ಯಶಸ್ವಿ ಥ್ರಿಲ್ಲರ್ ಕಥಾ

ಸಿನಿಮಾದ ಒಳಗೊಂದು ಚಿತ್ರಕಥೆ

Team Udayavani, Jun 7, 2019, 6:00 AM IST

f-28

ಚಿತ್ರದಲ್ಲಿ ಕೆಲವು ಹಿರಿಯ ಕಲಾವಿದರನ್ನು ಹೊರತುಪಡಿಸಿದರೆ, ಬಹುತೇಕ ಯುವ ಪ್ರತಿಭೆಗಳೇ ತೆರೆಯ ಹಿಂದೆ ಮತ್ತು ಮುಂದೆ ಕೆಲಸ ಮಾಡಿವೆ ಎಂಬುದು ವಿಶೇಷ. ಇವರೆಲ್ಲರಿಗೂ ಇದು ಮೊದಲ ಅನುಭವ. ಇತ್ತೀಚೆಗೆ ತಮ್ಮ ಚೊಚ್ಚಲ ಚಿತ್ರದ ಬಗ್ಗೆ ಹೇಳಿಕೊಳ್ಳಲೆಂದೇ ಮಾಧ್ಯಮ ಎದುರು ಚಿತ್ರತಂಡ ಆಗಮಿಸಿತ್ತು. ಅಂದು ಚಿತ್ರದ ಪೋಸ್ಟರ್‌ ರಿಲೀಸ್‌ ಮಾಡುವ ಮೂಲಕ “ಚಿತ್ರಕಥಾ’ದೊಳಗಿನ ವಿಶೇಷವನ್ನು ಹೇಳಿಕೊಂಡಿತು…

ಕನ್ನಡದಲ್ಲಿ ಹೊಸಬರ ಆಗಮನ ಹೊಸದೇ­ನಲ್ಲ. ಆ ಸಾಲಿಗೆ ಈಗ “ಚಿತ್ರಕಥಾ’ ಎಂಬ ಹೊಸ ಚಿತ್ರತಂಡ ಸೇರ್ಪಡೆಯಾಗಿದೆ. ಈಗಾಗಲೇ ಸದ್ದಿಲ್ಲದೆಯೇ ಚಿತ್ರೀಕರಣ ಮುಗಿಸಿ ಬಂದಿರುವ ಚಿತ್ರತಂಡ, ಬಿಡುಗಡೆಗೆ ಸಜ್ಜಾಗುತ್ತಿದೆ. ಚಿತ್ರದಲ್ಲಿ ಕೆಲವು ಹಿರಿಯ ಕಲಾವಿದರನ್ನು ಹೊರತುಪಡಿಸಿದರೆ, ಬಹುತೇಕ ಯುವ ಪ್ರತಿಭೆಗಳೇ ತೆರೆಯ ಹಿಂದೆ ಮತ್ತು ಮುಂದೆ ಕೆಲಸ ಮಾಡಿವೆ ಎಂಬುದು ವಿಶೇಷ. ಇವರೆಲ್ಲರಿಗೂ ಇದು ಮೊದಲ ಅನುಭವ. ಇತ್ತೀಚೆಗೆ ತಮ್ಮ ಚೊಚ್ಚಲ ಚಿತ್ರದ ಬಗ್ಗೆ ಹೇಳಿಕೊಳ್ಳಲೆಂದೇ ಮಾಧ್ಯಮ ಎದುರು ಚಿತ್ರತಂಡ ಆಗಮಿಸಿತ್ತು. ಅಂದು ಚಿತ್ರದ ಪೋಸ್ಟರ್‌ ರಿಲೀಸ್‌ ಮಾಡುವ ಮೂಲಕ “ಚಿತ್ರಕಥಾ’ದೊಳಗಿನ ವಿಶೇಷವನ್ನು ಹೇಳಿಕೊಂಡಿತು. ಅಂದಹಾಗೆ, ಅಂದು ಚಿತ್ರದ ಪೋಸ್ಟರ್‌ಗೆ ಸಾಕ್ಷಿಯಾಗಿದ್ದು, ಹಿರಿಯ ಕಲಾವಿದೆ ಬಿ.ಜಯಶ್ರೀ.

