ಒಂದು ಕಥೆ, ನಾಲ್ಕು ಉಪಕಥೆ


Team Udayavani, Feb 1, 2019, 12:30 AM IST

x-20.jpg

ಕನ್ನಡ ಚಿತ್ರರಂಗದ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರು ಒಂದೇ ಚಿತ್ರದಲ್ಲಿ ಸುಮಾರು ನಾಲ್ಕು ಕಥೆಗಳನ್ನು ಇಟ್ಟುಕೊಂಡು 1974ರಲ್ಲಿ “ಕಥಾ ಸಂಗಮ’ ಎನ್ನುವ ಹೆಸರಿನಲ್ಲಿ ಚಿತ್ರ ನಿರ್ದೇಶಿಸಿ ತೆರೆಗೆ ತಂದಿದ್ದರು. ಆಗಿನ ಕಾಲದಲ್ಲಿ ಹೊಸಥರದ ಪ್ರಯೋಗವಾಗಿದ್ದ “ಕಥಾ ಸಂಗಮ’ ಚಿತ್ರಕ್ಕೆ ವಿಮರ್ಶಕರಿಂದ, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈಗ “ಒಂದ್‌ ಕಥೆ ಹೇಳಾ’ ಎಂಬ ಹೆಸರಿನಲ್ಲಿ ಅಂಥದ್ದೆ ಚಿತ್ರವೊಂದು ತೆರೆಗೆ ಬರೋದಕ್ಕೆ ಸಿದ್ಧವಾಗುತ್ತಿದೆ.

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ ಹಾರರ್‌ ಶೈಲಿಯ “ಒಂದ್‌ ಕಥೆ ಹೇಳ್ಳಾ’ ಚಿತ್ರದಲ್ಲಿ ಒಟ್ಟು ಐದು ಕಥೆಗಳನ್ನು ಚಿತ್ರದಲ್ಲಿ ತೆರೆದಿಡಲಾಗುತ್ತಿದೆ. “ಒಂದ್‌ ಕಥೆ ಹೇಳಾ’ ಚಿತ್ರದ ಟ್ರೇಲರ್‌ನ್ನು ನಿರ್ದೇಶಕ ಕಂ ನಟ ರಿಷಭ್‌ ಶೆಟ್ಟಿ ಇತ್ತೀಚೆಗೆ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ರಿಷಭ್‌ ಶೆಟ್ಟಿ, “ನಮ್ಮ ಪ್ರೇಕ್ಷಕರು ಅನ್ನ ಸಾಂಬರ್‌ ಅಲ್ಲದೆ ಬಿರಿಯಾನಿ ಕೂಡ ಇಷ್ಟಪಡುತ್ತಾರೆ. ಅದಕ್ಕಾಗಿ ಹಲವು ಹೊಸಬಗೆಯ ಚಿತ್ರಗಳನ್ನು ಕೊಡಬೇಕಾಗಿದೆ. ನಾನು ಸಹ ಹಲವು  ಕಿರು ಕಥೆಗಳನ್ನು ಹೆಕ್ಕಿಕೊಂಡು “ಕಥಾ ಸಂಗಮ’ ಚಿತ್ರ ಮಾಡಿದ್ದು, ಸದ್ಯದಲ್ಲೇ ಅದು ಕೂಡ ತೆರೆಗೆ ಬರಲಿದೆ. ಚಿತ್ರಗಳಿಗೆ ಹೊಸಬರು ಬಂಡವಾಳ ಹೂಡುತ್ತಿರುವುದು ಚಿತ್ರರಂಗದ ಮಟ್ಟಿಗೆ ಒಳ್ಳೆಯ ಬೆಳವಣಿಗೆ. ತುಂಬ ಜನರು ಸಕಾರಾತ್ಮಕ ಉದ್ದೇಶ, ಯೋಚನೆ ಇಟ್ಟುಕೊಂಡು ಸಿನಿಮಾರಂಗಕ್ಕೆ ಬರುತ್ತಿದ್ದಾರೆ. ಇವತ್ತು ಸಿನಿಮಾ ಮಾಡೋದಕ್ಕಿಂತ ಅದನ್ನು ಜನರಿಗೆ ತಲುಪಿಸುವುದು ಕಷ್ಟದ ಕೆಲಸ. ಹೊಸಬರೆ ಸೇರಿಕೊಂಡು ಒಳ್ಳೆಯ ಸಿನಿಮಾ ಮಾಡಿದ್ದಾರೆ ಅವರಿಗೆ ಒಳ್ಳೆಯದಾಗಲಿ’ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.

