ಒಂದು ಕಾಡಿನ ಕಥೆ ಟ್ರಿಗರ್‌ ಒತ್ತಿದ್ದಾಗಿದೆ…


Team Udayavani, Jul 21, 2017, 5:30 AM IST

Suchitra-4.gif

ಸಿನಿಮಾ ನಿರ್ಮಾಣ ಮಾಡಬೇಕು ಎಂದು ಕೃಷ್ಣ ಮಾಸ್ಟರ್‌ ನಿರ್ಧರಿಸಿದಾಗ, ಅವರ ಒಬ್ಬೊಬ್ಬರೇ ಸ್ನೇಹಿತತರು ದೂರವಾಗತೊಡಗಿದರಂತೆ. ಎಲ್ಲಿ ಅವರು ಬಂದು ಸಾಲ ಕೇಳುತ್ತಾರೋ? ಹಾಗೆ ಪಡೆದ ಸಾಲವನ್ನು ವಾಪಸ್ಸು ಕೊಡುತ್ತಾರೋ ಇಲ್ಲವೋ? ಎಂಬ ಭಯದಿಂದ ದೂರಾದರಂತೆ. ಕೃಷ್ಣ ಮಾಸ್ಟರ್‌ಗೆ ಚಾಲೆಂಜ್‌ ಎನಿಸಿದ್ದೇ ಆಗ. ಈಗ ಅವರು ಆ ಸವಾಲನ್ನು ಸ್ವೀಕರಿಸಿ ಯಶಸ್ವಿಯಾಗಿ ಸ್ವೀಕರಿಸಿ, ಸಿನಿಮಾ ಮುಗಿಸಿದ್ದಾರೆ. ಇನ್ನು ಚಿತ್ರ ಗೆದ್ದುಬಿಟ್ಟರೆ ಇನ್ನೂ ಖುಷಿ ಎನ್ನುತ್ತಾರೆ ಕೃಷ್ಣ ಮಾಸ್ಟರ್‌.

ಅಂದಹಾಗೆ, ಅವರು ನಿರ್ಮಿಸಿರುವ ಚಿತ್ರದ ಹೆಸರು “ಟ್ರಿಗರ್‌’. ಚೇತನ್‌ ಗಂಧರ್ವ, ಜೀವಿಕಾ, “ಉಗ್ರಂ’ ರವಿ ಮುಂತಾದವರು ನಟಿಸಿರುವ ಈ ಚಿತ್ರ ಇದೇ ವಾರ ಬಿಡುಗಡೆಯಾಗುತ್ತಿದೆ. ಇದೇ ವಿಷಯವಾಗಿ ಚಿತ್ರತಂಡದವರು ಚಿತ್ರದ ಬಗ್ಗೆ ಮಾತಾಡುವುದಕ್ಕೆ ಮಾಧ್ಯಮದವರೆದುರು ಬಂದಿದ್ದರು.

ಈ ಚಿತ್ರಕ್ಕೆ ವಿಜ¿… ಪಾಳೇಗಾರ್‌ ಎನ್ನುವವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅವರು ಮೂಲತಃ ಕಲಾ ನಿರ್ದೇಶಕರಂತೆ. ಕಾಡಿನಲ್ಲಿ ಸೆಟ್‌ ಹಾಕುವುದಕ್ಕೆ ಒಮ್ಮೆ ಹೋದಾಗ, ಹೊಳೆದ ಕಥೆಯನ್ನು ಅವರು ಚಿತ್ರ ಮಾಡಿದ್ದಾರೆ. ಇಲ್ಲಿ ನಾಯಕ ಸಹ ಒಬ್ಬ ಕಲಾ ನಿರ್ದೇಶಕನ ಸಹಾಯಕ. ಕಾಡಿನಲ್ಲಿ ಚಿತ್ರವೊಂದರ ಸೆಟ್‌ ಹಾಕುವುದಕ್ಕೆ ಹೋದಾಗ ಏನೆಲ್ಲಾ ಕಷ್ಟಗಳು ಎದುರಾಗುತ್ತದೆ ಮತ್ತು ನಾಯಕ ಅದನ್ನು ಹೇಗೆಲ್ಲಾ ಎದರಿಸುತ್ತಾನೆ ಎಂಬುದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರಂತೆ.

