ಸಾವಿತ್ರಿ ಆದ ತಾರಾ
Team Udayavani, Nov 6, 2020, 2:48 PM IST
ಕನ್ನಡ ಚಿತ್ರರಂಗದಲ್ಲಿಕಳೆದ ಮೂರು ದಶಕಗಳಿಂದ ನೂರಾರು ಪಾತ್ರಗಳಿಗೆ ಜೀವತುಂಬಿ, ಸಿನಿಪ್ರಿಯರ ಮನರಂಜಿಸಿರುವ ನಟಿ ತಾರಾ ಅನುರಾಧ ಈಗ “ಸಾವಿತ್ರಿ’ ಆಗಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.
ಹೌದು, ತಾರಾ ಅಭಿನಯಿಸುತ್ತಿರುವ ಹೊಸಚಿತ್ರಕ್ಕೆ “ಸಾವಿತ್ರಿ’ ಎಂದು ಹೆಸರಿಡಲಾಗಿದೆ. ಇದೇ ನ.19 ರಿಂದ ಬೆಂಗಳೂರು ಸುತ್ತಮುತ್ತ ಸುಮಾರು45 ದಿನಗಳಕಾಲ ಈಚಿತ್ರದ ಚಿತ್ರೀಕರಣ ನಡೆಯಲಿದೆ. “ಪಿಎನ್ಪಿ ಪ್ರೊಡಕ್ಷನ್ಸ್’ ಬ್ಯಾನರ್ನಲ್ಲಿ ಸಾಫ್ಟ್ವೇರ್ ಉದ್ಯೋಗಿ ಪ್ರಶಾಂತ್ಕುಮಾರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಹಿಂದೆ “ಉಯ್ನಾಲೆ’ ಚಿತ್ರವನ್ನು ನಿರ್ದೇಶಿಸಿದ್ದ ಎಸ್. ದಿನೇಶ್ ಈ ಚಿತ್ರಕ್ಕೆಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರ ಸಾಹಿತಿ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದು, ಚಿತ್ರಕ್ಕೆ ಸಂಗೀತದ ಜೊತೆಗೆ ಸಾಹಿತ್ಯ, ಸಂಭಾಷಣೆಯನ್ನೂ ಬರೆಯುತ್ತಿದ್ದಾರೆ.
ಉಳಿದಂತೆ “ಸಾವಿತ್ರಿ’ ಚಿತ್ರದಲ್ಲಿ ತಾರಾ ಅವರೊಂದಿಗೆ ಪ್ರಕಾಶ್ ಬೆಳವಾಡಿ, ಸಂಜು ಬಸಯ್ಯ, ಬೇಬಿ ಲೈಲಾ, ಪ್ರಮೋದ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಅಂದಹಾಗೆ, ಸ್ಮಾರ್ಟ್ಫೋನ್ ಮೊದಲಾದ ಆಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳು ಮಕ್ಕಳ ಮೇಲೆ ಏನೆಲ್ಲ ಪರಿಣಾಮ ಬೀರುತ್ತದೆ ಎನ್ನುವುದರ ಸುತ್ತ ಈ ಚಿತ್ರದಕಥೆ ನಡೆಯುತ್ತದೆ ಎನ್ನುತ್ತದೆ ಚಿತ್ರತಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್