ಐರಾವನ್ಗೆ ಸುದೀಪ್ ಸಾಥ್
Team Udayavani, Dec 25, 2020, 5:10 PM IST
ನಟ ಜೆಕೆ ನಾಯಕರಾಗಿರುವ “ಐರಾವನ್’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು.ಕಿಚ್ಚ ಸುದೀಪ್ ಚಿತ್ರದ ಟೀಸರ್ ಬಿಡುಗಡೆ ಮಾಡಿ ಶುಭಕೋರಿದರು.
ಈ ಚಿತ್ರವನ್ನು ನಿರಂತರ ಪ್ರೊಡಕ್ಷನ್ಸ್ನಡಿನಿ ರ್ಮಿಸಲಾಗಿದೆ. ರಾಮ್ಸ್ ರಂಗ ಈ ಚಿತ್ರದನಿರ್ದೇಶಕರು. ಚಿತ್ರದ ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ನಟ ಸುದೀಪ್, ಸಿನಿಮಾ ಮೊದಲು ಚಿತ್ರಮಂದಿರಕ್ಕೆ ಬರಬೇಕು. ಶ್ರಮಕ್ಕೆ ಬೆಲೆ ಸಿಗಬೇಕೆಂದರೆ, ಚಿತ್ರಮಂದಿರ ಅನ್ನೋ ದೇವಸ್ಥಾನ ಪ್ರವೇಶಿಸಲೇಬೇಕು. ಅದೇ ರೀತಿ ಇಷ್ಟು ದಿನ ಒಳ್ಳೇ ಚಿತ್ರಮಂದಿರಸಿಗಲಿ ಎಂದು ಕಾಯುತ್ತಿದ್ದೇವು. ಇದೀಗ ಚಿತ್ರಮಂದಿರ ಸಿಕ್ಕರೆ ಸಾಕಪ್ಪ ಎಂಬಂತಾಗಿದೆ ಎಂದರು. ಜೊತೆಗೆ ಟೀಸರ್ಗೆ ಮೆಚ್ಚುಗೆ ಸೂಚಿಸಿದರು.
ನಿರ್ದೇಶಕ ರಾಮ್ಸ್ ರಂಗ ಸಿನಿಮಾದ ಬಗ್ಗೆ ಮಾತನಾಡಿದರು. “ಇದು ನನ್ನ ಮೊದಲ ಸಿನಿಮಾ. ಈ ಹಿಂದೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವವಿದೆ. ಇದೀಗ ಪೂರ್ಣ ಪ್ರಮಾಣದ ಸಿನಿಮಾ ಮಾಡಿದ್ದೇನೆ. ಐರಾವನ್ ಎಂದರೆ, ಅರ್ಜುನನ ಮೂರನೇ ಮಗ ಐರಾವನ್. ಅದು ರಾಕ್ಷಸ ರೂಪ. ಆ ರೂಪವನ್ನು ಈಗಿನಕಾಲಘಟ್ಟಕ್ಕೆ ತಕ್ಕಂತೆ ಬದಲಿಸಿಕೊಂಡಿದ್ದೇವೆ’ ಎಂದರು.
ಚಿತ್ರದಲ್ಲಿ ಮತ್ತೂಬ್ಬ ನಟ ವಿವೇಕ್ಕೂಡಾ ಪ್ರಮುಖ ಪಾತ್ರ ಮಾಡಿದ್ದಾರೆ. ನಾಯಕಿ ಅದ್ವಿತಿ ಶೆಟ್ಟಿ ಕೂಡಾ ತಮ್ಮ ಅನುಭವ ಹಂಚಿಕೊಂಡರು. ನಾಯಕ ಜೆಕೆ ತಾವು ಚಿತ್ರರಂಗಕ್ಕೆ ಬಂದ ಆರಂಭದ ದಿನಗಳನ್ನು ನೆನಪಿಸಿಕೊಂಡರು. ಚಿತ್ರಕ್ಕೆ ಎಸ್ ಪ್ರದೀಪ್ ವರ್ಮಾ ಅವರ ಸಂಗೀತ, ದೇವೇಂದ್ರ ಛಾಯಾಗ್ರಹಣ,ಕೆ.ಎಂ ಪ್ರಕಾಶ್ ಸಂಕಲನ, ಹರಿ ಸಂತೋಶ್ ಸಾಹಿತ್ಯ, ಕಾಂತರಾಜು ಕಡ್ಡಿಪುಡಿ ಸಂಭಾಷಣೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
Kangaroo; ಥ್ರಿಲ್ಲರ್ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