ಅಮೃತಮತಿಯ ಮರುವ್ಯಾಖ್ಯಾನ

ಬರಗೂರು ನಿರ್ದೇಶನದಲ್ಲಿ ಅರಮನೆ, ಸೆರೆಮನೆ ಮತ್ತು ಹೊರಮನೆಯ ಕಥೆ...

Team Udayavani, Feb 7, 2020, 7:05 AM IST

amrutamati

ಹಿರಿಯ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ “ಅಮೃತಮತಿ’ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆಯಿತು. ನಟ ರಾಘವೇಂದ್ರ ರಾಜ್‌ಕುಮಾರ್‌ ಆಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ಇದೇ ವೇಳೆ ಅತ್ಯುತ್ತಮ ನಟ ರಾಜ್ಯಪ್ರಶಸ್ತಿಗೆ ಭಾಜನರಾಗಿರುವ ರಾಘಣ್ಣ ಅವರನ್ನು “ಅಮೃತಮತಿ’ ಚಿತ್ರತಂಡ ಆತ್ಮೀಯವಾಗಿ ಸನ್ಮಾನಿಸಿತು.

“ಅಮೃತಮತಿ’ ಚಿತ್ರದ ಬಗ್ಗೆ ದೀರ್ಘ‌ವಾಗಿ ವಿವರಣೆ ನೀಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ, “ಇದು ಜನ್ನಕವಿಯ ಯಶೋಧರ ಚರಿತೆ ಆಧರಿತವಾಗಿರುವ ಸಿನಿಮಾ. ಯಶೋಧರ ಚರಿತೆಯಲ್ಲಿ ಬರುವ ಅಮೃತಮತಿ ಪ್ರಸಂಗವನ್ನಿಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಅನೇಕರಿಗೆ ಒಂದು ಕುತೂಹಲವಿದೆ. ಅದೇನೆಂದರೆ ಮೂಲಕೃತಿಯಲ್ಲಿ ಅಮೃತಮತಿ ಕೊನೆಯಲ್ಲಿ ಎಲ್ಲರಿಗೂ ವಿಷಕೊಟ್ಟು ಸಾಯಿಸ್ತಾಳೆ.

ಹಾಗಾಗಿ, ಇಲ್ಲಿ ಬರಗೂರು ಸಾಯಿಸ್ತಾರೆ, ಏನ್‌ ಮಾಡಿದ್ದಾರೆಂಬ ಕುತೂಹಲವಿದೆ. ಅದನ್ನು ಸಿನಿಮಾದಲ್ಲೇ ನೋಡಿದಾಗ ಗೊತ್ತಾಗುತ್ತದೆ. ಪುನರ್‌ಸೃಷ್ಟಿ, ಮರುಹುಟ್ಟಿನ ಪರಂಪರೆಯಲ್ಲಿ ಇಡೀ ಭಾರತದ ಸಾಂಸ್ಕೃತಿಕ ಪರಂಪರೆಯಲ್ಲಿ ಇದೆ. ನಾನು ಕೂಡಾ ಆ ಪರಂಪರೆಯನ್ನು ಮುಂದುವರೆಸುತ್ತಾ, ಅಮೃತಮತಿಗೆ ಸಿನಿಮಾ ಮುಖಾಂತರವಾಗಿ ಮರುಹುಟ್ಟು ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಇದು ಬರೀ ಮರುಹುಟ್ಟು ಅಲ್ಲ.

ಇದೊಂದು ಪುನರ್‌ ವ್ಯಾಖ್ಯಾನ ಎನ್ನಬಹುದು. ಅರಮನೆಯಲ್ಲಿ ಇರುವ ರಾಣಿ, ಆನೆ ಲಾಯದವನತ್ತ ಹೋಗುತ್ತಾಳೆ. ನಾನಿಲ್ಲಿ ಆನೆ ಬದಲು ಕುದುರೆ ಲಾಯ ಎಂದು ಬದಲಿಸಿಕೊಂಡಿದ್ದೇನೆ. ಅದಕ್ಕೆ ಕಾರಣ ನಮ್ಮ ಕಲಾಕೃತಿಗಳಲ್ಲಿ, ಸಾಹಿತ್ಯಗಳಲ್ಲಿ ಕುದುರೆ ಕಾಮದ ಸಂಕೇತ. ಹಾಗಾಗಿ, ಕುದುರೆಯನ್ನು ಬಳಸಿಕೊಂಡಿದ್ದೇನೆ. ಅರಮನೆ ಭೋಗ ಆದರೆ, ಕುದುರೆ ಲಾಯ ಸುಖ. ಹಾಗಾಗಿ, ನನ್ನ ಚಿತ್ರ ಭೋಗ ಮತ್ತು ಸುಖ ಇವುಗಳಲ್ಲಿನ ವ್ಯತ್ಯಾಸಗಳನ್ನು ಹೇಳುತ್ತಾ ಹೋಗುತ್ತದೆ.

