ನೋಟಿನ ನೋಟ! : ಭಿನ್ನ ಮನಸ್ಥಿತಿಗಳ ಸಮ್ಮಿಲನ

Noted ಪಾಯಿಂಟ್‌

Team Udayavani, May 3, 2019, 6:00 AM IST

Suchi-Note-726

ಚಿತ್ರದ ನಾಯಕ ಯಾರು, ಅವರಿಗೆ ನಾಯಕಿ ಯಾರು, ಉಳಿದಂತೆ ಚಿತ್ರದಲ್ಲಿ ಯಾರೆಲ್ಲಾ ಇದ್ದಾರೆ?
– ಇದಕ್ಕೆಲ್ಲಾ ಒಂದೇ ಉತ್ತರ “ಆ ಒಂದು ನೋಟು’. ಅರೇ ಇದೇನಿದು, ಚಿತ್ರಕ್ಕೆ ನಾಯಕ, ನಾಯಕಿ ಯಾರೂ ಇಲ್ಲವೆ ಅಂದರೆ, ಚಿತ್ರದ ಜೀವಾಳವೇ ಆ ನೋಟು. ಹಾಗಾಗಿ ಆ ನೋಟೇ ಇಲ್ಲಿ ಎಲ್ಲವೂ. ಆ ನೋಟು ಸುತ್ತ ತಿರುಗುವ ಪಾತ್ರಗಳು ಮಾತ್ರ ಇಲ್ಲಿವೆ ಎಂಬುದು ಚಿತ್ರ ತಂಡದ ಮಾತು.

ಇದು ಹೊಸಬರೇ ಸೇರಿ ಮಾಡಿರುವ ಚಿತ್ರ. ಈಗಾಗಲೇ ಚಿತ್ರೀಕರಣ ಮುಗಿಸಿ, ಇನ್ನೇನು ಸೆನ್ಸಾರ್‌ಗೆ ಹೋಗಿ ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿದೆ ಚಿತ್ರ. ಇತ್ತೀಚೆಗೆ “ಆ ಒಂದು ನೋಟು’ ಚಿತ್ರತಂಡ ಮಾಧ್ಯಮ ಎದುರು ಬಂದು, ಮಾಹಿತಿ ಹಂಚಿಕೊಂಡಿತು. ಮೊದಲು ಮಾತಿಗಿಳಿದಿದ್ದು ನಿರ್ಮಾಪಕ ಎಂ.ಕೆ.ಜಗದೀಶ್‌. “ಈ ಹಿಂದೆ “ಪುಟಾಣಿ ಸಫಾರಿ’ ಮಾಡಿದ್ದ ನನಗೆ “ಆ ಒಂದು ನೋಟು’ ಕಥೆ ಮೊದಲೇ ಗೊತ್ತಿತ್ತು.

ಒಂದು ಸಾವಿರ ರುಪಾಯಿ ಮೇಲೆ ನಿರ್ದೇಶಕ ರತ್ನಾತನಯ್‌ ಕಥೆ ಹೆಣೆದಿದ್ದರು. ವರ್ಷದ ಹಿಂದೆ ಈ ಚಿತ್ರ ಮಾಡುವ ಬಗ್ಗೆ ನಿರ್ಧಾರ ಮಾಡಿ, ಗೆಳೆಯ ಪ್ರೇಮ್‌ನಾಥ್‌ ನಿರ್ಮಾಣದಲ್ಲಿ ಸಾಥ್‌ ಕೊಡುವ ಭರವಸೆ ಕೊಟ್ಟ ಬಳಿಕ ಚಿತ್ರ ಮಾಡಿದ್ದೇವೆ. ಹಣ ಎಲ್ಲರಿಗೂ ಅಗತ್ಯ. ಆದರೆ, ಆ ಹಣ ಯಾರ್ಯಾರ ಕೈಯಲ್ಲಿ ಹೇಗೆಲ್ಲಾ ಬಳಕೆಯಾಗುತ್ತೆ ಎಂಬುದರ ಸ್ವಾರಸ್ಯಕರ ವಿಷಯ ಚಿತ್ರದ ಹೈಲೈಟ್‌’ ಎಂಬ ವಿವರ ಕೊಡುತ್ತಾರೆ ನಿರ್ಮಾಪಕ ಜಗದೀಶ್‌.

ನಿರ್ದೇಶಕ ರತ್ನಾತನಯ್‌ ಅವರಿಗೆ ಇದು ಮೊದಲ ಚಿತ್ರ. ಒಂದು ವರ್ಷದ ಪ್ರಯತ್ನ ಈಗ ಈಡೇರಿದೆ. ಹಣ ಅನ್ನೋದು ಕೆಟ್ಟದ್ದು, ಅದು ಮನುಷ್ಯನನ್ನು ಹಾಳು ಮಾಡುತ್ತದೆ ಎಂಬ ಆರೋಪ ಸಾಮಾನ್ಯ. ಆದರೆ, ಹಣ ಒಳ್ಳೆಯದೂ ಅಲ್ಲ, ಕೆಟ್ಟದ್ದೂ ಅಲ್ಲ, ಮನುಷ್ಯ ಆ ಹಣವನ್ನು ಯಾವುದಕ್ಕೆ ಹೇಗೆ ಬಳಸುತ್ತಾನೆ ಎಂಬುದು ಮುಖ್ಯ. ಈ ಎಳೆ ಇಟ್ಟುಕೊಂಡು 2000 ರುಪಾಯಿಯ ನೋಟಿನ ಮೂಲಕ ಒಂದು ವಿಷಯ ಹೇಳುವ ಪ್ರಯತ್ನ ಮಾಡಲಾಗಿದೆ.