“ಒಂದ್‌ ಕಥೆ ಹೇಳಾ’ ಚಿತ್ರಕ್ಕೆ ಮೆಕಾನಿಕಲ್‌ ಇಂಜಿನಿಯರ್‌ ಆಗಿರುವ ಗಿರೀಶ್‌.ಜಿ ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗಿರೀಶ್‌, “ಈಗಿನ ಪ್ರೇಕ್ಷಕರು ಹಾರರ್‌ ಕಥೆಗಳನ್ನು ಇಷ್ಟಪಡುತ್ತಿದ್ದಾರೆ. ಚಿತ್ರದಲ್ಲಿ ಮೂವರು ಹುಡುಗರು, ಇಬ್ಬರು ಹುಡುಗಿಯರು ಬೆಂಗಳೂರಿನಿಂದ ಸಕಲೇಶಪುರಕ್ಕೆ ಪ್ರಯಾಣ ಮಾಡುವಾಗ ಅವರುಗಳಲ್ಲೆ ಒಂದೊಂದು ಕಥೆಗಳು ಹುಟ್ಟಿಕೊಳ್ಳುತ್ತವೆ. ಆ ಎಲ್ಲಾ ಕಥೆಗಳಲ್ಲೂ ಶೇಕಡಾ 60ರಷ್ಟು ಹಾರರ್‌ ಅಂಶಗಳು ಬರುತ್ತವೆ. ಒಂದು ಕಥೆಯಲ್ಲಿ ಭಕ್ತಪ್ರಹ್ಲಾದ ನಾಟಕವನ್ನು ಯಾಕಾಗಿ ಮಾಡುವುದಿಲ್ಲವೆಂದು ಹೇಳಲಾಗಿದೆ. ಹೋಂ ಸ್ಟೇಗಳಲ್ಲಿ ನಡೆದ ಕೆಲವು ಘಟನೆಗಳನ್ನು ಆಧರಿಸಿ ಈ ಚಿತ್ರದ ಕಥೆ ಮಾಡಲಾಗಿದೆ. ಚಿತ್ರದಲ್ಲಿ ಕೋಳಿಯೊಂದು ಮುಖ್ಯ ಪಾತ್ರವಹಿಸಿದ್ದು, ಅದೇನು ಎಂಬುದನ್ನು ತೆರೆಮೇಲೆ ನೋಡಬೇಕು’ ಎಂಬುದು ಅವರ ಮಾತು.

“ಒಂದ್‌ ಕಥೆ ಹೇಳಾ’ ಚಿತ್ರದಲ್ಲಿ ಪ್ರತೀಕ್‌, ದೀಪಕ್‌, ತಾರಾ, ತಾಂಡವ್‌, ಸೌಮ್ಯಾ, ರಮಾಕಾಂತ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಕಲೇಶಪುರ, ರಾಮನಗರ, ಕುಣಿಗಲ್‌ ಮೊದಲಾದ ಕಡೆಗಳಲ್ಲಿ ಸುಮಾರು 30 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

ಸುಮಾರು 22 ಜನ ಸಿನಿಮಾಸಕ್ತರು ಸೇರಿಕೊಂಡು ಕ್ರೌಡ್‌ ಫ‌ಂಡಿಂಗ್‌ ಮೂಲಕ ಈ ಚಿತ್ರವನ್ನು ನಿರ್ಮಿಸಿರುವುದು ವಿಶೇಷ. ಸದ್ಯ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಇದೇ ಖುಷಿಯಲ್ಲಿರುವ ಚಿತ್ರತಂಡ, ಫೆಬ್ರವರಿ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರಲು ಪ್ಲಾನ್‌ ಮಾಡಿಕೊಂಡಿದೆ.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.