ಬೆಕ್ಕಿನ ಮೂಗುತಿಯಲ್ಲಿ ಏಲಿಯನ್‌ ಪಯಣ


Team Udayavani, Mar 1, 2019, 12:30 AM IST

v-23.jpg

ನಟ ತಿಲಕ್‌ ಮತ್ತು ನವ ನಟಿ ಸುಷ್ಮಾ ರಾಜ್‌ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ  “ಬೆಕ್ಕಿಗೊಂದು ಮೂಗುತಿ’ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ಚಿತ್ರದ ಆಡಿಯೋ ಹಕ್ಕುಗಳನ್ನು ಲಹರಿ ಆಡಿಯೋ ಖರೀದಿಸಿದ್ದು, ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಲಹರಿ ಆಡಿಯೋ ಸಂಸ್ಥೆಯ ಮುಖ್ಯಸ್ಥ ವೇಲು ಚಿತ್ರದ ಹಾಡುಗಳನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. 

ಇದೇ ವೇಳೆ ಮಾತನಾಡಿದ ಲಹರಿ ವೇಲು, “ಸದ್ಯ ಲಹರಿ ಸಂಸ್ಥೆಯ ಚಂದದಾರರ ಸಂಖ್ಯೆ ಐವತ್ತು ಲಕ್ಷದಷ್ಟಿದೆ. ಲಹರಿ ಸಂಸ್ಥೆಯಲ್ಲಿ ನಿರ್ಮಾಣವಾದ ಭಾವಗೀತೆ, ಚಿತ್ರಗೀತೆ, ಜನಪದ ಗೀತೆಗಳು ಜನಮನ ಗೆಲ್ಲಲು ಯಶಸ್ವಿಯಾಗಿದೆ. ಮೂರು ದಶಕಗಳಿಂದ ಗಂಧದ ಪೆಟ್ಟಿಗೆಯಲ್ಲಿ  ಕ್ಯಾಸೆಟ್‌, ಸಿಡಿಯನ್ನು ಬಿಡುಗಡೆ ಮಾಡಲಾಗುತ್ತಿತ್ತು. ಡಾ. ಭೀಮಸೇನ್‌ ಜೋಶಿ, ಡಾ.ರಾಜಕುಮಾರ್‌, ಇಳಯರಾಜ ಮೊದಲಾದ ದಿಗ್ಗಜರು ಮುಟ್ಟಿದ ಪೆಟ್ಟಿಗೆಯನ್ನು ಸುರಕ್ಷಿತವಾಗಿ ಇಡಲಾಗಿದೆ. ಐವತ್ತು ಲಕ್ಷ ಚಂದದಾರರು ಬಂದಿರುವ ಕಾರಣ ಇನ್ನು ಮುಂದೆ ಚಿನ್ನದ ಕೋಟ್‌ ಇರುವ ಬಾಕ್ಸ್‌ದಲ್ಲಿ ಚಿತ್ರದ ಆಡಿಯೋ ಸಿಡಿಯನ್ನು ಬಿಡುಗಡೆ ಮಾಡಲಾಗುವುದು’ ಎಂದು ಹಿರಿಯ ಸಂಗೀತ ನಿರ್ದೇಶಕರ  ಸಾಧನೆಯನ್ನು ಶ್ಲಾಘಿಸಿದರು. 

ಚಿತ್ರದ ನಾಯಕ ತಿಲಕ್‌ ಮಾತನಾಡಿ, “ಈ ಚಿತ್ರದಲ್ಲಿ ಸೇನಾ ಅಧಿಕಾರಿಯಾಗಿ ಅಭಿನಯಿಸಿದ್ದೇನೆ. ಏಲಿಯನ್‌  ಗುಣವನ್ನು ಬದಲಿಸುವ ಅಪರೂಪದ ಪಾತ್ರ ಈ ಚಿತ್ರದಲ್ಲಿ ನನಗೆ ಸಿಕ್ಕಿದೆ. ಭೂಮಿಗೆ ಬರುವ ಏಲಿಯನ್‌ಗೂ, ನನಗೂ ಯಾವ ರೀತಿಯ ಸಂಬಂಧ ಎನ್ನುವುದನ್ನು  ತಿಳಿಯಲು ಸಿನಿಮಾ ನೋಡಬೇಕು’ ಎಂದರು. 

