ನಿರ್ಮಾಪಕನಿಂದ ಹೀರೋ ತನಕ…. “ರೌಡಿ ಬೇಬಿ’ ರವಿಗೌಡ ಮಾತು


Team Udayavani, Feb 11, 2022, 12:20 PM IST

ನಿರ್ಮಾಪಕನಿಂದ ಹೀರೋ ತನಕ…. “ರೌಡಿ ಬೇಬಿ’ ರವಿಗೌಡ ಮಾತು

ಈ ವಾರ ಬಿಡುಗಡೆಯಾಗುತ್ತಿರುವ “ರೌಡಿ ಬೇಬಿ’ ಸಿನಿಮಾದ ಮೂಲಕ ವರ್ಷದ ಮೊದಲ ಸಿನಿಮಾ ಬಿಡುಗಡೆಯ ಖುಷಿಯಲ್ಲಿದ್ದಾರೆ ನಾಯಕ ನಟ ರವಿ ಗೌಡ. ಆರಂಭದಲ್ಲಿ ಕಿರುತೆರೆಯ ನಿರ್ಮಾಪಕನಾಗಿ ಬಣ್ಣದ ಲೋಕದ ನಂಟು ಬೆಳೆಸಿಕೊಂಡ ರವಿ ಗೌಡ, ಆ ನಂತರ ನಿರ್ಮಾಪಕನಾಗಬೇಕು ಎಂಬ ಕನಸಿನಿಂದ ಬೆಳ್ಳಿತೆರೆಗೆ ಅಡಿಯಿಟ್ಟವರು. ಆದರೆ ಮೊದಲ ನಿರ್ಮಾಣದ “ಮಿಸ್ಟರ್‌ ಮೊಮ್ಮಗ’ ಸಿನಿಮಾಕ್ಕಾಗಿ ಸಾಕಷ್ಟು ಹೀರೋಗಳ ಹುಡುಕಾಟ ನಡೆಸಿದರೂ, ತನಕೆ ಬೇಕಾದ ಹೀರೋಗಳು ಸಿಗದಿದ್ದರಿಂದ, ಕೊನೆಗೆ ತಾನೇ “ಮಿಸ್ಟರ್‌ ಮೊಮ್ಮಗ’ ಸಿನಿಮಾದ ಮೂಲಕ ನಾಯಕ ನಟನಾಗಿ ಅನಿರೀಕ್ಷಿತವಾಗಿ ತೆರೆಮುಂದೆ ಬಂದವರು ರವಿಗೌಡ.

“ಮಿಸ್ಟರ್‌ ಮೊಮ್ಮಗ’ ಸಿನಿಮಾದ ನಂತರ ರಾಧಿಕಾ ಕುಮಾರಸ್ವಾಮಿ ಅಭಿನಯದ “ದಮಯಂತಿ’ ಚಿತ್ರದಲ್ಲೂ ರವಿ ಗೌಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡರು. ಅದಾದ ಬಳಿಕ ರವಿ ಗೌಡ ನಾಯಕ ನಟನಾಗಿ ಅಭಿನಯಿಸಿರುವ “ರೌಡಿ ಬೇಬಿ’ ಚಿತ್ರ ಈ ವಾರ (ಫೆ. 11ಕ್ಕೆ) ಬಿಡುಗಡೆಯಾಗಿ ತೆರೆಗೆ ಬರುತ್ತಿದೆ. ವರ್ಷದ ಆರಂಭದಲ್ಲಿ ಬಿಡುಗಡೆಯಾಗುತ್ತಿರುವ ತಮ್ಮ ಮೂರನೇ ಸಿನಿಮಾದ ಬಗ್ಗೆ ರವಿ ಗೌಡ ಕೂಡ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇನ್ನು “ರೌಡಿ ಬೇಬಿ’ ಸಿನಿಮಾದಲ್ಲಿ ರವಿ ಗೌಡ ಎರಡು ಶೇಡ್‌ಗಳಿರುವ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಳ್ಳುತ್ತಿದ್ದಾರಂತೆ.

