ರಗಡ್‌ ಲವರ್‌ ಬಾಯ್: ಚೊಚ್ಚಲ ಚಿತ್ರದ ಬಿಡುಗಡೆ ಖುಷಿಯಲ್ಲಿ ಅಕ್ಷಿತ್


Team Udayavani, May 27, 2022, 9:51 AM IST

Akshith shashikumar spoke about seethayanam

“ನಮ್ಮ ಪ್ಲಾನ್‌ ಪ್ರಕಾರ ಎರಡು ವರ್ಷದ ಹಿಂದೆಯೇ ಈ ಸಿನಿಮಾ ರಿಲೀಸ್‌ ಆಗಿರಬೇಕಿತ್ತು. ಆದ್ರೆ ಕೋವಿಡ್‌, ಲಾಕ್‌ಡೌನ್‌ನಿಂದಾಗಿ ಅನಿವಾರ್ಯವಾಗಿ ರಿಲೀಸ್‌ ಮುಂದೂಡುತ್ತ ಬರಬೇಕಾಯ್ತು. ಅಂತೂ ಎಲ್ಲ ಅಡೆತಡೆಗಳನ್ನ ದಾಟಿ ಈ ವಾರ ನನ್ನ ಮೊದಲ ಸಿನಿಮಾ ರಿಲೀಸ್‌ ಆಗ್ತಿದೆ. ನಿಜ ಹೇಳ್ಬೇಕು ಅಂದ್ರೆ ಡಬ್ಬಿಂಗ್‌ ಆದ್ಮೇಲೆ ನಾನೇ ಸಿನಿಮಾವನ್ನು ನೋಡಿಲ್ಲ. ಫ್ಯಾಮಿಲಿ, ಫ್ರೆಂಡ್ಸ್‌ ಯಾರಿಗೂ ಸಿನಿಮಾ ತೋರಿಸಿಲ್ಲ. ಹಾಗಾಗಿ ಫ‌ಸ್ಟ್‌ ಟೈಮ್‌ ಆಡಿಯನ್ಸ್‌ ಮುಂದೆ ಬರುತ್ತಿರುವುದಕ್ಕೆ, ಇಂಡಸ್ಟ್ರಿಗೆ ಎಂಟ್ರಿಯಾಗುತ್ತಿರುವುದಕ್ಕೆ ಖುಷಿ, ಭಯ, ಎಕ್ಸೆ„ಟ್‌ಮೆಂಟ್‌ ಎಲ್ಲ ಥರದ ಅನುಭವ ಒಟ್ಟಿಗೆ ಆಗುತ್ತಿದೆ…’ ಇದು ನವನಟ ಅಕ್ಷಿತ್‌ ಶಶಿಕುಮಾರ್‌ ಮಾತು.

ಹೌದು, ಕನ್ನಡ ಚಿತ್ರರಂಗದ “ಸುಪ್ರೀಂ ಹೀರೋ’ ಖ್ಯಾತಿಯ ನಟ ಶಶಿಕುಮಾರ್‌ ಪುತ್ರ ಅಕ್ಷಿತ್‌ ಶಶಿಕುಮಾರ್‌ ನಾಯಕನಾಗಿ ಅಭಿನಯಿಸಿರುವ ಚೊಚ್ಚಲ ಚಿತ್ರ “ಸೀತಾಯಣ’ ಇಂದು ಬಿಡುಗಡೆಯಾಗುತ್ತಿದೆ. ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ “ಸೀತಾಯಣ’ ಚಿತ್ರದ ಮೂಲಕ ಅಕ್ಷಿತ್‌ ಶಶಿಕುಮಾರ್‌ ಲವರ್‌ ಬಾಯ್‌ ಕಂ ಆ್ಯಕ್ಷನ್‌ ಹೀರೋ ಆಗಿ ಸ್ಯಾಂಡಲ್‌ ವುಡ್‌ ಮತ್ತು ಟಾಲಿವುಡ್‌ಗೆ ಏಕಕಾಲದಲ್ಲಿ ಎಂಟ್ರಿಕೊಡುತ್ತಿದ್ದಾರೆ. ತಮ್ಮ ಮೊದಲ ಸಿನಿಮಾ ಮತ್ತದರ ಬಿಡುಗಡೆಯ ಬಗ್ಗೆ ಮಾತನಾಡಿದ ಅಕ್ಷಿತ್‌ ಕೆಲ ವಿಷಯಗಳನ್ನು ಹಂಚಿಕೊಂಡರು.

“ನಾವು ಒಂದು ಸಿನಿಮಾಕ್ಕೆ ಎಷ್ಟು ಎಫ‌ರ್ಟ್‌ ಹಾಕಿದ್ದೇವೆ, ಏನೆಲ್ಲ ಮಾಡಿದ್ದೇವೆ ಅನ್ನೋದಕ್ಕಿಂತ ಜನರಿಗೆ ಆ ಸಿನಿಮಾ ಎಷ್ಟರ ಮಟ್ಟಿಗೆ ಇಷ್ಟವಾಗುತ್ತದೆ ಅನ್ನೋ ದಷ್ಟೇ ಮುಖ್ಯವಾಗುತ್ತದೆ. ಜನರಿಗೆ ಸಿನಿಮಾ ಇಷ್ಟವಾದ್ರೆ, ನಾವು ಹಾಕಿದ ಎಫ‌ರ್ಟ್‌ಗೆ ಒಳ್ಳೆಯ ರಿಸೆಲ್ಟ್ ಸಿಕ್ಕಿದಂತೆ. ನನ್ನ ಪ್ರಕಾರ “ಸೀತಾಯಣ’ ಖಂಡಿತವಾಗಿಯೂ ಜನರಿಗೆ ಇಷ್ಟವಾಗುವಂಥ ಸಿನಿಮಾ. ಜನರಿಗೆ ಇಷ್ಟವಾಗುವಂಥದ್ದೇ ಸಿನಿಮಾ ಮಾಡಿದ್ದೇವೆ ಎಂಬ ಭರವಸೆ ನಮಗಿದೆ’ ಎನ್ನುವುದು ಅಕ್ಷಿತ್‌ ಶಶಿಕುಮಾರ್‌ ಮಾತು.