ಪ್ರೀತಿ, ನಂಬಿಕೆ, ವಿಶ್ವಾಸ ಯಾವುದರಲ್ಲೂ ಅರ್ಥವಿಲ್ಲ ಎಂದು ತಿಳಿದುಕೊಂಡಿರುವ ಪಾತ್ರದಲ್ಲಿ ನಾಯಕಿ ಸುಷ್ಮಾ ರಾಜ್‌ ಕಾಣಿಸಿಕೊಂಡಿದ್ದಾರೆ. “ಪ್ರಾಣಿ ರೂಪದಲ್ಲಿ ಭೂಮಿಗೆ ಬಂದು, ಕೊನೆಗೆ ಮನುಷ್ಯಳಾಗಿ ರೂಪುಗೊಳ್ಳುತ್ತೇನೆ. ಪ್ರೀತಿ ಎಂದರೆ ಅದೊಂದು ಆಯುಧವಲ್ಲ. ಭಾವನೆಗಳು ತುಂಬಿಕೊಂಡಿದ್ದರೇನೆ ಬದುಕು ಎಂದು ನಾಯಕ ನನಗೆ ಅರಿವು ಮೂಡಿಸುತ್ತಾನೆ. ಅದರಿಂದ ಜೀವನದಲ್ಲಿ ಬದಲಾಗುತ್ತೇನೆ’ ಎಂದು ಸುಷ್ಮಾ ರಾಜ್‌ ತಮ್ಮ ಪಾತ್ರ ಪರಿಚಯ ಮಾಡಿಕೊಂಡರು. 

“ಬೆಕ್ಕಿಗೊಂದು ಮೂಗುತಿ’ ಚಿತ್ರಕ್ಕೆ ಲೆಸ್ಲಿà ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ನಿರ್ದೇಶಕ ಲೆಸ್ಲಿà, “ಚಿತ್ರೀಕರಣ ಮುಗಿಸಿದ ಬೆನ್ನಲ್ಲೆ ನನ್ನ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿತು. ಆದರೆ ಚಿತ್ರವನ್ನು ತೆರೆಗೆ ತರಲೇಬೇಕು ಎಂಬ ಉದ್ದೇಶದಿಂದ, ಸಾಕಷ್ಟು ಮುತುವರ್ಜಿ ವಹಿಸಿಕೊಂಡು ಚಿತ್ರವನ್ನು ಬಿಡುಗಡೆ ಹಂತಕ್ಕೆ ತರಲಾಗಿದೆ. ಐವತ್ತು ವರ್ಷಗಳಿಂದ ಸಿನಿಮಾ ಮಾಡುವ ಕನಸು ಈಗ ಈಡೇರಿದೆ’ ಎಂದರು. 

“ಬೆಕ್ಕಿಗೊಂದು ಮೂಗುತಿ’ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ಹಾಡುಗಳಿಗೆ ಯುವ ಸಂಗೀತ ನಿರ್ದೇಶಕ ವಿಕಾಸ್‌ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಬಿ.ಕೆ.ಮಾಧುರಿ ಉಮೇಶ್‌ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಚಿತ್ರವನ್ನು ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಇತ್ತೀಚೆಗೆ ಚಿತ್ರವನ್ನು ವೀಕ್ಷಿಸಿರುವ ಪ್ರಾದೇಶಿಕ ಸೆನ್ಸಾರ್‌ ಮಂಡಳಿ, ಚಿತ್ರಕ್ಕೆ “ಯು’ ಪ್ರಮಾಣ ಪತ್ರ ನೀಡಿ ಬಿಡುಗಡೆಗೆ ಅಸ್ತು ಎಂದಿದೆ. ಸದ್ಯ “ಬೆಕ್ಕಿಗೊಂದು ಮೂಗುತಿ’ ಚಿತ್ರದ ಹಾಡುಗಳ ಜೊತೆಗೆ ಟ್ರೇಲರ್‌ ಕೂಡ ಬಿಡುಗಡೆಯಾಗಿದ್ದು, ಆದಷ್ಟು ಬೇಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ. 

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.