![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮುಂದಿನ ವಾರ ಸಾಹಸಿ ಮಕ್ಕಳ ಆಗಮನ
Team Udayavani, Jul 6, 2018, 6:00 AM IST
![u-24.jpg](https://www.udayavani.com/wp-content/uploads/2018/07/6/u-24.jpg)
“ಅನಂತನ ಚೆಲ್ಲಾಟ’ ಎಂಬ ಚಿತ್ರ ಮಾಡಿದ್ದ ಸುಶೀಲ್ ಮೊಕಾಶಿ, ಈಗ ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದಾರೆ. ಕಳೆದ ಬಾರಿ ಅನಂತನ ಜೊತೆಗೆ ಚೆಲ್ಲಾಟವಾಡಿದ್ದ ಅವರು, ಈ ಬಾರಿ ಸಾಹಸಿ ಮಕ್ಕಳ ಕುರಿತು ಚಿತ್ರ ಮಾಡಿದ್ದಾರೆ ಮತ್ತು ಆ ಚಿತ್ರಕ್ಕೆ “ಸಾಹಸಿ ಮಕ್ಕಳು’ ಎಂಬ ಹೆಸರನ್ನು ಇಟ್ಟಿದ್ದಾರೆ. ಈ ಚಿತ್ರ ಮುಂದಿನ ವಾರ (ಜುಲೈ 13ರಂದು) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಚಿತ್ರವನ್ನು ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ರತ್ನಮಾಲ ಅವರು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲ, ಚಿತ್ರಕ್ಕೆ ತಾವೇ ಕಥೆಯನ್ನೂ ರಚಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಓದಿನಿಂದ ವಂಚಿತರಾಗಿರುವ ಮಕ್ಕಳಿಗೆ ಶಿಕ್ಷಣ ಕೊಡಿಸುವ ಕುರಿತಾಗಿ ಈ ಚಿತ್ರ ಸಾಗುತ್ತದೆ. ರತ್ನಮಾಲ ಅವರಿಗೂ ಚಿಕ್ಕ ವಯಸ್ಸಿನಲ್ಲೂ ಓದುವುದಕ್ಕೆ ಸಮಸ್ಯೆ ಎದುರಾಗಿದ್ದು, ಇತ್ತೀಚೆಗೆ ಅವರು ಪೊಲಿಟಿಕಲ್ ಸೈನ್ಸ್ನಲ್ಲಿ ಎಂ.ಎ ಮುಗಿಸಿದರಂತೆ. ತಮ್ಮ ಬಾಲ್ಯದಲ್ಲಿ ನೋಡಿದ ಅಂಶಗಳನ್ನು ಸೇರಿಸಿ ಅವರು ಈ ಚಿತ್ರದ ಕಥೆ ಮಾಡಿದ್ದಾರೆ.
ಈ ಚಿತ್ರದ ಕಥೆ ಮಧು, ಸುಶ್ಮಿತ್, ಮೈತ್ರಿ, ವಿನಯ್ ಮತ್ತು ಪುಣ್ಯ ಎಂಬ ಐದು ಮಕ್ಕಳ ಸುತ್ತ ಸುತ್ತುತ್ತದಂತೆ. ಕಾರಣಾಂತರಗಳಿಂದ ಕಾಡಿಗೆ ಹೋಗುವ ಆ ಮಕ್ಕಳು, ಅಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಾರಂತೆ. ಅಲ್ಲಿಂದ ತಮ್ಮ ಹಳ್ಳಿಗೆ ವಾಪಸ್ಸು ಬರುವುದಷ್ಟೇ ಅಲ್ಲ, ಶಿಕ್ಷಣಕ್ಕಾಗಿ ಏನೆಲ್ಲಾ ಹೋರಾಡುತ್ತಾರೆ ಎಂಬ ಕಥೆ ಇದೆಯಂತೆ. ಈ ಚಿತ್ರವನ್ನು “ಪುಟಾಣಿ ಏಜೆಂಟ್ 123’ಗೆ ಹೋಲಿಸುವ ನಿರ್ದೇಶಕರು, “ಚಿತ್ರದಲ್ಲಿ ಸಾಕಷ್ಟು ಮನರಂಜಿಸುವ ಅಂಶಗಳಿಗವೆ. ಅಷ್ಟೇ ಅಲ್ಲ, ಈ ಚಿತ್ರದ ಮೂಲಕ ಶಿಕ್ಷಣ ಜನ್ಮಸಿದ್ಧ ಹಕ್ಕು ಎಂಬುದನ್ನು ಹೇಳುವುದಕ್ಕೆ ಪ್ರಯತ್ನ ಮಾಡಿದ್ದೇವೆ. ಈ ಚಿತ್ರಕ್ಕೆ ವಿಟ್ಲ ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು ಸುಶೀಲ್.
ಚಿತ್ರಕ್ಕೆ ಶರತ್ ಸಂಗೀತ ಸಂಯೋಜಿಸಿದ್ದಾರೆ. ನಾಲ್ಕು ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಎಂ.ಬಿ. ಅಳ್ಳಿàಕಟ್ಟಿ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. “ಸಾಹಸಿ ಮಕ್ಕಳು’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.