ಈ ಚಿತ್ರದ ಮೂಲಕ ಯಶಸ್ವಿ ಬಾಲಾದಿತ್ಯ ನಿರ್ದೇಶಕರಾಗಿದ್ದಾರೆ. ಇದೊಂದು ಸಿನಿಮಾದೊಳಗಿನ ಸಿನಿಮಾ. ಈಗಾಗಲೇ ಸಾಕಷ್ಟು ಚಿತ್ರಗಳಲ್ಲಿ ಸಿನಿಮಾದೊಳಗೊಂದು ಸಿನಿಮಾ ಕಥೆ ಬಂದಿವೆ. ಇಲ್ಲೂ ಅಂಥದ್ದೊಂದು ಕಥೆ ಇದ್ದರೂ, ಅದೊಂದು ವಿಭಿನ್ನವಾಗಿ ಮೂಡಿಬಂದಿದೆ ಎಂಬುದು ಚಿತ್ರತಂಡದ ಮಾತು. ತಮ್ಮ ಮೊದಲ ಅನುಭವ ಕುರಿತು ನಿರ್ದೇಶಕ ಯಶಸ್ವಿ ಬಾಲಾದಿತ್ಯ ಹೇಳಿದ್ದಿಷ್ಟು. “ಇದು ನನ್ನ ಮೊದಲ ಚಿತ್ರ. ನಿರ್ದೇಶನ ನನ್ನ ಕನಸು. ಇದಕ್ಕೂ ಮೊದಲು ಅನಿಮೇಷನ್‌ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಇದೆ. ಚಿತ್ರದ ಬಗ್ಗೆ ಹೇಳುವುದಾದರೆ, ಒಬ್ಬ ಕಲಾವಿದ ಕಷ್ಟಪಟ್ಟು ಒಂದು ಹಂತವನ್ನು ದಾಟಿದ ಬಳಿಕ ಅವನಿಗೆ ಒಂದಷ್ಟು ನೆಲೆ ಸಿಗುತ್ತದೆ. ತನ್ನ ಗುರಿ ಬಿಡದೆ ಹೊರಟಾಗ ಅವನ ಕಲೆಗೊಂದು ಬೆಲೆ ಸಿಗುತ್ತದೆ. ಹಾಗೆಯೇ ಅವನು ಗುರುತಿಸಿಕೊಳ್ಳುತ್ತಾನೆ. ಆ ಕಲೆ ಉಳಿಸಿಕೊಂಡು ಬೆಳೆಸಲು ಬಣ್ಣದ ಪಯಣಕ್ಕೆ ಕಾಲಿಡುವ ಆತನ ಬದುಕಲ್ಲಿ ಏನೆಲ್ಲಾ ಸಮಸ್ಯೆಗಳು ಎದುರಾಗುತ್ತವೆ. ಅವೆಲ್ಲವನ್ನೂ ಅವನು ಹೇಗೆ ಎದುರಿಸಿ, ತನ್ನ ಗುರಿ ಸಾಧಿಸುತ್ತಾನೆ ಎಂಬುದು ಕಥೆ. ಇದೊಂದು ಸಸ್ಪೆನ್ಸ್‌-ಥ್ರಿಲ್ಲರ್‌ ಅಂಶಗಳೊಂದಿಗೆ ಸಿನಿಮಾ ಸಾಗಲಿದೆ. ಬೆಂಗಳೂರು, ಕೇರಳ, ಮಂಗಳೂರು, ಮಡಿಕೇರಿ ಸೇರಿದಂತೆ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ’ ಎಂದು ವಿವರ ಕೊಡುತ್ತಾರೆ ಯಶಸ್ವಿ ಬಾಲಾದಿತ್ಯ.

ಚಿತ್ರಕ್ಕೆ ಸುಜಿತ್‌ ರಾಥೋಡ್‌ ಹೀರೋ. ಅವರಿಗೆ ಸಿನಿಮಾ ಮೇಲೆ ಪ್ರೀತಿ ಮತ್ತು ಆಸಕ್ತಿ ಹೆಚ್ಚು. ಹಾಗಾಗಿಯೇ ಬಣ್ಣದ ಲೋಕದ ಮೇಲೆ ಇನ್ನಿಲ್ಲದ ಸೆಳೆತ. ಹೀರೋ ಆಗಬೇಕೆಂಬ ಕನಸು “ಚಿತ್ರಕಥಾ’ ಮೂಲಕ ಈಡೇರಿದೆ. ಅವರಿಗೆ ಇಲ್ಲಿ ಚಾಲೆಂಜಿಂಗ್‌ ಪಾತ್ರ ಸಿಕ್ಕಿದೆಯಂತೆ. ಕಥೆ ಮತ್ತು
ಪಾತ್ರ ನೋಡುಗರನ್ನು ಖಂಡಿತ ಆಕರ್ಷಿಸಲಿದೆ ಎಂಬುದು ಸುಜಿತ್‌ ರಾಥೋಡ್‌ ಅವರ ಮಾತು.

ಚಿತ್ರದಲ್ಲಿ ಹಿರಿಯ ನಟಿ ಬಿ.ಜಯಶ್ರೀ ಅವರು ನಟಿಸಿದ್ದಾರೆ. ಅದೊಂದು ಕೊರವಂಜಿಯ ವಿಶೇಷ ಪಾತ್ರವಾಗಿದ್ದು, ಎಲ್ಲರ ಗಮನಸೆಳೆಯುವಂಥದ್ದು ಎಂಬುದು ಅವರ ಹೇಳಿಕೆ. ಇನನು, ಅವರು ನಟನೆಯ ಜೊತೆಗೆ ಈ ಚಿತ್ರಕ್ಕಾಗಿ ಒಂದು ಹಾಡನ್ನೂ ಹಾಡಿದ್ದಾರಂತೆ. ಸುಧಾರಾಣಿ ಇಲ್ಲಿ ಡಾಕ್ಟರ್‌ ಪಾತ್ರ ಮಾಡಿದರೆ, ತಬಲನಾಣಿ, ದಿಲೀಪ್‌ರಾಜ್‌, ಹೊಸ ಪ್ರತಿಭೆಗಳಾದ ಮೇಧಾ, ಆದರ್ಶ್‌, ಅನುಷಾ ರಾವ್‌. ಮಹಂತೇಶ್‌ ಇತರರು ನಟಿಸಿದ್ದಾರೆ. ಎರಡು ಹಾಡುಗಳಿಗೆ ಚೇತನ್‌ಕುಮಾರ್‌ ಸಂಗೀತ ನೀಡಿದ್ದಾರೆ. ತನ್ವಿಕ್‌ ಅವರು ಛಾಯಾಗ್ರಹಣ ಮಾಡಿದ್ದಾರೆ. ಮಧು ತುಂಬಕೆರೆ ಸಂಕಲವಿದೆ. ಗೆಳೆಯ ಹೀರೋ ಆಗಿದ್ದರಿಂದ ಅವನ ಚಿತ್ರಕ್ಕೆ ಪ್ರಜ್ವಲ್‌ ಎಂ.ರಾಜ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.