ಹೊಸಬರ ಡ್ರೀಮ್‌ ಪ್ರಾಜೆಕ್ಟ್

ಕನಸಿನ ಹಿಂದಿನ ಶ್ರಮದ ಸುತ್ತ ಚಿತ್ರ

Team Udayavani, Dec 11, 2020, 12:08 PM IST

ಹೊಸಬರ ಡ್ರೀಮ್‌ ಪ್ರಾಜೆಕ್ಟ್

ಸಿನಿಮಾ ಎಂಬುದೇ ಒಂದು ಕನಸು. ಸಿನಿಮಾ ಮಾಡಬೇಕು, ಆ ಮೂಲಕ ಮಿಂಚಬೇಕು ಎಂದು ಕನಸು ಕಾಣುವ ನವಪ್ರತಿಭೆಗಳಿಗೇನೂ ಕೊರತೆಯಿಲ್ಲ. ಈಗ ಕನಸು ಎಂಬ ಟೈಟಲ್‌ ನಡಿ ಹೊಸಬರ ಸಿನಿಮಾವೊಂದು ಸೆಟ್ಟೇರಿದೆ. ಅದು “ಆ ಒಂದು ಕನಸು’.

ರಂಗು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಆ ಒಂದು ಕನಸು’ ಚಿತ್ರದ ಮುಹೂರ್ತ ಇತ್ತೀಚೆಗೆ ರಾಜರಾಜೇಶ್ವರಿ ನಗರದ ನಿಮಿಷಾಂಭಾ ದೇವಸ್ಥಾನದಲ್ಲಿ ನಡೆಯಿತು. ಚಿತ್ರವನ್ನು ವಿಷ್ಣು ನಾಚನೇಕರ್‌ ನಿರ್ದೆಶಿಸುತ್ತಿದ್ದಾರೆ. ಇಲ್ಲಿಯವರೆಗೂ ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವಿರುವ ವಿಷ್ಣು ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

ಚಿತ್ರದಲ್ಲಿ ವಿಶ್ವಾಸ್‌ ನಾಯಕ. “ಸಿನಿಮಾ ಮಾಡಬೇಕೆಂಬುದು ಹಲವು ವರ್ಷಗಳ ಕನಸು. ಇದೀಗ ಆ ಒಂದು ಕನಸು ಮೂಲಕ ಇಬ್ಬರ ಕನಸು ಈಡೇರಿದೆ. ನಿರ್ಮಾಪಕ ದಿಲೀಪ್‌ ಅವರಿಂದ ಈ ಸಿನಿಮಾ ಶುರುವಾಗಿದೆ.

ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಶೈಲಿಯ ಸಿನಿಮಾ. ಕಮರ್ಷಿಯಲ್‌ ಅಂಶಗಳೊಂದಿಗೆ ಸಾಗಲಿದೆ. ಬಹುತೇಕ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಇನ್ನುಳಿದ ಭಾಗ ಸಾಗರ ಮತ್ತು ಶಿವಮೊಗ್ಗದಲ್ಲಿ ನಡೆಯಲಿದೆ’ ಎನ್ನುವುದು ನಿರ್ದೇಶಕ ವಿಷ್ಣು ಅವರ ಮಾತು. ನಾಯಕ ವಿಶ್ವಾಸ್‌ ಮಾತನಾಡಿ, ತಮಿಳಿನ ಉದಯಂ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಕಥೆಯೇ ಈ ಚಿತ್ರದಲ್ಲಿ ಹೀರೋ. ಇದರಲ್ಲಿ ತುಂಬಾ ಮೃದು ಸ್ವಭಾವದ ಪಾತ್ರ ನನ್ನದು. ಹಲ್ಲಿ ಕಂಡರೂ ಹೆದರುವಂಥ ಪಾತ್ರ’ ಎಂದರು. ಚಿತ್ರದ ನಿರ್ಮಾಪಕ ದಿಲೀಪ್‌ ಬಿ.ಎಂ ಕೂಡಾ ತಮ್ಮ ಅನಿಸಿಕೆ ಹಂಚಿಕೊಂಡರು.

ಇದನ್ನೂ ಓದಿ : ಇಂದಿನಿಂದ ಥಿಯೇಟರ್‌ನಲ್ಲಿ ಪುರುಸೋತ್‌ ರಾಮನ ಆಟ ಶುರು

ಇನ್ನು ಈ ಚಿತ್ರಕ್ಕೆ ಮಳವಳ್ಳಿ ಸಾಯಿ ಕೃಷ್ಣ ಸಂಭಾಷಣೆ ಬರೆದಿದ್ದಾರೆ. “ಕನಸು ಕಾಣುವುದು ಮತ್ತು ಕಂಡ ಕನಸನ್ನು ನನಸು ಮಾಡಿಕೊಳ್ಳುವ ಹಾದಿಯಲ್ಲಿ ಈ ಸಿನಿಮಾ ಸಾಗುತ್ತದೆ’ ಎಂದರು ಸಾಯಿಕೃಷ್ಣ. ಚಿತ್ರದ ನಾಯಕಿಯಾಗಿ ಧನ್ಯಶ್ರೀ ನಟಿಸುತ್ತಿದ್ದಾರೆ. ಉಳಿದಂತೆ ತಾರಾಗಣದಲ್ಲಿ ಬಾಲ ರಾಜವಾಡಿ, ಮಾ. ಚಿರಾಯು ಚಕ್ರವರ್ತಿ, ಅಮಿತ್‌, ಗಿರೀಶ್‌ ಶಿವಣ್ಣ, ರಮೇಶ್‌ ಭಟ್‌, ಗಿರಿಜಾ ಲೋಕೇಶ್‌,ಕುರಿ ಬಾಂಡ್‌ ರಂಗ, ಹರ್ಷವರ್ಧನ್‌, ಶ್ವೇತಾ ರಾವ್‌ ಮತ್ತು ಜಯಶ್ರೀ ನಟಿಸಲಿದ್ದಾರೆ. ಇನ್ನು ಅಭಿಷೇಕ್‌ ಜಿ ರಾಯ್‌ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಕಥೆ, ಚಿತ್ರಕಥೆ ಉದಯಂ, ವೀನಸ್‌ ಮೂರ್ತಿ ಛಾಯಾಗ್ರಹಣ, ಸುಜನ್‌ ಅವರ ಸಂಕಲನ, ಅಲ್ಟಿಮೇಟ್‌ ಶಿವು ಸಾಹಸ, ಹೈಟ್‌ ಮಂಜು ಮತ್ತು ಸ್ಟಾರ್‌ ಗಿರಿ ನೃತ್ಯ ನಿರ್ದೇಶನವಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.