ಟಾಕೀಸ್‌ ಹಿಂದಿನ ರೋಚಕ ಕಹಾನಿ


Team Udayavani, Aug 30, 2019, 5:35 AM IST

f-32

ಕೆಲವು ನಾಯಕ ನಟರಿಗೆ ಯಾವುದಾದರೊಂದು ಟೈಟಲ್ ಚೆನ್ನಾಗಿ ಹೊಂದಿಕೆಯಾಗುತ್ತದೆ. ಆ ಟೈಟಲ್ನಡಿ ಮಾಡಿದ ಸಿನಿಮಾಗಳು ಕೂಡಾ ಹಿಟ್ ಆಗುತ್ತವೆ. ಆ ತರಹದ ಹೀರೋಗಳ ಸಾಲಿಗೆ ಅಜೇಯ್‌ ರಾವ್‌ ಕೂಡಾ ಸೇರುತ್ತಾರೆ. ಅಜೇಯ್‌ ರಾವ್‌ಗೆ ‘ಕೃಷ್ಣ’ ಟೈಟಲ್ ತುಂಬಾ ಚೆನ್ನಾಗಿ ಆಗಿಬರುತ್ತದೆ ಎಂದರೆ ತಪ್ಪಿಲ್ಲ. ಅದಕ್ಕೆ ಪೂರಕವಾಗಿ ಆ ಟೈಟಲ್ನಡಿ ಮಾಡಿದ ಸಿನಿಮಾಗಳು ಕೂಡಾ ಯಶಸ್ಸು ಕಂಡಿವೆ. ಈಗ ಯಾಕೆ ಈ ವಿಚಾರ ಎಂದು ನೀವು ಕೇಳಬಹುದು. ಅಜೇಯ್‌ ರಾವ್‌ ಅವರು ಕೃಷ್ಣ ಹೆಸರಿನ ಅಕ್ಕಪಕ್ಕದಲ್ಲೇ ಮತ್ತೂಂದು ಸಿನಿಮಾ ಒಪ್ಪಿಕೊಂಡಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣ ಕೂಡಾ ಮುಗಿದಿದೆ. ಅದು ‘ಕೃಷ್ಣ ಟಾಕೀಸ್‌’. ಇದು ಅಜೇಯ್‌ ಅವರ ಹೊಸ ಸಿನಿಮಾ. ಈಗಾಗಲೇ ಅಜೇಯ್‌ ‘ಕೃಷ್ಣನ್‌ ಲವ್‌ಸ್ಟೋರಿ’, ‘ಕೃಷ್ಣನ್‌ ಮ್ಯಾರೇಜ್‌ ಸ್ಟೋರಿ’, ‘ಕೃಷ್ಣ ರುಕ್ಕು’, ‘ಕೃಷ್ಣ ಲೀಲಾ’ ಚಿತ್ರಗಳನ್ನು ಮಾಡಿದ್ದು, ಈಗ ‘ಕೃಷ್ಣ ಟಾಕೀಸ್‌’ ಮಾಡುತ್ತಿದ್ದಾರೆ. ಇದು ಕೃಷ್ಣ ಸೀರಿಸ್‌ನಲ್ಲಿ ಬರುತ್ತಿರುವ ಐದನೇ ಚಿತ್ರ ಎಂಬುದು ಮತ್ತೂಂದು ವಿಶೇಷ.

ವಿಜಯಾನಂದ್‌ ಈ ಚಿತ್ರದ ನಿರ್ದೇಶಕರು. ಇಷ್ಟು ವರ್ಷಗಳ ಕಾಲ ಚಿತ್ರರಂಗದಲ್ಲಿ ಆನಂದಪ್ರಿಯ ಎಂಬ ಹೆಸರಿನೊಂದಿಗೆ ಗುರುತಿಸಿಕೊಂಡಿದ್ದ ಅವರು ಈಗ ತಮ್ಮ ಹೆಸರನ್ನು ವಿಜಯಾನಂದ್‌ ಎಂದು ಬದಲಿಸಿಕೊಂಡಿದ್ದಾರೆ. ಗೋವಿಂದ ರಾಜ್‌ ಈ ಚಿತ್ರದ ನಿರ್ಮಾಪಕರು. ಚಿತ್ರದಲ್ಲಿ ಸಿಂಧು ಲೋಕನಾಥ್‌ ಹಾಗೂ ಅಪೂರ್ವ ನಾಯಕಿಯರಾಗಿ ನಟಿಸಿದ್ದಾರೆ. ನಿರ್ದೇಶಕ ವಿಜಯಾನಂದ್‌ ಚಿತ್ರದ ಕಥೆ ಬಗ್ಗೆ ಹೆಚ್ಚೇನು ಹೇಳಲಿಲ್ಲ. ಅದಕ್ಕೆ ಕಾರಣ ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರ. ಸುಮಾರು ವರ್ಷಗಳ ಹಿಂದೆ ಲಕ್ನೋದ ಚಿತ್ರಮಂದಿರವೊಂದರಲ್ಲಿ ನಡೆದ ನೈಜ ಘಟನೆಯನ್ನಾಧರಿಸಿ ಈ ಚಿತ್ರ ಮಾಡಲಾಗಿದೆಯಂತೆ. ಚಿತ್ರ ಕ್ಷಣ ಕ್ಷಣವೂ ಕುತೂಹಲ ಹೆಚ್ಚಿಸುತ್ತಾ ಸಾಗಿ, ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ವಿಜಯಾನಂದ್‌ ಅವರಿಗಿದೆ. ನಿರ್ಮಾಪಕ ಗೋವಿಂದ ರಾಜ್‌ ಕಥೆ ಇಷ್ಟವಾಗಿ ಸಿನಿಮಾ ಮಾಡಿದ್ದಾಗಿ ಹೇಳಿಕೊಂಡರು.