ಅರಮನೆ ಅಮೃತಮತಿಗೆ ಸೆರೆಮನೆಯಾಗಿರುತ್ತದೆ. ಹಾಗಾಗಿ, ಆಕೆ ಹೊರಮನೆಯನ್ನು ಹುಡುಕುತ್ತಾ ಹೋಗುತ್ತಾಳೆ. ಅರಮನೆ, ಸೆರೆಮನೆ ಮತ್ತು ಹೊರಮನೆ ಈ ಮೂರರ ಅಂತರಗಳನ್ನು, ತಳಮಳಗಳನ್ನು ಅಮೃತಮತಿ ಪಾತ್ರದ ಮೂಲಕ ಪುನರ್‌ರೂಪಿಸುವ ಪ್ರಯತ್ನವನ್ನು ನಾನು ಮತ್ತು ನನ್ನ ಚಿತ್ರತಂಡ ಮಾಡಿದೆ. ಅಮೃತ ಮತಿಯ ಆತ್ಮಸಾಕ್ಷಿಯ ಶೋಧವನ್ನು ನಡೆಸುವ ಪ್ರಯತ್ನವೂ ಹೌದು.

ಒಬ್ಬ ಯುವರಾಣಿಯಾಗಿರುವವಳು ಒಬ್ಬ ಸಾಮಾನ್ಯ ಸೇವಕನ ಬಳಿ ಯಾಕೆ ಹೋಗುತ್ತಾಳೆ, ಕೇವಲ ಕಾಮಕ್ಕಾಗಿಯೇ- ಈ ಪ್ರಶ್ನೆಯನ್ನು ಹಾಕಿಕೊಂಡು ಹೆಣ್ಣಿನ ಘನತೆಯನ್ನು ಎತ್ತಿಹಿಡಿಯುವ ರೀತಿಯಲ್ಲಿ ಮರುವ್ಯಾಖ್ಯಾನ ಮಾಡಿದ್ದೇವೆ’ ಎಂದು ಚಿತ್ರದ ಬಗ್ಗೆ ವಿವರ ನೀಡಿದರು. ಈ ಚಿತ್ರವನ್ನು ನಿರ್ಮಿಸಿರುವ ಪುಟ್ಟಣ್ಣ ಕೂಡಾ ಒಳ್ಳೆಯ ಸಿನಿಮಾ ಮಾಡಿರುವ ಖುಷಿ ಹಾಗೂ ಬರಗೂರು ರಾಮಚಂದ್ರಪ್ಪನವರ ವ್ಯಕ್ತಿತ್ವದ ಬಗ್ಗೆ ಮಾತನಾಡಿದರು.

ಚಿತ್ರದಲ್ಲಿ ಅಮೃತಮತಿಯಾಗಿ ನಟಿಸಿರುವ ಹರಿಪ್ರಿಯಾಗೆ ಇದು ಹೊಸಬಗೆಯ ಪಾತ್ರವಂತೆ. “ನಾನು ಈ ಸೆಟ್‌ಗೆ ಮಗುವಾಗಿ ಹೋಗಿದ್ದೆ. ನಿರ್ದೇಶಕರು ಏನು ಹೇಳುತ್ತಾರೋ ಅದನ್ನಷ್ಟೇ ಮಾಡಿದ್ದೇನೆ. ಬರಗೂರು ಅವರ ಸಿನಿಮಾದಲ್ಲಿ ನಟಿಸಿದ್ದರಿಂದ ಸಾಕಷ್ಟು ಹೊಸ ವಿಷಯಗಳನ್ನು ಕಲಿತುಕೊಂಡೆ’ ಎಂದರು. ಹಿರಿಯ ನಟ ಸುಂದರ್‌ ರಾಜ್‌ ಸಿನಿಮಾ, ಪಾತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರೆ, ಸಂಗೀತ ನಿರ್ದೇಶಕಿ ಶಮಿತಾ ಮಲಾ°ಡ್‌ ಹಾಡುಗಳ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.