಹುತೇಕ ಸಹ ನಟರು ಈಗ ನಾಯಕರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಈಗ ಆ ಸಾಲಿಗೆ ಹರಿ ಕೂಡ ಸೇರ್ಪಡೆಯಾಗುತ್ತಿದ್ದಾರೆ. ಅವರಿಗೆ ಶುಭವಾಗಲಿ’ ಎಂದು ಹಾರೈಸಿದರು. ಚಿತ್ರದ ಟ್ರೇಲರ್‌ ಮೆಚ್ಚಿಕೊಂಡ ನಿರ್ದೇಶಕ ದಿನಕರ್‌ ತೂಗುದೀಪ ಕೂಡ ಚಿತ್ರತಂಡಕ್ಕೆ ಶುಭ ಕೋರಿದರು. ಈ ಹಿಂದೆ “ನನ್‌ ಮಗಳೇ ಹೀರೊಯಿನ್‌’ ಚಿತ್ರವನ್ನು ನಿರ್ದೇಶಿಸಿದ್ದ ಬಾಹುಬಲಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಚಿತ್ರದ ಕಥಾಹಂದರದ ಬಗ್ಗೆ ಮಾತನಾಡಿದ ಬಾಹುಬಲಿ, “ತನ್ನ ದೈತ್ಯ ಕಾಯವನ್ನು ಇಟ್ಟುಕೊಂಡು ವ್ಯಕ್ತಿಯೊಬ್ಬ ಹೇಗೆ ಸವಾಲುಗಳನ್ನು ಎದುರಿಸುತ್ತಾನೆ. ಕೊನೆಗೆ ಹೇಗೆ ಎಲ್ಲರಿಗೂ ಇಷ್ಟವಾಗುತ್ತಾನೆ ಅನ್ನೊದು ಚಿತ್ರ. ಇಡೀ ಚಿತ್ರ ನವಿರಾದ ಹಾಸ್ಯದಲ್ಲಿ ಸಾಗುತ್ತದೆ. ನೋಡುಗರಿಗೆ ಕಂಪ್ಲೀಟ್‌ ಮನರಂಜನೆ ನೀಡುತ್ತದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರಕ್ಕೆ ಎಲ್ ಎಂ ಸೂರಿ ಛಾಯಾಗ್ರಹಣ, ಕೆ.ಎಂ ಪ್ರಕಾಶ ಸಂಕಲನವಿದೆ. ಚಿತ್ರದ ಮೂರು ಹಾಡುಗಳಿಗೆ ಹರ್ಷವರ್ಧನ ರಾಜ್‌ ಸಂಗೀತವಿದೆ. ಸಂಚಿತ್‌ ಹೆಗ್ಡೆ, ರವೀಂದ್ರ ಸೂರಗಾವಿ ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ. ನಾಗೇಂದ್ರ ಪ್ರಸಾದ್‌, ಹೃದಯಶಿವ ಚಿತ್ರದ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. “ಎಂಎನ್‌ ವೈ ಪಿಕ್ಚರ್’ ಬ್ಯಾನರ್‌ನಲ್ಲಿ ಎಂ.ಡಿ ಶ್ರೀಧರ್‌, ಎ.ವಿ ಕೃಷ್ಣಕುರ್ಮಾ (ಕೆ.ಕೆ), ಮೋಹನ ಕುಮಾರ ಎನ್‌.ಜಿ, ರಂಗಸ್ವಾಮಿ ಕೆ.ಆರ್‌ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಇನ್ನು “ಎಂ.ಆರ್‌.ಪಿ’ ಚಿತ್ರದಲ್ಲಿ ಹರಿ ಅವರಿಗೆ ನಾಯಕಿಯಾಗಿ, ಚೈತ್ರಾ ರೆಡ್ಡಿ ಅಭಿನಯಿಸಿದ್ದಾರೆ. ಉಳಿದಂತೆ ವಿಜಯ ಚೆಂಡೂರ್‌, ಸುಧಾ ಬೆಳವಾಡಿ, ಪ್ರಕಾಶ ತುಮಿನಾಡ್‌, ಬಲರಾಜವಾಡಿ, ಮೋಹನ ಜುನೇಜಾ ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಮಾರಂಭದ ವೇದಿಕೆಯಲ್ಲಿ ಹಾಜರಿದ್ದ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು “ಎಂ.ಆರ್‌.ಪಿ’ ಚಿತ್ರದ ಅನುಭವ ಮತ್ತು ವಿಶೇಷತೆಗಳ ಬಗ್ಗೆ ಮಾತನಾಡಿದರು. ಸದ್ಯ ಟ್ರೇಲರ್‌ ಮೂಲಕ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ಮಾರ್ಚ್‌ ವೇಳೆಗೆ “ಎಂ.ಆರ್‌.ಪಿ’ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.