ಚಿತ್ರದ ಬಗ್ಗೆ ಮಾತನಾಡುವ ಅಜೇಯ್‌ ರಾವ್‌, ‘ನನಗಿದು ಹೊಸ ಪಾತ್ರ. ಕಥೆ ಕೇಳಿ ತುಂಬಾ ಇಷ್ಟವಾಯಿತು. ನಿರ್ದೇಶಕರಿಗೆ ಬೇಜಾರಾಗಿರಬಹುದು, ಕಥೆ ಕೇಳಿದ ನಂತರ ಇದು ನೀವೇ ಮಾಡಿದ ಕಥೆನಾ ಎಂದು ಕೇಳಿದೆ. ಅಷ್ಟೊಂದು ನೀಟಾಗಿ ಕಥೆ ಮಾಡಿದ್ದಾರೆ. ನಾನಿಲ್ಲಿ ಪತ್ರಕರ್ತನಾಗಿ ನಟಿಸುತ್ತಿದ್ದು, ಚಿತ್ರಮಂದಿರವೊಂದರ ಸುತ್ತ ಕಥೆ ಸಾಗುತ್ತದೆ. ಚಿತ್ರದಲ್ಲಿ ಥ್ರಿಲ್ಲರ್‌ ಅಂಶಗಳು ಹೆಚ್ಚಿವೆ’ ಎಂದು ಚಿತ್ರದ ಬಗ್ಗೆ ಹೇಳಿದರು. ಚಿತ್ರದಲ್ಲಿ ನಟಿಸಿರುವ ಸಿಂಧು ಲೋಕನಾಥ್‌ ಇಲ್ಲಿ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಹಳ್ಳಿ ಹುಡುಗಿಯಾದರೂ ಅತಿಯಾದ ಸೋಶಿಯಲ್ ಮೀಡಿಯಾ ಬಳಕೆ ಮಾಡುವ ಪಾತ್ರವಂತೆ. ಇವರ ಪಾತ್ರದ ಮೂಲಕ ಒಂದು ಸಂದೇಶವನ್ನು ಹೇಳಲಾಗು­ತ್ತಿದೆಯಂತೆ. ಚಿತ್ರದ ಮತ್ತೂಬ್ಬ ನಾಯಕಿ ಆಪೂರ್ವ ಇಲ್ಲಿ ಸಿಟಿ ಹುಡುಗಿ­ಯಾಗಿ ನಟಿಸಿದ್ದಾರೆ. ಅವರು ಕೂಡಾ ತಮ್ಮ ಪಾತ್ರ, ತಂಡದ ಬಗ್ಗೆ ಮಾತನಾಡಿ­ದರು. ಈ ಹಿಂದೆ ‘ಲೈಫ್ ಸೂಪರ್‌’, ‘ಕಾರ್ನಿ’ ಚಿತ್ರಗಳಲ್ಲಿ ಹೀರೋ ಆಗಿದ್ದ ನಿರಂತ್‌ ಇಲ್ಲಿ ವಿಲನ್‌ ಆಗಿ ನಟಿಸಿದ್ದಾರೆ. ಚಿತ್ರಕ್ಕೆ ಶ್ರೀಧರ್‌ ಸಂಭ್ರಮ್‌ ಸಂಗೀತ­ವಿದೆ. ಚಿತ್ರದಲ್ಲಿ ಎರಡು ಹಾಡು­ಗಳಿದ್ದು, ಭಿನ್ನವಾಗಿ­ರಲಿದೆ ಎಂದರು. ಚಿತ್ರಕ್ಕೆ ಅಭಿಷೇಕ್‌ ಕಾಸರಗೋಡು ಛಾಯಾಗ್ರಹಣ, ವಿಕ್ರಮ್‌ ಮೋರ್‌ ಸಾಹಸ ಸಂಯೋಜನೆ ಇದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.