ನೈಜ ಘಟನೆಗೆ ದೃಶ್ಯ ರೂಪ

ಕೇಳಿದ್ದು-ನೋಡಿದ್ದು ಸುಳ್ಳಾಗಬಹುದು...

Team Udayavani, Oct 11, 2019, 5:00 AM IST

u-23

ಎಷ್ಟೋ ಸಮಯ ಯಾರೋ ಹೇಳಿದ್ದು, ನಾವು ಕೇಳಿದ್ದು, ಕಣ್ಣಾರೆ ಕಂಡಿದ್ದು ಕೂಡ ಸುಳ್ಳಾಗಬಹುದು. ಜಗತ್ತಿನಲ್ಲಿ ನಡೆಯುವ ಪ್ರತಿಯೊಂದು ಘಟನೆ, ಸನ್ನಿವೇಶಗಳಿಗೂ ನಾವು ತಿಳಿಯದೇ ಇರುವ, ಅದರದ್ದೇ ಆದ ಇನ್ನೊಂದು ಆಯಾಮವಿರುತ್ತದೆ. ನಿಧಾನಿಸಿ ಯೋಚಿಸಿದಾಗ ವಾಸ್ತವದ ಅರಿವಾಗುತ್ತದೆ.

“ಕಣ್ಣಾರೆ ಕಂಡರೂ ಪರಾಮರ್ಶಿಸಿ ನೋಡು…’, “ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು’ ಅನ್ನೋ ಮಾತುಗಳನ್ನು ನಾವೆಲ್ಲರೂ ಅದೆಷ್ಟೋ ಬಾರಿ ಕೇಳಿರುತ್ತೇವೆ. ಎಷ್ಟೋ ಸಮಯ ಯಾರೋ ಹೇಳಿದ್ದು, ನಾವು ಕೇಳಿದ್ದು, ಕಣ್ಣಾರೆ ಕಂಡಿದ್ದು ಕೂಡ ಸುಳ್ಳಾಗಬಹುದು. ಜಗತ್ತಿನಲ್ಲಿ ನಡೆಯುವ ಪ್ರತಿಯೊಂದು ಘಟನೆ, ಸನ್ನಿವೇಶಗಳಿಗೂ ನಾವು ತಿಳಿಯದೇ ಇರುವ, ಅದರದ್ದೇ ಆದ ಇನ್ನೊಂದು ಆಯಾಮವಿರುತ್ತದೆ. ನಿಧಾನಿಸಿ ಯೋಚಿಸಿದಾಗ ವಾಸ್ತವದ ಅರಿವಾಗುತ್ತದೆ.

ಈಗ ಯಾಕೆ ಈ ವಿಷಯದ ಬಗ್ಗೆ ಮಾತು ಅಂತೀರಾ? ಅದಕ್ಕೊಂದು ಕಾರಣವಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಆರ್‌ಟಿಓ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಎಂಬುವವರು ಕುಡಿದು ವಾಹನ ಚಲಾಯಿಸಿ, ಅಪಘಾತವೆಸಗಿದ್ದಾರೆ ಎಂದು ಸಾರ್ವಜನಿಕರು ಅವರನ್ನು ಬಹಿರಂಗವಾಗಿ ಅವರನ್ನು ಥಳಿಸಿದ್ದರು. ಇನ್ನು ಈ ಸುದ್ದಿಯನ್ನು ಟಿವಿ ವಾಹಿನಿಗಳು, ಸೋಶಿಯಲ್‌ ಮೀಡಿಯಾಗಳು ಇನ್ನಿಲ್ಲದಂತೆ ವೈಭವೀಕರಿಸಿ ಆರ್‌ಟಿಓ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಅಪರಾಧಿ ಎನ್ನುವಂತೆ ಬಿಂಬಿಸಿದ್ದವು.

ಆದರೆ ತನಿಖೆಯ ಬಳಿಕ ಆರ್‌ಟಿಓ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ತೆಗೆದುಕೊಂಡ ಔಷಧಿಯ ಪರಿಣಾಮದಿಂದ ಮಂಜುನಾಥ್‌ ದೇಹದ ನಿಯಂತ್ರಣ ತಪ್ಪಿ ಅಪಘಾತವೆಸಗಿದ್ದರು ಎಂಬುದು ಗೊತ್ತಾಯಿತು. ಆನಂತರ ಈ ಘಟನೆಯ ವಾಸ್ತವತೆ ತಿಳಿದು ಅನೇಕರು ಕನಿಕರ ಪಟ್ಟರೂ, ಅಷ್ಟರಲ್ಲಾಗಲೇ ಜನರಿಂದ ಥಳಿತಕ್ಕೆ ಒಳಗಾಗಿ, ಆಘಾತಗೊಂಡಿದ್ದ ಆರ್‌ಟಿಓ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಕೊನೆಯುಸಿರೆಳೆದಿದ್ದರು.

ಈಗ ಇದೇ ನೈಜ ಘಟನೆಯನ್ನು ಇಟ್ಟುಕೊಂಡು ನಟ ಯತಿರಾಜ್‌, ಅರವಿಂದ್‌ ರಾವ್‌, ಸಿನಿಮಾ ಪಿಆರ್‌ಒ ಸುಧೀಂದ್ರ ವೆಂಕಟೇಶ್‌, ಭಾಸ್ಕರ್‌ ಮತ್ತು ಆರ್‌. ಚಂದ್ರಶೇಖರ್‌ ಎಂಟು ನಿಮಿಷದ ಕಿರುಚಿತ್ರವೊಂದನ್ನು ನಿರ್ಮಿಸಿದ್ದಾರೆ. ನಟ ಯತಿರಾಜ್‌ ರೀಲ್‌ದಲ್ಲಿ ಮಂಜುನಾಥ್‌ ಪಾತ್ರವನ್ನು ನಿಭಾಯಿಸುವ ಜೊತೆಗೆ ಈ ಕಿರುಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಕಿರುಚಿತ್ರ ಬಿಡುಗಡೆಗೊಂಡಿದ್ದು, ಇದೇ ವೇಳೆ ಹಾಜರಿದ್ದ ಆರ್‌ಟಿಓ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಅವರ ಪತ್ನಿ ಶೈಲಾ ಮಂಜುನಾಥ್‌, “ಇಂತಹ ಸತ್ಯ ಘಟನೆಯನ್ನು ಚಿತ್ರರೂಪಕ್ಕೆ ತಂದಿರುವುದು ಶ್ಲಾಘನೀಯ. ಇಬ್ಬರು ಅಪರಾಧಿಗಳು ಹೋದರೂ ಚಿಂತೆ ಇಲ್ಲ. ಆದರೆ ಒಬ್ಬ ಮುಗ್ದ ಹೋಗುವುದು ಸರಿಯಲ್ಲ. ಮೆಡಿಕಲ್‌ ಮತ್ತು ಪಿಯುಸಿ ಓದುತ್ತಿರುವ ಇಬ್ಬರು ಮಕ್ಕಳನ್ನು ಯಜಮಾನರು ಬಿಟ್ಟುಹೋಗಿದ್ದರೆ. ಸಾಮಾಜಿಕ ಜಾಲತಾಣಗಳು, ವಾಹಿನಿಗಳು ಇನ್ನು ಮುಂದೆಯಾದರೂ, ಸತ್ಯ ಏನೆಂದು ಅರಿಯದೆ ಯಾರೊಬ್ಬರನ್ನೂ ಅಪರಾಧಿಯಂತೆ ಬಿಂಬಿಸಬೇಡಿ’ ಎಂದು ಮನವಿ ಮಾಡಿಕೊಂಡರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.