ಇದನ್ನೂ ಓದಿ:ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ

ತಮ್ಮ ಪಾತ್ರದ ಬಗ್ಗೆ ಮಾತನಾಡುವ ಅಕ್ಷಿತ್‌, “ಈ ಸಿನಿಮಾದಲ್ಲಿ ಮಧ್ಯಮ ವರ್ಗದ ಹುಡುಗನ ಕ್ಯಾರೆಕ್ಟರ್‌ ಮಾಡಿದ್ದೇನೆ. ಲವರ್‌ಬಾಯ್‌ ಮತ್ತು ಆ್ಯಕ್ಷನ್‌ ಲುಕ್‌ ಎರಡೂ ಥರದ ಶೇಡ್ಸ್‌ ನನ್ನ ಕ್ಯಾರೆಕ್ಟರ್‌ಗಿದೆ. ಮಾಸ್‌ ಮತ್ತು ಕ್ಲಾಸ್‌ ಎಲ್ಲ ಥರದ ಆಡಿಯನ್ಸ್‌ಗೂ ಇಷ್ಟವಾಗುವಂಥ ಸಬ್ಜೆಕ್ಟ್ ಸಿನಿಮಾದಲ್ಲಿದೆ. ಲವ್‌, ರೊಮ್ಯಾನ್ಸ್‌, ಆ್ಯಕ್ಷನ್‌, ಸಸ್ಪೆನ್ಸ್‌-ಥ್ರಿಲ್ಲರ್‌, ಎಮೋಶನ್ಸ್‌, ಕಾಮಿಡಿ ಎಲ್ಲ ಥರದ ಎಂಟರ್‌ಟೈನ್ಮೆಂಟ್‌ ಎಲಿಮೆಂಟ್ಸ್‌ ಸಿನಿಮಾ ದಲ್ಲಿದೆ. ಜೊತೆಗೊಂದು ಮೆಸೇಜ್‌ ಕೂಡ ಇದೆ’ ಎನ್ನುತ್ತಾರೆ.

“ಈಗಾಗಲೇ ರಿಲೀಸ್‌ ಅಗಿರುವ “ಸೀತಾಯಣ’ದ ಟೀಸರ್‌, ಸಾಂಗ್ಸ್‌, ಟ್ರೇಲರ್‌ ಎಲ್ಲದಕ್ಕೂ ಆಡಿಯನ್ಸ್‌ ಕಡೆಯಿಂದ, ಇಂಡಸ್ಟ್ರಿ ಕಡೆಯಿಂದ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಇದೇ ರೆಸ್ಪಾನ್ಸ್‌ ಥಿಯೇಟರ್‌ನಲ್ಲಿ ಸಿನಿಮಾಕ್ಕೂ ಸಿಗಲಿದೆ’ ಎಂಬ ವಿಶ್ವಾಸದ ಮಾತು ಅಕ್ಷಿತ್‌ ಅವರದ್ದು.

ಇನ್ನು “ಸೀತಾಯಣ’ ಚಿತ್ರದಲ್ಲಿ ನಾಯಕ ಅಕ್ಷಿತ್‌ ಶಶಿಕುಮಾರ್‌ಗೆ ನಾಯಕಿಯಾಗಿ ಅನಹಿತಾ ಭೂಷಣ್‌ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ವಿಕ್ರಂ ಶರ್ಮಾ, ಶರ್ಮಿತಾ ಗೌಡ, ಮಧು ಸೂದನ್‌, ಮೇಘನಾ ಗೌಡ, ಅಜಯ್‌ ಘೋಷ್‌, ಹಿತೇಶ್‌, ವಿಧೆಯುಲೇಖ ರಮನ್‌, ಬಿತ್ರಿಸತ್ತಿ, ಕೃಷ್ಣ ಭಗವಾನ್‌, ಅನಂತ ಬಾಬು, ಗುಂಡು ಸುದರ್ಶನ್‌, ಮಧುಮಣಿ, ಅಪ್ಪರಾವ್‌, ಲೋಬೋ ಮತ್ತಿತರರು ಇತರ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಪ್ರಭಾಕರ್‌ ಆರಿಪ್ಕಾ ನಿರ್ದೇಶನ “ಸೀತಾಯಣ’ ಚಿತ್ರವನ್ನು “ಕಲರ್ ಕ್ಲೌಡ್ಸ್‌ ಎಂಟರ್‌ಟೈನ್ಮೆಂಟ್‌’ ಬ್ಯಾನರ್‌ನಲ್ಲಿ ಲಲಿತಾ ರಾಜಲಕ್ಷ್ಮೀ ನಿರ್ಮಿಸಿದ್ದಾರೆ. ಒಟ್ಟಾರೆ ಅಕ್ಷಿತ್‌ ಶಶಿಕುಮಾರ್‌ ಚೊಚ್ಚಲ ಚಿತ್ರ “ಸೀತಾಯಣ’ ಹೇಗಿರಲಿದೆ ಎಂಬುದು ಇದೇ ವಾರಾಂತ್ಯಕ್ಕೆ ಗೊತ್ತಾಗಲಿದೆ.

ಜಿ.ಎಸ್.ಕಾರ್ತಿಕ ಸುಧನ್

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.