ಇದೊಂದು ಪ್ರಯೋಗಾತ್ಮಕ ಚಿತ್ರ. ಹಣ ಎಲ್ಲರ ಕೈಯಲ್ಲೂ ಓಡಾಡುತ್ತೆ. ಅದಕ್ಕೆ ಭೇದ ಭಾವ ಇಲ್ಲ. ಕೂಲಿಕಾರ್ಮಿಕ, ಬಡವ, ಶ್ರೀಮಂತ, ಉದ್ಯಮಿ, ನೌಕರ, ಭಿಕ್ಷುಕ, ಕಳ್ಳ ಹೀಗೆ ಎಲ್ಲರ ಕೈಯಲ್ಲೂ ಹಣ ಓಡಾಡುತ್ತೆ. ಒಂದು ನೋಟು ಏನೆಲ್ಲಾ ಮಾಡುತ್ತೆ ಎಂಬುದೇ ಕಥೆ. ಅದನ್ನು ಚಿತ್ರ ನೋಡಿದರೆ ಗೊತ್ತಾಗುತ್ತದೆ. ಇಂತಹ ಚಿತ್ರಗಳಿಗೆ ಹಿನ್ನೆಲೆ ಸಂಗೀತ ಬಹಳ ಮುಖ್ಯ. ವೀರ್‌ ಸಮರ್ಥ್ ಅವರಿಲ್ಲಿ ಸಮರ್ಥವಾಗಿ ಹಿನ್ನೆಲೆ ಸಂಗೀತದ ಸ್ಪರ್ಶ ಕೊಟ್ಟಿದ್ದಾರೆ. ಉಳಿದಂತೆ ಕೌಶಿಕ್‌ ಮೂರು ಹಾಡುಗಳಿಗೆ ಸಂಗೀತ ನೀಡಿದ್ದಾರೆ’ ಎಂಬುದು ನಿರ್ದೇಶಕರ ಮಾತು.

ಹಿನ್ನೆಲೆ ಸಂಗೀತ ನೀಡಿರುವ ನಿರ್ದೇಶಕ ವೀರ್‌ ಸಮರ್ಥ್ ಅವರಿಗೆ ಈ ಚಿತ್ರ ಚಾಲೆಂಜಿಂಗ್‌ ಆಗಿತ್ತಂತೆ. ಕಾರಣ, ಕಂಟೆಟ್‌ ಇರುವ ಚಿತ್ರವಿದು. ನಾನು ಮಾಡಿರುವ ಚಿತ್ರಗಳಲ್ಲೇ ಇದು ಬೇರೆ ರೀತಿಯ ಚಿತ್ರ. ಇದಕ್ಕೆ ಸಾಕಷ್ಟು ಸಮಯ ತೆಗೆದುಕೊಂಡು ಕೆಲಸ ಮಾಡಿದ್ದೇನೆ. ನಿರ್ದೇಶಕರ ಟೇಸ್ಟ್‌ಗೆ ತಕ್ಕಂತೆ ಇಲ್ಲಿ ಕೆಲಸ ಮಾಡಿದ್ದು ಸಮಾಧಾನ ತಂದಿದೆ. ಇದು ನನಗೂ ಹೊಸ ಅನುಭವ. ಈ ರೀತಿಯ ಚಿತ್ರಗಳಿಗೆ ಗೆಲುವು ಸಿಗಬೇಕು. ಅದಕ್ಕೆ ಮಾಧ್ಯಮ ಸಹಕಾರ ತುಂಬ ಅಗತ್ಯ ಎಂದರು ವೀರ್‌ ಸಮರ್ಥ್.

ಆದಿತ್ಯ ಅವರಿಗೆ ಇದು ಮೊದಲ ಚಿತ್ರ. ಕಾಲೇಜ್‌ ಹುಡುಗನೊಬ್ಬ ಬದುಕನ್ನು ಸೀರಿಯಸ್‌ ಆಗಿ ತೆಗೆದುಕೊಳ್ಳಲ್ಲ. ಆದರೆ, ಸದಾ ಜೋಶ್‌ ಆಗಿರುವ ಅವನ ಲೈಫ‌ಲ್ಲಿ ಒಂದು ನೋಟು ಬಂದಾಗ ಏನೆಲ್ಲಾ ಬದಲಾವಣೆ ಆಗುತ್ತೆ ಅನ್ನೋದೆ ಕಥೆ ಎಂಬುದು ಅವರ ಮಾತು. ಅರ್ಜುನ್‌ ಕಿಟ್ಟು ಸಂಕಲನ ಮಾಡಿದ್ದಾರೆ. ಅಶ್ವಿ‌ನ್‌ ಹಾಸನ್‌ ಚಾಲಕನ ಪಾತ್ರ ಮಾಡಿದರೆ, ಆನಂದ್‌ ಕಳ್ಳನ ಪಾತ್ರಕ್ಕೆ ನ್ಯಾಯ ಒದಗಿಸಿದ ಖುಷಿಯಲ್ಲಿದ್ದಾರೆ. ಉಳಿದಂತೆ ಮೆಘ, ಉಷಾ, ಗೌತಮ್‌ ಇತರರು ನಟಿಸಿದ್ದಾರೆ.

— ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.