ಇಲ್ಲಿ ಕಾಡಿನ ಸಮಸ್ಯೆಗಳು, ಅರಣ್ಯ ಒತ್ತುವರಿ, ಅರಣ್ಯವಾಸಿಗಳ ಒಕ್ಕಲೆಬ್ಬಿಸುವಿಕೆ … ಈ ತರಹದ ಯಾವುದಾದರೂ ಗಂಭೀರ ವಿಷಯ ಎಂದರೆ ಖಂಡಿತಾ ಇಲ್ಲ ಎಂದರು ಚೇತನ್‌ ಗಂಧರ್ವ. “ಇಲ್ಲಿ ಯಾವುದೇ ಸಾಮಾಜಿಕ ಸಮಸ್ಯೆಗಳಿಲ್ಲವಂತೆ. ಒಬ್ಬ ಸೆಟ್‌ ಹುಡುಗ, ಕಾಡಿಗೆ ಹೋದಾಗ ಏನೆಲ್ಲಾ ಎದುರಿಸುತ್ತಾನೆ ಎನ್ನುವುದು ಚಿತ್ರದ ಕಥೆ. ಇಲ್ಲಿ ಒಂದು ಲವ್‌ ಸ್ಟೋರಿ ಸಹ ಇದೆ. ಒಂದು ಸರಳ ಮತ್ತು ಸುಂದರವಾದ ಚಿತ್ರವನ್ನು ಮಾಡುವ ಪ್ರಯತ್ನ ಮಾಡಿದ್ದೇವೆ’ ಎಂದರು ಚೇತನ್‌.

ಅವರಿಗೆ ನಾಯಕಿಯಾಗಿ ಜೀವಿಕಾ ಮತ್ತು ಖಳನಾಯಕನಾಗಿ “ಉಗ್ರಂ’ ರವಿ ಇದ್ದಾರೆ. ಇಬ್ಬರೂ ತಮ್ಮ ಪಾತ್ರಗಳ ಬಗ್ಗೆ ಖುಷಿ ವ್ಯಕ್ತಪಡಿಸಿದರು. ಸಂಗೀತ ನಿರ್ದೇಶಕ ಚಂದ್ರು ಓಬಯ್ಯ ಹಾಡುಗಳ ಬಗ್ಗೆ ಮಾತಾಡಿದರು. ಇನ್ನು ಕೃಷ್ಣ ಮಾಸ್ಟರ್‌ ಜ್ಞಾನಭಾರತಿ ಹೈಸ್ಕೂಲ್‌ ಎಂಬ ಶಾಲೆ ಕಟ್ಟಿ, ಪ್ರಿನ್ಸಿಪಾಲ್‌ ಆಗಿದ್ದರಂತೆ. ಚಿತ್ರ ನಿರ್ಮಾಣ ಮಾಡುತ್ತಿರುವುದರಿಂದ, ಆ ಜವಾಬ್ದಾರಿಯನ್ನು ಬೇರೆಯವರಿಗೆ ಬಿಟ್ಟು ಚಿತ್ರ ಮಾಡುತ್ತಿರುವುದಾಗಿ ಹೇಳಿದರು. ಚಿತ್ರೀಕರಣ ಸಂದರ್ಭದಲ್ಲಿ ಪ್ರಾಂಶುಪಾಲರ ತರಹ ಸ್ಟ್ರಿಕ್ಟ್ ಆಗಿದ್ದರಿಂದ, ಕೆಲವು ಜನರಿಂದ ದೂರ ಆಗಿದ್ದಾಗಿಯೂ ಹೇಳಿಕೊಂಡರು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.