ಇದನ್ನೂ ಓದಿ:“ತೋತಾಪುರಿ’ ಹಾಡಿನ ಸಕ್ಸಸ್‌ ಸಂಭ್ರಮ

“ಹೆಸರೇ ಹೇಳುವಂತೆ, “ರೌಡಿ ಬೇಬಿ’ ಕಂಪ್ಲೀಟ್‌ ಫ್ಯಾಮಿಲಿ ಎಂಟರ್‌ಟೈನ್ಮೆಂಟ್‌ ಸಿನಿಮಾ. ಇದರಲ್ಲಿ ಲವ್‌, ಆ್ಯಕ್ಷನ್‌, ಎಮೋಶನ್ಸ್‌ ಎಲ್ಲವೂ ಇದೆ. ಇದರಲ್ಲಿ ನನ್ನದು ಡಬಲ್‌ ಶೇಡ್‌ ಇರುವಂಥ ಪಾತ್ರ. ಒಂದು ಶೇಡ್‌ನ‌ಲ್ಲಿ ಕಾಲೇಜ್‌ ಹುಡುಗನಾಗಿ ಕಾಣಿಸಿಕೊಂಡರೆ, ಮತ್ತೂಂದು ಶೇಡ್‌ನ‌ಲ್ಲಿ ಸಾಫ್ಟ್ವೇರ್‌ ಕಂಪೆನಿ ಮಾಲೀಕನಾಗಿ ಕಾಣಿಸಿಕೊಂಡಿದ್ದೇನೆ. ಒಂದೇ ಸಿನಿಮಾದಲ್ಲಿ ಎರಡು ಬದಲಾವಣೆಗಳಿರುವಂಥ ಕ್ಯಾರೆಕ್ಟರ್ ಸಿಕ್ಕಿದೆ. ಸಿನಿಮಾದಲ್ಲಿ ಕಾಲೇಜ್‌ ಹುಡುಗನಾಗಿ ಕಾಣಿಸಿಕೊಳ್ಳುವುದಕ್ಕಾಗಿ, ಬರೋಬ್ಬರಿ 14 ಕೆ.ಜಿ ಯಷ್ಟು ದೇಹದ ತೂಕ ಇಳಿಸಿಕೊಂಡಿದ್ದೇನೆ’ ಎಂದು “ರೌಡಿ ಬೇಬಿ’ ಸಿನಿಮಾದಲ್ಲಿ ತಮ್ಮ ಪಾತ್ರ ಪರಿಚಯ ಮಾಡಿಕೊಡುತ್ತಾರೆ ರವಿ ಗೌಡ.

“ಸುಮುಖ ಎಂಟರ್‌ಟೈನರ್’ ಮತ್ತು “ವಾರ್‌ಫುಟ್‌ ಸ್ಟುಡಿಯೋ’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ರೌಡಿ ಬೇಬಿ’ ಸಿನಿಮಾಕ್ಕೆ ಕೃಷ್ಣ ರೆಡ್ಡಿ ನಿರ್ದೇಶನವಿದೆ. ಬೆಂಗಳೂರು, ಮಂಗಳೂರು ಮತ್ತು ಕೇರಳದ ಅನೇಕ ಸ್ಥಳಗಳಲ್ಲಿ “ರೌಡಿ ಬೇಬಿ’ ಚಿತ್ರದ ಚಿತ್ರೀಕರಣ ಮಾಡಲಾಗಿದೆ. “ಒಂದೊಳ್ಳೆ ಸಿನಿಮಾವನ್ನ ಮಾಡಿದ್ದೇವೆ. ಈಗಾಗಲೇ ಬಿಡುಗಡೆಯಾಗಿರುವ “ರೌಡಿ ಬೇಬಿ’ ಸಿನಿಮಾದ ಹಾಡುಗಳು, ಟ್ರೇಲರ್‌ ಎಲ್ಲವೂ ಹಿಟ್‌ ಆಗಿದೆ. ಅದರಂತೆಯೇ, ಸಿನಿಮಾ ಕೂಡ ಥಿಯೇಟರ್‌ನಲ್ಲಿ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂದು ವಿಶ್ವಾಸದ ಮಾತುಗಳನ್ನಾಡುತ್ತಾರೆ ರವಿ ಗೌಡ.

ಜಿ.ಎಸ್.ಕಾರ್ತಿಕಸುಧನ್

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.